ದಿನದ ಸುದ್ದಿ
ದಾವಣಗೆರೆ ಡಿಸಿಸಿ ಬ್ಯಾಂಕ್ ನೇಮಕಾತಿ ಗೋಲ್ ಮಾಲ್: ಸಿಎಂಗೆ ಮಾಜಿ ಶಾಸಕ ಶಿವಶಂಕರ್ ಪತ್ರ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/08/hs-shivashankar_harihara_suddidina.png&description=ದಾವಣಗೆರೆ ಡಿಸಿಸಿ ಬ್ಯಾಂಕ್ ನೇಮಕಾತಿ ಗೋಲ್ ಮಾಲ್: ಸಿಎಂಗೆ ಮಾಜಿ ಶಾಸಕ ಶಿವಶಂಕರ್ ಪತ್ರ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/08/hs-shivashankar_harihara_suddidina.png&description=ದಾವಣಗೆರೆ ಡಿಸಿಸಿ ಬ್ಯಾಂಕ್ ನೇಮಕಾತಿ ಗೋಲ್ ಮಾಲ್: ಸಿಎಂಗೆ ಮಾಜಿ ಶಾಸಕ ಶಿವಶಂಕರ್ ಪತ್ರ', 'pinterestShare', 'width=750,height=350'); return false;" title="Pin This Post">
ಎನ್. ಆರ್.ಗೋವರ್ಧನ, ದಾವಣಗೆರೆ:
ದಾವಣಗೆರೆ ಡಿಸಿಸಿಬಿಯಲ್ಲಿ ಖಾಲಿ 31 ಹುದ್ದೆಗಳಿಗೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮವಾಗಿದ್ದು, ಸರ್ಕಾರ ಕೂಡಲೇ ಅದಕ್ಕೆ ತಡೆ ನೀಡಬೇಕು ಎಂದು ಹರಿಹರ ಕ್ಷೇತ್ರದ ಮಾಜಿ ಶಾಸಕ ಎಚ್.ಎಸ್.ಶಿವಕುಮಾರ್ ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ದಾವಣಗೆರೆ ಡಿಸ್ಟ್ರಿಕ್ಟ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ನೇಮಕಾತಿ ನಡೆದಿದ್ದು, ಅರ್ಹರಿಗೆ ಅನ್ಯಾಯವಾಗಿದೆ. ಕೇವಲ 10 ದಿನದೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಸಲಾಗಿದೆ. ಪ್ರತಿ ಹುದ್ದೆಗೆ ಲಕ್ಷಾಂತರ ರೂಪಾಯಿ ಲಂಚ ಪಡೆದ ಆರೋಪ ಕೇಳಿ ಬರುತ್ತಿವೆ.
ಮಾಜಿ ಶಾಸಕ ಎಚ್.ಎಸ್.ಶಿವಕುಮಾರ್ ಅವರು ಬರೆದ ಪತ್ರದಲ್ಲಿ ಏನಿದೆ:
- 1. ಸರ್ಕಾರಿ ಮತ್ತು ಸಹಕಾರಿ ಇಲಾಖೆಯ ನಿಯಮ ಉಲ್ಲಂಘನೆ ಮಾಡಲಾಗಿದೆ. ಬ್ಯಾಂಕಿನ ನೌಕರರ ನೇಮಕಾತಿ ಸಂಬಂಧಿಸಿದಂತೆ ಆಡಳಿತ ಮಂಡಳಿ ಸಭೆ ನಡೆಸದೇ ವಿಷಯ ಮಂಡಿಸದೇ ಬೇರೆ ಹೆಚ್ಚುವರಿ ವಿಷಯದಲ್ಲಿ ತೀರ್ಮಾನ ತೆಗೆದುಕೊಂಡು ಸಹಕಾರ ಸಂಘಗಳ ನಿಯಮ 14 (ಇ) ಯನ್ನು ಉಲ್ಲಂಘಿಸಲಾಗಿದೆ. ಇಂತಹ ವಿಷಯವನ್ನು ಮುಖ್ಯ ವಿಷಯದಲ್ಲಿ ಮಂಡಿಸಿಬೇಕಾಗುತ್ತದೆ.
2. ಸಹಕಾರ ಸಂಘಗಳ ನಿಬಂಧಕರು ಸದರಿ ಆಡಳಿತ ಮಂಡಳಿ ನಡವಳಿಕೆಗಳನ್ನು ಗಮನಿಸದೇ ಕಡತ ಪರಿಶೀಲನ ಮಾಡದೇ ಏಕಾಏಕಿ ಅನುಮತಿ ನೀಡಲಾಗಿದೆ. - 3. ಸಹಕಾರ ಸಂಘಗಳ ನಿಬಂಧಕರು ಸದರಿ ನಿಯೋಜಿತಗೊಂಡಿರುವ ಸಿಇಒ ಇರುವುದಿಲ್ಲ. ಬ್ಯಾಂಕಿನ ಆಡಳಿತ ಮಂಡಳಿಯವರು ಬ್ಯಾಂಕಿನ ಸಿಬ್ಬಂದಿಗೆ ಪ್ರಭಾರ ವಹಿಸಿ ಮನಬಂದಂತೆ ಆಡಳಿತ ನಡೆಸುತ್ತಿದ್ದು, ನಿಯಮ ಉಲ್ಲಂಘಿಸಿದ್ದಾರೆ.
- 4. ಸದರಿ ವಿಷಯಗಳನ್ನು ತೀರ್ಮಾನಿಸುವ ಸಭೆಗಳಿಗೆ ಸತತವಾಗಿ ಸರ್ಕಾರದ ಪರವಾಗಿ ಸಹಕಾರ ಸಂಘದ ಉಪನಿಬಂಧಕರು ಗೈರಾಗಿದ್ದಾರೆ.
- 5. ಸಹಕಾರ ಸಂಘದ ನಿಯಮ 18(ಅ) ನಿಯಮದಂತೆ ನೇಮಕಾತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಹುದ್ದೆ ನೀಡಬೇಕು. ಆದರೆ ಕಡಿಮೆ ಅಂಕ ಪಡೆದವರಿಗೆ ನೀಡಲಾಗಿದೆ.
ಹೀಗೆ ಪತ್ರದಲ್ಲಿ ಹಲವು ಅಂಶಗಳನ್ನು ಪಟ್ಟಿ ಮಾಡಿರುವ ಮಾಜಿ ಶಾಸಕ ಎಚ್.ಎಸ್.ಶಿವಕುಮಾರ್ ಈ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶೀಘ್ರ ನೇಮಕಕ್ಕೆ ಚುನಾವಣೆ ಕಾರಣ
ದಿಢೀರನೆ ನೇಮಕಾತಿ ಪ್ರಕ್ರಿಯೆ ಕೈಗೊಂಡಿರುವುದಕ್ಕೆ ಸಹಕಾರ ಸಂಘದ ಎಕ್ಸಿಕ್ಯುಟಿವ್ ಸಮಿತಿ ಚುನಾವಣೆ ನಡೆಯಲಿದೆಯಂತೆ. ಐದು ವರ್ಷಗಳ ಹಿಂದೆ ಆಯ್ಕೆಯಾದ ಸಮಿತಿ ಅವಧಿ ಮುಕ್ತಾಯವಾಗುತ್ತಿದ್ದು, ಚುನಾವಣೆ ನಡೆಸಲು ರಾಜ್ಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಅಕ್ರಮದ ಕುರಿತು ಸುದ್ದಿದಿನ ಬೆಳಕು
ದಾವಣಗೆರೆ ಡಿಸಿಸಿಬಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಕುರಿತು ಕೆಲ ಆಕಾಂಕ್ಷಿಗಳು ಆರೋಪಿಸಿದ್ದರು. ಇದರ ಜಾಡುಹಿಡಿದು ಸುದ್ದಿದಿನ ಮೊದಲಿಗೆ ವರದಿ ಪ್ರಕಟಿಸಿತ್ತು. ಆ ನಂತರ ಕೆಲವರು ಅಕ್ರಮ ನಡೆದಿರುವ ಕುರಿತು ದೂರವಾಣಿ ಮೂಲಕ ಆರೋಪಿಸಿದ್ದಾರೆ. ಅಂಗವಿಕಲರೊಬ್ಬರು ಪ್ರಕರಣದ ತನಿಖೆಗೆ ಪಿಎಎಲ್ ಹಾಕಿದ್ದಾರೆ.
ಇದನ್ನು ಓದಿ: ದಾವಣಗೆರೆ ಡಿಸಿಸಿ ಬ್ಯಾಂಕ್ ನೇಮಕಾತಿ ಅಕ್ರಮ..?
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ11 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

