ದಿನದ ಸುದ್ದಿ
ದಾವಣಗೆರೆ ಕೊರೊನಾ ಪಾಸಿಟಿವ್ : ಕ್ವಾರೆಂಟೈನ್ ಮಾಡಲು ನಗರದ ಹೋಟೆಲ್ಗಳಲ್ಲಿ 740 ರೂಂ ರಿಸರ್ವ್ಡ್..!

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳಲ್ಲಿ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ನಗರದ ಘೋಷಿತ ಸ್ಲಂಗಳಲ್ಲಿ ಒಂದಾದ ಭಾಷಾನಗರದ 35 ವರ್ಷದ ಮಹಿಳೆಯೋರ್ವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು ಇವರು ರೋಗಿ ಸಂಖ್ಯೆ 533 ಆಗಿದ್ದಾರೆ. ಈ ಮಹಿಳೆ ಈ ಭಾಗದ ನಗರ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ.
ಹಾಗೂ ಈ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 20 ಜನರನ್ನು ಹೋಟೆಲ್ ಒಂದರಲ್ಲಿ ಐಸೋಲೇಷನ್ನಲ್ಲಿ ಇಡಲಾಗಿದೆ. ಇವರ ಸಂಪರ್ಕದಲ್ಲಿದ್ದ 35 ಜನರ ಗಂಟಲು ದ್ರವ ಮಾದರಿಯನ್ನು ಇಂದು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇವರು ಕೆಲಸ ಮಾಡುತ್ತಿದ್ದ ನಗರ ಆರೋಗ್ಯ ಕೇಂದ್ರವನ್ನು ಬಂದ್ ಮಾಡಲಾಗಿದೆ.
ಕಂಟೈನ್ಮೆಂಟ್ ಮತ್ತು ಬಫರ್ ಝೋನ್ ಗುರುತಿಸುವಿಕೆ
ಈ ಮಹಿಳೆ ವಾಸಿಸುತ್ತಿದ್ದ ಮನೆಯನ್ನು ಎಪಿಸೆಂಟರ್ ಎಂದು ಗುರುತಿಸಿ ಈ ಎಪಿಸೆಂಟರ್ನ 100 ಮೀಟರ್ ವ್ಯಾಪ್ತಿ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಿ, ಈ ಪ್ರದೇಶವನ್ನು ಅಗತ್ಯ ವಸ್ತುಗಳು ಮತ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಸಂಪೂರ್ಣ ಸೀಲ್ಡೌನ್ ಮಾಡಲಾಗುವುದು. ಜೊತೆಗೆ ಇಲ್ಲಿ ನಾಳೆಯಿಂದಲೇ ಸಕ್ರಿಯ ಸರ್ವೆಲೆನ್ಸ್ ನಡೆಸಲಾಗುವುದು. ಹಾಗೂ ಎಪಿಸೆಂಟರ್ನಿಂದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಝೋನ್ ಎಂದು ಗುರುತಿಸಿದ್ದು, ಇಲ್ಲಿಯೂ ಸಹ ಸರ್ವೆಲೆನ್ಸ್ ನಡೆಯಲಿದೆ. ಪ್ರಸ್ತುತ ಕ್ವಾರೆಂಟೈನ್ ಮಾಡಲು ನಗರದಲ್ಲಿ ಹೋಟೆಲ್ಗಳಲ್ಲಿ 740 ರೂಂಗಳನ್ನು ಕಾಯ್ದಿರಿಸಲಾಗಿದೆ.
ಈ ಮಹಿಳೆಯ ಸೆಕೆಂಡರಿ ಕಾಂಟಾಕ್ಟ್ಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದು. ಈ ಮಹಿಳೆ ಏ.23 ರಂದು ಮಹಿಳೆಯೋರ್ವರಿಗೆ ಹೆರಿಗೆ ಮಾಡಿಸಿದ್ದು, ನಂತರ ತಮಗೆ ಸುಸ್ತು ಮತ್ತು ಸ್ವಲ್ಪ ಜ್ವರ ಕಾಣಿಸಿಕೊಂಡಿದೆ ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಾಗ ತಿಳಿಸಿದ್ದಾರೆ. ಆದ ಕಾರಣ ಆ ಮಹಿಳೆಯನ್ನೂ ಪತ್ತೆ ಹಚ್ಚಿ ಅವರನ್ನೂ ಪರೀಕ್ಷೆಗೆ ಒಳಪಡಿಸಿ ಕ್ರಮ ಕೈಗೊಳ್ಳಲಾಗುವುದು. ಹಾಗೂ ಸೋಂಕಿತ ಮಹಿಳೆಯ ಅಕ್ಕನ ಮನೆ ನಿಟುವಳ್ಳಿಯಲ್ಲಿ ಇದ್ದು ಸೋಂಕಿತಳ ಮಗ ಅಲ್ಲಿಗೆ ಹೋಗಿ ಬಂದಿದ್ದಾನೆ ಎನ್ನಲಾಗಿದ್ದು ಅಲ್ಲಿರುವ ಅವರ ಸಂಬಂಧಿಕರನ್ನೂ ಪರೀಕ್ಷಿಸಿ ಕ್ರಮ ವಹಿಸಲಾಗುವುದು ಎಂದರು.
ಇನ್ಸಿಡೆಂಟ್ ಕಮಾಂಡರ್ ನೇಮಕ
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ರನ್ನು ಈ ಕಂಟೈನ್ಮೆಂಟ್ ಝೋನ್ ನಿರ್ವಹಣೆಗಾಗಿ ಇನ್ಸಿಡೆಂಟ್ ಕಮಾಂಡರ್ ಎಂದು ನೇಮಕ ಮಾಡಲಾಗಿದ್ದು ನಿಯಮಾನುಸಾರ ಇವರು ಇಲ್ಲಿ ಕ್ರಮ ಕೈಗೊಳ್ಳುವರು. ಕಂಟೈನ್ಮೆಂಟ್ ಝೋನ್ನಲ್ಲಿನ ಪ್ರತಿ ಮನೆ ಸರ್ವೇ ಮಾಡಲಾಗುವುದು. ಹಾಗೂ ಏರಿಯಾ ಡಿಸ್ಇನ್ಫೆಕ್ಷನ್ ಕೆಲಸ ಮಾಡಲಾಗುವುದು. ಹಾಗೆಯೇ ಈ ಪ್ರದೇಶಗಳಿಗೆ ಅಗತ್ಯ ವಸ್ತುಗಳು, ವೈದ್ಯಕೀಯ ಸೇವೆ ಹೊರತುಪಡಿಸಿ ಯಾವುದೇ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳು ಸೇರಿದಂತೆ ಕಲ್ಪನಹಳ್ಳಿ, ಪುಟಗನಾಳ್, ಬೇತೂರು, ಬೂದಾಳ್, ದೇವಿಕೆರೆ ಹೀಗೆ ನಗರ ವ್ಯಾಪ್ತಿಗೊಳಪಡುವ ಕೆಲವು ಗ್ರಾಮಗಳಿಗೂ ನಿನ್ನೆ ಘೋಷಿಸಿದ್ದ ಸಡಿಲಿಕೆಯನ್ನು ನಿರ್ಬಂಧಿಸಿ ಅಗತ್ಯ ವಸ್ತುಗಳ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಪ್ರಸ್ತುತ ಕ್ವಾರೆಂಟೈನ್ ಮಾಡಲು ನಗರದಲ್ಲಿ ಹೋಟೆಲ್ಗಳಲ್ಲಿ 740 ರೂಂಗಳನ್ನು ಮೀಸಲಿಡಲಾಗಿದೆ.
ಮನವಿ
ಈ ಸೋಂಕಿತ ಮಹಿಳೆಯಿಂದ ಕಳೆದ 15 ದಿನಗಳಿಂದ ಚಿಕಿತ್ಸೆ, ಶುಶ್ರೂಷೆ ಪಡೆದವರು ಅಥವಾ ಸಂಪರ್ಕಕ್ಕೆ ಬಂದವರು ಜಿಲ್ಲಾಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗುವಂತೆ ಈ ಮೂಲಕ ಮನವಿ ಮಾಡುತ್ತೇನೆ.
ಕೃಷಿ ಚಟುವಟಿಕೆಗಾಗಿ ವಿವಿಧ ತಾಲ್ಲೂಕು ಮತ್ತು ಹಳ್ಳಿಗಳಿಂದ ದಾವಣಗೆರೆಗೆ ರೈತರು ಬರುವುದನ್ನು ನಿಲ್ಲಿಸಿದರೆ ಒಳಿತು. ಇಲ್ಲಿ ಸೋಂಕಿರುವುದರಿಂದ ಆದಷ್ಟು ತಾಲ್ಲೂಕು ಕೇಂದ್ರಗಳಲ್ಲೇ ಗೊಬ್ಬರ, ಬೀಜ, ಪರಿಕರ ಕೊಳ್ಳಬೇಕು. ಕೃಷಿಕರಿಗೆ ಸಹಕಾರಿಯಾಗುವಂತೆ ದಾವಣಗೆರೆಯಲ್ಲಿ ಅಗ್ರಿ ವಾರ್ ರೂಂ ಮಾಡುವ ಚಿಂತನೆ ಮಾಡಲಾಗುತ್ತಿದ್ದು, ಇದರ ಮೂಲಕ ಕೃಷಿಕರ ಮನೆ ಬಾಗಿಲಿಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದ ವಸ್ತುಗಳನ್ನು ತಲುಪಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಅಗತ್ಯ ಸೇವೆ ಹೊರತುಪಡಿಸಿ ಎಲ್ಲ ಚಟುವಟಿಕೆಗಳನ್ನು ಕಂಟೈನ್ಮೆಂಟ್ ಮತ್ತು ಬಫರ್ ಝೋನ್ಗಳಲ್ಲಿ ನಿರ್ಬಂಧಿಸಲಾಗುವುದು. ನಗರದಲ್ಲಿರುವ 10 ಚೆಕ್ಪೋಸ್ಟ್ಗಳು 24*7 ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಲಿವೆ. ಯಾರೂ ಕೂಡ ಅನಾವಶ್ಯಕವಾಗಿ ಓಡಾಡಬಾರದು. ಒಂದು ಪಕ್ಷ ಓಡಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಪತ್ರಿಕಾಗೋಷ್ಟಿಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ

ಸುದ್ದಿದಿನ,ಬೆಂಗಳೂರು:ಫೆ 10 ರಂದು ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸುವ ಬೃಹತ್ ಕಾರ್ಯ ಕ್ರಮವನ್ನು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಉದ್ಘಾಟಿಸಿದರು.
ರಾಜ್ಯದ ನಾನಾ ಭಾಗಗಳಿಂದ ಸುಮಾರು 650 ಕ್ಕಿಂತ ಹೆಚ್ಚು ಕವಿಗಳು ಆಗಮಿಸಿ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸಿದರು,ಇದೇ ಸಂಧರ್ಭದಲ್ಲಿ ಅನೇಕ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ, ಮಾವಳ್ಳಿ ಶಂಕರ್,ಮಿಮಿಕ್ರಿ ಗೋಪಿ, ಜನಸಿರಿ ಫೌಂಡೇಶನ್ ಮುಖ್ಯಸ್ಥರಾದ ನಾಗಲೇಖ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುಂಬಿದ ಕೊಡ ತುಳುಕಿತಲೇ ಪರಾಕ್..!

- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
“ತುಂಬಿದ ಕೊಡ ತುಳುಕಿತಲೇ ಪರಾಕ್” ಎಂದು ಕಾರ್ಣಿಕ ನುಡಿದ ಗೊರವಯ್ಯ, ಅದು ಮೈಲಾರ ಕೋಟ್ಯಾಂತರ ಭಕ್ತರ ಆರಾಧ್ಯದೈವ ಮೈಲಾರ ಲಿಂಗನ ಪುಣ್ಯ ಕ್ಷೇತ್ರ. ಈ ಪುಣ್ಯ ಕ್ಷೇತ್ರ ಪ್ರತಿ ವರ್ಷ ಕಾರ್ಣಿಕ ನುಡಿಗೆ ರಾಜ್ಯಾದ್ಯಂತ ಫೇಮಸ್. ನುಡಿ ಆಲಿಸಲು ಲಕ್ಷಾಂತರ ಜನ್ರು ಅಲ್ಲಿಗೆ ಆಗಮಿಸ್ತಾರೆ. ಇನ್ನು 18 ಅಡಿ ಬಿಲ್ಲನ್ನ ಏರಿ ಕಾರ್ಣಿಕ ನುಡಿ ನುಡಿಯುವ ಗೊರವಯ್ಯನ ನುಡಿಯನ್ನ ಮಳೆ, ಬೆಳೆ, ರಾಜಕೀಯ ಹೀಗೆ ಆಗು ಹೋಗಗಳ ಬಗ್ಗೆ ವಿಮರ್ಶೆ ಮಾಡ್ತಾರೆ ಹಾಗಾದ್ರೆ ಈ ವರ್ಷ ನುಡಿದ ಕಾರ್ಣಿಕ ನುಡಿ ಏನು…? ಅಂತಿರಾ ಈ ಸ್ಟೋರಿ ಓದಿ
ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯ ನುಡಿದ ಗೊರವಯ್ಯ ಸದ್ದಲೇ ಎಂದು ಭವಿಷ್ಯವಾಣಿ ನುಡಿದ ಕಾರ್ಣಿಕದ ಗೊರವಯ್ಯ ರಾಮಣ್ಣ , 18 ಅಡಿ ಬಿಲ್ಲನ್ನು ಏರಿ ಕಾರ್ಣಿಕ ನುಡಿದು ಕೆಳಗೆ ಬಿದ್ದ ಗೊರವಯ್ಯ.
ತುಂಬಿದ ಕೊಡ ತುಳುಕಿತಲೇ ಪರಾಕ್… ಹೌದು ಇದು ಈ ವರ್ಷದ ಶ್ರೀ ಕ್ಷೇತ್ರ ಮೈಲಾರದ ಕಾರ್ಣಿಕ ( 2025 ರ ವರ್ಷ ಭವಿಷ್ಯ) ಅದು ಜಿಲ್ಲೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ. ಮೈಲಾರದ ಮೈಲಾರ ಲೀಂಗೆಶ್ವರನ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಭರತ ಹುಣ್ಣಿಮೆಯ ಬಳಿಕ ಶ್ರೀ ಕ್ಷೇತ್ರ ಮೈಲಾರದ ಡಂಕನಮರಡಿಯಲ್ಲಿ ಕಾರ್ಣಿಕ ನುಡಿಯನ್ನ 11 ದಿನಗಳ ಕಾಲ ಉಪವಾಸ ವಿದ್ದು ಭಕ್ತಿ ಭಾವ ಮಡಿ, 18 ಅಡಿಯ ಬಿಲ್ಲನ್ನ ಏರಿ ಕಾರ್ಣಿಕ ನುಡಿ ಭವಿಷ್ಯ ನುಡಿದ ಗೊರವಯ್ಯ ರಾಮಣ್ಣ, ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯವಾಣಿ ನುಡಿದಿದ್ದಾರೆ ಸಂಪಾದೀತಲೇ ಪರಾಕ್.
|ವೆಂಕಪ್ಪಯ್ಯ ಒಡೆಯರ್, ಮೈಲಾರ ಕ್ಷೇತ್ರದ ಧರ್ಮದರ್ಶಿ
ಈ ಸಮಯದಲ್ಲಿ ಹೂವಿನಹಡಗಲಿ ಶಾಸಕ ಕೃಷ್ಣ ನಾಯಕ್
ಮಾತನಾಡಿದ ಅವರು ತುಂಬಿದ ಕೊಡಾ ತುಳುಕಿತಲೇ ಪರಾಕ್ ಎಂಬ ಎರಡೇ ಶಬ್ದದಲ್ಲಿ ಈ ವರ್ಷದ ದೈವವಾಣಿ ಹೇಳಿದ ಗೊರವಯ್ಯ ರಾಮಣ್ಣ, ಗೊರವಯ್ಯನ ಹೇಳಿಕೆಯಿಂದ ನೆರೆದಿದ್ದ ಲಕ್ಷಾಂತರ ಜನರಿಂದ ವ್ಯಕ್ತವಾದ ಹರ್ಷಾದ್ಘೋರ ಮುಗಿಲು ಮುಟ್ಟಿತು.ಈ ಬಾರಿ ಉತ್ತಮ ಮಳೆ,ಬೆಳೆಯಾಗಲಿದೆ. ದೇಶ ಸುಭಿಕ್ಷೆಯಾಗಿರಲಿದೆ ಎಂದು ಅರ್ಥೈಸಲಾಗುತ್ತಿದೆ.
ಇದಕ್ಕೂ ಮೊದಲು ಮೈಲಾರಲಿಂಗೇಶ್ವರನ ದೇವಸ್ಥಾನದಿಂದ ಶ್ರೀ ವೆಂಕಪ್ಪಯ್ಯ ಒಡೆಯರ್ ಕುದುರೆಯನ್ನೇರಿ ಡೆಂಕನಮರಡಿ ಪ್ರದೇಶದವರೆಗೆ ಮೆರವಣಿ ಮೂಲಕ ಸಾಗಿ ಬಂದು ಕಾರ್ಣಿಕ ನುಡಿಯುವ ಸ್ಥಳದ ಸುತ್ತ ಪ್ರದಕ್ಷಿಣೆ ಹಾಕಿ, ಭಕ್ತರಿಗೆ ಆಶೀರ್ವಾದ ನೀಡಿದರು. ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸೇರಿ ರಾಜ್ಯದ ಮೂಲೆ ಮೂಲೆಗಳಿಂದ ಬಂದ ಲಕ್ಷಾಂತ ಭಕ್ತರು ನೆರೆದಿದ್ದರು.
ಒಟ್ಟಾರೆ ಹೇಳುವುದಾದರೆ, ಈ ಬಾರಿಯ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವವು ದೇಶ ಸುಭಿಕ್ಷವಾಗಿರಲಿದೆ, ಮಳೆ ಬೆಳೆ ಚೆನ್ನಾಗಿ ಆಗಲಿದೆ.. ರೈತರು ಉತ್ತಮ ರೀತಿಯಲ್ಲಿ ಇರ್ತಾರೆ ಅನ್ನೋ ಸಂದೇಶ ನೀಡಿದಂತಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ5 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ4 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ7 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ2 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ1 day ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ8 hours ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ