Connect with us

ದಿನದ ಸುದ್ದಿ

ದಾವಣಗೆರೆ | ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಲಸಿಕಾ ಜಾಗೃತಿ ಅಭಿಯಾನ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಮಹಾನಗರಪಾಲಿಕೆ ಸಹಯೋಗದಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಕೋವಿಡ್ 2ನೇ ಅಲೆ ತಡೆಯುವ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನೇತೃತ್ವದಲ್ಲಿ ಕೋವಿಡ್ ಲಸಿಕಾ ಅಭಿಯಾನವನ್ನು ಶುಕ್ರವಾರ ನಗರದ ವಿವಿಧೆಡೆ ಹಮ್ಮಿಕೊಳ್ಳಲಾಯಿತು.

ಭಾಷಾನಗರ, ಬೀಡಿ ಲೇಔಟ್, ಆಜಾದ್‍ನಗರ, ಮೆಹಬೂಬ್ ನಗರ, ಶಿವ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್ ಗಿರೀಶ್ ಸೇರಿದಂತೆ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಕೋವಿಡ್ ಲಸಿಕೆ, ಮಾಸ್ಕ್, ಸಾಮಾಜಿಕ ಅಂತರದ ಕುರಿತು ಅರಿವು ಮೂಡಿಸಿದರು.

ಈ ವೇಳೆ ಆಶಾ ಕಾರ್ಯಕರ್ತೆಯರು ‘ಜನಸಂದಣಿ ಪ್ರದೇಶದಿಂದ ದೂರವಿರಿ’, ‘ನಿಮ್ಮ ಕಣ್ಣು, ಮೂಗು, ಬಾಯಿಗಳನ್ನು ಮುಟ್ಟಿಕೊಳ್ಳಬೇಡಿ’, ‘1977 ಕ್ಕೆ ಮೊದಲು ಹುಟ್ಟಿದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು’, ‘ಕೈಗಳನ್ನು ನೈರ್ಮಲ್ಯದೊಂದಿಗೆ ಕಾಪಾಡಿಕೊಳ್ಳಿ’ ಎಂಬಂತಹ ಘೋಷಣೆಗಳೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತ ಮಾಸ್ಕ್ ವಿತರಿಸಿದರು.

ಜಾಥಾ ಮುಗಿದ ಬಳಿಕ ಆಜಾದ್‍ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಕಳೆದ ವರ್ಷ ಹಳೆ ದಾವಣಗೆರೆ ಕೊರೋನದಂತಹ ಗಂಡಾಂತರ ಎದುರಿಸಿ, ಅದರಿಂದ ಪಾರಾಗಿದೆ ಎಂಬುದು ನಮಗೆಲ್ಲ ತಿಳಿದ ವಿಚಾರ. ಈ ದೃಷ್ಟಿಯಿಂದ ನಾವು ಈ ಭಾಗದಲ್ಲಿ ಹೆಚ್ಚಿನ ಆದ್ಯತೆ ನೀಡಿ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಲಸಿಕೆ ಹಾಕಿಸಿಕೊಳ್ಳುವುದು ಹೀಗೆ ಕೋವಿಡ್-19 ಕುರಿತು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದೇವೆ ಎಂದರು.

ಇದನ್ನೂ ಓದಿ |ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ನೇಣಿಗೆ ಶರಣು..!

ಈಗಾಗಲೇ ಜಿಲ್ಲಾದ್ಯಂತ 1 ಲಕ್ಷದ 22 ಸಾವಿರ ಜನರಿಗೆ ಲಸಿಕೆ ಹಾಕಿಸಿದ್ದು, 45 ವರ್ಷದ ಮೇಲ್ಪಟ್ಟ 93 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬೇಕು. ಆದ ಕಾರಣ ಈ ಭಾಗದ ಸ್ಥಳೀಯ ಕಾರ್ಪೋರೇಟರ್, ಮುಖಂಡರ ಸಮ್ಮುಖದಲ್ಲಿ ಲಸಿಕಾ ಅಭಿಯಾನವನ್ನು ಏರ್ಪಡಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ.

ಸಾರ್ವಜನಿಕರು ಲಸಿಕಾ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮನ್ನ ತಾವು ಕೊರೋನಾದಿಂದ ಸಂಭವಿಸುವ ಮರಣದಿಂದ ರಕ್ಷಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಡಿಹೆಚ್‍ಒ ಡಾ.ನಾಗರಾಜ್ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಡಿ ಈಗಾಗಲೇ 115 ಉಪಕೇಂದ್ರಗಳಲ್ಲಿ ವ್ಯಾಕ್ಸಿನೇಷನ್ ನೀಡಲಾಗುತ್ತಿದ್ದು, ಪ್ರತಿ ಒಂದು ಉಪಕೇಂದ್ರಕ್ಕೆ 50 ಜನರನ್ನು ಗುರಿ ಮಾಡಿ ಲಸಿಕೆ ನೀಡಲಾಗುತ್ತಿದೆ. ಹಾಗೂ ನಗರದಲ್ಲಿ ಒಂದು ದಿನಕ್ಕೆ 10 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, 6 ಸಾವಿರ ಜನರನ್ನು ತಲುಪುತ್ತಿದ್ದೇವೆ. ಇಲ್ಲಿಯವರೆಗೂ ಒಟ್ಟು 93 ಸಾವಿರ ಜನರಿಗೆ ಕೋವಿಡ್ ವ್ಯಾಕ್ಸಿನೇಷನ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಿಸಲು ಎಲ್ಲಾ ಇಲಾಖೆಯ ಪ್ರತಿನಿಧಿಗಳು ಸರ್ವೆ ನಡೆಸುವ ಮೂಲಕ ಶ್ರಮವಹಿಸುತ್ತಿದ್ದು, ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ, ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಡಿಎಲ್‍ಒ ಡಾ.ಮುರುಳೀಧರ್, ಡಿಎಫ್‍ಒ ಡಾ.ರೇಣುಕಾರಾಧ್ಯ, ಡಿಎಂಒ ಡಾ.ನಟರಾಜ್, ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್ ಬಾರ್ಕಿ, ಡಾ.ಮಂಜುಳ, ಡಾ.ವೇದಮೂರ್ತಿ, ಡಾ.ಸುನಿತ, ಡಾ.ವೆಂಕಟೇಶ್, ಡಾ.ಉಮಾಪತಿ ಸೇರಿದಂತೆ ಇತರೆ ಎಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending