Connect with us

ದಿನದ ಸುದ್ದಿ

ಬ್ರೇಕಿಂಗ್ | ಕೊರೋನಾ‌ ಸಂಕಷ್ಟದಲ್ಲೂ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ನಡೆಯುತ್ತಿದೆಯಾ ಕಿತ್ತಾಟ..!? ಹೀಗೊಂದು ಆಡಿಯೋ ವೈರಲ್..!

Published

on

ಸುದ್ದಿದಿನ ವಿಶೇಷ, ದಾವಣಗೆರೆ: ಕೊರೋನಾ ಸೋಂಕು ದಿನದಿಂದ ದಿನಕ್ಕೆ ‌ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಅಕ್ಷರಶಃ ಆತಂಕಕ್ಕೊಳಗಾಗಿದೆ. ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು, ಜಿಲ್ಲಾಡಳಿತ ಶತಪ್ರಯತ್ನ ಮಾಡುತ್ತಿದೆ. ಆದರೆ, ಜಿಲ್ಲಾ ಆರೋಗ್ಯ ಇಲಾಖೆಯ ಸರ್ಜನ್ ಅವರ ಕಾರ್ಯವೈಖರಿ ವಿರುದ್ಧ ಅಸಮಾಧಾನದ ಮಾತುಗಳು ಕೇಳಿ ಬಂದಿವೆ.

ಇತ್ತೀಚೆಗೆ ವ್ಯಕ್ತಿಗಳಿಬ್ಬರು ಮಾತನಾಡಿದ ದೂರವಾಣಿಯ ಕರೆಯ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಅನುಮಾಕ್ಕೆ ಕಾರಣವಾಗಿದೆ.

ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರ್ಲಕ್ಷ್ಯ..?

ಕೊರೋನಾ ಸೋಂಕು ತಡೆಯಲು ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು ಒಂದು ಕಿಮೀ ಅಂತರದಲ್ಲಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಬೇಕಿದೆ. ಕೊರೋನಾ ಪಾಸಿಟಿವ್ ಇರುವ ರೋಗಿಗಳಿಗೆ ಜಿಲ್ಲಾಸ್ಪತ್ರೆಯ ವಾರ್ಡ್ ಗಳಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಈ ವಾರ್ಡಿನ 100 ಮೀ ಅಂತರದಲ್ಲಿಯೇ ಹೆರಿಗೆ ವಾರ್ಡ್ ಇರುವ ಕಾರಣ ಸೂಕ್ತ ಭದ್ರತೆ ಒದಗಿಸಿ ಜನ ಸಂಚಾರಕ್ಕೆ ನಿರ್ಬಂಧ ಹೇರಬೇಕಿತ್ತು. ಆದರೆ ಆ ಕೆಲಸವಾಗಿಲ್ಲ.

ಆಸತ್ರೆಯಲ್ಲಿ ದಿನನಿತ್ಯ ಗ್ರೂಪ್ ಡಿ ನೌಕರರು, ಡಾಕ್ಟರ್ ಗಳು ಮತ್ತು ನರ್ಸ್ ಗಳು ಕೊರೋನಾ ಸೋಂಕಿತರ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ‌. ಇವರಿಗೆ ಮುಂಜಾಗ್ರತಾ ಕ್ರಮವಾಗಿ ಸುಸಜ್ಜಿತವಾದ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ಒದಗಿಸಿಲ್ಲ. ಡಿ ಗ್ರೂಪ್ ನೌಕರರು ಆಸ್ಪತ್ರೆಯಲ್ಲಿ ಕೆಲಸ ನಿರ್ವವಹಿಸಿ ಮನೆಗಳಿಗೆ ತೆರಳುತ್ತಿದ್ದಾರೆ. ಅವರಿಗೆ ಕನಿಷ್ಠ ಗುಣಮಟ್ಟದ ಮಾಸ್ಕ್ ಕೂಡ ನೀಡಲ್ಲ ಎಂಬ ಆರೋಪ ಕೇಳಿ ಬಂದಿದೆ.

ಕೊರೋನಾ ಸೋಂಕಿತರ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಸಮರ್ಪಕ ಸೌಲಭ್ಯ ನೀಡಿ ಅವರನ್ನು ಕ್ವಾರಂಟೈನ್ ಮಾಡಬೇಕು. ಸೋಂಕಿನ ಶಂಕಿತರನ್ನೂ ಕೂಡ, ಕೊರೋನಾ ಸೋಂಕು ಪಾಸಿಟಿವ್ ರೋಗಿಗಳ ಪಕ್ಕದ ವಾರ್ಡ್ ಗಳಲ್ಲೇ ಇರಿಸಲಾಗಿದೆ ಎಂದು ಹೇಳಲಾಗಿದೆ.

ಸಿಜಿ ಆಸ್ಪತ್ರೆ ಬಳಿ ಜಾಗೃತಿ ವಹಿಸಿಲ್ಲ !

ಕರೋನಾ ಪಾಸಿಟಿವ್ ಕಂಡುಬಂದ ಜಾಲಿನಗರ ಸೇರಿ ವಿವಿಧೆಡೆ ಸೀಲ್ ಡೌನ್ ಮಾಡಲಾಗಿದೆ. ಆದರೆ ಕೊರೋನಾ ಸೋಕಿತರಿರುವ ಆಸ್ಪತ್ರೆ ಬಳಿ ಜಾಗೃತೆ ವಹಿಸಲ್ಲ. ಜನ ಕೂಡ ಅಲ್ಲೇ ಸಂಚರಿಸುತ್ತಾರೆ. ನಿಯಮದ ಪ್ರಕಾರ ಜಿಲ್ಲಾಸ್ಪತ್ರೆಯನ್ನು ಸೀಲ್ ಡೌನ್ ಮಾಡಬೇಕು. ಜೊತೆಗೆ ಅಗತ್ಯಕ್ಕೆ ತಕ್ಕ ಕಡಿಮೆ ಸಿಬ್ಬಂದಿ ಕಾರ್ಯನಿರ್ವಹಿಸುವಂತೆ ಎಚ್ಚರ ವಹಿಸಬೇಕು. ಆದರೆ ಈ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಜಿಲ್ಲಾ ಸರ್ಜನ್ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಡಿಯೋ ದಲ್ಲಿ ದೂರಲಾಗಿದೆ.

ಹೆಲ್ತ್ ಸಿಟಿಗೆ ಅಂಟಿದ ಮಹಾಮಾರಿ !

ಸುಸಜ್ಜಿತ ಆಸ್ಪತ್ರೆಗಳು ಹಾಗೂ ಔಷಧ ಅಂಗಡಿಗಳ ಕಾರಣಕ್ಕೆ ದಾವಣಗೆರೆ ದೇಶದಲ್ಲೇ ಹೆಸರು ಪಡೆದಿದೆ. ಇಲ್ಲಿ ತಜ್ಞ ವೈದ್ಯರಿದ್ದಾರೆ. ಇಲ್ಲೇ ಕರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ. ಇದೇ ಸ್ಥಿತಿ ಮುಂದುವರಿದರೆ ಮತ್ತಷ್ಟು ಪ್ರಕರಣಗಳು ಹೆಚ್ಚಾಗುವ ಅಪಾಯವಿದೆ ಎಂದು ಆಡಿಯೋದಲ್ಲಿ ಹೇಳಲಾಗಿದೆ.

ಮಹಾಮಾರಿ ತಡೆಗೆ ಜಿಲ್ಲಾಧಿಕಾರಿ ಶತ ಪ್ರಯತ್ನ

ಕರೋನಾ ತಡೆಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶತ ಪ್ರಯತ್ನ ನಡೆಸುತ್ತಿದ್ದಾರೆ. ಮಹಾಮಾರಿ ಹರಡದಂತೆ ತಡೆಯಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರತೆ ಅದಕ್ಕೆ ಜಿಲ್ಲಾ ಸರ್ಜನ್ ಸ್ಪಂದಿಸುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಸಮಾಜಿಕ ಜಾಲತಾಣದಲ್ಲಿ ವೈರಲ್ ಆದ ಆಡಿಯೋ ಲಿಂಕ್ ಈ ಕೆಳಗಿದೆ ನೋಡಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending