ದಿನದ ಸುದ್ದಿ
ದಾವಣಗೆರೆ – ಹರಿಹರ ನಗರಾಭಿವೃದ್ದಿ ಪ್ರಾಧಿಕಾರ 2022-23ನೇ ಸಾಲಿನ ಆಯ-ವ್ಯಯ ಸಭೆ ; ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು.
ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ ಆದಾಯದ ಹಾಗೂ 18136.03 ಲಕ್ಷಗಳ ನಿರೀಕ್ಷಿತ ವೆಚ್ಚದ ಅಂದಾಜನ್ನು ಮಂಡಿಸಿದರು.
ಈ ಕೆಳಕಂಡಂತೆ 2022-23ರ ಆಯ-ವ್ಯಯದ ಪ್ರಮುಖ ಅಂಶ
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ವಿವಿಧ ಬ್ಯಾಂಕ್ಗಳಲ್ಲಿ ನಿಶ್ಚಿತ ಠೇವಣಿ ಒಳಗೊಂಡಂತೆ ಪ್ರಸಕ್ತ ಸಾಲಿನಲ್ಲಿನ ಆದಾಯವು ರೂ.18258.76 ಲಕ್ಷಗಳು ಬರುವುದಾಗಿ ನಿರೀಕ್ಷಿಸಿರುತ್ತದೆ.
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ಸಾಮಾನ್ಯ ಆಡಳಿತದ ನಿಶ್ಚಿತ ವೆಚ್ಚಗಳನ್ನು ಒಳಗೊಂಡಂತೆ ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ರೂ.18136.03 ಲಕ್ಷಗಳ ವೆಚ್ಚವನ್ನು ವಹಿಸಲು ಉದ್ದೇಶಿಸಲಾಗಿದೆ.
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ರೂ.122.73 ಲಕ್ಷಗಳ ಉಳಿತಾಯದ ಆಯಾವ್ಯಯವನ್ನು ಮಂಡಿಸಲಾಗಿರುತ್ತದೆ.
- 2022-23ನೇ ಸಾಲಿನಲ್ಲಿ ಉದ್ದೇಶಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ವಿವರ
2021-22ನೇ ಸಾಲಿನಲ್ಲಿ ಕೈಗೊಂಡ ಕಾಮಗಾರಿಗಳು, ಕಾಮಗಾರಿಗಳು ಚಾಲ್ತಿಯಲ್ಲಿದ್ದು ಮುಂದುವರೆದ ಕಾಮಗಾರಿಗಳಾಗಿರುವುದರಿಂದ ದಾವಣಗೆರೆ ಹಾಗೂ ಹರಿಹರ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗೆ ಒಟ್ಟು ರೂ.10543.37 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರವು ಪ್ರಸಕ್ತ ಸಾಲಿನಲ್ಲಿ ಕುಂದುವಾಡ ಗ್ರಾಮದಲ್ಲಿ ಅಂದಾಜು 53.00 ಎಕರೆಯಲ್ಲಿ ನೂತನ ವಸತಿ ಬಡಾವಣೆ ನಿರ್ಮಾಣಕ್ಕಾಗಿ 2021-22ನೇ ಸಾಲಿನಲ್ಲಿ ರೂ.6000.00ಲಕ್ಷಗಳನ್ನು ಕಾಯ್ದಿರಿಸಿದ್ದು, ಇದರೊಂದಿಗೆ ಪ್ರಸಕ್ತ ಅವಧಿಯಲ್ಲಿ ರೂ.4000.00 ಲಕ್ಷಗಳನ್ನು ಕಾಯ್ದಿರಿಸಿದ್ದು, ಒಟ್ಟು ರೂ.10,000-00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಬಾತಿ ಕೆರೆಯನ್ನು ಕೆರೆ ಸಂರಕ್ಷಣಾ ಪ್ರಾಧಿಕಾರದ ಅನುಮೋದನೆಯಂತೆ ಅಭಿವೃದ್ಧಿ ಪಡಿಸಿ ಸೌಂದರ್ಯಕರಣಗೊಳಿಸಿ ಹಾಗೂ ಆಕರ್ಷಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ದಿ ಪಡಿಸುವ ಸಲುವಾಗಿ ರೂ.846.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಿದ್ದು, ಈಗ ದರಗಳ ಏರಿಳಿತದಿಂದ 2022-23ನೇ ಸಾಲಿನ ಆಯಾವ್ಯಯದಲ್ಲಿ ರೂ.44.00 ಲಕ್ಷಗಳನ್ನು ಸೇರಿಸಿಕೊಂಡು ಒಟ್ಟು ರೂ.890.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹಾಗೂ ದಾವಣಗೆರೆ ಮಹಾನಗರಕ್ಕೆ ಕುಡಿಯುವ ನೀರಿನ ಜಲ ಮೂಲವಾದ ಟಿ.ವಿ.ಸ್ಟೇಷನ್ ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.275.00 ಲಕ್ಷಗಳನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹೊನ್ನೂರು ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.35.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ದಾ-ಹ ನಗರಾಭಿವೃದ್ಧಿ ಪ್ರಾಧಿಕಾರವು ಮಹಾಯೋಜನೆ ವ್ಯಾಪ್ತಿಯಲ್ಲಿರುವ ಅಂದಾಜು 25.00 ಎಕರೆ ಭೂಮಿಯನ್ನು ಪ್ರಾಧಿಕಾರ ಮಹಾಯೋಜನೆಯಲ್ಲಿ ಉದ್ಯಾನವನಕ್ಕೆ ಕಾಯ್ದಿರಿಸಿರುವ ಜಮೀನುಗಳಲ್ಲಿ ಅಂದಾಜು 25.00 ಎಕರೆ ಜಮೀನನ್ನು ಭೂ ಸ್ವಾಧೀನ/ನೇರ ಖರೀದಿ ಮಾಡಿಕೊಂಡು ದಾವಣಗೆರೆ ನಾಗರೀಕರಿಗೆ ಒಂದು ಬೃಹತ್ ಅತ್ಯುತ್ತಮ ಉದ್ಯಾನವನ್ನು ನಿರ್ಮಿಸುವ ಸಲುವಾಗಿ ರೂ.1050.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಪ್ರಾಧಿಕಾರದ ವಶದಲ್ಲಿರುವ ನಿವೇಶನದಲ್ಲಿ ಅಧಿಕಾರಿ/ನೌಕರರಿಗಾಗಿ ವಸತಿ ಸಮುಚ್ಛಯ ಹಾಗೂ ಅತಿಥಿ ಗೃಹ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಆರ್.ಟಿ.ಓ. ಕಛೇರಿ ಎದುರುಗಡೆಯಲ್ಲಿರುವ ಪ್ರಾಧಿಕಾರದ ಜಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ಪಿ.ಬಿ. ರಸ್ತೆಯ ಡಿ.ಸಿ.ಎಂ. ಟೌನ್ಶಿಫ್ನ ರೈಲ್ವೆ ಅಂಡರ್ ಪಾಸ್ ನಿಂದ ಚಿಂದೋಡಿಲೀಲಾ ರಂಗ ಮಂದಿರದವರೆಗೆ ದ್ವಿಪಥ ರಸ್ತೆಯ ರಸ್ತೆ ವಿಭಜಕದಲ್ಲಿ ಅಲಂಕಾರಿಕ ಕೋನಿಕಲ್ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ರೂ.179.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಧಿಕಾರದ ಮಹಾಯೋಜನೆಯಲ್ಲಿರುವ ಶ್ರೀ ಜಿ. ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆಯು ಪಿ.ಬಿ. ರಸ್ತೆಗೆ ಕೂಡುವ ಶ್ರೀ ಜಿ.ಮಲ್ಲಿಕಾರ್ಜುನ ವೃತ್ತದ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದಿಂದ ನಿರ್ಮಾಣ ಮಾಡಲಾದ ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯ ಸಂಪೂರ್ಣ ಅಭಿವೃದ್ಧಿ ರಸ್ತೆಗಳ ಡಾಂಬರೀಕರಣ, ವೃತ್ತಗಳ ಅಭಿವೃದ್ಧಿ, ಉದ್ಯಾನವನಗಳ ಅಭಿವೃದ್ಧಿ ಮತ್ತು ಸೋಲಾರ್ ದೀಪ ಅಳವಡಿಸಲು, ವಿದ್ಯುತ್ ದೀಪಗಳ ಅಳವಡಿಕೆ, ಕುಡಿಯುವ ನೀರು ಒಳಚರಂಡಿ ಹಾಗೂ ಸ್ವಚ್ಛತೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ರೂ.975.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ-ಹರಿಹರ ಮಹಾಯೋಜನೆ ಪರಿಷ್ಕøತ-2 ತಯಾರಿಕೆಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ಹರಿಹರ ನಗರಕ್ಕೆ ಸಂಬಂಧಿಸಿದಂತೆ ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ರೂ.100.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗನೂರು, ಶಿರಮಗೊಂಡನಹಳ್ಳಿ ಕೆರೆ ಅಭಿವೃದ್ಧಿ ಪಡಿಸುವ ಸಲುವಾಗಿ ರೂ.200.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 10ನೇ ಕ್ರಾಸ್ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 11ನೇ ಕ್ರಾಸ್ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.33 ರಲ್ಲಿ ಬರುವ ದುರ್ಗಾಂಭಿಕಾ ಬಡಾವಣೆಯ ಮುಖ್ಯ ಮತ್ತು ಅಡ್ಡ ರಸ್ತೆ ಹಾಗೂ ಡಾಬಾ ಸ್ಟಾಪ್ ಎದುರಿನ ಮುಖ್ಯ ರಸ್ತೆಗಳಲ್ಲಿ ಸಿ.ಸಿ ರಸ್ತೆ ಅಭಿವೃದ್ದಿ ಕಾಮಗಾರಿ ಮತ್ತು ನಿಟುವಳ್ಳಿ ಮುಖ್ಯ ರಸ್ತೆಯಲ್ಲಿ ಹದಡಿ ರಸ್ತೆಯಿಂದ ಎಸ್.ಬಿ.ಐ. ಬ್ಯಾಂಕ್ ವರೆಗೂ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗೆ ರೂ.140.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಿಜಯನಗರ ಬಡಾವಣೆಯ 1ನೇ ಮೇನ್, 2ನೇ ಕ್ರಾಸ್ ರಸ್ತೆಯಲ್ಲಿ ಸಿ.ಸಿ. ಚರಂಡಿ ಮತ್ತು ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ನಗರದ ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮೃತಮಯಿ ಶಾಲೆಯ ಪಕ್ಕದಲ್ಲಿರುವ ಆಟದ ಮೈದಾನಕ್ಕೆ ಆವರಣ ಗೋಡೆ ನಿರ್ಮಿಸುವ ಕಾಮಗಾರಿಗೆ ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ನಗರದ ಪಿ.ಬಿ. ರಸ್ತೆಯಿಂದ ಕುಂದುವಾಡ ರಸ್ತೆ ಕೂಡುವ ರಸ್ತೆಯಲ್ಲಿ ಅಡ್ಡಲಾಗಿ ಬಂದಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 28 ಕಸ್ತೂರಿ ಬಾ ಬಡಾವಣೆ ಅಜ್ಜಂಪುರ ಶೆಟ್ರು ಲೇಔಟ್ ನಲ್ಲಿರುವ ರಸ್ತೆಯನ್ನು ಶಿವಪ್ಪ ಸರ್ಕಲ್ನಿಂದ ನಿಟುವಳ್ಳಿಗೆ ಹೋಗುವ ರಸ್ತೆಯಿಂದ ಕೆ.ಬಿ. ಬಡಾವಣೆಗೆ ಹೋಗುವ ರಸ್ತೆಯ ವರೆಗೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.23.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 33ರ ಸರಸ್ವತಿ ನಗರ ಬಿ ಬ್ಲಾಕ್ನಲ್ಲಿ ಮನೆ ನಂ: 780/83/2ರ ಮುಂಭಾಗದ ರಸ್ತೆ ಹಾಗೂ ಪಂಚಮುಖಿ ಆಂಜನೇಯ ದೇವಸ್ಥಾನದ ಮುಂಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.27.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 33 ಸರಸ್ವತಿ ನಗರ ಬಿ ಬ್ಲಾಕ್ 9ನೇ ಕ್ರಾಸ್ನಲ್ಲಿ ಕೆ.ಎಸ್.ಎಸ್. ಕಾಲೇಜು ಹತ್ತಿರ ಇರುವ ಪಾರ್ಕ್ ಅಭಿವೃದ್ಧಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 13 ಶ್ರೀ ಡಿ.ದೇವರಾಜ ಕ್ವಾಟರ್ಸ್ ಹತ್ತಿರ ಇರುವ ಮುಖ್ಯ ರಸ್ತೆಯಲ್ಲಿ ಬೇತೂರು ಮುಖ್ಯ ರಸ್ತೆಯಿಂದ ಇಂದಿರಾ ನಗರ, ಎ.ಕೆ. ಹಟ್ಟಿಯವರೆಗೂ ಸಿ.ಸಿ. ರಸ್ತೆ ನಿರ್ಮಿಸಿ ಎರಡು ಬದಿಯಲ್ಲಿ ಸಿ.ಸಿ. ಚರಂಡಿ ನಿರ್ಮಿಸಿ ಪಾದಚಾರಿ ರಸ್ತೆ ನಿರ್ಮಿಸುವ ಕಾಮಗಾರಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮರ್ ಜವಾನ್ ಉದ್ಯಾನವನದಲ್ಲಿ ಬಯಲು ವೇದಿಕೆ ಮುಂಭಾಗದಲ್ಲಿ ಪೇವರ್ ಅಳವಡಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗಾಗಿ ರೂ.8.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ವಾರ್ಡ್ ನಂ: 29 ಆನಗೋಡು ಹೋಟೇಲ್ ನಿಂದ ಡಿ.ಸಿ.ಎಂ. ಕಾಂಪೌಂಡ್ ವರೆಗೂ (ಕೊಟ್ಟೂರೇಶ್ವರ ಬಡಾವಣೆ) ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.30.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ಬಾಡಾ ಕ್ರಾಸ್ನಿಂದ ಬೇತೂರು ಗ್ರಾಮದವರೆಗೆ ರಿಂಗ್ ರಸ್ತೆ ನಿರ್ಮಿಸಲು ಡಿ.ಪಿ.ಆರ್. ತಯಾರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
ಸಭೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್, ದೂಡಾ ಸದಸ್ಯರುಗಳಾದ ಮಾರುತಿರಾವ್ ಘಾಟ್ಗೆ, ಲಕ್ಷ್ಮಣ, ಬಾತಿ ಚಂದ್ರಶೇಖರ್, ಗೌರಮ್ಮ.ವಿ.ಪಾಟೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೆ.ಹೆಚ್.ಶ್ರೀಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಮತ್ತು ಲೆಕ್ಕಪರಿಶೋಧನಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

