ರಾಜಕೀಯ
ಯಾರಿಗೆ ಕರಗುತ್ತೆ ಬೆಣ್ಣೆನಗರಿ..? : ಬೆಣ್ಣೆನಗರಿಯಲ್ಲಿ ರಂಗೇರಿದ ರಣಕಣ..!
ಸುದ್ದಿದಿನ, ದಾವಣಗೆರೆ:ಮಧ್ಯ ಕರ್ನಾಟಕದ ಸ್ಟಾರ್ ಕ್ಷೇತ್ರವಾದ ದಾವಣಗೆರೆಯಲ್ಲಿ ರಣಬಿಸಿಲಿನೊಂದಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಲೋಕಾ ಸಮರವೂ ದಿನೇದಿನೇ ರಂಗೇರುತ್ತಿದೆ.
ಕಳೆದ ಚುನಾವಣೆಗಳಲ್ಲಿನ ಕುತೂಹಲವೇ ಈ ಬಾರಿಯೂ ಮುಂದುವರೆದಿದ್ದು, ಹೆಸರಿಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳಿದ್ದರೂ ಕಾಂಗ್ರೆಸ್ ನ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಮಧ್ಯೆಯೇ ನೇರ ಪೈಪೋಟಿ. ಹೀಗಾಗಿ, ಎರಡು ಪಕ್ಷಗಳ ಅಭ್ಯರ್ಥಿಗಳು ನೇರವಾಗಿ ಜಿದ್ದಾಜಿದ್ದಿಗೆ ಬಿದ್ದಿದ್ದಾರೆ.
ಈಗಾಗಲೇ ಸತತ ಮೂರು ಲೋಕಸಭಾ ಚುನಾವಣೆಯಲ್ಲೂ ಕಮಲ ಅರಳಿಸಿದ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್ ಇದು ನನ್ನ ಕೊನೆ ಚುನಾವಣೆ. ಇದೊಮ್ಮೆ ನನ್ನನ್ನು ಗೆಲ್ಲಿಸಿ ಬಿಡಿ ಎಂದು ಪ್ರಚಾರ ಶುರು ಮಾಡಿಕೊಂಡಿದ್ದಾರೆ. ಇತ್ತ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೆಚ್. ಬಿ.ಮಂಜಪ್ಪ ಸಾಮಾಜಿಕ ಜಾಲತಾಣಗಳ ಮೊರೆ ಹೋಗುತ್ತಿದ್ದಾರೆ. ಈಗಾಗಲೇ ಫೇಸ್ಬುಕ್ ಮೂಲಕ ಜನರ ಗಮನ ಸೆಳೆದಿರುವ ಹೆಚ್.ಬಿ.ಮಂಜುನಾಥ್ ದಾವಣಗೆರೆ ಅಭಿವೃದ್ದಿಗೆ ತನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮಂಜಪ್ಪನವರ ಪರ ಅಲೆ ದಿನೇ ದಿನೇ ಹೆಚ್ಚುತ್ತಿದೆ. ಒಬ್ಬ ಸಾಮಾನ್ಯ ಕೃಷಿಕನನ್ನು ಗೆಲುವಿನ ದಡ ಮುಟ್ಟಿಸುವುದು ನಮ್ಮೆಲ್ಲರ ಕರ್ತವ್ಯ..ಗುರಿ ಮುಟ್ಟುವವರೆಗೂ ಮೈ ಮರೆಯದಿರೋಣ…ನಿಮ್ಮ ಮತ ಮಂಜಪ್ಪನವರಿಗೆ…💚
Posted by ನಿಮ್ಮ ಹೆಚ್ ಬಿ ಮಂಜಪ್ಪ on Wednesday, 10 April 2019
ಹಾಲಿ ಬಿಜೆಪಿ ವಶದಲ್ಲಿರುವ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈವರೆಗೂ ಒಟ್ಟು 11 ಬಾರಿ ಲೋಕಸಭಾ ಚುನಾವಣೆ ನಡೆದಿದ್ದು, ಎಂದಿನಂತೆ ಸಾಂಪ್ರದಾಯಿಕ ಎದುರಾಳಿ ಪಕ್ಷಗಳ ನಡುವೆಯೇ ಈ ಬಾರಿಯೂ ಮಹಾ ಸಮರ ಆರಂಭಗೊಂಡಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮೂರು ಬಾರಿ ಪರಾಭವಗೊಂಡಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಈ ಬಾರಿ ಲೋಕಕಣದಿಂದ ಹಿಂದೆ ಸರಿದಿದ್ದು, ಹೆಚ್.ಬಿ.ಮಂಜಪ್ಪ ಅವರನ್ನು ಕಣಕ್ಕಿಳಿಸಿದೆ.
ಅಂದಹಾಗೆ 2004, 2009, 2014ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಲ್ಲಿಕಾರ್ಜುನ್ ಈ ಬಾರಿಹಲವು ವೈಯಕ್ತಿಕ ಕಾರಣಗಳನ್ನು ನೀಡಿ ರಣಕಣದಿಂದ ಹಿಂದೆ ಸರಿದು ಕಿಂಗ್ ಮೇಕರ್ ಆಗಲಿದ್ದಾರಾ ನೋಡ ಬೇಕಿದೆ.
2009ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಪಡೆದಿದ್ದ ಮಲ್ಲಿಕಾರ್ಜುನ್, ಕೇವಲ 2 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದರು. 2014ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕ ಅಭ್ಯರ್ಥಿ ಹಾಕಿದ್ದರಿಂದ ಜೆಡಿಎಸ್ನ ಮಹಿಮಾ ಜೆ ಪಟೇಲ್ 46,911 ಮತ ಪಡೆದು, ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ 5,01,287 ಮತ ಪಡೆದುಕೊಂಡು 17607 ಮತಗಳ ಅಂತರದಿಂದ ಪುನಃ ಸೋಲು ಕಂಡರು.
ದಾವಣಗೆರೆ ಲೋಕಸಭಾ ಕ್ಷೇತ್ರವು ಒಟ್ಟು 8 ವಿಧಾನಸಭಾ ಕ್ಷೇತ್ರ ಹೊಂದಿದ್ದು, ದಾವಣಗೆರೆ ಉತ್ತರ ಕ್ಷೇತ್ರ, ಜಗಳೂರು, ಹರಪನಹಳ್ಳಿ, ಚನ್ನಗಿರಿ, ಹೊನ್ನಾಳಿ ಹಾಗೂ ಮಾಯಕೊಂಡ ಕ್ಷೇತ್ರಗಳಲ್ಲಿ ಹಾಗೂ ಆರು ಕ್ಷೇತ್ರಗಳ ಜೊತೆಗೆ 36 ಸದಸ್ಯರ ಬಲ ಹೊಂದಿರುವ ದಾವಣಗೆರೆ ಜಿಪಂ ಸಹ ಬಿಜೆಪಿ ವಶದಲ್ಲಿದೆ. ಇನ್ನುಳಿದ ದಾವಣಗೆರೆ ದಕ್ಷಿಣ ಹಾಗೂ ಹರಿಹರ ಕ್ಷೇತ್ರಗಳು ಮಾತ್ರ ಕಾಂಗ್ರೆಸ್ ತೆಕ್ಕೆಯಲ್ಲಿವೆ.
ವಿಕಾಸದ ಹಾದಿಯಲ್ಲಿ ನನ್ನ ದಾವಣಗೆರೆ!ಕಮಲ ಅರಳಿಸಿ!ಅಭಿವೃದ್ಧಿ ಬೆಳಗಿಸಿ!
Posted by GM Siddeshwara on Wednesday, 10 April 2019
ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿ ತಾಲ್ಲೂಕಿನ ಮಾದನಭಾವಿ, ದಾನಿಹಳ್ಳಿ, ಕೊಡಚಗೊಂಡನಹಳ್ಳಿ, ದೊಡ್ಡೆತ್ತಿನಹಳ್ಳಿ,…
Posted by GM Siddeshwara on Wednesday, 10 April 2019
ಒಟ್ಟು ಮತದಾರರು ಎಷ್ಟು?
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 8,14,413 ಪುರುಷ, 7,96,874 ಮಹಿಳಾ, 110 ತೃತೀಯಲಿಂಗಿ ಹಾಗೂ 568 ಜನ ಸೇವಾ ಮತದಾರರು ಸೇರಿದಂತೆ ಒಟ್ಟು 16,11,965 ಮತದಾರರಿದ್ದು, 2014ರ ಚುನಾವಣೆಗಿಂತ ಈ ಬಾರಿ 1.18 ಲಕ್ಷ ಹೊಸ ಮತದಾರರು ಕ್ಷೇತ್ರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಆದ್ದರಿಂದ ಈ ಹೊಸ ಮತದಾರರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ, ತಮ್ಮ ಪಕ್ಷಗಳ ವಿಚಾರಧಾರೆ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡುತ್ತಾ ಮತ ಬೇಟೆ ಶುರುವಿಟ್ಟುಕೊಂಡಿದ್ದಾರೆ.
ಬಿಜೆಪಿ ಗೆಲವಿಗೆ ಕಾರಣಗಳು
ಕುಗ್ಗದ ಪ್ರಧಾನಿ ಮೋದಿ ಬಲ
ಜಿಲ್ಲೆಯಲ್ಲಿ ಸತತ 3 ಬಾರಿ ಬಿಜೆಪಿಗೆ ಗೆಲವು
ಜಿಲ್ಲೆಯ 6 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿರುವುದು
ಕೇಂದ್ರ ಬಿಜೆಪಿಯಿಂದಾದ ಅಭಿವೃದ್ಧಿ ಕಾರ್ಯಗಳು
ಕಾಂಗ್ರೆಸ್ ಗೆಲವಿಗೆ ಕಾರಣಗಳು
ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಲ
ಎಸ್ಎಸ್ಎಂ ಸತತ ಮೂರು ಬಾರಿ ಸೋತಿರುವ ಅನುಕಂಪ, ಹಾಗೂ ಈ ಬಾರಿ ಹಿಂದುಳಿದ ವರ್ಗದ (ಕುರುಬ) ವ್ಯಕ್ತಿಯೊಬ್ಬರಿಗೆ ಟಿಕೆಟ್ ನೀಡಿರುವುದು. ರಾಜ್ಯದಲ್ಲಿ ಸರ್ಕಾರ, ಅಭಿವೃದ್ಧಿ ಕಾರ್ಯಗಳು
ಅಹಿಂದ ಮತಗಳ ಕ್ರೂಡಿಕರಣ.
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ