ದಿನದ ಸುದ್ದಿ
ದಾವಣಗೆರೆ | ಚಿಗಟೇರಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
ಸುದ್ದಿದಿನ,ದಾವಣಗೆರೆ : ಚಿಗಟೇರಿ ಆಸ್ಪತ್ರೆಯನ್ನು ಪಿಪಿಇ ಮಾದರಿಯಲ್ಲಿ ಖಾಸಗೀಕರಣಗೊಳಿಸುವ ಸರ್ಕಾರದ ಹುನ್ನಾರದ ವಿರುದ್ಧ ಚಿಗಟೇರಿ ಆಸ್ಪತ್ರೆ ಖಾಸಗೀಕರಣ ವಿರೋಧಿ ಹೋರಾಟ ಸಮಿತಿಯು ಇಂದು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ, ಡಿಸ್ಟಿಕ್ ಸರ್ಜನ್, ದಾವಣಗೆರೆ ಜಿಲ್ಲಾ ಆಸ್ಪತ್ರೆ, ದಾವಣಗೆರೆ ಇವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ನಾಗರೀಕ ಸಮಾಜದಲ್ಲಿ ಬದುಕಲು ಬೇಕಾದ ಕನಿಷ್ಠ ಆರೋಗ್ಯ ವ್ಯವಸ್ಥೆ ದಿನೇ ದಿನೇ ಜನಸಾಮಾನ್ಯನ ಕೈಗೆಟುಕದಂತೆ ದೂರ ಸಾಗುತ್ತಿದೆ. ಖಾಸಗೀಕರಣದ ಪಂಡಂಭೂತ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೂ ದ ಮಾಡುತ್ತಿದೆ. ಅದೇ ನಿಟ್ಟಿನಲ್ಲಿ ನಮ್ಮ ದಾವಣಗೆರೆ ಚಿಗಟೇರಿ ಆಸ್ಪತ್ರೆಯು ಸುತ್ತ-ಮುತ್ತಲನ ಜಿಲ್ಲೆಯ ಎಲ್ಲಾ ವರ್ಗದ ಬಡಜನರಿಗೆ ಉಪಯೋಗಿಯಾಗಿದೆ ಎಂದು ಸಮಿತಿಯು ತಿಳಿಸಿತು.
ಜನಪರವಾಗಿ ಕೆಲಸ ಮಾಡಬೇಕಾದ ಸರ್ಕಾರಗಳು ಬದಲಿಗೆ ಹಣವಂತರ ಸೇವೆಗೆಯುತ್ತಿರುವುದು ಖಂಡನೀಯ ಪ್ರಸ್ತುತ ದಿನಗಳಲ್ಲಿ ಆರೋಗ್ಯ ಸೇವೆ ಹಾಗೂ ”ಕಿತ್ಸಾ ವೆಚ್ಚಗಳು ದಿನೇ ದಿನೇ ದುಬಾರಿಯಾಗುತ್ತಿದ್ದು ಖರ್ಚು ಭರಿಸಲಾಗದೆ ಎಷ್ಟೋ ಜನರು ಸಾವನ್ನಪ್ಪುತ್ತಿದ್ದಾರೆ. ಶ್ರೀ ಸಾಮಾನ್ಯರಿಗೆ ಉಚಿತವಾಗಿ ಸಿಗಬೇಕಿದ್ದ ಆರೋಗ್ಯ ಸೇವೆ ಇಂದು ಹೇಗವಿದ್ದವರಿಗೆ ಮಾತ್ರ ದೊರಕುವಂತಾಗಿದೆ. ನಮ್ಮ ಜಿಲ್ಲಾ ಆಸ್ಪತ್ರೆಯಲ್ಲಿ ದೊರಕುತ್ತಿದ್ದ ಕನಿಷ್ಠ ಆರೋಗ್ಯ ಸೇವೆಯನ್ನು ನಾಶಪಡಿಸಿ ಪಿಪಿಪಿ ಮಾದರಿಯಲ್ಲ ಅಭಿವೃದ್ಧಿ ಉತ್ತಮ ಗುಣಮಟ್ಟದ ಸೇವೆಯೆಂಬ ನೆಲವೊಡ್ಡಿ ಇಡೀ ಆಸ್ಪತ್ರೆಯ ವ್ಯವಸ್ಥೆಯನ್ನೇ ಖಾಸಗಿಯವರ ಕೈಗೊಪ್ಪಿಸುವ ರಾಜಕೀಯ ಕುತಂತ್ರ ಇದರಲ್ಲ ಅಡಗಿದೆ. ಇದನ್ನು ಖಂಡಿತಾ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತು.
ನುರಿತ ವೈದ್ಯರನ್ನು ನೇಮಿಸಿಕೊಳ್ಳದೆ ಖಾಯಂ ಪರೂಪದ ಹುದ್ದೆಗಳಿಗೆ ಖಾಯಂ ಕೆಲಸಗಾರರನ್ನು ನೇಮಕ ಮಾಡಿಕೊಳ್ಳದೇ ಉಚಿತ ರಕ್ತ ಮತ್ತು ಇತರೆ ಪರೀಕ್ಷೆಗಳನ್ನು ಮಾಡಲಾಗದೆ ಅಗತ್ಯವಿರುವ ಎಷಧಿಗಳನ್ನು ಮರೆಸಲಾಗದೆ ಇಡೀ ಆಸ್ಪತ್ರೆಯನ್ನೆ ಒಂದು ದುರ್ನಾತದ ಆಗರವಾಗಿಸಿ ಜನರಿ ಜಿಲ್ಲಾಸ್ಪತ್ರೆಯ ಬಗ್ಗೆ ತಾತ್ಸಾರ ಬರುವಂತೆ ಮಾಡಿ ಈಗ ಅದನ್ನು ಖಾಸಗಿಯವರ ಕೈಗೊಪ್ಪಿಸುವ ದುರ್ಬುದ್ಧಿ ಸರ್ಕಾರಕ್ಕೆ ಬಂದಿದೆ. ಜನತೆ ಇದನ್ನು ತೀವ್ರವಾಗಿ ಖಂಡಿಸಬೇಕು ಎಂದು ಮನವಿ ಮಾಡಿತು.
ಇವೆಲ್ಲವನ್ನು ಒಬ್ಬ ಖಾಸಗಿ ವ್ಯಕ್ತಿ ಅಥವಾ ಖಾಸಗಿ ಸಂಸ್ಥೆಯು ನಿರ್ವಹಿಸಲು ಸಾಧ್ಯ ಎಂದ ಮೇಲೆ ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ..? ಇದು ರಾಜಕೀಯ ಇಚ್ಛಾಶಕ್ತಿಯ ಕೊರತೆಯಷ್ಟೆ: ಜಿಲ್ಲೆಗೆ ವೈದ್ಯಕೀಯ ಕಾಲೇಜು ಬೇಕು ನಿಜ, ಅದು ಕೂಡ 100% ಸರ್ಕಾರಿ ಸ್ವಾಮ್ಯದ ಕಾಲೇಜು ಆಗಬೇಕೆಂದು ದಾವಣಗೆರೆ ಜನತೆ ಒತ್ತಾಯಿಸುತ್ತಿದ್ದೇವೆ. ಈಗ ಪ್ರಸ್ತಾಪದ ಬಂದಿರುವ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಆಸ್ಪತ್ರೆಯನ್ನು ಒಳಗೊಂಡು ಖಾಸಗಿಯವರ ಸಹ ಭಾಗಿತ್ವವನ್ನು ಒಪ್ಪಲಾಗುವುದಿಲ್ಲ. ಇರುವಂತಹ ವ್ಯವಸ್ಥೆಯನ್ನು ಇನ್ನೂ ಸುಸಜ್ಜಿತಗೊಳಿಸಿ ಉತ್ತಮ ಚಿಕಿತ್ಸೆ ಹಾಗೂ ಕಾಯಿಲೆ ಪರೀಕ್ಷೆಗಳನ್ನು ಖಾತ್ರಿಪಡಿಸಿ ಜನಸಾಮಾನ್ಯರಿಗೆ ಕೈಗೆಟಕುವಂತೆ ಉತ್ತಮ ಆರೋಗ್ಯ ಸೇವೆಯನ್ನು ನೀಡಬೇಕೆಂದು ಒತ್ತಾಯಿಸಲಾಯಿತು.
ಸಮಿತಿಯ ಹಕ್ಕೊತ್ತಾಯಗಳು
- ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯನ್ನು ಪಿ.ಪಿ.ಪಿ. ಮಾದರಿಯಲ್ಲಿ ಖಾಸಗೀಕರಣ ಮಾಡುವುದನ್ನು ಶಿಕ್ಷಣ ನಿಲ್ಲಿಸಬೇಕು ಸಾಲ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು.
- ಜಿಲ್ಲಾ ಆಸ್ಪತ್ರೆಯ ಅಭಿವೃದ್ಧಿಗಾಗಿ ಹೆಚ್ಚು ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು. ಮೇಸರ್ಕಾರಿ ಸ್ವಾಮ್ಯದ ಮೆಡಿಕಲ್ ಕಾಲೇಜನ್ನು ದಾವಣಗೆರೆಗೆ ಕೊಡಲೇಬೇಕು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

