Connect with us

ದಿನದ ಸುದ್ದಿ

ದಾವಣಗೆರೆಯಲ್ಲಿಂದು 13 ಕೊರೊನಾ ಪಾಸಿಟಿವ್: ಎಂಟು ತಿಂಗಳ ಮಗು ಸೇರಿ 7 ಜನ ಆಸ್ಪತ್ರೆಯಿಂದ ಬಿಡುಗಡೆ

Published

on

ಸುದ್ದಿದಿನ ,ದಾವಣಗೆರೆ : ಇಂದು ಜಿಲ್ಲೆಯಲ್ಲಿ 13 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಒಂದು ಸಾವು ಸಂಭವಿಸಿದೆ. ಹಾಗೂ 7 ಜನರು ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ರೋಗಿ ಸಂಖ್ಯೆ 4083 ರಿಂದ 4095 ರವರೆಗೆ ಒಟ್ಟು 13 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಬಹುತೇಕರು ರೋಗಿ ಸಂಖ್ಯೆ 2819 ಮತ್ತು 2415 ರ ಸಂಪರ್ಕಿತರಾಗಿದ್ದಾರೆ.

ರೋಗಿ ಸಂಖ್ಯೆ 4094 ಪುರುಷ 37 ವರ್ಷ ಹಾಗೂ ರೋಗಿ ಸಂಖ್ಯೆ 4095 ಮಹಿಳೆ 35 ವರ್ಷ ಇವರು ನಗರದ ಪಿ.ಜೆ.ಬಡಾವಣೆಯ ಖಾಸಗಿ ಕ್ಲಿನಿಕ್‍ನ ನೇತ್ರ ತಜ್ಞರಾಗಿದ್ದಾರೆ. ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಹಾಗೂ ಸೋಂಕಿನ ಪತ್ತೆ ಹಚ್ಚಲಾಗುತ್ತಿದೆ.

ಹೊಸದಾಗಿ ಸೇರ್ಪಡೆಯಾದ ಎಸ್‍ಸ್ಕ್ವೇರ್ ಅಪಾರ್ಟ್‍ಮೆಂಟ್ ಎಸ್‍ಎಸ್ ಬಡಾವಣೆ, ಕೆಟಿಜೆ ನಗರ ಪೊಲೀಸ್ ಕ್ವಾಟ್ರಸ್ ಮತ್ತು ದೇವರಾಜನಗರ ಬೇತೂರು ರಸ್ತೆ ಸೇರಿದಂತೆ ಇಂದಿನ ಪ್ರಕರಣಗಳಿಗೆ ಸಂಬಂಧಿಸಿದ ಕಂಟೈನ್‍ಮೆಂಟ್ ಏರಿಯಾವನ್ನು ಹೊಸ ಮಾರ್ಗಸೂಚಿಯಂತೆ ನಿರ್ವಹಿಸಲಾಗುವುದು.

ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಯಾವುದೇ ಐಎಲ್‍ಐ ಮತ್ತು ತೀವ್ರ ಉಸಿರಾಟದ ತೊಂದರೆಗಳಿಂದ ಬಳಲುವ ಪ್ರಕರಣಗಳು ಕಣ್ ತಪ್ಪಿ ಹೋಗದಂತೆ ಕಟ್ಟುನಿಟ್ಟಿನ ಸರ್ವೆಲೆನ್ಸ್ ಮಾಡಲಾಗುವುದು ಎಂದರು.

ಇದುವರೆಗೆ 141 ಜನರು ಗುಣಮುಖರಾಗಿದ್ದು, ಇಂದು 8 ತಿಂಗಳ ಮಗು ಕೂಡ ಗುಣಮುಖವಾಗಿ ಆಸ್ಪತೆಯಿಂದ ಬಿಡುಗಡೆ ಹೊಂದಿದ್ದು ವೈದ್ಯರು/ಆರೋಗ್ಯ ಸಿಬ್ಬಂದಿಗಳ ಶುಶ್ರೂಷೆ, ಚಿಕಿತ್ಸೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಅಭಿನಂದಿಸಿದರು.

ಏಳು ಜನ ಗುಣಮುಖ-ಬಿಡುಗಡೆ

ಇಂದು ರೋಗಿ ಸಂಖ್ಯೆ 629, 2416, 2558, 2559 (8 ತಿಂಗಳ ಮಗು), 2557, 2560, 2416 ಈ ಏಳು ಜನರು ಗುಣಮುಖರಾಗಿ ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಒಟ್ಟು 243 ಜನರು ಆಗಮಿಸಿದ್ದಾರೆ. ಇವರಲ್ಲಿ 6 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಹಾಗೂ 68 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಮಾಹಿತಿ ಇಲ್ಲದೇ ಬಂದಿರುವ 147 ಜನರನ್ನು ಪತ್ತೆ ಹಚ್ಚಲಾಗಿದ್ದು ನಿಯಮಾನುಸಾರ ಕ್ವಾರಂಟೈನ್ ಮಾಡಲಾಗಿದೆ.

ಮರಣ

ರೋಗಿ ಸಂಖ್ಯೆ 4093 83 ವರ್ಷದ ಮಹಿಳೆ ಇವರು ಮರಣ ಹೊಂದಿದ್ದು, ಇವರಿಗೆ ಕೋವಿಡ್ ಇರುವುದು ಇಂದು ವರದಿಯಾಗಿದೆ. ಈ ವೃದ್ದೆ ದೇವರಬೆಳೆಕೆರೆಯಲ್ಲಿ ಎರಡು ತಿಂಗಳು ತಮ್ಮ ಮಗನ ಮನೆಯಲ್ಲಿದ್ದು ಈ ವೇಳೆ ಅನಾರೋಗ್ಯದ ಕಾರಣ ದೇವರಬೆಳೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು, ಆಸ್ಪತ್ರೆಯವರು ಸಿ.ಜಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ ಮೇಲೆ ತಮ್ಮ ಇನ್ನೊಬ್ಬ ಮಗನ ಮನೆ ದಾವಣಗೆರೆ ನಗರದ ಬಸವರಾಜಪೇಟೆಯಯಲ್ಲಿ ಎರಡು ದಿನ ಇದ್ದು ನಂತರ ಮೇ 31 ರ ಮಧ್ಯಾಹ್ನ 3 ಗಂಟೆಗೆ ಸಿ.ಜಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11 ಕ್ಕೆ ಮರಣ ಹೊಂದಿರುತ್ತಾರೆ. ಅವರಿಗೆ ಇಂದು ಕೊವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ.

ವೈದ್ಯರಿಗೆ ಕಾರಣ ಕೇಳಿ ನೋಟಿಸ್ ಜಾರಿ

ಜಾಲಿನಗರದ 80 ವರ್ಷದ ವೃದ್ದೆ ಹಾಗೂ ದೇವರಬೆಳೆಕೆರೆಯ 83 ವರ್ಷದ ವೃದ್ದೆಯ ಸಾವಿಗೆ ಸಂಬಂಧಿಸಿದಂತೆ ನಿಗದಿತ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರೋಗಿಗಳು ತಲುಪುವವರೆಗೆ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೇ ಲೋಪವೆಸಗಿರುವ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಸ್ಕ್ ಧರಿಸುವ ಅಭಿಯಾನ

ಜನನಿಭಿಡ ಪ್ರದೇಶದಲ್ಲಿ ಮಾಸ್ಕ್ ಧರಿಸುವ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದೆಂಬ ಬಗ್ಗೆ ಎಸ್‍ಪಿ ಯವರ ನೇತೃತ್ವದಲ್ಲಿ ವಿಶೇಷ ಅಭಿಯಾನವನ್ನು ಏರ್ಪಡಿಸಲಾಗುವುದು. ನಗರ ಮತ್ತು ತಾಲ್ಲೂಕು ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಎಸ್‍ಪಿ ಹನುಮಂತರಾಯ, ಎಡಿಸಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್‍ಓ ಡಾ.ರಾಘವನ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending