ದಿನದ ಸುದ್ದಿ
ದಾವಣಗೆರೆ | ರಾಜ್ಯ ಮಹಿಳಾ ನಿಲಯದಲ್ಲಿ ನವಜೀವನಕ್ಕೆ ಕಾಲಿಟ್ಟ ಮೂರು ಜೋಡಿ : ನವದಂಪತಿಗಳಿಗೆ ಹರಸಿ, ಶುಭ ಕೋರಿದ ಜಿ.ಪಂ. ಅಧ್ಯಕ್ಷೆ, ಡಿಸಿ, ಎಸ್ಪಿ, ಸಿಇಒ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/09/marriage_Davangere.jpg&description=ದಾವಣಗೆರೆ | ರಾಜ್ಯ ಮಹಿಳಾ ನಿಲಯದಲ್ಲಿ ನವಜೀವನಕ್ಕೆ ಕಾಲಿಟ್ಟ ಮೂರು ಜೋಡಿ : ನವದಂಪತಿಗಳಿಗೆ ಹರಸಿ, ಶುಭ ಕೋರಿದ ಜಿ.ಪಂ. ಅಧ್ಯಕ್ಷೆ, ಡಿಸಿ, ಎಸ್ಪಿ, ಸಿಇಒ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/09/marriage_Davangere.jpg&description=ದಾವಣಗೆರೆ | ರಾಜ್ಯ ಮಹಿಳಾ ನಿಲಯದಲ್ಲಿ ನವಜೀವನಕ್ಕೆ ಕಾಲಿಟ್ಟ ಮೂರು ಜೋಡಿ : ನವದಂಪತಿಗಳಿಗೆ ಹರಸಿ, ಶುಭ ಕೋರಿದ ಜಿ.ಪಂ. ಅಧ್ಯಕ್ಷೆ, ಡಿಸಿ, ಎಸ್ಪಿ, ಸಿಇಒ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ದಾವಣಗೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಹಿಳಾ ನಿಲಯದಲ್ಲಿ ಚಟುವಟಿಕೆಗಳು ಎಂದಿನಂತೆ ಸಾಮಾನ್ಯವಾಗಿರದೆ, ಬುಧವಾರದಂದು ಸಂಭ್ರಮ, ಗಡಿಬಿಡಿ ಮನೆಮಾಡಿತ್ತು. ಮಂಗಳವಾದ್ಯ ಮೊಳಗುತ್ತಾ, ಅಲ್ಲೊಂದು ಶುಭ ಸಮಾರಂಭವಿರುವ ಬಗ್ಗೆ ಸಂಕೇತ ನೀಡುತ್ತಿತ್ತು.
ಹೌದು, ಅದು ಶುಭ ಸಮಾರಂಭದ ಸಂದೇಶವೇ ಸರಿ. ಜೊತೆಗೆ ವಿಶೇಷ ಕಾರ್ಯಕ್ರಮದ ಮೆರಗು ಬೇರೆ. ವಿವಿಧ ಕಾರಣಗಳಿಂದ ಶೋಷಣೆಗೆ ಒಳಗಾಗಿ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿದ್ದ ಮೂವರು ಯುವತಿಯರಿಗೆ ಬದುಕು ಕಟ್ಟಿಕೊಡುವ ಶುಭ ಸಮಾರಂಭವದು. 24 ವರ್ಷದ ಮಂಜುಳಾ, 19 ವರ್ಷದ ರೇಷ್ಮಾ ಹಾಗೂ 21 ವರ್ಷದ ಕುಪ್ಪಮ್ಮ ಸೇರಿದಂತೆ ಮೂವರು ಯುವತಿಯರಿಗೆ ಸುಂದರ ಬದುಕು ಕಟ್ಟಿಕೊಡಲು ಮೂವರು ಯುವಕರು ಮುಂದಾಗಿದ್ದು ಮೂವರು ನೂತನ ವಧು ವರರ ಪಾಲಕರು, ಸ್ನೇಹಿತರು, ಬಂಧುಮಿತ್ರರು, ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರೂ ಸೇರಿದಂತೆ ಎಲ್ಲರಲ್ಲೂ ಸಂತಸ ಮೂಡಿಸಿತ್ತು.
ಮಂಜುಳಾ ಇವರನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹೆದ್ಲಿ ಹೆನಿಯಾದ ಉಮೇಶ್ ಹೆಚ್.ಜಿ ಅವರು ಬಾಳ ಸಂಗಾತಿಯಾಗಿ ಸ್ವೀಕರಿಸಿದರೆ, ರೇಷ್ಮಾ ಅವರನ್ನು ಉತ್ತರಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಮುಂಡಗನಮನೆ ಗ್ರಾಮದ ನಾಗರಾಜ ಸುಬ್ರಾಯ ಹೆಗಡೆ ಅವರು ಹಾಗೂ ಕುಪ್ಪಮ್ಮ ಅವರನ್ನು ಶಿರಸಿ ತಾಲ್ಲೂಕಿನ ಶಿವಳ್ಳಿಯ ದಯಾನಂದ ಆರ್. ಭಟ್ಟ ಅವರು ಬಾಳ ಸಂಗಾತಿಯಾಗಿಸಿಕೊಂಡರು.
ವಿಶೇಷ ಕಾರ್ಯಕ್ರಮದಲ್ಲಿ ನವ ಜೀವನಕ್ಕೆ ಕಾಲಿಟ್ಟ ಉಮೇಶ್ ಹೆಚ್.ಜಿ. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿ, ಇಂತಹ ಮಾದರಿ ಕಾರ್ಯಕ್ರಮದಲ್ಲಿ ಮದುವೆಯಾಗುತ್ತಿರುವುದು ಸಂತಸ ತಂದಿದೆ. ಗ್ರಾಮದಲ್ಲಿ ತಾನು ಪುರೋಹಿತ ವೃತ್ತಿ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಸಮುದಾಯದಲ್ಲಿ ಪುರೋಹಿತ ವೃತ್ತಿ, ಕೃಷಿ ಮಾಡುವವರಿಗೆ ಹೆಣ್ಣು ಕೊಡುವುದು ದುಸ್ಥರವಾಗಿದೆ. ಹೀಗಾಗಿ ಸರ್ಕಾರಿ ಯೋಜನೆಯ ಬಗ್ಗೆ ಮಾಹಿತಿ ಪಡೆದು, ನಿಯಮಾನುಸಾರ ರಾಜ್ಯ ಮಹಿಳಾ ನಿಲಯಕ್ಕೆ ಅರ್ಜಿ ಸಲ್ಲಿಸಿ, ಕುಟುಂಬದ ಒಪ್ಪಿಗೆ ಪಡೆದು, ಮದುವೆಯಾಗುತ್ತಿದ್ದೇನೆ ಎಂದರು.
ಇವರಿಗೆ ಬಾಳ ಸಂಗಾತಿಯಾದ ಮಂಜುಳಾ ಪ್ರತಿಕ್ರಿಯಸಿ, ಉಮೇಶ್ ಅವರನ್ನು ಮದುವೆಯಾಗುತ್ತಿರುವುದಕ್ಕೆ ಖುಷಿಯಾಗಿದೆ ಎಂದರು. ಇನ್ನೋರ್ವ ನವ ವರ ದಯಾನಂದ ಭಟ್ಟ ಮಾತನಾಡಿ, ತಾನು ಮಾದರಿ ಜೀವನ ಕಟ್ಟಿಕೊಳ್ಳುವ ಯತ್ನ ಮಾಡಿದ್ದು, ನಿಲಯದ ನಿವಾಸಿಯಾಗಿದ್ದ ರೇಷ್ಮ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮೈಸೂರು ಪೇಟಾ ಧರಿಸಿ, ಮದುವೆ ಸಮಾರಂಭದ ನೇತೃತ್ವ ವಹಿಸಿದ್ದರು. ತಾವೇ ಮುಂದೆ ನಿಂತು ನೂತನ ವಧು ವರರು ವಿವಾಹ ಜೀವನಕ್ಕೆ ಕಾಲಿರಿಸಿದ ಸಂಭ್ರಮಕ್ಕೆ ಸಾಕ್ಷಿಯಾದರು. ಅಲ್ಲದೆ ಅಕ್ಷತೆಯನ್ನು ನವ ದಂಪತಿಗಳಿಗೆ ಹಾಕಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಅವರು ಉಪಸ್ಥಿತರಿದ್ದು, ಮದುವೆ ಸಂಭ್ರಮದ ಸಂತಸ ಹಂಚಿಕೊಂಡು, ನೂತನ ದಂಪತಿಗಳಿಗೆ ಶುಭ ಕೋರಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಅವರು ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿ, ದಾವಣಗೆರೆಯಲ್ಲಿನ ರಾಜ್ಯ ಮಹಿಳಾ ನಿಲಯದ ಸಂಸ್ಥೆ 1977 ರಿಂದಲೂ ಕಾರ್ಯ ನಿರ್ವಹಿಸುತ್ತಿದೆ. ನಾನಾ ಕಾರಣಗಳಿಂದ ಶೋಷಣೆ, ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ, ದೈಹಿಕ ಅಥವಾ ಮಾನಸಿಕವಾಗಿ ತೊಂದರೆ ಎದುರಿಸುವ ಮಹಿಳೆಯರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವುದಲ್ಲದೆ, ಅಂತಹವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಕಾರ್ಯವನ್ನು ಮಹಿಳಾ ನಿಲಯ ನಿರ್ವಹಿಸುತ್ತಿದೆ.
18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ರಕ್ಷಣೆ, ಪೋಷಣೆ, ವೈದ್ಯಕೀಯ ನೆರವು, ಪುನರ್ವಸತಿ ಸೌಲಭ್ಯದ ಅವಕಾಶವಿದೆ. ಸಂಸ್ಥೆಯಲ್ಲಿ ದಾಖಲಾದ ಮಹಿಳೆಯರು ಅಥವಾ ಮಕ್ಕಳು ನ್ಯಾಯಾಲಯಗಳಿಂದ ವಿವಿಧ ಕಾನೂನುಗಳಡಿ ಇತರೆ ಪುನರ್ವಸತಿ ಅಥವಾ ಅಂತಿಮ ತೀರ್ಮಾನದವರೆಗೆ ದಾಖಲಾಗಲು ಅವಕಾಶವಿದೆ. ಸಂಸ್ಥೆಯಲ್ಲಿ ಸದ್ಯ 63 ನಿವಾಸಿಗಳು, 06 ಮಕ್ಕಳು ಆಶ್ರಯ ಪಡೆದಿದ್ದಾರೆ. ಇಂದಿನವರೆಗೆ 39 ವಿವಾಹಗಳು, 07 ನಾಮಕರಣಗಳನ್ನು ಸಂಸ್ಥೆಯಲ್ಲಿ ನೆರವೇರಿಸಲಾಗಿದೆ. ಈ ಹಿಂದೆ ಸಂಸ್ಥೆಯಲ್ಲಿ ವಿವಾಹವಾದ ಮಹಿಳೆಯರು ತಮ್ಮ ಸುಖ ಜೀವನ ನಡೆಸುತ್ತಿದ್ದಾರೆ ಎಂದರು.
ರಾಜ್ಯ ಮಹಿಳಾ ನಿಲಯದ ಅಧೀಕ್ಷಕಿ ಸುಜಾತಾ ಅಲ್ಲದೆ ನಿಲಯದ ಸಿಬ್ಬಂದಿಗಳು ವಿಶೇಷ ಮದುವೆ ಸಮಾರಂಭವನ್ನು ಅಚ್ಚುಕಟ್ಟಾಗಿ ನೆರವೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ6 days agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ6 days agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ3 days agoಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
-
ದಿನದ ಸುದ್ದಿ7 days agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ7 days agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
-
ದಿನದ ಸುದ್ದಿ3 days agoಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

