Connect with us

ದಿನದ ಸುದ್ದಿ

ದಾವಣಗೆರೆ ಲಾಕ್‍ಡೌನ್ ಸಡಿಲಿಕೆ | ಏನಿರುತ್ತೆ ; ಏನಿರಲ್ಲ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ , ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಸೋಂಕಿನ ಮೂರು ಪ್ರಕರಣದಿಂದಾಗಿ ಆರೇಂಜ್ ಜೋನ್‍ನಲ್ಲಿದ್ದ ದಾವಣಗೆರೆ ಜಿಲ್ಲೆ ಸೋಮವಾರ ಗ್ರೀನ್ ಜೋನ್‍ಗೆ ಸೇರ್ಪಡೆಯಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಇಲಾಖೆಗಳಿಗೆ ಮತ್ತು ಆಯ್ದ ಕೆಲವು ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಕೆಲ ನಿಬಂಧನೆ ಹಾಗೂ ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೀನ್ ಜೋನ್ ಘೋಷಣೆಯ ಉದ್ದೇಶ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಆರ್ಥಿಕ ಚಟುವಟಿಕೆಗಳು ನಡೆಯಲು ಅವಕಾಶ ಕಲ್ಪಿಸುವುದಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಹವಾನಿಯಂತ್ರಿತ ಸಲಕರಣೆ ಉಪಯೋಗಿಸದೆ ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಬಹುದಾಗಿದೆ ಎಂದರು.

ನಿಯಮದ ಪ್ರಕಾರ ಕೊನೆಯ ಪಾಸಿಟಿವ್ ಪ್ರಕರಣ ವರದಿ ನಂತರದ 28 ದಿನಗಳ ಅವಧಿಯಲ್ಲಿ ಯಾವುದೇ ಪ್ರಕರಣ ವರದಿಯಾಗದಿದ್ದರೆ ಅದನ್ನು ಗ್ರೀನ್ ಜೋನ್‍ಗೆ ಸೇರಿಸಲಾಗುತ್ತದೆ. ಮಾ.27ರ ನಂತರ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ಜಿಲ್ಲೆಯೂ ಗ್ರೀನ್ ಜೋನ್ ಎಂದು ಘೋಷಿಸಲಾಗಿದೆ ಎಂದರು.

ಏನಿರುತ್ತೆ

  1. ಮುನ್ಸಿಪಲ್ ಕಾರ್ಪೋರೇಷನ್ ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿನ ಕೈಗಾರಿಕೆಗಳು ಕಾರ್ಯ ಆರಂಭಿಸಬಹುದಾಗಿದೆ. ಎಸ್‍ಇಝಡ್ ನಿರ್ಮಾಣದ ಏರಿಯಾದಲ್ಲಿನ ಎಲ್ಲಾ ಕೈಗಾರಿಕೆ ಅವಕಾಶ ನೀಡಲಾಗಿದೆ.
  2. ಪಸ್ತಕ-ಲೇಖನ ಸಾಮಗ್ರಿ ಅಂಗಡಿ, ಕನ್ನಡಕದ ಅಂಗಡಿ, ಜೆರಾಕ್ಸ್, ಹಾರ್ಡ್‍ವೇರ್, ಸ್ಟೀಲ್, ಫ್ಲೈವುಡ್, ಪೈಂಟ್, ಇಟ್ಟಂಗಿಭಟ್ಟಿ, ರೈಸ್ ಮಿಲ್, ಫೋಟೊ ಸ್ಟುಡಿಯೋ, ಆಯಿಲ್ ಮಿಲ್, ಚಪ್ಪಲಿ ಅಂಗಡಿ, ಮರಳು ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಪ್ಲಾಸಿಕ್, ಟಾರ್ಪಲ್ ಅಂಗಡಿ ಹಾಗೂ ಆಟೋ ಮೊಬೈಲ್ಸ್ ಅಂಗಡಿ, ಪ್ರಿಟಿಂಗ್ ಪ್ರೆಸ್‍ಗಳಿಗೆ ಅವಕಾಶವಿದೆ.
  3. ಮದುವೆ ಸಮಾರಂಭ ಸೇರಿದಂತೆ ಕೌಟುಂಬಿಕ ಕಾರ್ಯಕ್ರಮಗಳನ್ನು ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು, ಗರಿಷ್ಠ 20 ಜನ ಮೀರದಂತೆ ಕಾರ್ಯಕ್ರಮಗಳನ್ನು ಮಾಡಬಹುದಾಗಿದೆ.
  4. ಕೃಷಿ, ಮಾರುಕಟ್ಟೆ, ಸಬ್ ರಿಜಿಸ್ಟಾರ್ ಆಫೀಸ್, ಎಪಿಎಂಸಿ ಮಾರುಕಟ್ಟೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲೆಯಲ್ಲಿ ವಿವಿಧ ರೀತಿಯ ಅಂಗಡಿಗಳು ಸೇರಿದಂತೆ ಒಟ್ಟು 13 ಸಾವಿರ ಅಂಗಡಿಗಳು ನೊಂದಣಿ ಮಾಡಿವೆ. ಇನ್ನಿಳಿದ 3 ಸಾವಿರ ಅಂಗಡಿಗಳು ನೊಂದಣಿ ಆಗಬೇಕಿದೆ ಎಂದರು.

ಏನಿರಲ್ಲ

  1. ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ. ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಆಟೋ, ಟ್ಯಾಕ್ಸಿ, ಬಸ್‍ಗಳ ಯಾವುದೇ ಓಡಾಟ ನಿಷೇಧಿಸಲಾಗಿದೆ. ಜನರು ಗುಂಪು ಗುಂಪಾಗಿ ಜನರು ಸೇರುವಂತಿಲ್ಲ. ಸಡಿಲಿಕೆಯ ಅಂಗಡಿಗಳಲ್ಲಿ ಶುಚಿತ್ವ ಕಾಪಾಡಿಕೊಂಡು ಸಮಾಜಿಕ ಅಂತರ ಕಾಯ್ದುಕೊಳ್ಳಬೇಕು.
  2. ಇಲ್ಲದಿದ್ದರೆ ಅವಘಡ ನಿರ್ಮಾಣವಾಗುತ್ತೆ ಎನ್ನುವ ಸೂಚನೆ ಕಂಡುಬಂದರೆ ಅಂಗಡಿಗಳನ್ನು ನಿರ್ದಿಷ್ಟ ಅವಧಿಯವರೆಗೆ ಸೀಲ್ ಮಾಡಲಾಗುವುದು. ಜೊತೆಗೆ ಬಿಗ್ ಬಜಾರ್ ಇನ್ನುಳಿದ ಇಂಡಸ್ಟ್ರೀಯಲ್ ಉದ್ಯಮಗಳಲ್ಲಿ ಎಸಿ ಬಳಸುವಂತಿಲ್ಲ. ಎಸಿ ಬಳಸಿದರೆ ಅವರ ಉದ್ದಿಮೆ ಪರವಾನಗಿ ರದ್ದು ಮಾಡಲಾಗುವುದು ಎಂದರು.ಬೀಡಿ, ಸಿಗರೇಟ್, ತಂಬಾಕು ಉತ್ಪನ್ನ, ಮದ್ಯವನ್ನು ಮೇ 3 ರವರೆಗೆ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್‍ಗಳಲ್ಲಿ ಸಾರ್ವಜನಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. 
  3. ಜನರಿಗೆ ಆರ್ಥಿಕ ವ್ಯವಸ್ಥೆಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಸಾರ್ವಜನಿಕವಾಗಿ ಮೇ 3 ರವರೆಗೆ ಗುಂಪು ಸೇರುವಂತಿಲ್ಲ. ನಗರದಲ್ಲಿ ಯಾವುದೆ ಜವಳಿ ಹಾಗೂ ಜ್ಯುವೆಲ್ಲರಿ ಅಂಗಡಿ ತೆರೆಯಲು ಅವಕಾಶವಿರುವುದಿಲ್ಲ.
  4. ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಕರ್ನಾಟಕ ಪೊಲೀಸ್ ಆಕ್ಟ್ ಕಾಯ್ದೆ ಅನ್ವಯ ಶಿಕ್ಷೆಗೆ ಒಳಗಾಗುತ್ತಾರೆ. ಇಂತಹ ಅಪರಾಧಗಳಿಗೆ ದಂಡ ವಿಧಿಸಲಾಗುವುದು.
  5. ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಪಾನಿಪುರಿ, ಎಗ್‍ರೈಸ್, ಗೋಬಿ ಅಂಗಡಿಗಳನ್ನು ತೆರೆಯಲು ಅವಕಾಶವಿರುವುದಿಲ್ಲ.
  6. ಸಾರ್ವಜನಿಕ ಸ್ಥಳಗಳಲ್ಲಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯವಹಾರ ಮಾಡುವುದು ಕಂಡು ಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡಿ, ಶಿಸ್ತು ಕ್ರಮ ಜರುಗಿಸಲಾಗುವುದು.

ಈ ವ್ಯಕ್ತಿಗಳ ಸಂಚಾರಕ್ಕೆ ಅನುಮತಿ ಇದೆ

ವೈದ್ಯಕೀಯ ಮತ್ತು ಪಶು ವೈದ್ಯಕೀಯ ಸೇರಿದಂತೆ ತುರ್ತು ಸೇವೆಯ ಖಾಸಗಿ ವಾಹನಗಳು ಮತ್ತು ಅಗತ್ಯ ಸೇವೆಗಳು, ಸಾಮಗ್ರಿಗಳನ್ನು ಒದಗಿಸುವ ಹಾಗೂ ಕರ್ತವ್ಯಕ್ಕೆ ತೆರಳುವವರಿಗೆ ಸಂಬಂಧಿಸಿದಂತೆ ದ್ವಿಚಕ್ರ ವಾಹನದಲ್ಲಿ ಒಬ್ಬ ಸವಾರರು ಮತ್ತು ನಾಲ್ಕು ಚಕ್ರದ ವಾಹನಗಳಲ್ಲಿ ವಾಹನ ಚಾಲಕರೊಂದಿಗೆ ಒಬ್ಬರಿಗೆ ಮಾತ್ರ ಸಂಚರಿಸಲು ಅವಕಾಶವಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.

ನಿಮ್ಮ ಆರೋಗ್ಯದ ಕೀಲಿ ಕೈ ನಿಮ್ಮ ಕೈಯಲ್ಲಿದೆ

ಜಿಲ್ಲೆಯೂ ಸ್ಮಾರ್ಟ್ ಸಿಟಿಯಾಗಿರುವುದರಿಂದ ಜಿಲ್ಲೆಯ ಜನರು ಸ್ಮಾಟ್ ಆಗಿ ವರ್ತಿಸಬೇಕು. ಅಂಗಡಿಗಳಲ್ಲಿ ಗದ್ದಲ ಇರುವ ಸಮಯದಲ್ಲಿ ಹೋಗದೆ, ಅನುಕೂಲ ಮಾಡಿಕೊಂಡು ಅವಶ್ಯಕತೆಗೆ ಅನುಗುಣವಾಗಿ ಹೋಗಬೇಕು. ಆ ಮೂಲಕ “ನಿಮ್ಮ ಆರೋಗ್ಯದ ಕೀಲಿ ಕೈ ನಿಮ್ಮ ಕೈಯಲ್ಲಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

144 ಸೆಕ್ಷನ್ ಮುಂದುವರೆಯಲಿದೆ

ಗ್ರೀನ್ ಜೋನ್‍ನಿಂದ ಸಾರ್ವಜನಿಕರು ಮೈಮರೆಯುಂತಿಲ್ಲ. ಮುಂದೇನಾದರೂ ಹೊಸ ಪ್ರಕರಣ ವರದಿಯಾದಲ್ಲಿ ಮತ್ತೆ ವಲಯ ವ್ಯತ್ಯಾಸವಾಗಲಿದೆ. ಸೇಫ್ ಜೋನ್‍ಗೆ ಬಂದಿರುವ ಸ್ಥಿತಿ ಉಳಿಸಿಕೊಳ್ಳುವ ಹೊಣೆಗಾರಿಕೆ ನಮ್ಮೇಲ್ಲರ ಮೇಲಿದೆ. ಹಾಗಾಗಿ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದಜ್ಜಿ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending