Connect with us

ದಿನದ ಸುದ್ದಿ

ದಾವಣಗೆರೆ | 1005 ಕೊರೋನಾ ಸಕ್ರಿಯ ಪ್ರಕರಣಗಳು

Published

on

ಸುದ್ದಿದಿನ, ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳೊಂದಿಗೆ ಸಭೆ ನಡೆಸಿ, ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳು ಮತ್ತು ದಾವಣಗೆರೆ ನಗರ ಹಾಗೂ ತಾಲ್ಲೂಕುಗಳಲ್ಲಿನ ಕೋವಿಡ್ ಹಿನ್ನೆಲೆಯ ವಾಸ್ತವಿಕ ಸ್ಥಿತಿಗತಿಗಳ ಬಗ್ಗೆ ಸವಿವರವಾಗಿ ಡಿಸಿ, ಎಸ್‍ಪಿ, ಡಿಹೆಚ್‍ಓ, ತಾಲ್ಲೂಕುಗಳ ತಹಶೀಲ್ದಾರರು ಮತ್ತು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಜಿಲ್ಲೆಯಲ್ಲಿ 387415 ಆರ್.ಟಿ.ಪಿ.ಸಿ.ಆರ್, 111204 ರ್ಯಾಪಿಡ್ ಆ್ಯಕ್ಸಿಜನ್ ಟೆಸ್ಟ್ ಸೇರಿದಂತೆ ಒಟ್ಟು 4,98,619 ಪರೀಕ್ಷೆ ಮಾಡಲಾಗಿದ್ದು, ಏ.27 ರವರೆಗೆ 1454 ಸಕ್ರಿಯ ಪ್ರಕರಣಗಳಿದ್ದು ಆಸ್ಪತ್ರೆಯಲ್ಲಿ 517 ಜನರಿದ್ದರೆ ಮನೆಯಲ್ಲಿ ಪ್ರತ್ಯೇಕವಾಗಿ 937 ಜನರಿದ್ದಾರೆ. ಇದುವರೆಗೆ ಕೋವಿಡ್‍ನಿಂದ 268 ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ | ದಾವಣಗೆರೆ | ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ : ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ

ದಾವಣಗೆರೆ ತಾಲ್ಲೂಕಿನಲ್ಲಿ ಒಟ್ಟು 1,97,788 ಕೋವಿಡ್ ಪರೀಕ್ಷೆ ಮಾಡಲಾಗಿದೆ. 14,269 ಜನರಿಗೆ ಪಾಸಿಟಿವ್ ಬಂದಿದ್ದು 12,985 ರೋಗಿಗಳು ಗುಣ ಮುಖವಾಗಿದ್ದಾರೆ. ಇಲ್ಲಿವರೆಗೂ 179 ಜನ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, 636 ಜನರನ್ನು ಮನೆಯಲ್ಲೆ ಪ್ರತ್ಯೇಕವಾಗಿ ಇರಿಸಲ್ಪಟ್ಟಿದೆ. ಪ್ರಸ್ತುತ 369 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, 1005 ಸಕ್ರಿಯ ಪ್ರಕರಣಗಳಿವೆ.

ಹರಿಹರ ತಾಲ್ಲೂಕಿನಲ್ಲಿ ಒಟ್ಟು 88083 ಕೋವಿಡ್ ಪರೀಕ್ಷೆ ಮಾಡಲಾಗಿದೆ. 3699 ಜನರಿಗೆ ಪಾಸಿಟಿವ್ ಬಂದಿದ್ದು, 3507 ರೋಗಿಗಳು ಗುಣ ಮುಖವಾಗಿದ್ದಾರೆ. ಇಲ್ಲಿವರೆಗೂ 38 ಜನ ಮೃತಪಟ್ಟಿದ್ದಾರೆ. 97 ಜನರನ್ನು ಮನೆಯಲ್ಲೆ ಪ್ರತ್ಯೇಕವಾಗಿ ಇರಿಸಲ್ಪಟ್ಟಿದೆ. ಪ್ರಸ್ತುತ 51 ಜನ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 148 ಸಕ್ರಿಯ ಪ್ರಕರಣಗಳಿವೆ. ಜಗಳೂರು ತಾಲ್ಲೂಕಿನಲ್ಲಿ ಒಟ್ಟು 60763 ಕೋವಿಡ್ ಪರೀಕ್ಷೆ ಮಾಡಲಾಗಿದೆ. 1273 ಜನರಿಗೆ ಪಾಸಿಟಿವ್ ಬಂದಿದ್ದು, 1181 ಜನರು ಗುಣಮುಖರಾಗಿದ್ದಾರೆ.

11 ಜನ ಮೃತಪಟ್ಟಿದ್ದು 35 ಜನರನ್ನು ಹೋಮ್ ಐಸೋಲೆಶನ್ ಮಾಡಲಾಗಿದೆ. ಪ್ರಸ್ತುತ 39 ಜನ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 74 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಚನ್ನಗಿರಿ ತಾಲ್ಲೂಕಿನಲ್ಲಿ ಒಟ್ಟು 81057 ಕೋವಿಡ್ ಪರೀಕ್ಷೆ ಮಾಡಲಾಗಿದೆ. 2462 ಜನರಿಗೆ ಪಾಸಿಟಿವ್ ಬಂದಿದ್ದು, 2347 ಜನರು ಗುಣಮುಖರಾಗಿದ್ದಾರೆ. 10 ಜನ ಮೃತಪಟ್ಟಿದ್ದು 96 ಜನರನ್ನು ಹೋಮ್ ಐಸೊಲೇಷನಲ್ಲಿದ್ದಾರೆ. ಪ್ರಸ್ತುತ 03 ಜನ ಆಸ್ಪತ್ರೆಯಲ್ಲಿದ್ದಾರೆ. 99 ಸಕ್ರಿಯ ಪ್ರಕರಣ.

ಹೊನ್ನಾಳಿ ತಾಲ್ಲೂಕಿನಲ್ಲಿ ಒಟ್ಟು 70928 ಕೋವಿಡ್ ಪರೀಕ್ಷೆ ಮಾಡಲಾಗಿದೆ. 2905 ಜನರಿಗೆ ಪಾಸಿಟಿವ್ ಬಂದಿದ್ದು, 2797 ಜನರು ಗುಣಮುಖರಾಗಿದ್ದಾರೆ. ಇಲ್ಲಿವರೆಗೂ 09 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, 73 ಜನರನ್ನು ಹೋಮ್ ಐಸೊಲೇಷನಲ್ಲಿದ್ದಾರೆ. ಪ್ರಸ್ತುತ 12 ಜನ ಆಸ್ಪತ್ರೆಯಲ್ಲಿ ದಾಖಲಾಗಿದ್ದು, 85 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending