ದಿನದ ಸುದ್ದಿ
ದಾವಣಗೆರೆ | ಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರ ಉದ್ಘಾಟನೆ
ಸುದ್ದಿದಿನ,ದಾವಣಗೆರೆ : ಅಪೌಷ್ಠಿಕತೆ ಮಕ್ಕಳನ್ನು ಗುರುತಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರ) ಕಳುಹಿಸಿಕೊಡಬೇಕು ಇಲ್ಲಿ ಮಕ್ಕಳಿಗೆ ಜೀರ್ಣವಾಗುವಂತ ಪೌಷ್ಠಿಕ ಆಹಾರವನ್ನು ಸಿದ್ಧಪಡಿಸಿ ಮಕ್ಕಳಿಗೆ ನೀಡಲಾಗುತ್ತದೆ. ಎಂದು ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಶಾಸಕರು ಪ್ರೋ.ಲಿಂಗಣ್ಣ, ಕರೆ ನೀಡಿದರು.
ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಮಾಯಕೊಂಡ ಗ್ರಾಮದ ಸುತ್ತಮುತ್ತಲಿನ ಅಂಗನವಾಡಿ
ಕೇಂದ್ರದವರು ಇದರಿಂದ ಅಪೌಷ್ಠಿಕತೆಯನ್ನು ಹೋಗಲಾಡಿಸಿ ಮಕ್ಕಳ ಉತ್ತಮ ಬೆಳಗವಣಿಗೆಗೆ ಸಹಕಾರವನ್ನು ನೀಡಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ನಾಗರಾಜ್ ಮಾತನಾಡಿ ತಾಲ್ಲೂಕು ಕೇಂದ್ರದಲ್ಲಿ ಬಿಟ್ಟರೆ, ಮಾಯಕೊಂಡದಲ್ಲಿ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರದ ಉದ್ಘಾಟನೆಯಿಂದ ಸುತ್ತಮುತ್ತಲಿನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಅಪೌಷ್ಠಿಕ ಮಕ್ಕಳನ್ನು ಗುರುತಿಸಿ (0-5 ವರ್ಷದ ಮಕ್ಕಳು) ಮಕ್ಕಳ ಆರೋಗ್ಯ
ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿಕೊಡಬೇಕೆಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್.ಎಲ್.ಡಿ. ಇವರು ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಯಕೊಂಡ ಸುತ್ತಮುತ್ತಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಕೊಡಗೂರು, ನಲ್ಕುಂದ, ನೇರ್ಲಿಗೆ, ಹುಚ್ಚವ್ವನಹಳ್ಳಿ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಲು ಸೂಚಿಸಿದರು
ಈ ಕಾರ್ಯಕ್ರಮದಲ್ಲಿ ಆರ್.ಸಿ.ಹೆಚ್.ಅಧಿಕಾರಿ ಡಾ. ಮೀನಾಕ್ಷಿ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದ್ರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಯಕೊಂಡ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿಗಳು ಡಾ.ಸುರೇಶ್ಬಾರ್ಕಿ , ಜಿಲ್ಲಾ ಆರೋಗ್ಯ ಮೇಲ್ಚಿಚಾರಕರು ಹೊರಕೇರಿ.ಎಂ.ವಿ., ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಉಮಾಪತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಾಯತ್ರಮ್ಮ, ಪ್ರಾ.ಆ.ಕೇಂದ್ರ ಮಾಯಕೊಂಡ, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


