Connect with us

ದಿನದ ಸುದ್ದಿ

ದಾವಣಗೆರೆ | ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ : ಡಿಸಿ ಮಹಾಂತೇಶ್ ಬೀಳಗಿ ಪರಿಶೀಲನೆ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್‍ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್ ಸೆಂಟರ್ ತೆರೆಯುವ ಬಗ್ಗೆ ಪರಿಶೀಲಿಸಿ ವೈದ್ಯರುಗಳೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚರ್ಚೆ ನಡೆಸಿದರು.

ಬುಧವಾರ ಇಎಸ್‍ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಇಎಸ್‍ಐ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಮತ್ತು 40 ಐಸೊಲೇಶನ್ ಬೆಡ್‍ಗಳು ಸೇರಿದಂತೆ ಒಟ್ಟು 80 ಬೆಡ್‍ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಬೇಕಾದ ಅಗತ್ಯತೆಗಳ ಬಗ್ಗೆ ಅಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ವೇಳೆ ಇಎಸ್‍ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಬಸವನಗೌಡ ಮಾತನಾಡಿ, ಆಸ್ಪತ್ರೆಯಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆಗೆ 19 ಪಾಯಿಂಟ್‍ಗಳು ಇದ್ದು, ಅದರಲ್ಲಿ 2 ಕಡೆ ಲೀಕೇಜ್ ಆಗುತ್ತಿದೆ. ಆಸ್ಪತ್ರೆಯಲ್ಲಿ ಒಬ್ಬ ಟೆಕ್ನೀಷಿಯನ್ ಇದ್ದು ಇನ್ನೊಬ್ಬರ ಅಗತ್ಯವಿದೆ. ಹಾಗೂ ಬೆಡ್, ಸಿಲಿಂಡರ್ ವ್ಯವಸ್ಥೆ, ಫ್ಯಾನ್ ಸೇರಿದಂತೆ ಮೂಲ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲ ಕೊರತೆ ಇದ್ದು, ಸಾಧ್ಯವಾದಷ್ಟು ಜಿಲ್ಲಾಡಳಿತಕ್ಕೆ ಸಹಾಯ ಮಾಡಲು ತಾವು ಬದ್ಧರಿದ್ದೇವೆ ಎಂದರು.

ಅರಿವಳಿಕೆ ತಜ್ಞೆ ಡಾ.ನಂದಿನಿ ಮಾತನಾಡಿ, ಆಸ್ಪತ್ರೆಯಲ್ಲಿ ಐಸಿಯು ಇಲ್ಲವಾದ್ದರಿಂದ ಇಲ್ಲಿರುವ ಸಿಬ್ಬಂದಿಗಳಿಗೆÉ ಐಸಿಯು ನಿರ್ವಹಣೆ ಅನುಭವ ಇಲ್ಲ. ಅವರಿಗೆ ಒಂದು ವಾರದ ಮಟ್ಟಿಗೆ ತರಬೇತಿ ಕೊಟ್ಟಲ್ಲಿ ಅನುಕೂಲವಾಗುತ್ತದೆ. ಈಗಾಗಲೇ ಆಸ್ಪತ್ರೆಯಲ್ಲಿ 19 ಬೆಡ್‍ಗಳಿಗೆ ಆಕ್ಸಿಜನ್ ವ್ಯವಸ್ಥೆ ಇದೆ. 11 ಜಂಬೋ ಸಿಲಿಂಡರ್‍ಗಳು, 26 ಸಣ್ಣ ಸಿಲಿಂಡರ್‍ಗಳು ಹಾಗೂ 15 ಔಟ್‍ಲೆಟ್‍ಗಳು ಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ | ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಳ್ಳಲು ವಿಕಲಚೇತನರಿಗೆ ಸೂಚನೆ

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ವಹಿಸಲಾಗುವುದು. ಆಸ್ಪತ್ರೆಗೆ ಬೇಕಾದ 70 ಮಂಚಗಳನ್ನು ಹೊರಗಡೆಯಿಂದ ತರಿಸುತ್ತೇವೆ. ಹಾಗೂ ಕಾಟನ್ ಬೆಡ್, ಫ್ಯಾನ್, ಐವಿ ಡ್ರಿಪ್, ಆಕ್ಸಿಜನ್ ಸಿಲಿಂಡರ್, ಬಿಪಿ ಆಪರೇಟರ್ಸ್‍ಗಳನ್ನು ದಾನಿಗಳಿಂದ ಪೂರೈಸುತ್ತೇವೆ. ಅಲ್ಲದೇ ಆಸ್ಪತ್ರೆಗೆ ಬೇಕಾದ ಟ್ರಾಲಿಗಳು, ವ್ಹೀಲ್‍ಚೇರ್‍ಗಳು, ಐವಿ ಸ್ಟ್ಯಾಂಡ್ ಇತರೆ ಸವಲತ್ತುಗಳ ಕುರಿತು ಮಾಹಿತಿ ನೀಡಿದರೆ ಜಿಲ್ಲಾಡಳಿತದಿಂದ ಪೂರೈಸುತ್ತೇವೆ ಎಂದರು.

ಆಸ್ಪತ್ರೆಯಲ್ಲಿ ಈಗಾಗಲೇ ಹೊರರೋಗಿಗಳ ಚಿಕಿತ್ಸೆ ನಡೆಯುತ್ತಿದ್ದು ಈ ವ್ಯವಸ್ಥೆಗೆ ಧಕ್ಕೆ ಆಗದಂತೆ ಕೋವಿಡ್ ಸೆಂಟರ್‍ನ್ನು ತೆರೆಯಬೇಕು. ಸಾಮಾನ್ಯ ರೋಗಿಗಳು ಹಾಗೂ ಕೋವಿಡ್ ಸೋಂಕಿತ ರೋಗಿಗಳಿಗೆ ಪ್ರತ್ಯೇಕ ದ್ವಾರಗಳನ್ನು ಮಾಡಬೇಕು ಹಾಗೂ ಸಂಬಂಧಪಟ್ಟ ವೈದ್ಯರು, ಸಿಬ್ಬಂದಿಗಳು ಸಹ ಆಯಾ ದ್ವಾರಗಳ ಮೂಲಕವೇ ಹೋಗಿಬರಬೇಕು. ಹಾಗೂ ಸೋಂಕಿತರಿಗೆ ಬಿಸಿನೀರು ವ್ಯವಸ್ಥೆ ಮಾಡಲು ಮತ್ತು ಆಸ್ಪತ್ರೆಗೆ ಬಂದ ರೋಗಿಗಳು ಬಿಸಿ ನೀರು ಕುಡಿಯಲು 2 ಯೂನಿಟ್‍ಗೆ ಒಂದರಂತೆ ಸ್ಟೌವ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಸಿಜಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಂಜಯ್ ಮಾತನಾಡಿ, ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ವ್ಯವಸ್ಥೆ ಇಲ್ಲ. ಎಕ್ಸ್‍ರೇ ಯೂನಿಟ್ ಇದೆ ಆದರೆ ಫಿಲ್ಮ್‍ಗಳು ಇಲ್ಲ. ಆದ್ದರಿಂದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರನ್ನು ಮೊದಲ ಹಂತದ ಚಿಕಿತ್ಸೆ ಪೂರೈಸಿದ ಬಳಿಕ ಚೇತರಿಸಿಕೊಂಡ ರೋಗಿಗಳನ್ನು ಈ ಆಸ್ಪತ್ರೆಗೆ ವರ್ಗಾವಣೆ ಮಾಡಬಹುದು ಎಂದರು.

ನಂತರ ಜಿಲ್ಲಾಧಿಕಾರಿಗಳು ಮಾತನಾಡಿ, ಕೋವಿಡ್ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಡಿ ಗ್ರೂಪ್ ನೌಕರ ವರ್ಗದವರು ಸೇರಿ ಒಟ್ಟು 3 ತಂಡಗಳನ್ನು ರಚಿಸಿಕೊಳ್ಳಬೇಕು. ಪ್ರತಿ ತಂಡಕ್ಕೂ 3 ವೈದ್ಯರು, 3 ಸ್ಟಾಫ್ ನರ್ಸ್, 3 ಡಿ-ಗ್ರೂಪ್ ಸೇರಿದಂತೆ 9 ಜನರ ತಂಡ ರಚಿಸಬೇಕೆಂದು ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಹಾಗೂ ವೆಂಟಿಲೇಟರ್ ಸಾಮಥ್ರ್ಯ ಹೆಚ್ಚಿಸಿಕೊಳ್ಳಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಪ್ರತಿ ಆಸ್ಪತ್ರೆಗೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದ್ದು, ಆಸ್ಪತ್ರೆಯ ಪ್ರತಿ ವಿಭಾಗದ ವರದಿಯನ್ನು ನೋಡಿಕೊಳ್ಳುವ ಮೂಲಕ ಪ್ರತಿನಿತ್ಯ ವರದಿ ನೀಡುತ್ತಿದ್ದಾರೆ. ಅನಗತ್ಯವಾಗಿ ಆಕ್ಸಿಜನ್ ಬಳಕೆ ಮಾಡಬಾರದು. ಅದನ್ನು ಔಷಧಿಯಂತೆ ಸಮರ್ಪಕವಾಗಿ ಬಳಸಬೇಕು ಎಂದು ತಿಳಿಸಿದರು.

ತಾಲ್ಲೂಕು ಆಸ್ಪತ್ರೆಗಳಲ್ಲಿರುವ ವೈದ್ಯರು ಅನಗತ್ಯವಾಗಿ ಅಲ್ಲಿರುವ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ. ಸ್ಥಳೀಯವಾಗಿ ಗುಣಮುಖರಾಗುವ ರೋಗಿಗಳನ್ನು ಆದಷ್ಟು ಅಲ್ಲಿಯೇ ಚಿಕಿತ್ಸೆ ನೀಡಬೇಕೇ ಹೊರತು ನಗರದ ಆಸ್ಪತ್ರೆಗಳಿಗೆ ಕಳುಹಿಸಬಾರದು ಎಂದು ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್‍ನಾಯಕ್, ಆರ್.ಎಂ.ಒ ಡಾ.ಸಂಧ್ಯಾರಾಣಿ, ಹಿರಿಯ ತಜ್ಞ ಡಾ.ಅಣ್ಣಪ್ಪಸ್ವಾಮಿ, ಉಪ ವೈದ್ಯಕೀಯ ಅಧೀಕ್ಷಕ ಡಾ.ಚಿದಾನಂದ್, ಡಾ.ನಂದಿನಿ, ಡಾ.ಚಂದನ, ಡಾ.ಪ್ರಸನ್ನ, ಡಾ.ಅನಿತರಾಣಿ ಸೇರಿದಂತೆ ಹಿರಿಯ ತಜ್ಞರು ಉಪಸ್ಥಿತರಿದ್ದರು.

ಎಸ್.ಎಸ್.ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ :
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಇಎಸ್‍ಐ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಅನಿರೀಕ್ಷಿತÀವಾಗಿ ಎಸ್.ಎಸ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಯ ಎಂಐಸಿಯು, ಐಸೋಲೇಷನ್ ಹಾಗೂ ಐಸಿಯು ವಾರ್ಡ್‍ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಕುರಿತು ವೈದ್ಯರ ಬಳಿ ಮಾಹಿತಿ ಪಡೆದುಕೊಂಡರು.

ಎಸ್.ಎಸ್.ಆಸ್ಪತ್ರೆಯು ಕೋವಿಡ್ ಸೋಂಕಿತ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು ಹೆಚ್ಚು ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಗುಣಮುಖರಾದ ರೋಗಿಗಳನ್ನು ಆದಷ್ಟು ಬೇಗ ಬಿಡುಗೊಡೆಗೊಳಿಸಿ ಅಗತ್ಯವಿರುವ ಅಥವಾ ತುರ್ತು ಇರುವ ರೋಗಿಗಳಿಗೆ ಐಸಿಯು ಬೆಡ್‍ಗಳನ್ನು ನೀಡಬೇಕು. ಇಂದು ಐಸಿಎಂಆರ್ ಪೋರ್ಟಲ್‍ನಲ್ಲಿ 700 ಕ್ಕೂ ಹೆಚ್ಚು ಸೋಂಕಿತರು ಬರುವ ನಿರೀಕ್ಷೆ ಇದೆ. ಹಾಗಾಗಿ ಬೆಡ್ ವಿಸ್ತರಣೆ ಅನಿವಾರ್ಯವಾಗಿದ್ದು, ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಎಲ್ಲಾ ಸವಲತ್ತುಗಳ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ದುರ್ಬಳಕೆ ತಡೆಗಟ್ಟಲು ಆಕ್ಸಿಜನ್ ಆಡಿಟ್ ಮಾಡಿಸಲಾಗುತ್ತಿದ್ದು, ಇದರಿಂದ ಅನಗತ್ಯವಾಗಿ ಬಳಕೆಯಾಗುವ ಆಕ್ಸಿಜನ್ ಉಳಿಸಿ ಅಗತ್ಯವಿರುವವರಿಗೆ ಆಕ್ಸಿಜನ್ ನೀಡಬಹುದು. ಇದರಿಂದ ಎಸ್.ಎಸ್.ಆಸ್ಪತ್ರೆಯವರು ಕೂಡ ಪ್ರತಿನಿತ್ಯ ಆಕ್ಸಿಜನ್ ಆಡಿಟ್ ವರದಿಯನ್ನು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ತಿಳಿಸಿದರು.

ಆಸ್ಪತ್ರೆಯ ಕೊಠಡಿಗಳು ಹಾಗೂ ಹೊರ ಆವರಣ ಸ್ವಚ್ಛತೆಯಿಂದ ಕೂಡಿದ್ದು ಎಲ್ಲಾ ವಾರ್ಡ್‍ಗಳನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು. ಹಾಗೂ ಜಿಲ್ಲಾಸ್ಪತ್ರೆಯಿಂದ ರೆಫೆರ್ ಮಾಡಿದ ಕೋವಿಡ್ ಸೋಂಕಿತ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಎಸ್.ಎಸ್.ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ.ಕಾಳಪ್ಪನವರ್ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending