Connect with us

ರಾಜಕೀಯ

ಯಾರಿಗೆ ಕರಗುತ್ತೆ ಬೆಣ್ಣೆನಗರಿ..? : ಬೆಣ್ಣೆನಗರಿಯಲ್ಲಿ ರಂಗೇರಿದ ರಣಕಣ..!

Published

on

ಸುದ್ದಿದಿನ, ದಾವಣಗೆರೆ:ಧ್ಯ ಕರ್ನಾಟಕದ ಸ್ಟಾರ್ ಕ್ಷೇತ್ರವಾದ ದಾವಣಗೆರೆಯಲ್ಲಿ ರಣಬಿಸಿಲಿನೊಂದಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಲೋಕಾ ಸಮರವೂ ದಿನೇದಿನೇ ರಂಗೇರುತ್ತಿದೆ.

ಕಳೆದ ಚುನಾವಣೆಗಳಲ್ಲಿನ ಕುತೂಹಲವೇ ಈ ಬಾರಿಯೂ ಮುಂದುವರೆದಿದ್ದು, ಹೆಸರಿಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳಿದ್ದರೂ ಕಾಂಗ್ರೆಸ್ ನ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಮಧ್ಯೆಯೇ ನೇರ ಪೈಪೋಟಿ. ಹೀಗಾಗಿ, ಎರಡು ಪಕ್ಷಗಳ ಅಭ್ಯರ್ಥಿಗಳು ನೇರವಾಗಿ ಜಿದ್ದಾಜಿದ್ದಿಗೆ ಬಿದ್ದಿದ್ದಾರೆ.

ಈಗಾಗಲೇ ಸತತ ಮೂರು ಲೋಕಸಭಾ ಚುನಾವಣೆಯಲ್ಲೂ ಕಮಲ ಅರಳಿಸಿದ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್ ಇದು ನನ್ನ ಕೊನೆ ಚುನಾವಣೆ. ಇದೊಮ್ಮೆ ನನ್ನನ್ನು ಗೆಲ್ಲಿಸಿ ಬಿಡಿ ಎಂದು ಪ್ರಚಾರ ಶುರು ಮಾಡಿಕೊಂಡಿದ್ದಾರೆ. ಇತ್ತ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೆಚ್. ಬಿ.ಮಂಜಪ್ಪ ಸಾಮಾಜಿಕ ಜಾಲತಾಣಗಳ ಮೊರೆ ಹೋಗುತ್ತಿದ್ದಾರೆ. ಈಗಾಗಲೇ ಫೇಸ್‍ಬುಕ್ ಮೂಲಕ ಜನರ ಗಮನ ಸೆಳೆದಿರುವ ಹೆಚ್.ಬಿ.ಮಂಜುನಾಥ್ ದಾವಣಗೆರೆ ಅಭಿವೃದ್ದಿಗೆ ತನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮಂಜಪ್ಪನವರ ಪರ ಅಲೆ ದಿನೇ ದಿನೇ ಹೆಚ್ಚುತ್ತಿದೆ. ಒಬ್ಬ ಸಾಮಾನ್ಯ ಕೃಷಿಕನನ್ನು ಗೆಲುವಿನ ದಡ ಮುಟ್ಟಿಸುವುದು ನಮ್ಮೆಲ್ಲರ ಕರ್ತವ್ಯ..ಗುರಿ ಮುಟ್ಟುವವರೆಗೂ ಮೈ ಮರೆಯದಿರೋಣ…ನಿಮ್ಮ ಮತ ಮಂಜಪ್ಪನವರಿಗೆ…💚

Posted by ನಿಮ್ಮ ಹೆಚ್ ಬಿ ಮಂಜಪ್ಪ on Wednesday, 10 April 2019

ಹಾಲಿ ಬಿಜೆಪಿ ವಶದಲ್ಲಿರುವ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈವರೆಗೂ ಒಟ್ಟು 11 ಬಾರಿ ಲೋಕಸಭಾ ಚುನಾವಣೆ ನಡೆದಿದ್ದು, ಎಂದಿನಂತೆ ಸಾಂಪ್ರದಾಯಿಕ ಎದುರಾಳಿ ಪಕ್ಷಗಳ ನಡುವೆಯೇ ಈ ಬಾರಿಯೂ ಮಹಾ ಸಮರ ಆರಂಭಗೊಂಡಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮೂರು ಬಾರಿ ಪರಾಭವಗೊಂಡಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಈ ಬಾರಿ ಲೋಕ‌ಕಣದಿಂದ ಹಿಂದೆ‌ ಸರಿದಿದ್ದು, ಹೆಚ್.ಬಿ.ಮಂಜಪ್ಪ ಅವರನ್ನು ಕಣಕ್ಕಿಳಿಸಿದೆ.

ಅಂದಹಾಗೆ 2004, 2009, 2014ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಲ್ಲಿಕಾರ್ಜುನ್ ಈ ಬಾರಿ‌ಹಲವು ವೈಯಕ್ತಿಕ ಕಾರಣಗಳನ್ನು ನೀಡಿ ರಣಕಣದಿಂದ ಹಿಂದೆ‌ ಸರಿದು ಕಿಂಗ್ ಮೇಕರ್ ಆಗಲಿದ್ದಾರಾ ನೋಡ ಬೇಕಿದೆ.

2009ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಪಡೆದಿದ್ದ ಮಲ್ಲಿಕಾರ್ಜುನ್, ಕೇವಲ 2 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದರು. 2014ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕ ಅಭ್ಯರ್ಥಿ ಹಾಕಿದ್ದರಿಂದ ಜೆಡಿಎಸ್‍ನ ಮಹಿಮಾ ಜೆ ಪಟೇಲ್ 46,911 ಮತ ಪಡೆದು, ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ 5,01,287 ಮತ ಪಡೆದುಕೊಂಡು 17607 ಮತಗಳ ಅಂತರದಿಂದ ಪುನಃ ಸೋಲು ಕಂಡರು.

ದಾವಣಗೆರೆ ಲೋಕಸಭಾ ಕ್ಷೇತ್ರವು ಒಟ್ಟು 8 ವಿಧಾನಸಭಾ ಕ್ಷೇತ್ರ ಹೊಂದಿದ್ದು, ದಾವಣಗೆರೆ ಉತ್ತರ ಕ್ಷೇತ್ರ, ಜಗಳೂರು, ಹರಪನಹಳ್ಳಿ, ಚನ್ನಗಿರಿ, ಹೊನ್ನಾಳಿ ಹಾಗೂ ಮಾಯಕೊಂಡ ಕ್ಷೇತ್ರಗಳಲ್ಲಿ ಹಾಗೂ ಆರು ಕ್ಷೇತ್ರಗಳ ಜೊತೆಗೆ 36 ಸದಸ್ಯರ ಬಲ ಹೊಂದಿರುವ ದಾವಣಗೆರೆ ಜಿಪಂ ಸಹ ಬಿಜೆಪಿ ವಶದಲ್ಲಿದೆ. ಇನ್ನುಳಿದ ದಾವಣಗೆರೆ ದಕ್ಷಿಣ ಹಾಗೂ ಹರಿಹರ ಕ್ಷೇತ್ರಗಳು ಮಾತ್ರ ಕಾಂಗ್ರೆಸ್ ತೆಕ್ಕೆಯಲ್ಲಿವೆ.

ವಿಕಾಸದ ಹಾದಿಯಲ್ಲಿ ನನ್ನ ದಾವಣಗೆರೆ!ಕಮಲ ಅರಳಿಸಿ!ಅಭಿವೃದ್ಧಿ ಬೆಳಗಿಸಿ!

Posted by GM Siddeshwara on Wednesday, 10 April 2019

ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿ ತಾಲ್ಲೂಕಿನ ಮಾದನಭಾವಿ, ದಾನಿಹಳ್ಳಿ, ಕೊಡಚಗೊಂಡನಹಳ್ಳಿ, ದೊಡ್ಡೆತ್ತಿನಹಳ್ಳಿ,…

Posted by GM Siddeshwara on Wednesday, 10 April 2019

ಒಟ್ಟು ಮತದಾರರು ಎಷ್ಟು?

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 8,14,413 ಪುರುಷ, 7,96,874 ಮಹಿಳಾ, 110 ತೃತೀಯಲಿಂಗಿ ಹಾಗೂ 568 ಜನ ಸೇವಾ ಮತದಾರರು ಸೇರಿದಂತೆ ಒಟ್ಟು 16,11,965 ಮತದಾರರಿದ್ದು, 2014ರ ಚುನಾವಣೆಗಿಂತ ಈ ಬಾರಿ 1.18 ಲಕ್ಷ ಹೊಸ ಮತದಾರರು ಕ್ಷೇತ್ರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಆದ್ದರಿಂದ ಈ ಹೊಸ ಮತದಾರರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ, ತಮ್ಮ ಪಕ್ಷಗಳ ವಿಚಾರಧಾರೆ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡುತ್ತಾ ಮತ ಬೇಟೆ ಶುರುವಿಟ್ಟುಕೊಂಡಿದ್ದಾರೆ.

ಬಿಜೆಪಿ ಗೆಲವಿಗೆ ಕಾರಣಗಳು

ಕುಗ್ಗದ ಪ್ರಧಾನಿ ಮೋದಿ ಬಲ
ಜಿಲ್ಲೆಯಲ್ಲಿ ಸತತ 3 ಬಾರಿ ಬಿಜೆಪಿಗೆ ಗೆಲವು
ಜಿಲ್ಲೆಯ 6 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿರುವುದು
ಕೇಂದ್ರ ಬಿಜೆಪಿಯಿಂದಾದ ಅಭಿವೃದ್ಧಿ ಕಾರ್ಯಗಳು

ಕಾಂಗ್ರೆಸ್ ಗೆಲವಿಗೆ ಕಾರಣಗಳು

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಲ
ಎಸ್‍ಎಸ್‍ಎಂ ಸತತ ಮೂರು ಬಾರಿ ಸೋತಿರುವ ಅನುಕಂಪ, ಹಾಗೂ ಈ ಬಾರಿ‌ ಹಿಂದುಳಿದ‌ ವರ್ಗದ (ಕುರುಬ) ವ್ಯಕ್ತಿಯೊಬ್ಬರಿಗೆ ಟಿಕೆಟ್ ನೀಡಿರುವುದು. ರಾಜ್ಯದಲ್ಲಿ ಸರ್ಕಾರ, ಅಭಿವೃದ್ಧಿ ಕಾರ್ಯಗಳು
ಅಹಿಂದ ಮತಗಳ ಕ್ರೂಡಿಕರಣ.

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ3 days ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ2 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

ದಿನದ ಸುದ್ದಿ2 weeks ago

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು...

ದಿನದ ಸುದ್ದಿ2 weeks ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ3 weeks ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ1 month ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ1 month ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ1 month ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ1 month ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

Trending