ದಿನದ ಸುದ್ದಿ
ದಾವಣಗೆರೆ | ಕೆಎಸ್ಆರ್ಟಿಸಿ ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನೆ
ಸುದ್ದಿದಿನ,ದಾವಣಗೆರೆ : ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಹಿನ್ನೆಲೆ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕವಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಸೇರಿದಂತೆ ಗಣ್ಯರು ಸೋಮವಾರದಂದು ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಂಸದರಾದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ, ಪ್ರೊ.ಲಿಂಗಣ್ಣ, ಜಿ.ಪಂ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ.
ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ.ವೀರೇಶ್, ಸಾರಿಗೆ ಮಂಡಳಿ ನಿರ್ದೇಶಕರುಗಳಾದ ರಾಜು, ಆರುಂಡಿ ನಾಗರಾಜ್, ರುದ್ರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಎಸ್ಪಿ ರಾಜೀವ್ ಮುಖ್ಯ ಇಂಜಿನಿಯರ್ ಜಗದೀಶ್ ಚಂದ್ರ ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243