ದಿನದ ಸುದ್ದಿ
ದಾವಣಗೆರೆ | ಇದ್ದೊಬ್ಬ ಮಗನ ಎರಡೂ ಕಿಡ್ನಿ ಫೇಲ್ ; ಧನ ಸಹಾಯಕ್ಕಾಗಿ ಕಣ್ಣೀರಿಟ್ಟ ತಾಯಿ : ದಯವಿಟ್ಟು ಸಹಕರಿಸಿ

ಸುದ್ದಿದಿನ, ದಾವಣಗೆರೆ : ಅವರದ್ದು ಕಡು ಬಡತನದ ಕುಟುಂಬ, ಇಬ್ಬರು ಮಕ್ಕಳಲ್ಲಿ ಒಬ್ಬನನ್ನು ಕಳೆದುಕೊಂಡಿದ್ದ ಆ ತಂದೆ ತಾಯಿ ಇನ್ನೊಬ್ಬ ಮಗನಾದ್ರು ಚೆನ್ನಾಗಿ ಓದಿ ಒಳ್ಳೆಯ ಕೆಲಸ ತಗೋಬೇಕು ಅಂತಾ ಕೂಲಿ ನಾಲಿ ಮಾಡಿ ಅವನನ್ನು ಎಂಎ, ಬಿಎಡ್ ಓದಿಸಿದ್ರು.
ಅವನು ಸಹ ಅತೀ ಹೆಚ್ಚು ಅಂಕ ಪಡೆದು ಸಿಇಟಿಗೆ ಓದುತ್ತಿದ್ದ ಜೊತೆಗೆ ಮನೆಲಿ ಕೂರುವುದು ಬೇಡ, ತಂದೆ ತಾಯಿಗೆ ಆಸರೆಯಾಗೋಣ ಅಂತ ಆತ ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ, ಆದರೆ ದುರಾದೃಷ್ಟ ಆತನ ಎರಡು ಕಿಡ್ನಿ ಫೇಲ್ ಆಗಿದ್ದು, ಇತ್ತ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಆ ತಂದೆ ತಾಯಿ ಕಣ್ಣಿರು ಇಡುತ್ತಿದ್ದಾರೆ.
ಇದನ್ನೂ ಓದಿ | ಸಿಡಿ ಪ್ರಕರಣ | ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ : ಸಿದ್ದರಾಮಯ್ಯ
ಊಟ ನೀರು ಸೇರದೇ ಹಾಸಿಗೆ ಹಿಡಿದಿರುವ ಯುವಕ, ಮಗನ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವ ತಂದೆ ತಾಯಿ.. ಈ ಮನಕುಲ ದೃಶ್ಯ ಕಂಡು ಬಂದಿದ್ದು, ದಾವಣಗೆರೆ ತಾಲ್ಲೂಕಿನ ಮಾಳಗೊಂಡನಹಳ್ಳಿಯಲ್ಲಿ, ಹೌದು.. ಮಾಳಗೊಂಡನಹಳ್ಳಿಯ ಪರಶುರಾಮಪ್ಪ ಹಾಗೂ ಅನುಸೂಯಮ್ಮ ದಂಪತಿಯ ಪುತ್ರ 26 ವರ್ಷದ ಕಲ್ಲೇಶ್, ಓದಿನಲ್ಲಿ ತುಸು ಮುಂದು ಈಗಾಗಿಯೇ ಕಲ್ಲೇಶನನ್ನು ಹೇಗಾದರು ಮಾಡಿ ಓದಿಸಬೇಕು ಎಂದು ಕೂಲಿ ಮಾಡಿ ಹಣ ಕೂಡಿಟ್ಟು ಬಿಎಡ್, ಎಂಎ ಓದಿಸಿದ್ರು.
ಕಲ್ಲೇಶ್ ಓದಿನಲ್ಲಿಮುಂದೆ ಇದ್ದ ಕಾರಣ ಉತ್ತಮ ಅಂಕ ಪಡೆದಿದ್ದ, ಬಳಿಕ ಮನೆಯ ಪರಿಸ್ಥಿತಿ ಸರಿ ಇಲ್ಲದ ಹಿನ್ನಲೆ ಕಲ್ಲೇಶ್ ಸಿಇಟಿ, ಕಾಂಪಿಟೇಟಿವ್ ಪರೀಕ್ಷೆಗೆ ಓದುತ್ತಲೇ ಕೊರಿಯರ್ ಬಾಯ್ ಆಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ, ಆದರೆ ಅದೊಂದು ದಿನ ಹೊಟ್ಟೆ ತಳ ಭಾಗ ನೋವ್ವ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ತೋರಿಸಿದಾಗ ಕುಟುಂಬಕ್ಕೆ ಬರಸಿಡಿಲು ಸುದ್ದಿ ಬಡಿದಿತ್ತು, ಅದುವೇ ಕಲ್ಲೇಶನಿಗೆ ಎರಡು ಕಿಡ್ನಿ ಫೇಲ್ ಎಂದು ವೈದ್ಯರು ಶಾಕಿಂಗ್ ನ್ಯೂಸ್ ಕೊಟ್ಟಿದ್ರು.
ಇನ್ನು ಕಲ್ಲೇಶ್, ಯಾವೂದೇ ಕುಡಿತ, ಗುಟ್ಕ ಮುಟ್ಟಿದವನಲ್ಲ, ಚಿಕ್ಕವನಿದಾಗ ಕಿಡ್ನಿಯಲ್ಲಿ ಕಲ್ಲು ಇತ್ತಂತೆ ಇದನ್ನ ಟ್ರಿಟ್ ಮೆಂಟ್ ಮೂಲಕವೇ ಕರಗಿಸುತ್ತೇವೆ ಎಂದು ವೈದ್ಯರು ಚಿಕಿತ್ಸೆ ನೀಡಿದ್ದರಂತೆ, ಅದಾದ ಬಳಿಕ ಹುಷಾರಾಯಿತು ಅಂತ ಸುಮ್ಮನಿದ್ದ ಕಲ್ಲೇಶ್ ಗೆ ಹಲವು ವರ್ಷಗಳ ಬಳಿಕ ಈಗ ಕಿಡ್ನಿ ಫೇಲ್ ಆಗಿರುವ ಸಂಗತಿ ತಿಳಿದಿದೆ, ಇನ್ನೂ ಇಬ್ಬರು ಮಕ್ಕಳಲ್ಲಿ ಒಬ್ಬ ಜಾಂಡಿಸ್ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಿದ್ದಾನೆ.
ಈಗ ಇರುವುದು ಇವನೊಬ್ಬ, ಇವನಿಗೂ ಇದೇ ಪರಿಸ್ಥಿತಿ ಬಂದಿದೆ.. ನನ್ನ ಕಿಡ್ನಿ ಇವನಿಗೆ ಹೊಂದುತ್ತಂತೆ, ಆದರೆ ಬದಲಾಯಿಸಲು ೧೫ ರಿಂದ ೨೦ ಲಕ್ಷ ರೂಪಾಯಿ ಖರ್ಚಾಗುತ್ತೆ ಅಂತಾ ಡಾಕ್ಟರ್ ತಿಳಿಸಿದ್ದಾರೆ, ಇದ್ದ ಬದ್ದ ಹಣವನ್ನೆಲ್ಲ ಡಯಾಲಿಸಿಸ್ ಮಾಡಿಸಲು ಆಸ್ಪತ್ರೆಗೆ ಖರ್ಚಾಗಿದೆ, ಯಾರಾದ್ರು ಸಹಾಯ ಮಾಡಿ ಮಗನ ಉಳಿಸಿಕೊಡಿ ಅಂತಾ ತಾಯಿ ಅನುಸೂಯಮ್ಮ ಕಣ್ಣೀರಿಟ್ಟಿದ್ದಾರೆ.
ಒಟ್ಟಾರೆ ಇದ್ದ ಒಬ್ಬ ಮಗನನ್ನು ಉಳಿಸಿಕೊಳ್ಳಲು ಬಡ ದಂಪತಿಗಳು ಹರಸಾಹಸ ಪಡ್ತಾ ಇದ್ದಾರೆ, ಕಿಡ್ನಿ ಕೊಡಲು ರೆಡಿ ಇದ್ದರು ಬದಲಾಯಿಸಲು ಹಣವಿಲ್ಲ,,ಹೀಗಾಗಿ ಇವರಿಗೆ ಸಹಾಯ ಮಾಡುವವರು ಅಕೌಂಟ್ ನಂಬರ್ ಕೆಳಗಿನಂತೆ
NAME- KALLLESH. P
ACOUNT NOMBR-34869949662
IFSC- SBIN0005624
BRANCH CODE- 5624
G pay-phone pay
Mob: 9845601182 ಗೂ ಧನ ಸಹಾಯ ಮಾಡಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅಲರ್ಟ್..!

- ಸುನೀತ ಕುಶಾಲನಗರ
ನದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.
ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .
ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.
ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.
ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು
ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!
ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.
ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ7 days ago
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
-
ದಿನದ ಸುದ್ದಿ6 days ago
ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು
-
ಅಂಕಣ6 days ago
ಸಿದ್ಧಾಂತ ಮತ್ತು ಪತ್ರಿಕೋದ್ಯಮ
-
ದಿನದ ಸುದ್ದಿ6 days ago
ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು
-
ದಿನದ ಸುದ್ದಿ6 days ago
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್
-
ಅಂಕಣ3 days ago
ಕವಿತೆ | ಅಲರ್ಟ್..!
-
ದಿನದ ಸುದ್ದಿ1 day ago
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ