ದಿನದ ಸುದ್ದಿ
ಚುನಾವಣೆ | ದಾವಣಗೆರೆ ಜಿಲ್ಲೆಯ ಕ್ಷೇತ್ರವಾರು ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಜಯಗಳಿಸಿದವರಲ್ಲಿ ಜಗಳೂರು ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ದೇವೇಂದ್ರಪ್ಪ, ಹರಿಹರ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ಪಿ.ಹರೀಶ್, ದಾವಣಗೆರೆ ಉತ್ತರ ಕಾಂಗ್ರೆಸ್ ಪಕ್ಷದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ಕಾಂಗ್ರೆಸ್ ಪಕ್ಷದ ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಕಾಂಗ್ರೆಸ್ ಪಕ್ಷದ ಕೆ.ಎಸ್.ಬಸವಂತಪ್ಪ, ಚನ್ನಗಿರಿ ಕಾಂಗ್ರೆಸ್ ಪಕ್ಷದ ಬಸವರಾಜು ವಿ.ಶಿವಗಂಗ, ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಡಿ.ಜಿ.ಶಾಂತನಗೌಡ ಇವರು ಜಯಗಳಿಸಿದ್ದಾರೆ.
ಕ್ಷೇತ್ರವಾರು ವಿವರ ; ಜಗಳೂರು
ಮಲ್ಲಾಪುರ ದೇವರಾಜ ಜೆಡಿಎಸ್1972, ಬಿ.ದೇವೇಂದ್ರಪ್ಪ ಕಾಂಗ್ರೆಸ್50765, ಎಸ್.ವಿ.ರಾಮಚಂದ್ರ ಬಿಜೆಪಿ 49891, ಜಿ.ಸ್ವಾಮಿ ಸಮಾಜವಾದಿ ಪಾರ್ಟಿ 367, ಪಕ್ಷೇತರರಾದ ಪಿ.ಅಜ್ಜಯ್ಯ 149, ಡಿ.ತಿಪ್ಪೇಸ್ವಾಮಿ114, ದಿವಾಕರ ಓ 93, ನಾಗರಾಜ.ಎಂ 140, ಭೀಮಪ್ಪ ಜಿ.ಎನ್ 869, ರಾಘವೇಂದ್ರ ಕೆ.ಆರ್685ಹಾಗೂ ಹೆಚ್.ಪಿ.ರಾಜೇಶ್ 49442ಮತಗಳನ್ನು ಪಡೆದಿದ್ದು ಕಾಂಗ್ರೆಸ್ ಪಕ್ಷದ ಬಿ.ದೇವೇಂದ್ರಪ್ಪ ಜಯಗಳಿಸಿದ್ದು ಸಮೀಪದ ಸ್ಪರ್ಧಿ ಬಿ.ಜೆ.ಪಿ.ಯ ಎಸ್.ವಿ.ರಾಮಚಂದ್ರಗಿಂತ 874 ಮತಗಳನ್ನು ಹೆಚ್ಚಿಗೆ ಪಡೆದಿದ್ದಾರೆ.
ಹರಿಹರ
ಬಿ.ಪಿ.ಹರೀಶ್ ಬಿಜೆಪಿ 63924, ಶ್ರೀನಿವಾಸ್ ಎನ್.ಹೆಚ್. (ನಂದಿಗಾವಿ) ಕಾಂಗ್ರೆಸ್59620, ಹೆಚ್.ಎಸ್.ಶಿವಶಂಕರ್ ಜೆಡಿಎಸ್ 40580, ಗಣೇಶಪ್ಪ ಕೆ.ದುರ್ಗದ ಆಮ್ ಅದ್ಮಿ ಪಾರ್ಟಿ 1488, ಕೃಷ್ಣ.ಎಂ ಉತ್ತಮ ಪ್ರಜಾಕೀಯ ಪಾರ್ಟಿ 697 , ಡಿ.ಹನುಮಂತಪ್ಪ ಬಹುಜನ ಸಮಾಜ ಪಾರ್ಟಿ592 , ಪಕ್ಷೇತರರಾದ ಮೂರ್ತಿ ಹೆಚ್.ಕೆ. 360, ಪರಶುರಾಮ ಎಂ. 226, ಜಯಕುಮಾರ ಟಿ.ಹೆಚ್.191, ಬಿ.ಎಸ್. ಉಜ್ಜನಪ್ಪ 140, ಸಂಕೇತ್ರಾಜ್ ಎಸ್ 98 ಮತಗಳನ್ನು ಪಡೆದಿದ್ದಾರೆ. ಇದರಲ್ಲಿ ಬಿಜೆಪಿ ಬಿ.ಪಿ.ಹರೀಶ್ ಇವರು ಜಯಗಳಿಸಿದ್ದು ಸಮೀಪದ ಸ್ಪರ್ಧಿ ಕಾಂಗ್ರೆಸ್ನ ಶ್ರೀನಿವಾಸ್ ಎನ್.ಹೆಚ್. ಇವರಿಗಿಂತ 4304 ಮತಗಳ ಅಂತರದಲ್ಲಿ ಜಯಗಳಿಸಿರುವರು.
ದಾವಣಗೆರೆ ಉತ್ತರ
ಲೋಕಿಕೆರೆ ನಾಗರಾಜ್ ಬಿಜೆಪಿ 69547, ಎಸ್.ಎಸ್.ಮಲ್ಲಿಕಾರ್ಜುನ್ ಕಾಂಗ್ರೆಸ್ 94019, ಬಾತಿ ಶಂಕರ್ ಜೆಡಿಎಸ್ 935 , ಶೀಧರ್ ಪಾಟೀಲ್.ಸಿ ಆಮ್ ಆದ್ಮಿ ಪಾರ್ಟಿ 391,ಚಂದ್ರಶೇಖರ.ಬಿ ಉತ್ತಮ ಪ್ರಜಾಕೀಯ ಪಾರ್ಟಿ1143, ಕೆ.ಮಲ್ಲಣ್ಣ ಕರ್ನಾಟಕ ರಾಷ್ಟç ಸಮಿತಿ 139, ಸುರ್ಜಿತ್.ಜಿ ಸಂಯುಕ್ತ ವಿಕಾಸ್ ಪಾರ್ಟಿ49, ಪಕ್ಷೇತರರಾದ ಕೀರ್ತಿಕುಮಾರ್.ಕೆ.ಎಸ್68, ಮಲ್ಲಿಕಾರ್ಜುನಪ್ಪ.ಕೆ.ಎಂ 108, ಮಹಮ್ಮದ್ ಹಯಾತ್.ಎಮ್ 80, ಇಡ್ಲಿ ಮಂಜು125 , ರುದ್ರೇಶ್ ಗೌಡ 87, ಎಂ.ಜಿ.ಶ್ರೀಕಾಂತ್ 281 ಮತಗಳನ್ನು ಪಡೆದಿರುವರು. ಕಾಂಗ್ರೆಸ್ ಪಕ್ಷದ ಎಸ್.ಎಸ್.ಮಲ್ಲಿಕಾರ್ಜುನ್ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ಲೋಕಿಕೆರೆ ನಾಗರಾಜ್ಗಿಂತ 24472ಮತಗಳನ್ನು ಹೆಚ್ಚಿಗೆ ಪಡೆದು ಜಯಗಳಿಸಿದ್ದಾರೆ.
ದಾವಣಗೆರೆ ದಕ್ಷಿಣ
ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ 84298, ಅಜಯ್ ಕುಮಾರ್ ಬಿ.ಜಿ. ಭಾರತೀಯ ಜನತಾ ಪಾರ್ಟಿ56410 , ಇಸ್ಮಾಯಿಲ್ ಜಬೀವುಲ್ಲಾ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ 1311, ಅಮಾನುಲ್ಲಾಖಾನ್. ಜೆ ಜೆಡಿಎಸ್ 1296, ಸಾಜಿದ್ ಆಮ್ ಆದ್ಮಿ ಪಾರ್ಟಿ 562, ಈಶ್ವರ ಉತ್ತಮ ಪ್ರಜಾಕೀಯ ಪಾರ್ಟಿ522 , ಮಹಮದ್ ಖಲೀಮ್ ಬಿಎಸ್ಪಿ 293, ಗೌಸ್ಪೀರ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 221, ಭಾರತಿ.ಕೆ ಸೋಷಿಯಲಿಸ್ ಯುನಿಟಿ ಸೆಂಟರ್ ಆಫ್ ಇಂಡಿಯಾ 121, ಹೆಚ್.ಕೆ.ದಾವಲ್ ಸಾಬ್ ಕರ್ನಾಟಕ ರಾಷ್ಟ್ರ ಸಮಿತಿ 57, ಪಕ್ಷೇತರರಾದ ಬಿ.ರಾಜಶೇಖರ್233 , ಶೇಕ್ ಅಹಮದ್ 164, ನೌಶಿನ್ತಾಜ್ 101, ಜಿ.ಆರ್.ಶಿವಕುಮಾರ ಸ್ವಾಮಿ 72, ಈರಣ್ಣ 66 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಮನೂರು ಶಿವಶಂಕರಪ್ಪ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ಅಜಯ್ ಕುಮಾರ್ ಬಿಜಿ ಇವರಿಗಿಂತ 27888 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಮಾಯಕೊಂಡ
ಆನಂದಪ್ಪ.ಹೆಚ್ ಜೆಡಿಎಸ್12857, ಪ್ರೊ.ಧರ್ಮಾನಾಯ್ಕ ಎಸ್. ಆಮ್ ಆದ್ಮಿ ಪಾರ್ಟಿ 512, ಕೆ.ಎಸ್.ಬಸವಂತಪ್ಪ ಕಾಂಗ್ರೆಸ್ 70346 , ಎಂ.ಬಸವರಾಜ ನಾಯ್ಕ ಬಿಜೆಪಿ 34248, ಅಜ್ಜಪ್ಪ.ಎನ್ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯ 445, ಚೇತನ್ಕುಮಾರ್ ನಾಯ್ಕ.ಕೆ ಉತ್ತಮ ರಾಜಕೀಯ ಪಕ್ಷ 1226, ಎನ್.ಶಾಂತಬಾಯಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 223, ಸೋಮಶೇಖರ.ಬಿ ಅಡ್ವಕೇಟ್ ಕರ್ನಾಟಕ ರಾಷ್ಟ್ರ ಸಮಿತಿ 210, ಪಕ್ಷೇತರರಾದ ಎ.ಕೆ. ಗಣೇಶ್ 609, ಬಿ.ಎಂ.ಪುಷ್ಪ. ವಾಗೀಶಸ್ವಾಮಿ37431, ಮಂಜು ಮಾದಿಗ 192, ಲೋಕೇಶ್.ಪಿ.ಡಿ 586 , ಪಿ.ಆರ್.ಶ್ರೀನಿವಾಸ್ 438, ಸವಿತಾಬಾಯಿ ಮಲ್ಲೇಶನಾಯ್ಕ 532 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಕೆ.ಎಸ್.ಬಸವಂತಪ್ಪ ಇವರು ಸಮೀಪ ಸ್ಪರ್ಧಿ ಪಕ್ಷೇತರರಾದ ಬಿ.ಎಂ.ಪುಷ್ಪ ವಾಗೀಶಸ್ವಾಮಿ ಇವರಿಗಿಂತ 32915 ಹೆಚ್ಚಿನ ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಚನ್ನಗಿರಿ
ಆದಿಲ್ ಖಾನ್ ಎಸ್.ಕೆ. ಆಮ್ ಆದ್ಮಿ ಪಾರ್ಟಿ245 , ತೇಜಸ್ವಿ ವಿ.ಪಟೇಲ್ ಜೆಡಿಎಸ್ 1216, ಪ್ರವೀಣ.ಹೆಚ್ ಬಿಎಸ್ಪಿ 523, ಬಸವರಾಜು ವಿ.ಶಿವಗಂಗ ಕಾಂಗ್ರೆಸ್ 78263, ಹೆಚ್. ಎಸ್.ಶಿವಕುಮಾರ್ ಬಿಜೆಪಿ 21467, ಚಂದ್ರಶೇಖರ ಚನ್ನಗಿರಿ ಉತ್ತಮ ಪ್ರಜಾಕೀಯ ಪಾರ್ಟಿ1017 , ದೋಣಿಹಳ್ಳಿ ಮಂಜುನಾಥಗೌಡ್ರು ಕರ್ನಾಟಕ ರಾಷ್ಟç ಸಮಿತಿ 197, ಎಂ.ರೂಪ ಕಗತೂರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 183, ಪಕ್ಷೇತರರಾದ ಕುಬೇಂದ್ರಸ್ವಾಮಿ.ಟಿ 437, ಮಾಡಾಳು ಮಲ್ಲಿಕಾರ್ಜುನ 61828, ಹರೀಶ್ ಹಳ್ಳಿ 470 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಬಸವರಾಜು ವಿ.ಶಿವಗಂಗ ಇವರು ಸಮೀಪದ ಪಕ್ಷೇತರ ಅಭ್ಯರ್ಥಿ ಮಾಡಾಳು ಮಲ್ಲಿಕಾರ್ಜುನ್ ಇವರಿಗಿಂತ 16435 ಹೆಚ್ಚಿನ ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಹೊನ್ನಾಳಿ
ಡಿ.ಜಿ.ಶಾಂತನಗೌಡ ಕಾಂಗ್ರೆಸ್ 92392, ಎಂ.ಪಿ.ರೇಣುಕಾಚಾರ್ಯ ಬಿಜೆಪಿ 75832, ಗಣೇಶ ಬಿ.ಎ. ಉತ್ತಮ ಪ್ರಜಾಕೀಯ ಪಾರ್ಟಿ 945, ಕುಂಕೋವ ಕೃಷ್ಣಪ್ಪ ಬಿಎಸ್ಪಿ 349, ನರಸಿಂಹಪ್ಪ. ಕೆ ಆಮ್ ಆದ್ಮಿ 234, ಹನುಮಂತಪ್ಪ ಸೊರಟೂರು ಕರ್ನಾಟಕ ರಾಷ್ಟ್ರ ಸಮಿತಿ 146, ಪಕ್ಷೇತರರಾದ ವಾಸಪ್ಪ.ಎಂ 254, ದೊಡ್ಡೆತ್ತಿನಹಳ್ಳಿ ಚಂದ್ರಶೇಖರಪ್ಪ 236, ಲಕ್ಷ್ಮೀಕಾಂತ ಹೆಚ್.ಟಿ 176 ಮತಗಳನ್ನು ಪಡೆದಿರುವರು. ಕಾಂಗ್ರೆಸ್ ಪಕ್ಷದ ಡಿ.ಜಿ.ಶಾಂತನಗೌಡ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ರೇಣುಕಾಚಾರ್ಯ ಇವರಿಗಿಂತ 17560 ಮತಗಳನ್ನು ಹೆಚ್ಚಿಗೆ ಪಡೆದು ಜಯಗಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

