ದಿನದ ಸುದ್ದಿ
ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು ನಿಗಧಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ರ್ಕಾರದ ಕರ್ಯರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ರ್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.
ಮತಗಟ್ಟೆಗಳ ಪುನರ್ ವಿಂಗಡಣೆ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌರ್ಯಗಳಾದ ರ್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.
ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕರ್ಯ ಸುಲಭವಾಗುತ್ತದೆ. ಹೆಸರು ಸರ್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ರ್ಹ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.
ಕ್ಷೇತ್ರದ ಮತದಾರರ ವಿವರ
ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಲಿಂಗ ಅನುಪಾತ
ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ. ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.
ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು
ಯುವ ಮತದಾರರು, 18-19 ರ್ಷ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.
20-29 ರ್ಷ: ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.
30-39 ರ್ಷ: ಈ ವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.
ಮಧ್ಯವಯಸ್ಕರು: 40-49 ರ್ಷ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.
50-59 ರ್ಷ: ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.
ಹಿರಿಯ ನಾಗರಿಕರು
60-69 ರ್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79 ರ್ಷ: ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.
80 ರ್ಷ ಮೇಲ್ಪಟ್ಟವರು
ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕರ್ಯನರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


