ದಿನದ ಸುದ್ದಿ

ದಾವಣಗೆರೆ | ನಾಳೆ ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ 2021-22ನೇ ಸಾಲಿನಲ್ಲಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ(ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ವಿತರಿಸಲಾಗುವುದು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೊ.ಎನ್.ಲಿಂಗಣ್ಣ ಇವರ ಸಮಕ್ಷಮದಲ್ಲಿ ಮೇ.19 ರಂದು ಬೆ.11 ಗಂಟೆಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ ದೇವರಾಜ್ ಅರಸ್ ಬಡಾವಣೆ ಬಿ.ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ ದಾವಣಗೆರೆ ಇಲ್ಲಿಯ ಶಾಲಾ ಆವರಣದಲ್ಲಿ ವಿತರಿಸಲಾಗುವುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ ಪ್ರಕಾಶ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version