Connect with us

ದಿನದ ಸುದ್ದಿ

ದಾವಣಗೆರೆ | ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಸಂಭ್ರಮ :‌ ವಧು-ವರರನ್ನು ಹಾರೈಸಿದ ಡಿಸಿ, ಸಿಇಒ

Published

on

ಸುದ್ದಿದಿನ,ದಾವಣಗೆರೆ : ಇಲ್ಲಿನ ಶ್ರೀ ರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯವು ಬುಧವಾರ ತಳಿರು ತೋರಣಗಳಿಂದ ಅಲಂಕಾರಗೊಂಡಿತ್ತು. ಮಂಗಳವಾದ್ಯ ಮೊಳಗಿತ್ತು. ಸ್ವಾಗತ ಕೋರಲು ಮಂಟಪದವರೆಗೂ ರಂಗೋಲಿ ಹಾಕಲಾಗಿತ್ತು. ದೈನಂದಿನ ಕಚೇರಿ ಕೆಲಸದಲ್ಲಿ ನಿರತರಾಗುತ್ತಿದ್ದ ಮಹಿಳಾ ನಿಲಯದ ಅಧಿಕಾರಿಗಳು, ಸಿಬ್ಬಂದಿ ಬಣ್ಣಬಣ್ಣದ ಸೀರೆ ಉಟ್ಟು ಸಂಭ್ರಮದಲ್ಲಿ ಓಡಾಡುತ್ತಿದ್ದರು. ಇದಕ್ಕೆ ಕಾರಣ ಮಹಿಳಾ ವಸತಿ ನಿಲಯದ ಮಗಳು ಸೌಮ್ಯ.ಕೆ.ಎಂ ಅವರ ವಿವಾಹ ಮಹೋತ್ಸವ.

ಮಹಿಳಾ ನಿಲಯದ ನಿವಾಸಿ ಸೌಮ್ಯ.ಕೆ.ಎಂ ಅವರ ಪೋಷಕರ ಸ್ಥಾನದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸಿಇಒ ವಿಜಯಮಹಾಂತೇಶ ಬಿ. ದಾನಮ್ಮನವರ್, ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ರಾಜ್ಯ ಬಾಲ ಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜಪ್ಪ ಅವರುಗಳು ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕಿನ ಕಡೆಗೋಡಿ ಗ್ರಾಮದ ಸುಬ್ರಾಯ ಮಂಜುನಾಥ ಭಟ್ಟ ಅವರಿಗೆ ಧಾರೆ ಎರೆದುಕೊಟ್ಟರು.

ಇದನ್ನೂ ಓದಿ | ಮಾ.18 ರಂದು ಚನ್ನಗಿರಿಗೆ ಎಸಿಬಿ ಭೇಟಿ

ವಧು ವರರು ಮದುವೆಯ ಉಡುಗೆ ತೊಟ್ಟು ತಯಾರಾದ ಬಳಿಕ ನಿಲಯದ ಕೊಠಡಿಯಲ್ಲಿ ಗಣಪತಿ ದೇವರಿಗೆ ಕೈಮುಗಿದರು. ಅಲ್ಲಿಂದ ವೇದಿಕೆಗೆ ಡಿಸಿ, ಸಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲ ಮಹಿಳೆಯರ ಜತೆಗೆ ವಧು-ವರರನ್ನು ಮಂಟಪಕ್ಕೆ ಕರೆತಂದರು.

ಬೆಳಗ್ಗೆ 11 ರಿಂದ 11.45 ರವರೆಗಿನ ಶುಭ ಮುಹೂರ್ತದಲ್ಲಿ ವರನಿಂದ ವಧುವಿಗೆ ಮಾಂಗಲ್ಯಧಾರಣೆ ಇತರೆ ಶಾಸ್ತ್ರಗಳು ನೆರವೇರಿದವು. ಪರಸ್ಪರ ಹಾರ ಬದಲಾಯಿಸಿಕೊಂಡಾಗ ನೆರೆದಿದ್ದ ಎಲ್ಲರೂ ಅಕ್ಷತೆ ಹಾಕಿ ಹರಿಸಿದರು. ಅನಾಥೆಯಾದ ಸೌಮ್ಯ ಗೆ ಸಂಬಂಧಿಕರು ಇಲ್ಲದ ಪರಿಣಾಮ ವಸತಿ ನಿಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಪೋಷಕರು ಹಾಗೂ ಸಂಬಂಧಿಕರ ಸ್ಥಾನದಲ್ಲಿ ನಿಂತು ಮದುವೆ ನೆರವೇರಿಸಿಕೊಟ್ಟರು.

ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕಿನ ಕಡೆಕೋಡಿ ಗ್ರಾಮದ ಮಂಜುನಾಥ ಭಟ್ಟ ಹಾಗೂ ಕಮಲಮ್ಮ ಅವರ ಜೇಷ್ಠ ಪುತ್ರನಾದ ಸುಬ್ರಾಯ ಮಂಜುನಾಥ ಭಟ್ಟ ಈ ಯುವತಿಯನ್ನು ಮದುವೆಯಾಗಲು ಮುಂದೆ ಬಂದಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದರು. ಸುಬ್ರಾಯ ಮಂಜುನಾಥ ಭಟ್ಟ ಖಾಸಾಗಿ ಸಂಸ್ಥೆಯೊಂದರಲ್ಲಿ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಜಗಳೂರು ತಾಲ್ಲೂಕಿನ ಗೊಲ್ಲರಹಟ್ಟಿಯಲ್ಲಿ ಅತ್ಯಾಚಾರ ಸಂತ್ರಸ್ಥೆ ಮೂಕ ಯುವತಿಗೆ ಜನಿಸಿ, ಬಹಿಷ್ಕಾರಕ್ಕೆ ಒಳಗಾಗಿದ್ದ ಮಗುವಿಗೆ ಮಹಿಳಾ ನಿಲಯದಲ್ಲಿ ಶ್ರೀ ಕೃಷ್ಣ ಎಂದು ನಾಮಕಾರಣ ಮಾಡಲಾಗಿತ್ತು. ಇದೀಗ ಈ ಮಗುವಿಗೆ 2.5 ವರ್ಷ ತುಂಬಿದ್ದರಿಂದ ಡಿಸಿ ಹಾಗೂ ಸಿಇಒ ನೇತೃತ್ವದಲ್ಲಿ ಜವಳ ಶಾಸ್ತ್ರ ನೆರವೇರಿಸಲಾಯಿತು.

ನೂತನ ದಂಪತಿಗಳು ವಿವಾಹ ಜೀವನಕ್ಕೆ ಕಾಲಿರಿಸಿದ ಸಂಭ್ರಮಕ್ಕೆ ಸಾಕ್ಷಿಯಾದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಕನ್ಯಾದಾನ ಮಾಡಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿ, ನಾನು ಅಧಿಕಾರಕ್ಕೆ ಬಂದ ಮೇಲೆ ಇದು 6ನೇ ವಿವಾಹ ಮಹೋತ್ಸವ. ಮಹಿಳಾ ನಿಲಯದಲ್ಲಿ 40ನೇ ಮದುವೆ ಇದು. ಹುಡುಗನ ಮನೆ ಕಡೆಯವರು ಸಂಸ್ಕಾರವಂತರು.

ಹುಡುಗ ಖಾಸಾಗಿ ಸಂಸ್ಥೆಯೊಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಹುಡುಗಿ ಪಿಯುಸಿ ಓದು ಮುಗಿಸಿ ಮಹಿಳಾ ನಿಲಯದಲ್ಲಿ ಇದ್ದಾಳೆ. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ನವ ಜೋಡಿ ಅನ್ಯೂನ್ಯವಾಗಿ ಪರಸ್ಪರ ಶಾಂತಿ, ಸಂತೋಷದಿಂದ ಬಾಳಲಿ ಎಂದು ಅಕ್ಷತೆಯನ್ನು ಹಾಕಿ ಶುಭ ಹಾರೈಸಿದರು.

ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ಮಾತನಾಡಿ, ನಾವು ಭಾರತೀಯರು ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡುತ್ತೇವೆ. ಅದರಲ್ಲಿಯೂ ಅನಾಥಾಶ್ರಮದ ಮಗುವೊಂದಕ್ಕೆ ಅದ್ದೂರಿಯಾಗಿ ವಿವಾಹ ಮಾಡುತ್ತಿರುವುದು ಶ್ಲಾಘನೀಯ. ತಂದೆ ತಾಯಿ ಕಳೆದುಕೊಂಡಿರುವ ಈ ಮಕ್ಕಳು ಜಾತಿ ಬಂಧನದಿಂದ ಹೊರಗಿದ್ದಾರೆ. ಉಳಿದವರು ಜಾತಿ ಸಂಕುಚಿತ ಸಂಕೋಲೆಯಲ್ಲಿರಬೇಕಾಗುತ್ತದೆ.

ಅನಾಥ ಮಕ್ಕಳನ್ನು ಮದುವೆಯಾಗಲು ಮುಂದೆ ಬಂದಿರುವವರಿಂದಲೇ ದೇಶ ಕಟ್ಟಲು ಸಾಧ್ಯ. ಇವರಿಂದಲೇ ಇಂದು ಮಾನವೀಯ ಮೌಲ್ಯಗಳು ಉಳಿಯುತ್ತಿವೆ. ಇಂತಹ ಮಾನವೀಯ ಕಾರ್ಯದಲ್ಲಿ ನಾನು ಭಾಗವಹಿಸಿರುವುದು ಧನ್ಯ ಎಂದರು.

ಸಿಇಒ ವಿಜಯಮಹಾಂತೇಶ ಬಿ.ದಾನಮ್ಮನವರ್ ಮಾತನಾಡಿ, ಮಧ್ಯಮ ವರ್ಗದ ಜನರು ಸಹ ಈ ರೀತಿಯಾಗಿ ಮದುವೆ ಮಹೋತ್ಸವವನ್ನು ಮಾಡುವುದಿಲ್ಲ. ಮಹಿಳಾ ನಿಲಯದ ಸಹಯೋಗದೊಂದಿಗೆ ಸರ್ಕಾರವು ಅನಾಥ ಹೆಣ್ಣು ಮಕ್ಕಳಿಗೆ ವಿಜೃಂಭಣೆಯಿಂದ ಮದುವೆ ಮಾಡಿಕೊಡುವುದು ಅಭಿನಂದನಾರ್ಹ. ಇಂತಹ ಸತ್ಕಾರ್ಯ ನಡೆಸುವ ಅವಕಾಶ ಸಿಕ್ಕಿರುವುದು ನಮಗೆ ಗೌರವ, ಹೆಮ್ಮೆ, ಹಾಗೂ ಸೌಭಾಗ್ಯವಾಗಿದೆ ಎಂದು ಹೇಳಿದರು. ದಂಪತಿಗಳು ಸುಖದಿಂದ ಬಾಳಲಿ ಎಂದು ಹಾರೈಸಿದರು.

ಸಮಾರಂಭದಲ್ಲಿ ರಾಜ್ಯ ಮಹಿಳಾ ನಿಲಯದ ಅಧೀಕ್ಷಕರಾದ ನಾಗರತ್ನಮ್ಮ, ರಾಜ್ಯ ಮಹಿಳಾ ನಿಲಯದ ಲೆಕ್ಕಿಗರಾದ ಸುಜಾತಮ್ಮ, ಬಾಲಕಿಯರ ಬಾಲ ಭವನದ ಅಧಿಕ್ಷಕರಾದ ಶೋಭಾ, ಕೌಟುಂಬಿಕ ಸುರಕ್ಷಿತಾಧಿಕಾರಿ ಸುಶೀಲಮ್ಮ, ಜಿಲ್ಲಾ ನಿರೂಪಣಾಧಿಕಾರಿ ಗಿರಿಜಮ್ಮ ಸೇರಿದಂತೆ ಜಿಲ್ಲೆಯ ಎಲ್ಲಾ ಸಿಡಿಪಿಒ ಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending