Connect with us

ದಿನದ ಸುದ್ದಿ

ದಾವಣಗೆರೆ | ಜನಸ್ಪಂದನ ಸಭೆಗೆ ಅರ್ಜಿಗಳ ಮಹಾಪೂರ

Published

on

ಸುದ್ದಿದಿನ,ದಾವಣಗೆರೆ : ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ದೂರುನೀಡಲು ಬಂದಿದ್ದ ಮಹಿಳಾ ವಕೀಲರೊಬ್ಬರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.

ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನದಲ್ಲಿ ಜನರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ದೂರು ನೀಡಲು ಆಗಮಿಸಿದ್ದ ಮಹಿಳಾ ವಕೀಲರೊಬ್ಬರಿಗೆ ನೀವು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ್ದಿರಾ ಎಂದಾಗ, ಆ ಮಹಿಳೆ ಇಲ್ಲ ಎಂದು ಹೇಳಿದರು. ಇದಕ್ಕೆ ಜಿಲ್ಲಾಧಿಕಾರಿಗಳು ನಾಗರಿಕರಾಗಿ ಮತದಾನ ಮಾಡಬೇಕಿರುವುದು ನಮ್ಮ ಮುಖ್ಯ ಕರ್ತವ್ಯ, ಮತದಾನ ನಮ್ಮ ಹಕ್ಕು ಅದನ್ನು ಬಳಸಬೇಕಿರುವುದು ನಮ್ಮ ಜವಬ್ದಾರಿ ಸಲಹೆ ನೀಡಿದರು.

ಜನಸ್ಪಂದನ ಸಭೆಯಲ್ಲಿ ದೇವರಾಜ್ ಅರಸ್ ಬಡಾವಣೆಯ ನಿವಾಸಿಯೊಬ್ಬರು ಕೋರ್ಟ್‍ನ ಹಿಂಭಾಗ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ಸ್ವಚ್ಚತೆ ಇಲ್ಲ, ಇಲ್ಲಿ ವಾಸಿಸುವ ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗುತ್ತಿದೆ. ಮತ್ತು ರಿಂಗ್ ರಸ್ತೆ ಹಾಗೂ ಕೋರ್ಟ್ ಹಿಂಭಾಗದ ರಸ್ತೆಗಳಲ್ಲಿ ಓಡಾಡಲು ಸಾರ್ವಜನಿಕರಿಗೆ ಭಯದ ವಾತವರಣವಿದೆ. ಇದರ ಬಗ್ಗೆ ಮಹಾನಗರಪಾಲಿಕೆ ಹಲವಾರು ಬಾರಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲವೆಂದು ದೂರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಗರದ ಹಲವಾರು ಸ್ಥಳಗಳಲ್ಲಿ ಇದೇ ರೀತಿಯ ಸಮಸ್ಯೆಗಳಿದ್ದು, ಅದರ ಬಗ್ಗೆ ಗಮನ ಹರಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ತಿಳಿಸಿದರು.

ಎಸ್‍ಪಿಎಸ್ ನಗರದ ನಿವಾಸಿಯಾದ ಮಂಜುಳ ಎಸ್ ಹಿರೇಮಠ್ ಎಂಬುವರು, ನಾನು ಬಿ.ಎ ಪದವೀಧರಳಾಗಿದ್ದು, ಅಂಗವಿಕಲರ ಅಧಿನಿಯಮದಡಿ ಅಂಗವಿಕಲರ ಸಹಾಯವಾಣಿಯ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈ ಅರ್ಜಿಯನ್ನು ಪರಿಶೀಲಿಸಿ ನನಗೆ ಉದ್ಯೋಗ ದೊರಕಿಸಿಕೊಡಬೇಕೆಂದು ಮನವಿ ಮಾಡಿಕೊಂಡರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಈ ಹುದ್ದೆಯು ವಿಕಲಚೇತನದಡಿ ಇದ್ದು, ಬೇರೆಯವರು ಕಾರ್ಯ ನಿರ್ವಹಿಸುತ್ತಿದ್ದರೆ ಅವರನ್ನು ತೆಗೆದು ಹಾಕಿ ಇವರಿಗೆ ಉದ್ಯೋಗ ನೀಡುವಂತೆ ತಿಳಿಸಿದರು.

ದೇವರಾಜ್ ಅರಸ್ ಬಡಾವಣೆಯ ನಿವಾಸಿ ಸುನಂದ ಎಂಬುವರು ಲಕ್ಷೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಿರಿಯ ನಾಗರಿಕ ಠೇವಣಿ ಯೋಜನೆಯಡಿ ಒಂದು ಲಕ್ಷ ಹಣವನ್ನು ಠೇವಣಿ ಮಾಡಲಾಗಿತ್ತು. ನಮ್ಮ ಠೇವಣಿ ಅವಧಿ ಮುಗಿದು, ಬಾಂಡ್ ಮೆಚ್ಯುರಿಟಿ ಆಗಿದ್ದರು ನಮಗೆ ಹಣ ನೀಡದೇ ಸತಾಯಿಸುತ್ತಿದ್ದಾರೆ ಎಂದು ದೂರು ನೀಡಿದರು.

ಜಿಲ್ಲಾಧಿಕಾರಿ ಈ ಬಗ್ಗೆ ಸೊಸೈಟಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಒಟ್ಟು 1200 ಈ ರೀತಿಯ ಘಟನೆಗಳು ನಡೆದಿವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗೆ ನೋಟಿಸ್ ನೀಡಲಾಗಿದ್ದು, ಆ ವ್ಯಕ್ತಿ 15 ದಿನಗಳಿಂದ ಕಚೇರಿಗೆ ಬಂದಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರದ ನಿವಾಸಿ ಮಲ್ಲಿಕಾರ್ಜಿನ್ ಇಂಗಳೇಶ್ವರ ಎಂಬುವರು ಪುಷ್ಪ ಮಹಾಲಿಂಗಪ್ಪ ಶಾಲೆಯವರ ಜಾಗ ಎಷ್ಟಿದೆ ಎಂಬುದು ತಿಳಿದಿಲ್ಲ, ಶಾಲೆಯ ಸುತ್ತ ಮುತ್ತ ದೊಡ್ಡ ಬಿಲ್ಡಂಗ್ ಅನುಮತಿಯಿಲ್ಲದೇ ನಿರ್ಮಾಣವಾಗುತ್ತಿವೆ ಇದರ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಸಬೇಕೆಂದು ದೂರು ಅರ್ಜಿ ಸಲ್ಲಿಸಿದರು.

ವಾಕ್ ಮತ್ತು ಶ್ರವಣ ದೋಷವುಳ್ಳ ಅನೇಕ ಜನ ವಿಕಲಚೇತನರು ನಮಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಿಮಗೆ ಅವಶ್ಯವಿರುವ ಸಹಾಯ ಮಾಡಲು ನಾನು ಸಿದ್ಧನಿದ್ದೆ, ನಿಮ್ಮ ಅನುಕೂಲಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಸಮ್ಮಖದಲ್ಲಿ ಅಭೆ ನಡೆಸಿ ಅಗತ್ಯವಾದ ಸಹಾಯ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ನಂಜನಗೌಡ ಎಂಬುವರು ಉಚ್ಚಂಗಿದುರ್ಗ ಕ್ಷೇತ್ರವು ಐತಿಹಾಸಿಕವಾಗಿ ಹೆಚ್ಚು ಪ್ರಸಿದ್ದಿ ಹೊಂದಿದ್ದು, ದಾವಣಗೆರೆಯಿಂದ ಅಣಜಿ ಕ್ರಾಸ್ ಮುಂಖಾತರ ಉಚ್ಚಂಗಿದುರ್ಗಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸೇವೆ ಒದಗಿಸಬೇಕೆಂದು ಮನವಿ ಪತ್ರ ಸಲ್ಲಿಸಿದರು.

ಹರಿಹರ ನಿವಾಸಿ ನಿಸಾರ್ ಅಹಮದ್‍ರವರು ನಾನು ಬಡ ವರ್ಗದವನಾಗಿದ್ದು, ಶೇ.75 ರಷ್ಟು ಅಂಗವಿಕಲತೆ ಹೊಂದಿದ್ದೇನೆ. ನನಗೆ ಸರ್ಕಾರದ ವತಿಯಿಂದ ಆಶ್ರಯ ಯೋಜನೆಯಡಿ ಮನೆಯನ್ನು ನೀಡಬೇಕೆಂದು ಮನವಿ ಮಾಡಿಕೊಂಡರು.

ವಿಜಯ ನಗರ ನಿವಾಸಿ ಗೋಪಾಲಮ್ಮ ಎಂಬುವವರು, ನಾನು ಅಂಗನವಾಡಿ ಮತ್ತು ಪೋಸ್ಟ್ ಆಫೀಸ್‍ಗಳಲ್ಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ನನಗೆ ಯಾವುದಾರೊಂದು ಕೆಲಸ ದೊರಕಿಸಿಕೊಡಿ ಎಂದು ಮನವಿ ಮಾಡಿಕೊಂಡರು.

ಜಿಲ್ಲಾಧಿಕಾರಿಗಳು ನೀವು ಅರ್ಜಿ ಸಲ್ಲಿಸಿರುವ ಇಲಾಖೆಗಳಲ್ಲಿ ಯಾವುದಾದರು ಹುದ್ದೆ ಖಾಲಿ ಇದ್ದರೆ ಹೊರಗುತ್ತಿಗೆ ಆಧಾರದಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು..

ಶಂಕರ್ ವಿಹಾರ ನಗರದ ಮಹಿಳೆಯರು, ಬಡಾವಣೆಯಲ್ಲಿ ಸಮರ್ಪಕ ರಸ್ತೆ ಮತ್ತು ಚರಂಡಿ, ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದರು.ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು.

ಕಸ್ತೂರಮ್ಮ ಎಂಬುವವರು ನನಗೆ ವಿಧವಾ ವೇತನ ಮಂಜೂರಾಗಿದ್ದು, ಇದುವರೆಗೂ ನನ್ನ ಖಾತೆಗೆ ಹಣ ಜಮಾ ಆಗಿರುವುದಿಲ್ಲ. ಈ ಕುರಿತು ವಿಚಾರಿಸಿದರೆ ನನಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ನನಗೆ ವಿಧವಾ ವೇತನ ಬರುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಾಲಿನಗರ ನಿವಾಸಿ ಆಶಾ ಅಬ್ದುಲ್ ಅಜೀಜ್‍ಸಾಭ್ ಇವರು ಸಂಧ್ಯಾ ಸುರಕ್ಷ ಯೋಜನೆಯಲ್ಲಿ ತಮಗೆ ಪಿಂಚಣಿ ಮಂಜೂರಾಗಿದ್ದು, 11 ತಿಂಗಳಾದರೂ ನಮಗೆ ಪಿಂಚಣಿ ಹಣ ಬಂದಿಲ.್ಲ ಈ ಪಿಂಚಣಿ ಹಣವನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಸಂಬಂಧಿಸಿದ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಒಂದು ವಾರದೊಳಗೆ ಪಿಂಚಣಿ ಹಣ ಇವರ ಖಾತೆಗೆ ಹೋಗಬೇಕೆಂದು ಎ.ಡಿಯವರಿಗೆ ತಿಳಿಸಿದರು.

ನ್ಯಾಮತಿ ತಾಲ್ಲೂಕಿನ ಗಂಜೇನಹಳ್ಳಿಯ ಬಗರ ಹುಕುಂ ಸಮಿತಿಯಲ್ಲಿ ನಿರ್ಧರಿಸಿದಂತೆ ಚಿಕ್ಕತ್ತಿನಹಳ್ಳಿಯಲ್ಲಿ ಮಂಜೂರಾದ ಸಾಗುವಳಿ ಮಾಡಲು ಪಡೆದ ಭೂಮಿಯ ಮ್ಯುಟೇಷನ್ ಹಾಗೂ ಪಹಣಿ ಮಂಜೂರಾಗಿರುವುದಿಲ್ಲ. ಈ ಕುರಿತು ನ್ಯಾಮತಿ ತಾಲ್ಲೂಕು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿ ಮನವಿ ಸಲ್ಲಿಸಿದರು.

ನಗರದ ಎಂ.ಬಿ ಕೇರಿಯ ಲಕ್ಕಮ್ಮ ಎಂಬುವವರು ತಾವು ಕಸಬಾ ಹೋಬಳಿಯ 2.12 ಗುಂಟೆ ಜಮೀನು ಇದ್ದು, ಜಮೀನು ಪೋಡಿಗಾಗಿ ಈಗಾಗಲೇ ಅರ್ಜಿ ಸಲ್ಲಸಿ ಹಲವು ವರ್ಷ ಕಳೆದರೂ ತಮ್ಮ ಹೆಸರಿಗೆ ಇನ್ನು ಪೋಡಿಯಾಗಿರುವುದಿಲ್ಲ ಎಂದು ಮನವಿ ಸಲ್ಲಿಸಿ, ಪೋಡಿ ಮಾಡಿಸಿಕೋಡಲು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಜಿಲ್ಲಾ ಪಂಚಾಯತ್‍ನ ಉಪ ಕಾರ್ಯzರ್ಶಿಗಳಿಗೆ ಈ ಸಮಸ್ಯೆಯ ಬಗ್ಗೆ ಪತ್ರ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ ಅರ್ಜಿಗಳು ಬಂದಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಸಭೆಯಲ್ಲಿದ್ದ ಅಧಿಕಾರಿಗಳನ್ನುದ್ದೇಶಿಸಿ ಎಲ್ಲಾ ಇಲಾಖೆಯವರು ನಿಮ್ಮ ಕಚೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸಿದರೆ, ಜನರು ಜಿಲ್ಲಾಡಳಿತ ಕಚೇರಿಗೆ ಬರಲು ಅವಕಾಶವಿರುವುದಿಲ್ಲ. ಇಲ್ಲಿರುವ ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಹೇಳಿದರು.

ಕಾನೂನುನ್ನು ಹೊರತು ಪಡಿಸಿ ಸಾರ್ವಜನಿಕರ ಕಾಳಜಿ ವಹಿಸಿ ಕೆಲಸ ಮಾಡಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ನಡೆದುಕೊಳ್ಳುವ ರೀತಿಯಿಂದ ನಮ್ಮ ಕಚೇರಿಯ ವರ್ಚಸ್ಸುನ್ನು ಹೆಚ್ಚಿಸುತ್ತದೆ. ಆದ್ದರಿಂದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಪ್ರೀತಿ ಮತ್ತು ಕಾಳಜಿಯಿಂದ ವರ್ತಿಸುವ ಗುಣ ಬೆಳೆಸಿಕೊಳ್ಳಿ. ಸಾರ್ವಜನಿಕರ ಮನವಿಯನ್ನು ಆಲಿಸಿಕೊಂಡು ಅವರ ಸಮಸ್ಯಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕೆ ಎಂದು ತಿಳಿಸಿದರು.

ಸಭೆಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಖಾತೆ ವರ್ಗಾವಣೆ, ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು, ಸಾಲ ಸೌಲಭ್ಯಗಳ ಕುರಿತು ಹಾಗೂ ಅಂಗವಿಕಲರಿಗೆ ಸ್ವಉದ್ಯೋಗಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್ ವಿಜಯ್‍ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Published

on

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.

ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.

ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending