ಕ್ರೀಡೆ
ದಾವಣಗೆರೆ | ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ
ಸುದ್ದಿದಿನ,ದಾವಣಗೆರೆ : ಜೂ.02 ರಿಂದ ಜೂ.06 ರವರೆಗೆ ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿಯ ವಿಶ್ವೇಶ್ವರಯ್ಯ ಕ್ರಿಡಾಂಗಣದಲ್ಲಿ ನಡೆಯುವ ಅಖಿಲ ಭಾರತ ವೃತ್ತಿಪರ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸುವ ರಾಜ್ಯ ಕೆ KSKKA XII ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳಾದ ಅರ್ಜುನ, ವಿರೇಶ್ ಮತ್ತು ರಾಜ್ಯ PRESIDENT’S XII ತಂಡಕ್ಕೆ ವೇಣುಗೋಪಾಲ್ ಎಸ್, ಆಸೀಫ್ ಕುನ್ನೂರ ಮತ್ತು ಮದನ್ ಇವರುಗಳು ಆಯ್ಕೆಯಾಗಿರುತ್ತಾರೆ.
ಈ ಕ್ರೀಡಾಪಟುಗಳಿಗೆ ಇಲಾಖೆಯ ಖೋ-ಖೋ ತರಬೇತುದಾರರಾದ ಜೆ.ರಾಮಲಿಂಗಪ್ಪ ಇವರು ತರಬೇತಿ ನೀಡುತ್ತಿದ್ದಾರೆ.
ಪ್ರಯುಕ್ತ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಕ್ರೀಡಾಪಟುಗಳಿಗೆ ಸಹಾಯಕ ನಿರ್ದೇಶಕರಾದ ಸುಚೇತಾ ಎಂ ನೆಲವಗಿ, ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243