ದಿನದ ಸುದ್ದಿ
ದಾವಣಗೆರೆ | ಜಿಲ್ಲೆಯಲ್ಲಿ ಮಾ.29 ರಂದು ದೃಢಪಟ್ಟ ಮತ್ತೊಂದು ಕೋವಿಡ್-19 ಪ್ರಕರಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಾ.29 ರಂದು ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ ಬಂದಿರುವ ಮಾಹಿತಿಯನ್ನು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಘಟಕ ನೀಡಿದ್ದು, ಈ ಸೋಂಕಿತ ವ್ಯಕ್ತಿಯು ಚಿತ್ರದುರ್ಗ ತಾಲ್ಲ್ಲೂಕಿನ ಭೀಮಸಮುದ್ರ ಗ್ರಾಮದ ಮನೆಯಲ್ಲಿ ಮಾ. 17 ರಿಂದ 23 ರವರೆಗೆ ಪ್ರತ್ಯೇಕ ಅವಲೋಕನದಲ್ಲಿ ಇರುತ್ತಾರೆ. ಮಾ. 24 ರಂದು ಭೀಮಸಮುದ್ರದಿಂದ ದಾವಣಗೆರೆ ಜೆ.ಎಂ.ಐ.ಟಿ. ಗೆಸ್ಟ್ ಹೌಸ್ಗೆ ಬಂದು ಪ್ರತ್ಯೇಕ ಕೊಠಡಿಯಲ್ಲಿ ತಂಗಿರುತ್ತಾರೆ.
ಈ ಮಾಹಿತಿಯು ಗೆಸ್ಟ್ ಹೌಸನಲ್ಲಿ ವಾಸವಿದ್ದ ಸಿಬ್ಬಂದಿಯಿಂದ ತಿಳಿದು ಬಂದಿದ್ದು, ಅದೇ ದಿನ ಜಿಲ್ಲಾ ಆರ್.ಆರ್.ಟಿ. ತಂಡ ಮತ್ತು ಸ್ಥಳಿಯ ಆರ್ಯೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯವರು ತಕ್ಷಣ ಆ ವ್ಯಕ್ತಿಯನ್ನು ಭೇಟಿ ಮಾಡಿ ತಪಾಸಣೆ ನಡೆಸಿದಾಗ, ಆ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದೇ ಇದ್ದುದ್ದರಿಂದ ಅವರನ್ನು ಉಳಿದ 7 ದಿನಗಳ ಕಾಲ ಗೆಸ್ಟ್ ಹೌಸನಲ್ಲಿ ಪ್ರತ್ಯೇಕಿಸಿ ಅವಲೋಕನದಲ್ಲಿ ಇಡಲಾಗಿದೆ.
ಈ ವ್ಕಕ್ತಿಯು ಚಿತ್ರದುರ್ಗದ ಭೀಮಸಮುದ್ರದ ಅವರ ಮನೆಯಲ್ಲಿ ಇದ್ದ ಪಿ-32 ಪ್ರಕರಣದ ನೇರ ಸಂಪರ್ಕದಲ್ಲಿ ಇದ್ದ ಕಾರಣ ನಿಯಮಾನುಸಾರ ಮಾ. 26 ರಂದು ಗಂಟಲುದ್ರವವನ್ನು ತೆಗೆದು ಶಿವಮೊಗ್ಗದ ವಿ.ಆರ್.ಡಿ.ಎಲ್ ಪ್ರಯೋಗ ಶಾಲೆಗೆ ಕಳುಹಿಸಲಾಗಿದ್ದು, ಮಾ. 28 ರಂದು ಸಂಜೆ 7.00 ಗಂಟೆ ವ್ಯಕ್ತಿಯು ಗಂಟಲು ದ್ರವದ ಮಾದರಿಯನ್ನು ಪ್ರಾಥಮಿಕ ಫಲಿತಾಂಶ ಪಾಸಿಟಿವ್ ಎಂದು ಬಂದಿದ್ದು, ತಕ್ಷಣವೇ ದಾವಣಗೆರೆಯ ಎಸ್.ಎಸ್.ಐ.ಎಂ.ಎಸ್ ಆಸ್ವತ್ರೆಗೆ ದಾಖಲಿಸಿದ್ದಾರೆ.
ಮಾ.28 ರಂದು ರಾಜ್ಯ ಸರ್ವೇಕ್ಷಣಾ ಘಟಕದ ನಿರ್ದೇಶನದಂತೆ ಕೋವಿಡ್-19 ಖಚಿತಪಟ್ಟ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ವೇಕ್ಷಣಾ ಘಟಕದ ಮಾರ್ಗಸೂಚಿಯಂತೆ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಿದ್ದು, ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಮತ್ತು ಈ ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 8 ಮಂದಿಯಯನ್ನು ಗುರುತಿಸಿದ್ದು ಅವರ ರೋಗ ಲಕ್ಷಣಗಳ ತಪಾಸಣೆ ನಡೆಸಲಾಗುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಈ ವ್ಯಕ್ತಿಯ ಪ್ರಯಾಣದ ವಿವರ ಈ ಕೆಳಕಂಡತಿದೆ
ದಾವಣಗೆರೆ ನಗರದ ಈ ವ್ಯಕ್ತಿಯೊಬ್ಬರು ಅಮೇರಿಕಾದ ಚಿಕಾಗೋ ನಗರದ ಹತ್ತಿರದ ಪ್ರಡ್ಯೂ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು, ಮಾ. 15 ರಂದು ಹಾಸ್ಟಲ್ನಿಂದ ಉಬರ್ ಕ್ಯಾಬನಲ್ಲಿ ಹೊರಟು ಚಿಕಾಗೋ ತಲುಪಿದ್ದಾರೆ. ಅಲ್ಲಿಂದ ಏರ್ ಇಂಡಿಯಾ ಎ.ಐ-126 ವಿಮಾನದಲ್ಲಿ ಸೀಟ್ ಸಂಖ್ಯೆ-12 ಹೆಚ್ ರಲ್ಲಿ ಪ್ರಯಾಣಿಸಿ ಮಾ 17 ರಂದು ಬೆಳಗಿನ ಜಾವ 12.30 ಕ್ಕೆ ನವದೆಹಲಿ ತಲುಪಿರುತ್ತಾರೆ. (ಈ ವಿಮಾನವು 4 ಗಂಟೆ ತಡವಾಗಿ ಆಗಮಿಸಿರುತ್ತದೆ)
ನವದೆಹಲಿಯಿಂದ ಏರ್ಇಂಡಿಯಾ ವಿಮಾನ ಎ.ಐ.-504 ಸಿಟ್ಸಂಖ್ಯೆ ಡಿ 17 ರಲ್ಲಿ ಪ್ರಯಾಣಿಸಿ ಬೆಂಗಳೂರಿಗೆ 3.00 ಗಂಟೆಗೆ ತಲುಪಿರುತ್ತಾರೆ, ಬೆಂಗಳೂರು ವಿಮಾನ ನಿಲ್ದಾಣದಿಂದ 4.00 ಗಂಟೆಗೆ ಸ್ವಂತ ಕಾರಿನಲ್ಲಿ ಹೊರಟು ಅದೇ ದಿನ ಬೆಳಿಗ್ಗೆ 10.00 ಗಂಟೆಗೆ ಚಿತ್ರದುರ್ಗದ ಭೀಮಸಮುದ್ರ ಗ್ರಾಮಕ್ಕೆ ತಲುಪಿರುತ್ತಾರೆ. ಅಲ್ಲಿ ತಮ್ಮ ಸ್ವಂತ ಮನೆಯಲ್ಲಿ ಪ್ರತ್ಯೆಕವಾಗಿ ತಂಗಿದ್ದು ಮತ್ತು ಚಿತ್ರದುರ್ಗ ಸರ್ವೇಕ್ಷಣಾ ತಂಡದ ಅವಲೋಕನದಲ್ಲಿ ಇರುತ್ತಾರೆ. ಸದರಿ ವ್ಯಕ್ತಿಯು ಚಿತ್ರದುರ್ಗ ಜಿಲ್ಲೆಯಿಂದ ಹೊರಟು ದಾವಣಗೆರೆ ಜಿಲ್ಲೆಗೆ ಬಂದಿರುವ ಮಾಹಿತಿಯು ಲಭ್ಯವಾದ ತಕ್ಷಣವೇ ಕೋವಿಡ್-19 ರ ಮಾರ್ಗಸೂಚಿಗಳ ಅನ್ವಯ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಜಿಲ್ಲಾಡಳಿತದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಕೊಳ್ಳಲಾದ ಮುಂಜಾಗ್ರತಾ ಕ್ರಮಗಳು ಇಂತಿವೆ
- ಈಗಾಗಲೇ ಕೇಂದ್ರ /ರಾಜ್ಯ ಸರ್ಕಾರದ ಆದೇಶದಂತೆ ದಿನಾಂಕ: 14.04.2020 ರವರೆಗೆ ಲಾಕ್ ಡೌನ್ ಘೋಷಣೆ ಅಗಿರುತ್ತದೆ.
- ಜಿಲ್ಲಾಡಳಿತದಿಂದ ಲಾಕ್ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದೆ.
- ಈವರೆಗೆ ಜಿಲ್ಲೆಯಲ್ಲಿ ವಿದೇಶ ಪ್ರಯಾಣ ಹಿನ್ನಲೆ ಇರುವ ಎಲ್ಲಾ ವ್ಯಕ್ತಿಗಳನ್ನು ಸಂಪರ್ಕಿಸಿ ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿರುತ್ತದೆ.
- ಸೋಂಕು ದೃಡಪಟ್ಟ ವ್ಯಕ್ತಿಯನ್ನು ಎಸ್.ಎಸ್.ಐ.ಎಂ.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದೆ. ವ್ಯಕ್ತಿಯು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ವ್ಯಕ್ತಿಯ ನೇರ ಸಂಪರ್ಕದಲ್ಲಿದ್ದ 5 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾರಿಗೂ ಯಾವುದೇ ಲಕ್ಷಣ ಇರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಮನೆಯಲ್ಲೆ 14 ದಿನಗಳ ಕಾಲ ಅವಲೋಕನದಲ್ಲಿ ಇಡಲಾಗುವುದು. ಕಾಲ ಕಾಲಕ್ಕೆ ರಾಜ್ಯ ಸರ್ಕಾರದ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.
ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಈಗಾಗಲೇ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶ ಮತ್ತು ಸುತ್ತೋಲೆಗಳ ಅನ್ವಯ ಮನೆಗಳಲ್ಲೆ ಇದ್ದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಸೂಚಿಸಿದೆ ಮತ್ತು ಕೋವಿಡ್-19 ನಿಯಂತ್ರಣ ತರುವಲ್ಲಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243