ದಿನದ ಸುದ್ದಿ
ದಾವಣಗೆರೆ ಲಾಕ್ಡೌನ್ ಸಡಿಲಿಕೆ | ಏನಿರುತ್ತೆ ; ಏನಿರಲ್ಲ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ , ಮಿಸ್ ಮಾಡ್ದೆ ಓದಿ
ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಸೋಂಕಿನ ಮೂರು ಪ್ರಕರಣದಿಂದಾಗಿ ಆರೇಂಜ್ ಜೋನ್ನಲ್ಲಿದ್ದ ದಾವಣಗೆರೆ ಜಿಲ್ಲೆ ಸೋಮವಾರ ಗ್ರೀನ್ ಜೋನ್ಗೆ ಸೇರ್ಪಡೆಯಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಇಲಾಖೆಗಳಿಗೆ ಮತ್ತು ಆಯ್ದ ಕೆಲವು ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಕೆಲ ನಿಬಂಧನೆ ಹಾಗೂ ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೀನ್ ಜೋನ್ ಘೋಷಣೆಯ ಉದ್ದೇಶ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಆರ್ಥಿಕ ಚಟುವಟಿಕೆಗಳು ನಡೆಯಲು ಅವಕಾಶ ಕಲ್ಪಿಸುವುದಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಹವಾನಿಯಂತ್ರಿತ ಸಲಕರಣೆ ಉಪಯೋಗಿಸದೆ ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಬಹುದಾಗಿದೆ ಎಂದರು.
ನಿಯಮದ ಪ್ರಕಾರ ಕೊನೆಯ ಪಾಸಿಟಿವ್ ಪ್ರಕರಣ ವರದಿ ನಂತರದ 28 ದಿನಗಳ ಅವಧಿಯಲ್ಲಿ ಯಾವುದೇ ಪ್ರಕರಣ ವರದಿಯಾಗದಿದ್ದರೆ ಅದನ್ನು ಗ್ರೀನ್ ಜೋನ್ಗೆ ಸೇರಿಸಲಾಗುತ್ತದೆ. ಮಾ.27ರ ನಂತರ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ಜಿಲ್ಲೆಯೂ ಗ್ರೀನ್ ಜೋನ್ ಎಂದು ಘೋಷಿಸಲಾಗಿದೆ ಎಂದರು.
ಏನಿರುತ್ತೆ
- ಮುನ್ಸಿಪಲ್ ಕಾರ್ಪೋರೇಷನ್ ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿನ ಕೈಗಾರಿಕೆಗಳು ಕಾರ್ಯ ಆರಂಭಿಸಬಹುದಾಗಿದೆ. ಎಸ್ಇಝಡ್ ನಿರ್ಮಾಣದ ಏರಿಯಾದಲ್ಲಿನ ಎಲ್ಲಾ ಕೈಗಾರಿಕೆ ಅವಕಾಶ ನೀಡಲಾಗಿದೆ.
- ಪಸ್ತಕ-ಲೇಖನ ಸಾಮಗ್ರಿ ಅಂಗಡಿ, ಕನ್ನಡಕದ ಅಂಗಡಿ, ಜೆರಾಕ್ಸ್, ಹಾರ್ಡ್ವೇರ್, ಸ್ಟೀಲ್, ಫ್ಲೈವುಡ್, ಪೈಂಟ್, ಇಟ್ಟಂಗಿಭಟ್ಟಿ, ರೈಸ್ ಮಿಲ್, ಫೋಟೊ ಸ್ಟುಡಿಯೋ, ಆಯಿಲ್ ಮಿಲ್, ಚಪ್ಪಲಿ ಅಂಗಡಿ, ಮರಳು ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಪ್ಲಾಸಿಕ್, ಟಾರ್ಪಲ್ ಅಂಗಡಿ ಹಾಗೂ ಆಟೋ ಮೊಬೈಲ್ಸ್ ಅಂಗಡಿ, ಪ್ರಿಟಿಂಗ್ ಪ್ರೆಸ್ಗಳಿಗೆ ಅವಕಾಶವಿದೆ.
- ಮದುವೆ ಸಮಾರಂಭ ಸೇರಿದಂತೆ ಕೌಟುಂಬಿಕ ಕಾರ್ಯಕ್ರಮಗಳನ್ನು ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು, ಗರಿಷ್ಠ 20 ಜನ ಮೀರದಂತೆ ಕಾರ್ಯಕ್ರಮಗಳನ್ನು ಮಾಡಬಹುದಾಗಿದೆ.
- ಕೃಷಿ, ಮಾರುಕಟ್ಟೆ, ಸಬ್ ರಿಜಿಸ್ಟಾರ್ ಆಫೀಸ್, ಎಪಿಎಂಸಿ ಮಾರುಕಟ್ಟೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲೆಯಲ್ಲಿ ವಿವಿಧ ರೀತಿಯ ಅಂಗಡಿಗಳು ಸೇರಿದಂತೆ ಒಟ್ಟು 13 ಸಾವಿರ ಅಂಗಡಿಗಳು ನೊಂದಣಿ ಮಾಡಿವೆ. ಇನ್ನಿಳಿದ 3 ಸಾವಿರ ಅಂಗಡಿಗಳು ನೊಂದಣಿ ಆಗಬೇಕಿದೆ ಎಂದರು.
ಏನಿರಲ್ಲ
- ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ. ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಆಟೋ, ಟ್ಯಾಕ್ಸಿ, ಬಸ್ಗಳ ಯಾವುದೇ ಓಡಾಟ ನಿಷೇಧಿಸಲಾಗಿದೆ. ಜನರು ಗುಂಪು ಗುಂಪಾಗಿ ಜನರು ಸೇರುವಂತಿಲ್ಲ. ಸಡಿಲಿಕೆಯ ಅಂಗಡಿಗಳಲ್ಲಿ ಶುಚಿತ್ವ ಕಾಪಾಡಿಕೊಂಡು ಸಮಾಜಿಕ ಅಂತರ ಕಾಯ್ದುಕೊಳ್ಳಬೇಕು.
- ಇಲ್ಲದಿದ್ದರೆ ಅವಘಡ ನಿರ್ಮಾಣವಾಗುತ್ತೆ ಎನ್ನುವ ಸೂಚನೆ ಕಂಡುಬಂದರೆ ಅಂಗಡಿಗಳನ್ನು ನಿರ್ದಿಷ್ಟ ಅವಧಿಯವರೆಗೆ ಸೀಲ್ ಮಾಡಲಾಗುವುದು. ಜೊತೆಗೆ ಬಿಗ್ ಬಜಾರ್ ಇನ್ನುಳಿದ ಇಂಡಸ್ಟ್ರೀಯಲ್ ಉದ್ಯಮಗಳಲ್ಲಿ ಎಸಿ ಬಳಸುವಂತಿಲ್ಲ. ಎಸಿ ಬಳಸಿದರೆ ಅವರ ಉದ್ದಿಮೆ ಪರವಾನಗಿ ರದ್ದು ಮಾಡಲಾಗುವುದು ಎಂದರು.ಬೀಡಿ, ಸಿಗರೇಟ್, ತಂಬಾಕು ಉತ್ಪನ್ನ, ಮದ್ಯವನ್ನು ಮೇ 3 ರವರೆಗೆ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಸಾರ್ವಜನಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ.
- ಜನರಿಗೆ ಆರ್ಥಿಕ ವ್ಯವಸ್ಥೆಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಸಾರ್ವಜನಿಕವಾಗಿ ಮೇ 3 ರವರೆಗೆ ಗುಂಪು ಸೇರುವಂತಿಲ್ಲ. ನಗರದಲ್ಲಿ ಯಾವುದೆ ಜವಳಿ ಹಾಗೂ ಜ್ಯುವೆಲ್ಲರಿ ಅಂಗಡಿ ತೆರೆಯಲು ಅವಕಾಶವಿರುವುದಿಲ್ಲ.
- ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಕರ್ನಾಟಕ ಪೊಲೀಸ್ ಆಕ್ಟ್ ಕಾಯ್ದೆ ಅನ್ವಯ ಶಿಕ್ಷೆಗೆ ಒಳಗಾಗುತ್ತಾರೆ. ಇಂತಹ ಅಪರಾಧಗಳಿಗೆ ದಂಡ ವಿಧಿಸಲಾಗುವುದು.
- ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಪಾನಿಪುರಿ, ಎಗ್ರೈಸ್, ಗೋಬಿ ಅಂಗಡಿಗಳನ್ನು ತೆರೆಯಲು ಅವಕಾಶವಿರುವುದಿಲ್ಲ.
- ಸಾರ್ವಜನಿಕ ಸ್ಥಳಗಳಲ್ಲಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯವಹಾರ ಮಾಡುವುದು ಕಂಡು ಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡಿ, ಶಿಸ್ತು ಕ್ರಮ ಜರುಗಿಸಲಾಗುವುದು.
ಈ ವ್ಯಕ್ತಿಗಳ ಸಂಚಾರಕ್ಕೆ ಅನುಮತಿ ಇದೆ
ವೈದ್ಯಕೀಯ ಮತ್ತು ಪಶು ವೈದ್ಯಕೀಯ ಸೇರಿದಂತೆ ತುರ್ತು ಸೇವೆಯ ಖಾಸಗಿ ವಾಹನಗಳು ಮತ್ತು ಅಗತ್ಯ ಸೇವೆಗಳು, ಸಾಮಗ್ರಿಗಳನ್ನು ಒದಗಿಸುವ ಹಾಗೂ ಕರ್ತವ್ಯಕ್ಕೆ ತೆರಳುವವರಿಗೆ ಸಂಬಂಧಿಸಿದಂತೆ ದ್ವಿಚಕ್ರ ವಾಹನದಲ್ಲಿ ಒಬ್ಬ ಸವಾರರು ಮತ್ತು ನಾಲ್ಕು ಚಕ್ರದ ವಾಹನಗಳಲ್ಲಿ ವಾಹನ ಚಾಲಕರೊಂದಿಗೆ ಒಬ್ಬರಿಗೆ ಮಾತ್ರ ಸಂಚರಿಸಲು ಅವಕಾಶವಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
ನಿಮ್ಮ ಆರೋಗ್ಯದ ಕೀಲಿ ಕೈ ನಿಮ್ಮ ಕೈಯಲ್ಲಿದೆ
ಜಿಲ್ಲೆಯೂ ಸ್ಮಾರ್ಟ್ ಸಿಟಿಯಾಗಿರುವುದರಿಂದ ಜಿಲ್ಲೆಯ ಜನರು ಸ್ಮಾಟ್ ಆಗಿ ವರ್ತಿಸಬೇಕು. ಅಂಗಡಿಗಳಲ್ಲಿ ಗದ್ದಲ ಇರುವ ಸಮಯದಲ್ಲಿ ಹೋಗದೆ, ಅನುಕೂಲ ಮಾಡಿಕೊಂಡು ಅವಶ್ಯಕತೆಗೆ ಅನುಗುಣವಾಗಿ ಹೋಗಬೇಕು. ಆ ಮೂಲಕ “ನಿಮ್ಮ ಆರೋಗ್ಯದ ಕೀಲಿ ಕೈ ನಿಮ್ಮ ಕೈಯಲ್ಲಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.
144 ಸೆಕ್ಷನ್ ಮುಂದುವರೆಯಲಿದೆ
ಗ್ರೀನ್ ಜೋನ್ನಿಂದ ಸಾರ್ವಜನಿಕರು ಮೈಮರೆಯುಂತಿಲ್ಲ. ಮುಂದೇನಾದರೂ ಹೊಸ ಪ್ರಕರಣ ವರದಿಯಾದಲ್ಲಿ ಮತ್ತೆ ವಲಯ ವ್ಯತ್ಯಾಸವಾಗಲಿದೆ. ಸೇಫ್ ಜೋನ್ಗೆ ಬಂದಿರುವ ಸ್ಥಿತಿ ಉಳಿಸಿಕೊಳ್ಳುವ ಹೊಣೆಗಾರಿಕೆ ನಮ್ಮೇಲ್ಲರ ಮೇಲಿದೆ. ಹಾಗಾಗಿ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದಜ್ಜಿ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
-
ದಿನದ ಸುದ್ದಿ1 day agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ1 day agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 hours agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

