Connect with us

ದಿನದ ಸುದ್ದಿ

ದಾವಣಗೆರೆ | ಗ್ರಾಮಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು ; ಜನತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿರುವುದೇ ಕಾರಣ | ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

Published

on

ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಈಗಾಗಲೇ ಸೋಂಕು ನಿವಾರಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಆದೇಶದ ಮೆರೆಗೆ ಮೇ.31 ರವರೆಗೆ ಸಂಪೂರ್ಣ ಲಾಕ್‍ಡೌನ್ ವಿಸ್ತರಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಸೋಮವಾರ ಜಗಳೂರಿನ ತರಳಬಾಳು ಸಮುದಾಯದ ಭವನದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 2ನೇ ಅಲೆಯ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಮೇ.23 ರಂದು ಜಗಳೂರು ತಾಲ್ಲೂಕಿನಲ್ಲಿ ಒಟ್ಟು 852 ಪಾಸಿಟಿವ್ ಪ್ರಕರಣಗಳಿದ್ದು, 390 ಜನರು ಗುಣಮುಖರಾಗಿದ್ದಾರೆ.

167 ಜನರು ಹೋಮ್ ಐಸೋಲೇಷನ್ ಅಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಒಟ್ಟು 462 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಡಿ.ಸಿ.ಹೆಚ್.ಸಿ ಯಲ್ಲಿ 37 ಜನ, ಮೆದಗಿನಕೆರೆ ಕೋವಿಡ್ ಕೇರ್ ಸೆಂಟರ್‍ನಲ್ಲಿ 85 ಜನ, ಜಗಳೂರು ಟೌನ್ (ಲಿಂಗನಹಳ್ಳಿ ರಸ್ತೆ) ಕೋವಿಡ್ ಕೇರ್ ಸೆಂಟರ್‍ನಲ್ಲಿ 9 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ ಒಟ್ಟು 9 ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಕೋವಿಡ್-19 2ನೇ ಅಲೆಯಲ್ಲಿ ಹೆಚ್ಚಾಗಿ ಗ್ರಾಮಾಂತರ ಭಾಗಗಳಲ್ಲೇ ಸೋಂಕು ಹೆಚ್ಚಾಗಿ ಹರಡುತ್ತಿರುವುದಕ್ಕೆ ಕಾರಣವೆಂದರೆ ಗ್ರಾಮದ ಜನರು ನಿಯಮಗಳನ್ನು ಮೀರಿ ಸಭೆ, ಸಮಾರಂಭ, ಮದುವೆ, ಜಾತ್ರೆಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜಲ್ಲಿಕಟ್ಟೆ, ದೇವಸ್ಥಾನದ ಆವರಣಗಳಲ್ಲಿ ಗುಂಪುಗಟ್ಟಿ ಸೇರುವುದಲ್ಲದೇ, ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿಬಿಟ್ಟಿದ್ದಾರೆ.

ಗ್ರಾಮಗಳಲ್ಲಿ ಬಹುತೇಕರು ಮಾಸ್ಕ್ ಧರಿಸುವುದೇ ಇಲ್ಲ. ಧರಿಸಿದರು ಬೇಕಾಬಿಟ್ಟಿ ಹಾಕಿಕೊಳ್ಳುತ್ತಾರೆ.
ಬೆಂಗಳೂರಿನಿಂದ ಬರುವವರು ಅಗತ್ಯ ಮಾಹಿತಿಗಳನ್ನು ಕೊಡದೇ ಮನೆ ಸೇರುತ್ತಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದೇ ಸ್ಥಳೀಯ ವೈದ್ಯರ ಬಳಿಯೋ ಅಥವಾ ಮೆಡಿಕಲ್ ಶಾಪ್‍ಗಳಲ್ಲೋ ಬೇಕಾದ ಮಾತ್ರೆಗಳನ್ನು ತೆಗೆದುಕೊಂಡು ನುಂಗುತ್ತಾರೆ.

ಇದನ್ನೂ ಓದಿ | ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಎಸ್ಪಿ ಅರ್ಜುನ್ ಅಮಾನತು ; ಸಿಐಡಿ ತನಿಖೆಗೆ ಆದೇಶ

ಸೋಂಕಿನ ಪ್ರಮಾಣ ಹೆಚ್ಚಾಗಿ ಆಕ್ಸಿಜನ್ ಸ್ಯಾಚುರೇಷನ್ ಲೆವೆಲ್ 50-70 ಕ್ಕೆ ಬಂದಾಗ ಬೆಡ್ ಬೇಕು, ವೆಂಟಿಲೇಟರ್ ಬೇಕು ಎಂದು ಕೊನೆಯ ಹಂತದಲ್ಲಿ ಆಸ್ಪತ್ರೆಗಳಿಗೆ ಬರುತ್ತಾರೆ. ಇದರಿಂದ ಜೀವ ಉಳಿಸಲು ಕಷ್ಟವಾಗುತ್ತಿದೆ ಎಂದರು.
ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿದ್ದು, ಯಾರು ಕೂಡ ಮನೆಯಲ್ಲಿ ಚಿಕಿತ್ಸೆ ಪಡೆಯದೇ ಕೋವಿಡ್ ಕೇರ್ ಸೆಂಟರ್‍ಗೆ ಬರಬೇಕು.

ಮನೆಯಲ್ಲೆ ಚಿಕಿತ್ಸೆ ಪಡೆಯುವ ಸೋಂಕಿತನಿಗೆ ಪ್ರತ್ಯೇಕ ಕೊಠಡಿ ಮತ್ತು ಶೌಚಾಲಯ ಇರಬೇಕು. ಹಾಗೂ ಸೋಂಕಿತ ಮುಟ್ಟಿದ ವಸ್ತುಗಳನ್ನು ಮನೆಯ ಇತರೆ ಸದಸ್ಯರು ಮುಟ್ಟಬಾರದು. ಇಂತಹದೊಂದು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವವರು ಮಾತ್ರ ಮನೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.

ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದ್ದು ಗ್ರಾಮೀಣ ಜನರ ಬದುಕು ದುಸ್ತರವಾಗಿದೆ. ಜಗಳೂರಿನಂತಹ ತಾಲ್ಲೂಕಿನಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು ಅವರು ಜೀವನ ನಡೆಸಲು ನರೇಗ ಕೆಲಸ ಆಧಾರವಾಗಿದೆ. ಆದ್ದರಿಂದ ಉದ್ಯೋಗ ಖಾತ್ರಿಯೊಳಗೆ ಹೆಚ್ಚು ಕೆಲಸ ಕೊಡಿ ಎಂದು ಸಿಇಒಗೆ ಸೂಚನೆ ನೀಡಿದರು.

ಕೊರೊನಾ ಹಿನ್ನೆಲೆಯಲ್ಲಿ ಗುಂಪು ಕೆಲಸ ನಿಲ್ಲಿಸಿ ವೈಯಕ್ತಿಕ ನೆಲೆಯಲ್ಲಿ ಉದ್ಯೋಗ ಕೈಗೊಳ್ಳಲು ಅವಕಾಶ ನೀಡಿದರೆ ಅವರ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕೃಷಿ ಕೂಲಿಕಾರರು ಅಗತ್ಯ ಕೃಷಿ ಪರಿಕರ ಖರೀದಿಸಲು ಹಾಗೂ ಕೃಷಿ ಚಟುವಟಿಕೆಗಳಿಗೂ ಅವಕಾಶ ಮಾಡಿಕೊಡಿ. ಲಾಕ್‍ಡೌನ್ ಇದ್ದರು ಕೃಷಿ ಚಟುವಟಿಕೆದಾರರಿಗೆ ರಿಯಾಯಿತಿ ಇದ್ದು ಪೊಲೀಸರು ಈ ವರ್ಗದ ಜನರಿಗೆ ಸಹಕಾರ ನೀಡಬೇಕು ಎಂದರು.

ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಜಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು ಪರಿಸ್ಥಿತಿ ಹತೋಟಿಯಲ್ಲಿದೆ. ಇದು ಹೀಗೆ ಮುಂದುವರಿಯಲಿ. ತಾಲ್ಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್‍ಗಳಿದ್ದು ಅಗತ್ಯವಿರುವಷ್ಟು ಆಕ್ಸಿಜನ್ ಬಳಸಿ. ಅನಗತ್ಯವಾಗಿ ಆಕ್ಸಿಜನ್‍ನ್ನು ರೋಗಿಗಳಿಗೆ ಪೂರೈಕೆ ಮಾಡಬೇಡಿ. ಈಗಾಗಲೇ ತಾಲ್ಲೂಕಿನ 13 ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಿದ್ದು, ಹೋಮ್ ಐಸೋಲೆಷನ್‍ನ್ನು ಸಂಪೂರ್ಣ ನಿಲ್ಲಿಸಿ ಸೋಂಕಿತರನ್ನು ಈ ಕೇಂದ್ರಗಳಿಗೆ ದಾಖಲಿಸಿ ಎಂದ ಅವರು ಹೆಚ್ಚು ಆಕ್ಸಿಜನ್ ಬಳಸಿದರೆ ಬ್ಲಾಕ್ ಫಂಗಸ್ ಬರುತ್ತದೆ ಎಂದು ವಿಜ್ಞಾನಗಳು ಹೇಳಿದ್ದಾರೆ ಎಂದರು.

ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಮಾತನಾಡಿ, ಸರ್ಕಾರದಿಂದ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 50 ಲಕ್ಷ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಕೊರೊನಾ ತಡೆಗೆ ವಿವಿಧ ಪರಿಕರಗಳ ಖರೀದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಸುಮಾರು ರೂ.1 ಕೋಟಿ ಅನುದಾನ ನೀಡಲಾಗುವುದು ಎಂದ ಅವರು, ತಾಲ್ಲೂಕಿನ ಕಾಟನಹಳ್ಳಿ ಗ್ರಾಮದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಜೀವ ಅಮೂಲ್ಯವಾದರಿಂದ ಕಾಪಾಡಲು ಎಲ್ಲರೂ ಪ್ರಯತ್ನ ಮಾಡೋಣ ಎಂದು ತಿಳಿಸಿದರು.

ನನಗೆ ಕೊರೊನಾ ಸೋಂಕು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅನೇಕರು ರಾಮಚಂದ್ರ ಹೋಗಿಬಿಟ್ಟ, ವೆಂಟಿಲೇಟರ್ ಗೆ ಹಾಕಿದ್ದಾರೆ. ಗುಂಡಿ ಸಿದ್ಧವಾಗಿದೆ ಎಂದು ಕೆಲವರು ಟೀಕೆ ಮಾಡಿದರು. ಆದರೆ ನನಗೆ ಅವರ ಟೀಕೆಗಳೇ ಶ್ರೀರಕ್ಷೆ ಎಂದ ಅವರು, ನಾನು ಆಸ್ಪತ್ರೆಯಲ್ಲಿದ್ದರೆ ನನ್ನ ಮನಸ್ಸು ಜಗಳೂರಿನಲ್ಲಿತ್ತು. ಬಹಳ ಮಂದಿ ಆತ್ಮೀಯರು ಅಗಲಿದ್ದಾರೆ. ಅಗಲಿದ್ದ ಕುಟುಂಬದವರೊಂದಿಗೆ ನಾವಿದ್ದೇವೆ, ಅವರ ಯೋಗಕ್ಷೇಮ ನೋಡುತ್ತೇನೆ ಎಂದು ಭಾವುಕರಾಗಿ ನುಡಿದರು. ಪಕ್ಷಾತೀತವಾಗಿ ಕಲ್ಲೆರುದ್ರೇಶ್ ತಮ್ಮ ಜತೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕೋವಿಡ್-19 ಮೊದಲನೇ ಅಲೆ ಪ್ರಾರಂಭವಾದಾಗ ದಾವಣಗೆರೆಯಲ್ಲಿ ಒಂದೆರೆಡು ಕೇಸ್‍ಗಳು ಇತ್ತು. ಮೇ ತಿಂಗಳಿಂದ ಸೆಪ್ಟೆಂಬರ್ ವರೆಗೂ ಹೆಚ್ಚು ಪ್ರಕರಣಗಳು ದಾಖಲಾದವು. ಅಕ್ಟೋಬರ್ ತಿಂಗಳಲ್ಲಿ ಪ್ರಕರಣಗಳು ಕಡಿಮೆ ಆಗುತ್ತಾ ಬಂದವು. ಈ ಹಂತದಲ್ಲಿ ಕೋವಿಡ್ ಕುರಿತಾದ ಮಾಹಿತಿ ಕೊರತೆ ಇತ್ತು. ಆದರೆ 2ನೇ ಅಲೆಯಲ್ಲಿ ಮಾಹಿತಿ ಹಾಗೂ ಅನುಭವಗಳಡೆರೆಡು ಇದ್ದು ಸೋಂಕಿನ ವಿರುದ್ಧ ಹೋರಾಡಲು ಜನರು ಸ್ಪಂದನೆ ಕೊಡುತ್ತಿಲ್ಲ ಎಂದು ಬೇಸರಿಸಿದರು.

ಮೊದಲ ಹಂತದಲ್ಲಿ ಕೆಮ್ಮು, ಶೀತ, ಜ್ವರ, ತಲೆನೋವು ಬರುವ ಮೂಲಕ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿತ್ತು, 2ನೇ ಅಲೆಯಲ್ಲಿ ಈ ಲಕ್ಷಣಗಳೊಂದಿಗೆ ತಲೆನೋವು, ಕಣ್ಣು ಕೆಂಪಾಗುವುದು, ಉಸಿರಾಟದ ತೊಂದರೆ, ಅಲರ್ಜಿ ಸೇರಿದಂತೆ ಇನ್ನಿತರ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ಜನರು ನಿರ್ಲಕ್ಷ್ಯ ಮಾಡದೇ ಮೊದಲ ಹಂತದಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡರೆ ಜೀವ ಉಳಿಸುವ ಎಲ್ಲಾ ಸಾಧ್ಯತೆಗಳಿವೆ. ಆದರೆ ಜನರು ಕೊನೆಯ ಹಂತದಲ್ಲಿ ಸೋಂಕು ಶ್ವಾಸಕೋಶ ತಲುಪಿ ಉಸಿರಾಟದ ತೊಂದರೆಯಾದ ಬಳಿಕ ಬರುತ್ತಿದ್ದಾರೆ. ಇದರಿಂದ ಚಿಕಿತ್ಸೆ ನೀಡುವುದು ಕಷ್ಟವಾಗುತ್ತದೆ ಎಂದರು.

ಪ್ರತೀ ಗ್ರಾಮ ಪಂಚಾಯಿತಿ ಪಟ್ಟಣದಲ್ಲಿ ಹಾಗೂ ಸ್ಥಳೀಯ ಟಾಸ್ಕ್ ಪೋರ್ಸ್ ಸಮಿತಿಯವರು ಒಂದೊಂದು ಥೀಮ್ ಇಟ್ಟುಕೊಂಡು ಜನರಲ್ಲಿ ಕೊರೊನಾ ಸೋಂಕು ಹಾಗೂ ವ್ಯಾಕ್ಸಿನೇಷನ್ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಈ ವೇಳೆ ಶಾಸಕ ರಾಮಚಂದ್ರಪ್ಪ ಜಗಳೂರಿನಲ್ಲಿ ಬ್ಲಾಕ್ ಫಂಗಸ್ ಗೆ ತುತ್ತಾದವರು ಎಷ್ಟು ಜನ ಇದ್ದಾರೆ? ಇದಕ್ಕೆ ಬೇಕಾದ ಔಷಧಿಗಳು ಸಿಗುತ್ತಿದ್ದೇಯೇ ಎಂದು ಪ್ರಶ್ನಿಸಿದರು.

ಇದಕ್ಕೆ ಡಾ.ರಾಘವನ್ ಜಗಳೂರು ತಾಲ್ಲೂಕಿನಲ್ಲಿ ಇಲ್ಲಿಯವೆರಗೂ ಯಾರಿಗೂ ಬ್ಲಾಕ್ ಫಂಗಸ್ ಬಂದಿಲ್ಲ. ಈ ಖಾಯಿಲೆ ಬಂದವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುತ್ತಿದ್ದು, ಬೇಕಾದ ಔಷಧಿಗಳನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ಡಿಹೆಚ್‍ಒ ಡಾ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸೇರಿದಂತೆ ತಾಲ್ಲೂಕು ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending