Connect with us

ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯಲ್ಲಿ ಮಾ.29 ರಂದು ದೃಢಪಟ್ಟ ಮತ್ತೊಂದು ಕೋವಿಡ್-19 ಪ್ರಕರಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಾ.29 ರಂದು ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ ಬಂದಿರುವ ಮಾಹಿತಿಯನ್ನು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಘಟಕ ನೀಡಿದ್ದು, ಈ ಸೋಂಕಿತ ವ್ಯಕ್ತಿಯು ಚಿತ್ರದುರ್ಗ ತಾಲ್ಲ್ಲೂಕಿನ ಭೀಮಸಮುದ್ರ ಗ್ರಾಮದ ಮನೆಯಲ್ಲಿ ಮಾ. 17 ರಿಂದ 23 ರವರೆಗೆ ಪ್ರತ್ಯೇಕ ಅವಲೋಕನದಲ್ಲಿ ಇರುತ್ತಾರೆ. ಮಾ. 24 ರಂದು ಭೀಮಸಮುದ್ರದಿಂದ ದಾವಣಗೆರೆ ಜೆ.ಎಂ.ಐ.ಟಿ. ಗೆಸ್ಟ್ ಹೌಸ್‍ಗೆ ಬಂದು ಪ್ರತ್ಯೇಕ ಕೊಠಡಿಯಲ್ಲಿ ತಂಗಿರುತ್ತಾರೆ.

ಈ ಮಾಹಿತಿಯು ಗೆಸ್ಟ್ ಹೌಸನಲ್ಲಿ ವಾಸವಿದ್ದ ಸಿಬ್ಬಂದಿಯಿಂದ ತಿಳಿದು ಬಂದಿದ್ದು, ಅದೇ ದಿನ ಜಿಲ್ಲಾ ಆರ್.ಆರ್.ಟಿ. ತಂಡ ಮತ್ತು ಸ್ಥಳಿಯ ಆರ್ಯೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯವರು ತಕ್ಷಣ ಆ ವ್ಯಕ್ತಿಯನ್ನು ಭೇಟಿ ಮಾಡಿ ತಪಾಸಣೆ ನಡೆಸಿದಾಗ, ಆ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದೇ ಇದ್ದುದ್ದರಿಂದ ಅವರನ್ನು ಉಳಿದ 7 ದಿನಗಳ ಕಾಲ ಗೆಸ್ಟ್ ಹೌಸನಲ್ಲಿ ಪ್ರತ್ಯೇಕಿಸಿ ಅವಲೋಕನದಲ್ಲಿ ಇಡಲಾಗಿದೆ.

ಈ ವ್ಕಕ್ತಿಯು ಚಿತ್ರದುರ್ಗದ ಭೀಮಸಮುದ್ರದ ಅವರ ಮನೆಯಲ್ಲಿ ಇದ್ದ ಪಿ-32 ಪ್ರಕರಣದ ನೇರ ಸಂಪರ್ಕದಲ್ಲಿ ಇದ್ದ ಕಾರಣ ನಿಯಮಾನುಸಾರ ಮಾ. 26 ರಂದು ಗಂಟಲುದ್ರವವನ್ನು ತೆಗೆದು ಶಿವಮೊಗ್ಗದ ವಿ.ಆರ್.ಡಿ.ಎಲ್ ಪ್ರಯೋಗ ಶಾಲೆಗೆ ಕಳುಹಿಸಲಾಗಿದ್ದು, ಮಾ. 28 ರಂದು ಸಂಜೆ 7.00 ಗಂಟೆ ವ್ಯಕ್ತಿಯು ಗಂಟಲು ದ್ರವದ ಮಾದರಿಯನ್ನು ಪ್ರಾಥಮಿಕ ಫಲಿತಾಂಶ ಪಾಸಿಟಿವ್ ಎಂದು ಬಂದಿದ್ದು, ತಕ್ಷಣವೇ ದಾವಣಗೆರೆಯ ಎಸ್.ಎಸ್.ಐ.ಎಂ.ಎಸ್ ಆಸ್ವತ್ರೆಗೆ ದಾಖಲಿಸಿದ್ದಾರೆ.

ಮಾ.28 ರಂದು ರಾಜ್ಯ ಸರ್ವೇಕ್ಷಣಾ ಘಟಕದ ನಿರ್ದೇಶನದಂತೆ ಕೋವಿಡ್-19 ಖಚಿತಪಟ್ಟ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ವೇಕ್ಷಣಾ ಘಟಕದ ಮಾರ್ಗಸೂಚಿಯಂತೆ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಿದ್ದು, ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಮತ್ತು ಈ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 8 ಮಂದಿಯಯನ್ನು ಗುರುತಿಸಿದ್ದು ಅವರ ರೋಗ ಲಕ್ಷಣಗಳ ತಪಾಸಣೆ ನಡೆಸಲಾಗುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಈ ವ್ಯಕ್ತಿಯ ಪ್ರಯಾಣದ ವಿವರ ಈ ಕೆಳಕಂಡತಿದೆ

ದಾವಣಗೆರೆ ನಗರದ ಈ ವ್ಯಕ್ತಿಯೊಬ್ಬರು ಅಮೇರಿಕಾದ ಚಿಕಾಗೋ ನಗರದ ಹತ್ತಿರದ ಪ್ರಡ್ಯೂ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು, ಮಾ. 15 ರಂದು ಹಾಸ್ಟಲ್‍ನಿಂದ ಉಬರ್ ಕ್ಯಾಬನಲ್ಲಿ ಹೊರಟು ಚಿಕಾಗೋ ತಲುಪಿದ್ದಾರೆ. ಅಲ್ಲಿಂದ ಏರ್ ಇಂಡಿಯಾ ಎ.ಐ-126 ವಿಮಾನದಲ್ಲಿ ಸೀಟ್ ಸಂಖ್ಯೆ-12 ಹೆಚ್ ರಲ್ಲಿ ಪ್ರಯಾಣಿಸಿ ಮಾ 17 ರಂದು ಬೆಳಗಿನ ಜಾವ 12.30 ಕ್ಕೆ ನವದೆಹಲಿ ತಲುಪಿರುತ್ತಾರೆ. (ಈ ವಿಮಾನವು 4 ಗಂಟೆ ತಡವಾಗಿ ಆಗಮಿಸಿರುತ್ತದೆ)

ನವದೆಹಲಿಯಿಂದ ಏರ್‍ಇಂಡಿಯಾ ವಿಮಾನ ಎ.ಐ.-504 ಸಿಟ್‍ಸಂಖ್ಯೆ ಡಿ 17 ರಲ್ಲಿ ಪ್ರಯಾಣಿಸಿ ಬೆಂಗಳೂರಿಗೆ 3.00 ಗಂಟೆಗೆ ತಲುಪಿರುತ್ತಾರೆ, ಬೆಂಗಳೂರು ವಿಮಾನ ನಿಲ್ದಾಣದಿಂದ 4.00 ಗಂಟೆಗೆ ಸ್ವಂತ ಕಾರಿನಲ್ಲಿ ಹೊರಟು ಅದೇ ದಿನ ಬೆಳಿಗ್ಗೆ 10.00 ಗಂಟೆಗೆ ಚಿತ್ರದುರ್ಗದ ಭೀಮಸಮುದ್ರ ಗ್ರಾಮಕ್ಕೆ ತಲುಪಿರುತ್ತಾರೆ. ಅಲ್ಲಿ ತಮ್ಮ ಸ್ವಂತ ಮನೆಯಲ್ಲಿ ಪ್ರತ್ಯೆಕವಾಗಿ ತಂಗಿದ್ದು ಮತ್ತು ಚಿತ್ರದುರ್ಗ ಸರ್ವೇಕ್ಷಣಾ ತಂಡದ ಅವಲೋಕನದಲ್ಲಿ ಇರುತ್ತಾರೆ. ಸದರಿ ವ್ಯಕ್ತಿಯು ಚಿತ್ರದುರ್ಗ ಜಿಲ್ಲೆಯಿಂದ ಹೊರಟು ದಾವಣಗೆರೆ ಜಿಲ್ಲೆಗೆ ಬಂದಿರುವ ಮಾಹಿತಿಯು ಲಭ್ಯವಾದ ತಕ್ಷಣವೇ ಕೋವಿಡ್-19 ರ ಮಾರ್ಗಸೂಚಿಗಳ ಅನ್ವಯ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಜಿಲ್ಲಾಡಳಿತದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಕೊಳ್ಳಲಾದ ಮುಂಜಾಗ್ರತಾ ಕ್ರಮಗಳು ಇಂತಿವೆ

  • ಈಗಾಗಲೇ ಕೇಂದ್ರ /ರಾಜ್ಯ ಸರ್ಕಾರದ ಆದೇಶದಂತೆ ದಿನಾಂಕ: 14.04.2020 ರವರೆಗೆ ಲಾಕ್ ಡೌನ್ ಘೋಷಣೆ ಅಗಿರುತ್ತದೆ.
  • ಜಿಲ್ಲಾಡಳಿತದಿಂದ ಲಾಕ್‍ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದೆ.
  • ಈವರೆಗೆ ಜಿಲ್ಲೆಯಲ್ಲಿ ವಿದೇಶ ಪ್ರಯಾಣ ಹಿನ್ನಲೆ ಇರುವ ಎಲ್ಲಾ ವ್ಯಕ್ತಿಗಳನ್ನು ಸಂಪರ್ಕಿಸಿ ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ.
  • ಸೋಂಕು ದೃಡಪಟ್ಟ ವ್ಯಕ್ತಿಯನ್ನು ಎಸ್.ಎಸ್.ಐ.ಎಂ.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದೆ. ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 5 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾರಿಗೂ ಯಾವುದೇ ಲಕ್ಷಣ ಇರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಮನೆಯಲ್ಲೆ 14 ದಿನಗಳ ಕಾಲ ಅವಲೋಕನದಲ್ಲಿ ಇಡಲಾಗುವುದು. ಕಾಲ ಕಾಲಕ್ಕೆ ರಾಜ್ಯ ಸರ್ಕಾರದ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಈಗಾಗಲೇ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶ ಮತ್ತು ಸುತ್ತೋಲೆಗಳ ಅನ್ವಯ ಮನೆಗಳಲ್ಲೆ ಇದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಸೂಚಿಸಿದೆ ಮತ್ತು ಕೋವಿಡ್-19 ನಿಯಂತ್ರಣ ತರುವಲ್ಲಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending