ದಿನದ ಸುದ್ದಿ
ಸುದ್ದಿದಿನದಲ್ಲಿ ಮಾತ್ರ | ದಾವಣಗೆರೆ ಡಿಸಿಸಿ ಬ್ಯಾಂಕ್ ನೇಮಕಾತಿ ಅಕ್ರಮ..?
![](https://suddidina.com/wp-content/uploads/2018/08/Dccb-suddidina.jpg)
ಸುದ್ದಿದಿನ ವಿಶೇಷ| ದಾವಣಗೆರೆ ಡಿಸ್ಟ್ರಿಕ್ಟ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ ನೇಮಕಾತಿ ನಡೆದಿದ್ದು, ಅರ್ಹರಿಗೆ ಅನ್ಯಾಯವಾಗಿದೆ. ಅರ್ಜಿ ಕರೆದ ಒಂದು ಪೂರ್ಣಗೊಳ್ಳುವೊದಲೇ ನೇಮಕಾತಿ ಆದೇಶ ನೀಡಲಾಗುತ್ತಿದೆ. ಲಕ್ಷಾಂತರ ರೂಪಾಯಿ ಲಂಚ ಪಡೆದ ಆರೋಪ ಕೇಳಿ ಬರುತ್ತಿದೆ.
ದಾವಣಗೆರೆ ಡಿಸಿಸಿಬಿಯಲ್ಲಿ ಖಾಲಿ 31 ಹುದ್ದೆಗಳಿಗೆ ಜೂನ್ 18ರಂದು ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಕೆಗೆ ಕನಿಷ್ಠವೆಂದರೂ ಒಂದು ತಿಂಗಳು ಕಾಲಾವಕಾಶ ನೀಡಲಾಗುತ್ತದೆ. ಆದರೆ, ಜುಲೈ 9ರಂದು ಸಲ್ಲಿಕೆಗೆ ಕೊನೇ ದಿನಾಂಕ ನಿಗದಿ ಮಾಡಿತ್ತು. 21ದಿನ ಕಾಲಾವಕಾಶ ನೀಡಿತ್ತು. ಆನಂತರ ಪರೀಕ್ಷಾ ದಿನಾಂಕ ಘೋಷಿಸಿ ಒಂದು ತಿಂಗಳ ನಂತರ ಪರೀಕ್ಷೆ ನಡೆಸುವುದು, ಆನಂತರ ಕೀ ಆನ್ಸರ್ ಬಿಡುವುದು, ಆಯ್ಕೆ ಪಟ್ಟಿ ಹೊರಡಿಸಿ, ಆಕ್ಷೇಪಣೆಗೆ ಆಹ್ವಾನ ಮಾಡಲಾಗುತ್ತದೆ.
ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬಹುತೇಕ ಈ ಪ್ರಕ್ರಿಯೆ ನಡೆಯುತ್ತದೆ. ಆದರೆ, ಇಲ್ಲಿ ಯಾವುದೂ ಪಾಲನೆಯಾಗಿಲ್ಲ. ದಿಢೀರನೇ ನೇಮಕಾತಿ ಆದೇಶ ಹೊರಡಿಸಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲದೇ ಜುಲೈ 30ರಂದು ಸಂದರ್ಶನ ನಡೆಸಲಾಗಿದೆ.
ಹುದ್ದೆಗಳು ಹರಾಜಿನಂತೆ ಬಿಕರಿ?
1 ಇಂಜಿನಿಯರ್, 19 ಕ್ಷೇತ್ರಾಧಿಕಾರಿ/ ಕಿರಿಯ ಸಹಾಯಕ, 1ಕಿರಿಯ ಬೆರಳಚ್ಚುಗಾರ, 10 ಅಟೆಂಡರ್ ಸೇರಿ 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹರಾಜಿನಂತೆ ಕೂಗಲಾಯಿತು ಎಂಬುದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿಗಳ ಆರೋಪ. ಇಂಜಿನಿಯರ್ ಹುದ್ದೆಗೆ 35 ಲಕ್ಷ, ಕ್ಷೇತ್ರಾಧಿಕಾರಿ/ ಕಿರಿಯ ಸಹಾಯಕ ಹುದ್ದೆಗೆ 26 ಲಕ್ಷ ರೂ. ವರೆಗೆ, ಕಿರಿಯ ಬೆರಳಚ್ಚುಗಾರ ಹುದ್ದೆಗೆ 20ಲಕ್ಷ ಹಾಗೂ ಅಟೆಂಡರ್ ಹುದ್ದೆಗೆ 15ಲಕ್ಷ ರೂ. ವರೆಗೆ ನಡೆದಿತ್ತು ಎಂದು ಹೇಳಲಾಗುತ್ತಿದೆ. ಆದರೆ, ನೇಮಕಾತಿ ನಡೆಸುತ್ತಿರುವ ಸಮಿತಿ ಈ ಆರೋಪವನ್ನು ತಳ್ಳಿಹಾಕಿದೆ.
ಅಂಗವಿಕಲರಿಗಿಲ್ಲ ಮೀಸಲಾತಿ, ಶುಲ್ಕ ವಿನಾಯಿತಿ
ಸರ್ಕಾರದ ಯಾವುದೇ ನೇಮಕಾತಿ ನಡೆದರೂ ಶೇ. 3ರಷ್ಟು ಹುದ್ದೆಗಳನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಿಡಬೇಕು. ಆದರೆ, ಹುದ್ದೆ ಮೀಸಲಾತಿ ಬಿಡಿ, ಶುಲ್ಕ ವಿನಾತತಿಯನ್ನೂ ನೀಡಿಲ್ಲ. ಅಚ್ಚರಿಯ ವಿಷಯವೆಂದರೆ ಅಂಗವಿಕಲ ಪದವನ್ನು ನೇಮಕಾತಿ ಪ್ರಕಟಣೆಯಲ್ಲಿ ಎಲ್ಲಿಯೂ ಬಳಸಿಲ್ಲ. ಸರ್ಕಾರ ನೀಡಿದ ಮೀಸಲನ್ನು ಅರ್ಹರಿಗೆ ನೀಡದೇ ನೇಮಕಾತಿ ಪ್ರಕ್ರಿಯೆ ನಡೆಸಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ತಿಳಿಯುತ್ತದೆ ಮತ್ತು ನೇಮಕಾತಿ ಪ್ರಕ್ರಿಯೆಯ ನಿಯಮಾವಳಿಗಳ ಉಲ್ಲಂಘನೆ ಸ್ಪಷ್ಟವಾಗಿ ಘೋಚರಿಸುತ್ತದೆ.
ಸಂದರ್ಶನ ದಿನದಂದೇ ನೇಮಕಾತಿ ಆಯ್ಕೆ ಪತ್ರ ವಿತರಣೆ?
ಅಭ್ಯರ್ಥಿಗಳ ಸಂದರ್ಶನ ನಡೆಸಲು ಜುಲೈ 30 ಕರೆಯಲಾಗಿತ್ತು. ಪಟ್ಟಿಯಂತೆ ಸಂದರ್ಶನಕ್ಕೆ ಅಭ್ಯರ್ಥಿಗಳು ಹಾಜರಾಗಿದ್ದು, ಅಲ್ಲಿಯೇ ಅವರಿಗೆ ಸಂದರ್ಶನದ ಅಂಕ ತಿಳಿಸಿ ನೇಮಕಾತಿ ಆದೇಶ ಪತ್ರ ನೀಡುವ ಹುನ್ನಾರ ನಡರದಿತ್ತು ಎಂಬ ಅರೋಪವೂ ಕೇಳಿ ಬಂದಿದೆ. ಆದರೆ, ಇದು ಎಷ್ಟರ ಮಟ್ಟಿಗೆ ಸರಿ ಎಂಬುದು ಸ್ಥಳದಲ್ಲಿದ್ದ ಅಭ್ಯರ್ಥಿಗಳಿಗೆ ಸತ್ಯ.
ಈ ಆರೋಪದ ಬಗ್ಗೆ ಮಾಹಿತಿ ಪಡೆಯಲು ಡಿಸಿಸಿ ಬ್ಯಾಂಕ್ ನ ಮ್ಯಾನೇಜಿಂಗ್ ಡೈರೆಕ್ಟರ್ (MD)ತಾವರ ನಾಯ್ಕ್ ಅವರ ದೂರವಾಣಿಗೆ ‘ಸುದ್ದಿದಿನ’ ಸಂಪರ್ಕಿಸಿತ್ತಾದೆರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!