Connect with us

ದಿನದ ಸುದ್ದಿ

ದಾವಣಗೆರೆ | ಚಿಗಟೇರಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆ : ಚಿಗಟೇರಿ ಆಸ್ಪತ್ರೆಯನ್ನು ಪಿಪಿಇ ಮಾದರಿಯಲ್ಲಿ ಖಾಸಗೀಕರಣಗೊಳಿಸುವ ಸರ್ಕಾರದ ಹುನ್ನಾರದ ವಿರುದ್ಧ ಚಿಗಟೇರಿ ಆಸ್ಪತ್ರೆ ಖಾಸಗೀಕರಣ ವಿರೋಧಿ ಹೋರಾಟ ಸಮಿತಿಯು ಇಂದು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ, ಡಿಸ್ಟಿಕ್ ಸರ್ಜನ್, ದಾವಣಗೆರೆ ಜಿಲ್ಲಾ ಆಸ್ಪತ್ರೆ, ದಾವಣಗೆರೆ ಇವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ನಾಗರೀಕ ಸಮಾಜದಲ್ಲಿ ಬದುಕಲು ಬೇಕಾದ ಕನಿಷ್ಠ ಆರೋಗ್ಯ ವ್ಯವಸ್ಥೆ ದಿನೇ ದಿನೇ ಜನಸಾಮಾನ್ಯನ ಕೈಗೆಟುಕದಂತೆ ದೂರ ಸಾಗುತ್ತಿದೆ. ಖಾಸಗೀಕರಣದ ಪಂಡಂಭೂತ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೂ ದ ಮಾಡುತ್ತಿದೆ. ಅದೇ ನಿಟ್ಟಿನಲ್ಲಿ ನಮ್ಮ ದಾವಣಗೆರೆ ಚಿಗಟೇರಿ ಆಸ್ಪತ್ರೆಯು ಸುತ್ತ-ಮುತ್ತಲನ ಜಿಲ್ಲೆಯ ಎಲ್ಲಾ ವರ್ಗದ ಬಡಜನರಿಗೆ ಉಪಯೋಗಿಯಾಗಿದೆ ಎಂದು ಸಮಿತಿಯು ತಿಳಿಸಿತು.

ಜನಪರವಾಗಿ ಕೆಲಸ ಮಾಡಬೇಕಾದ ಸರ್ಕಾರಗಳು ಬದಲಿಗೆ ಹಣವಂತರ ಸೇವೆಗೆಯುತ್ತಿರುವುದು ಖಂಡನೀಯ ಪ್ರಸ್ತುತ ದಿನಗಳಲ್ಲಿ ಆರೋಗ್ಯ ಸೇವೆ ಹಾಗೂ ”ಕಿತ್ಸಾ ವೆಚ್ಚಗಳು ದಿನೇ ದಿನೇ ದುಬಾರಿಯಾಗುತ್ತಿದ್ದು ಖರ್ಚು ಭರಿಸಲಾಗದೆ ಎಷ್ಟೋ ಜನರು ಸಾವನ್ನಪ್ಪುತ್ತಿದ್ದಾರೆ. ಶ್ರೀ ಸಾಮಾನ್ಯರಿಗೆ ಉಚಿತವಾಗಿ ಸಿಗಬೇಕಿದ್ದ ಆರೋಗ್ಯ ಸೇವೆ ಇಂದು ಹೇಗವಿದ್ದವರಿಗೆ ಮಾತ್ರ ದೊರಕುವಂತಾಗಿದೆ. ನಮ್ಮ ಜಿಲ್ಲಾ ಆಸ್ಪತ್ರೆಯಲ್ಲಿ ದೊರಕುತ್ತಿದ್ದ ಕನಿಷ್ಠ ಆರೋಗ್ಯ ಸೇವೆಯನ್ನು ನಾಶಪಡಿಸಿ ಪಿಪಿಪಿ ಮಾದರಿಯಲ್ಲ ಅಭಿವೃದ್ಧಿ ಉತ್ತಮ ಗುಣಮಟ್ಟದ ಸೇವೆಯೆಂಬ ನೆಲವೊಡ್ಡಿ ಇಡೀ ಆಸ್ಪತ್ರೆಯ ವ್ಯವಸ್ಥೆಯನ್ನೇ ಖಾಸಗಿಯವರ ಕೈಗೊಪ್ಪಿಸುವ ರಾಜಕೀಯ ಕುತಂತ್ರ ಇದರಲ್ಲ ಅಡಗಿದೆ. ಇದನ್ನು ಖಂಡಿತಾ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತು.

ನುರಿತ ವೈದ್ಯರನ್ನು ನೇಮಿಸಿಕೊಳ್ಳದೆ ಖಾಯಂ ಪರೂಪದ ಹುದ್ದೆಗಳಿಗೆ ಖಾಯಂ ಕೆಲಸಗಾರರನ್ನು ನೇಮಕ ಮಾಡಿಕೊಳ್ಳದೇ ಉಚಿತ ರಕ್ತ ಮತ್ತು ಇತರೆ ಪರೀಕ್ಷೆಗಳನ್ನು ಮಾಡಲಾಗದೆ ಅಗತ್ಯವಿರುವ ಎಷಧಿಗಳನ್ನು ಮರೆಸಲಾಗದೆ ಇಡೀ ಆಸ್ಪತ್ರೆಯನ್ನೆ ಒಂದು ದುರ್ನಾತದ ಆಗರವಾಗಿಸಿ ಜನರಿ ಜಿಲ್ಲಾಸ್ಪತ್ರೆಯ ಬಗ್ಗೆ ತಾತ್ಸಾರ ಬರುವಂತೆ ಮಾಡಿ ಈಗ ಅದನ್ನು ಖಾಸಗಿಯವರ ಕೈಗೊಪ್ಪಿಸುವ ದುರ್ಬುದ್ಧಿ ಸರ್ಕಾರಕ್ಕೆ ಬಂದಿದೆ. ಜನತೆ ಇದನ್ನು ತೀವ್ರವಾಗಿ ಖಂಡಿಸಬೇಕು‌ ಎಂದು ಮನವಿ ಮಾಡಿತು.

ಇವೆಲ್ಲವನ್ನು ಒಬ್ಬ ಖಾಸಗಿ ವ್ಯಕ್ತಿ ಅಥವಾ ಖಾಸಗಿ ಸಂಸ್ಥೆಯು ನಿರ್ವಹಿಸಲು ಸಾಧ್ಯ ಎಂದ ಮೇಲೆ ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ..? ಇದು ರಾಜಕೀಯ ಇಚ್ಛಾಶಕ್ತಿಯ ಕೊರತೆಯಷ್ಟೆ: ಜಿಲ್ಲೆಗೆ ವೈದ್ಯಕೀಯ ಕಾಲೇಜು ಬೇಕು ನಿಜ, ಅದು ಕೂಡ 100% ಸರ್ಕಾರಿ ಸ್ವಾಮ್ಯದ ಕಾಲೇಜು ಆಗಬೇಕೆಂದು ದಾವಣಗೆರೆ ಜನತೆ ಒತ್ತಾಯಿಸುತ್ತಿದ್ದೇವೆ. ಈಗ ಪ್ರಸ್ತಾಪದ ಬಂದಿರುವ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಆಸ್ಪತ್ರೆಯನ್ನು ಒಳಗೊಂಡು ಖಾಸಗಿಯವರ ಸಹ ಭಾಗಿತ್ವವನ್ನು ಒಪ್ಪಲಾಗುವುದಿಲ್ಲ. ಇರುವಂತಹ ವ್ಯವಸ್ಥೆಯನ್ನು ಇನ್ನೂ ಸುಸಜ್ಜಿತಗೊಳಿಸಿ ಉತ್ತಮ ಚಿಕಿತ್ಸೆ ಹಾಗೂ ಕಾಯಿಲೆ ಪರೀಕ್ಷೆಗಳನ್ನು ಖಾತ್ರಿಪಡಿಸಿ ಜನಸಾಮಾನ್ಯರಿಗೆ ಕೈಗೆಟಕುವಂತೆ ಉತ್ತಮ ಆರೋಗ್ಯ ಸೇವೆಯನ್ನು ನೀಡಬೇಕೆಂದು ಒತ್ತಾಯಿಸಲಾಯಿತು.

ಸಮಿತಿಯ ಹಕ್ಕೊತ್ತಾಯಗಳು

  1. ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯನ್ನು ಪಿ.ಪಿ.ಪಿ. ಮಾದರಿಯಲ್ಲಿ ಖಾಸಗೀಕರಣ ಮಾಡುವುದನ್ನು ಶಿಕ್ಷಣ ನಿಲ್ಲಿಸಬೇಕು ಸಾಲ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು.
  2. ಜಿಲ್ಲಾ ಆಸ್ಪತ್ರೆಯ ಅಭಿವೃದ್ಧಿಗಾಗಿ ಹೆಚ್ಚು ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು. ಮೇಸರ್ಕಾರಿ ಸ್ವಾಮ್ಯದ ಮೆಡಿಕಲ್ ಕಾಲೇಜನ್ನು ದಾವಣಗೆರೆಗೆ ಕೊಡಲೇಬೇಕು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending