ದಿನದ ಸುದ್ದಿ
ದಾವಣಗೆರೆ | ಆಸ್ಪತ್ರೆಗಳ ಎದುರು ಬೆಡ್ ಸ್ಥಿತಿಗತಿ ಬೋರ್ಡ್ನಲ್ಲಿ ಪ್ರದರ್ಶಿಸಲಿ : ಜಿ.ಎಂ.ಸಿದ್ದೇಶ್ ಕಿಡಿ
ಸುದ್ದಿದಿನ, ದಾವಣಗೆರೆ : ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ಶೇ. 75 ರಷ್ಟು ಬೆಡ್ಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಸರ್ಕಾರಕ್ಕೆ ಮೀಸಲಿಡುವಂತೆ ಆದೇಶ ಹೊರಡಿಸಲಾಗಿದೆ. ಎಬಿಎಆರ್ಕೆ ಯೋಜನೆಯಡಿ ನೊಂದಾಯಿತ ಖಾಸಗಿ ಆಸ್ಪತ್ರೆಗಳು ಸರ್ಕಾರಿ ವೈದ್ಯರು ಶಿಫಾರಸು ಮಾಡಿರುವ ರೋಗಿಗಳಿಗೂ ಬೆಡ್ ನೀಡುತ್ತಿಲ್ಲ, ಮೀಸಲಿರುವ ಬೆಡ್ಗಳಲ್ಲಿ ಖಾಸಗಿ ಆಸ್ಪತ್ರೆಯವರೇ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ, ಅಲ್ಲದೆ ಹೆಚ್ಚಿನ ಶುಲ್ಕವನ್ನೂ ವಿಧಿಸುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಖಾಸಗಿ ಆಸ್ಪತ್ರೆಗಳು ಎಬಿಎಆರ್ಕೆ ಯೋಜನೆಯಡಿ ರೋಗಿಗಳನ್ನು ದಾಖಲಿಸಿ ಉಚಿತ ಚಿಕಿತ್ಸೆ ನೀಡಬೇಕು, ಸಂಬಂಧಪಟ್ಟ ಶುಲ್ಕವನ್ನು ನಿಯಮಾನುಸಾರ ಎಬಿಎಆರ್ಕೆ ಯೋಜನೆಯಡಿ ಪಡೆದುಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಇದನ್ನು ಪರಿಶೀಲಿಸುತ್ತಿಲ್ಲ ಏಕೆ?. ಹೀಗಾದಲ್ಲಿ ಸರ್ಕಾರ ಆದೇಶ ಹೊರಡಿಸಿ ಏನು ಪ್ರಯೋಜನ ಎಂದರು.
ಇದನ್ನೂ ಓದಿ | ದಾವಣಗೆರೆ | 10 ಕೆಎಲ್ ಆಕ್ಸಿಜನ್ ಘಟಕ ಮಂಜೂರು
ಸಚಿವರು ಪ್ರತಿಕ್ರಿಯಿಸಿ, ಕೋವಿಡ್ ಸೋಂಕಿತರಿಗೆ ಬೆಡ್ ದೊರೆಯುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ ಎಂಬ ವರದಿಗಳು ಮಾಧ್ಯಮಗಳಲ್ಲಿ ಕೇಳಿಬರುತ್ತಿದೆ. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಕ್ಕಾಗಿ ಮೀಡಲಿರುವ ಬೆಡ್ಗಳು, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಎಲ್ಲ ವ್ಯವಸ್ಥೆಯ ವಿವರವನ್ನು ಬೋರ್ಡ್ನಲ್ಲಿ ಪ್ರದರ್ಶಿಸಬೇಕು ಎಂದು ಕಳೆದ ಬಾರಿ ಸಭೆ ನಡೆಸಿದ ಸಂದರ್ಭದಲ್ಲಿಯೂ ಸೂಚನೆ ನೀಡಲಾಗಿತ್ತು.
ಇದನ್ನು ಪಾಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ನಾಳೆಯಿಂದಲೇ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳ ಎದುರು ಬೆಡ್ಗಳ ಸ್ಥಿತಿಗತಿ ವಿವರವುಳ್ಳ ಮಾಹಿತಿಯನ್ನು ಬೋರ್ಡ್ನಲ್ಲಿ ಪ್ರದರ್ಶಿಸಬೇಕು. ಇದನ್ನು ಡಿಹೆಚ್ಒ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ4 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ