ದಿನದ ಸುದ್ದಿ
ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ
ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.
ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಯಕೊಂಡ ಕ್ಷೇತ್ರಕ್ಕೆ 750 ಮನೆ ಮಂಜೂರು ; ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲು ಗ್ರಾಪಂ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು
ಸುದ್ದಿದಿನ,ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿಗೆ 506, ಚನ್ನಗಿರಿ ತಾಲೂಕಿಗೆ 244 ಸೇರಿ ಕ್ಷೇತ್ರಕ್ಕೆ ಒಟ್ಟು 750 ಮನೆಗಳು ಮಂಜೂರಾಗಿವೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.
ನಿರ್ಗತಿಕರು, ಬಡವರಿಗೆ ಸೂರು ಕಲ್ಪಿಸಲು ಸರ್ಕಾರ ಮತ್ತು ವಸತಿ ಸಚಿವರ ಮೇಲೆ ಒತ್ತಡ ಹಾಕಿ ಮನೆಗಳನ್ನು ಮಂಜೂರು ಮಾಡಿಸಲಾಗಿದೆ. ಕ್ಷೇತ್ರದ ವ್ಯಾಪ್ತಿಯ ದಾವಣಗೆರೆ ತಾಲೂಕಿನ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿಗಳಿಗೆ 2022-23ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಮತ್ತು ಬಸವ ವಸತಿ ಯೋಜನೆಯಡಿ 506, ಚನ್ನಗಿರಿ ತಾಲೂಕಿನ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿಗಳಿಗೆ 244 ಸೇರಿದಂತೆ ಒಟ್ಟು 750 ಮನೆಗಳನ್ನು ಮಂಜೂರು ಮಾಡಿಸಲಾಗಿದೆ.
ದಾವಣಗೆರೆ ತಾಲೂಕಿನ ಗ್ರಾಪಂಗಳಾದ ಆಲೂರು 12, ಆನಗೋಡು 31, ಅಣಜಿ 23, ಅಣಬೇರು 30, ಅತ್ತಿಗೆರೆ 18, ಬಾಡ 25, ಬಸವನಾಳು 24, ಗೋಪನಾಳು 21, ಹೆಮ್ಮನಬೇತೂರು 25, ಹೊನ್ನೂರು 20, ಹುಚ್ಚವ್ವನಹಳ್ಳಿ 23, ಐಗೂರು 5, ಕಂದಗಲ್ಲು 10, ಕಂದನಕೋವಿ 10, ಕೊಡಗನೂರು 19, ಕುರ್ಕಿ 20, ಮಳಲಕೆರೆ 20, ಮತ್ತಿ 15, ಮಾಯಕೊಂಡ 33, ನರಗನಹಳ್ಳಿ 22, ಶ್ಯಾಗಲೆ 21, ತೋಳಹುಣಿಸೆ 14, ನೇರ್ಲಿಗೆ 18, ಲೋಕಿಕೆರೆ 22, ಶ್ರೀರಾಮನಗರ 5 ಸೇರಿ ಒಟ್ಟು 506 ಮನೆ ಹಂಚಿಕೆ ಮಾಡಲಾಗಿದೆ.
ಚನ್ನಗಿರಿ ತಾಲೂಕಿನ ಗ್ರಾಪಂಗಳಾದ ಬಸವಾಪಟ್ಟಣ 34, ಬೆಳಲಗೆರೆ 18, ಚಿರಡೋಣಿ 30, ದಾಗಿನಕಟ್ಟೆ 17, ಜಿ.ಕೆ.ಹಳ್ಳಿ 8, ಕಬ್ಬಳ 5, ಕಂಸಾಗರ 14, ಕಣಿವೆಬಿಳಚಿ 2, ಕಾರಿಗನೂರು 10, ಕತ್ತಲಗೆರೆ 12, ಕೋಟೆಹಾಳ್ 11, ನಿಲೋಗಲ್ಲು 14, ತ್ಯಾವಣಿಗೆ 26, ರುದ್ರಾಪುರ 3, ನವಿಲೇಹಾಳು 16, ನಲ್ಕುದುರೆ 24 ಸೇರಿ ಒಟ್ಟು 244 ಮನೆ ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಮಾಹಿತಿ ನೀಡಿದ್ದಾರೆ.
ಸರ್ಕಾರ ನಿರ್ಗತಿಕರಿಗೆ, ಬಡವರಿಗೆ ಮನೆ ನೀಡಿದೆ. ಆದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಯಾವುದೇ ಕಾರಣಕ್ಕೂ ಫಲಾನುಭವಿಗಳ ಬಳಿ ಮನೆ ನೀಡುವುದಕ್ಕೆ ಹಣ ವಸೂಲಿ ಮಾಡಬಾರದು. ಒಂದು ವೇಳೆ ಹಣ ವಸೂಲಿ ಮಾಡಿದರೆ ಫಲಾನುಭವಿಗಳು ನೇರವಾಗಿ ಶಾಸಕರನ್ನು ಸಂಪರ್ಕಿಸಬೇಕೆಂದು ಮನವಿ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ನೆರವು ಕೋರಿದ ಶಾಸಕ ಬಸವರಾಜು ವಿ ಶಿವಗಂಗಾ
ಸುದ್ದಿದಿನ,ಬೆಂಗಳೂರು:ಉಬ್ರಾಣಿ ಹಾಗೂ ಅಮೃತಾಪುರ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಚನ್ನಗಿರಿ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಶಾಸಕರಾದ ಬಸವರಾಜು ವಿ ಶಿವಗಂಗಾ ಒತ್ತಾಯಿಸಿದರು.
ತುಂಗಾ ಮೇಲ್ದಂಡೆ ವಲಯ ಯೋಜನೆಗಳ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿ ರೈತರ ಹಿತ ಕುರಿತು ಮಾನವರಿಕೆ ಮಾಡಿದರು.
ತುಂಗಾ ಮೇಲ್ದಂಡೆ ಯೋಜನೆ ವಲಯ ವ್ಯಾಪ್ತಿ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಜಲಸಂಪನ್ಮೂಲ ಇಲಾಖೆಯಿಂದ ಪ್ರಗತಿಯಲ್ಲಿರುವ ಕಾಮಗಾರಿಗಳು, ಕೈಗೊಳ್ಳಬೇಕಾರುವ ಯೋಜನೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಿದರು.
ಉಬ್ರಾಣಿ, ಅಮೃತಾಪುರ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಅಭಿವೃದ್ಧಿ ಕುರಿತು ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಿಗೆ ತಿಳಿಸಿದರು.
ರೈತರ ಬಗ್ಗೆ ವಿಶೇಷ ಕಾಳಜಿ ತೋರಿದ ಶಾಸಕರಾದ ಬಸವರಾಜು ವಿ. ಶಿವಗಂಗಾ ಅವರಿಗೆ ಉತ್ತಮ ಸೇವೆ ಮಾಡುತ್ತಿರುವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಚನ್ನಗಿರಿ ತಾಲ್ಲೂಕಿಗೆ ಜಲಸಂಪನ್ಮೂಲ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಜಿಲ್ಲೆಯ ಮಾನ್ಯ ಶಾಸಕರುಗಳು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಡಿಸಿ ಗಂಗಾಧರಸ್ವಾಮಿ.ಜಿ.ಎಂ ಸೂಚನೆ
ಸುದ್ದಿದಿನ,ದಾವಣಗೆರೆ:ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್ಐಆರ್ ದಾಖಲಿಸುವಂತೆ ತಿಳಿಸಿದರು.
ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು. ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ ವ್ಯಕ್ತಿಗೆ ಸಾಲ ನೀಡುವಂತಿಲ್ಲ. ಒಂದೊಮ್ಮೆ ನೀಡದರೆ, ಅದು ಮೈಕ್ರೋ ಪೈನಾನ್ಸ್ ಕಂಪನಿ ಕಡೆಯಿಂದ ಆದ ಲೋಪ ಎಂದು ಹೇಳಲಾಗುವುದು. ಜನರಿಗೆ ಅವರ ಅಗತ್ಯಕ್ಕಿಂತ ಹೆಚ್ಚಾಗಿ ಸಾಲವನ್ನು ನೀಡುತ್ತಿದ್ದಾರೆ. ಸಾಲ ಮರುಪಾವತಿಲು ನಿಮ್ಮ ಚೌಕಟ್ಟುನ್ನು ಮೀರಿ ಅವರಿಗೆ ತೊಂದರೆ ನೀಡುತ್ತಿದ್ದಿರಿ. ಇದರ ಬಗ್ಗೆ ಪ್ರಕರಣ ದಾಖಲು ಮಾಡಲಾಗುವುದು. ಗ್ರಾಮೀಣ ಭಾಗದ ಜನರಿಗೆ ಸಾಲದ ಅವಶ್ಯಕತೆ ತುಂಬಾ ಇರುವುದರಿಂದ ಆರ್.ಬಿ.ಐ ನಿಯಮಾನುಸಾರ ಸಾಲ ನೀಡಿ, ಅವರ ಅಗತ್ಯಕ್ಕೆ ತಕ್ಕಂತೆ ಸಾಲ ನೀಡಬೇಕು ಎಂದರು.
ಸಾರ್ವಜನಿಕರಿಗೆ ನಿಮ್ಮ ಪೈನಾನ್ಸ್ ಕಂಪನಿಯ ಬಡ್ಡಿ ಎಷ್ಟು ಅಂತ ತಿಳಿಸಿ, ಮೈಕ್ರೋ ಫೈನಾನ್ಸ್ 2 ಲಕ್ಷ ರೂ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ನೀಡುವ ಸಂಧರ್ಭದಲ್ಲಿ ಅರ್ಜಿ ಹಾಗೂ ಷರತ್ತುಗಳು ಕನ್ನಡದಲ್ಲಿರಬೇಕು. ಸಾಲ ಮತ್ತು ಬಾಕಿ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದ ವ್ಯಕ್ತಿಯ ಕುಟುಂಬದ ಯಾವ ವ್ಯಕ್ತಿಗಳನ್ನು ಕೆವೈಸಿ ಕೇಳುವಂತಿಲ್ಲ. ಬಾಕಿ ಪಾವತಿ ಮಾಡಿ ಎಂದು ಒತ್ತಾಯಿಸುವಂತಿಲ್ಲ. ಅತ್ಯಂತ ಕಡಿಮೆ ಮೊತ್ತದ ಸಾಲವಾದರೂ ವಿಮೆ ಮಾಡಿಸಬೇಕು. ಸಾಲ ಪಡೆದ ವ್ಯಕ್ತಿಯು ಮೃತಪಟ್ಟಲ್ಲಿ ವಿಮೆಯ ಮೂಲಕ ಸಾಲದ ಮೊತ್ತವನ್ನು ಪಡೆಯಬೇಕು. ಬಡ್ಡಿ ದರ ಗರಿಷ್ಠ ಶೇ.18 ರಷ್ಟು ಮಾತ್ರ, ಇದಕ್ಕಿಂತ ಹೆಚ್ಚಿನ ಬಡ್ಡಿದರ ವಸೂಲಿ ಮಾಡುವಂತಿಲ್ಲ.
ವಸೂಲಿ ಸಿಬ್ಬಂದಿ ಬೆದರಿಕೆ ಹಾಕಬಾರದು, ಬೈಗುಳ-ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು. ಸಾಲ ಪಡೆದವರಿಗೆ ಪದೇ ಪದೇ ಕರೆ ಮಾಡಬಾರದು. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ಒಳಗೆ ಮಾತ್ರ ಕರೆ ಮಾಡಬೇಕು. ಸಾಲ ಪಡೆದ ವ್ಯಕ್ತಿಯ ಕುಟುಂಬದವರು, ಸಂಬಂಧಿಕರು, ಸ್ನೇಹಿತರು ಮತ್ತು ಸಹದ್ಯೋಗಿಗಳಿಗೆ ಕರೆ ಮಾಡುವಂತಿಲ್ಲ. ಸಾಲ ಪಡೆದವರ ಹೆಸರು ಮತ್ತು ವಿವರಗಳನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಪ್ರದರ್ಶಿಸುವಂತಿಲ್ಲ. ಸಾಲ ಪಡೆದ ಕುಟುಂಬದವರ ಮೇಲೆ ಹಲ್ಲೆ ನಡೆಸುವಂತಿಲ್ಲ. ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ. ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೃತ್ಯವನ್ನು ಎಸಗುವಂತಿಲ್ಲ. ಸಾಲ ಪಡೆದವರ ಆಸ್ತಿ-ಸ್ವತ್ತುಗಳಿಗೆ ಹಾನಿ ಮಾಡುವಂತಿಲ್ಲ. ಬಾಕಿ ಪಾವತಿ ಮಾಡದೇ ಇದ್ದಾಗ ಎದುರಾಗಬಹುದಾದ ಪರಿಸ್ಥಿತಿಯ ಬಗ್ಗೆ ಸುಳ್ಳು ಮಾಹಿತಿ ನೀಡಬಾರದು. ತಡವಾಗಿ ಕಂತು ಪಾವತಿಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಬಡ್ಡಿ ಹಾಕುವಂತಿಲ್ಲ. ಸಾಲ ವಸೂಲಿಗೆ ರೌಡಿಗಳನ್ನು ಬಿಟ್ಟು ದಬ್ಬಾಳಿಕೆ ಮಾಡುವಂತಿಲ್ಲ. ಆರ್.ಬಿ.ಐ ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. ಫೆನಾನ್ಸ್ ಕಂಪನಿಯವರು ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್ ತೆಗೆದುಕೊಳ್ಳಬಾರದು. ಪಾನ್ ಬ್ರೋಕರ್ಸ್ ತಮ್ಮ ಅಂಗಡಿಗಳ ಮುಂದೆ ಸಿಸಿಟಿವಿ ಹಾಕಿಸಿ ನಿಮ್ಮಿಂದಲೂ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಗಳೂರು, ಮಾಯಕೊಂಡ, ಹೊನ್ನಾಳಿಯಿಂದ ಸಾಕಷ್ಟು ದೂರುಗಳು ಬಂದಿರುತ್ತವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತಾನಾಡಿ, ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ. ಸಾಕಷ್ಟು ಜನ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ. ಕಿರುಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಸಾಲ ವಿತರಣೆ ಮತ್ತು ಮರಪಾವತಿಯಲ್ಲಿ ಗ್ರಾಹಕರನ್ನು ಹಾಗೂ ಸಿಬ್ಬಂದಿಗಳನ್ನು ಗೌರವದಿಂದ ನೋಡಿಕೊಳ್ಳಬೇಕು ಎಂದರು.
ಕಂತು ಕಟ್ಟಲು ತಪ್ಪಿದ ಗ್ರಾಹಕರೊಂದಿಗೆ ವ್ಯವಹರಿಸಲು ಆರ್.ಬಿ.ಐ ನಿರ್ದೇಶಗಳನ್ನು ಪಾಲಿಸುವುದು, ಗ್ರಾಹಕ ಸ್ನೇಹಿ ಮತ್ತು ನ್ಯಾಯಸಮ್ಮತವಾಗಿರಬೇಕು. ನೀವು ಸೂಕ್ತವಲ್ಲದ ಸಮಯದಲ್ಲಿ ಗ್ರಾಹಕರನ್ನು ಸಂಪರ್ಕ ಮಾಡುವುದಾಗಲಿ ಅಥವಾ ಸಾಲ ವಸೂಲಾತಿ ಮಾಡಬಾರದು. ಅವರ ಮನೆಯಲ್ಲಿ ಮೃತ್ಯು ಸಂಭವಿಸಿದಾಗ, ಅನಾರೋಗ್ಯದ ಸಂದರ್ಭದಲ್ಲಿ ಸಾಲ ಮಸೂಲಾತಿ ಮಾಡಬಾರದು. ಪ್ರತಿಯೊಂದು ಕಿರುಹಣಕಾಸು ಸಂಸ್ಥೆಯೂ ಸಾಲಗಾರರೊಂದಿಗೆ ಸಂವಹನ ಮಾರ್ಗದರ್ಶನ ನೀಡಬೇಕೆಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಆಚಾರ್ಯ, ಡಿವೈಎಸ್ಪಿ ಬಸವರಾಜ, ಚನ್ನಗಿರಿ ಉಪವಿಭಾಗದ ಎಎಸ್ಪಿ ಶ್ಯಾಮ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಂಸದರ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ | ಶಾಲಾ ಆವರಣಗಳು ಅನೈತಿಕ ತಾಣಗಳಾಗಬಾರದು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ4 days ago
ರಾಜನಹಳ್ಳಿಯಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ, ಎಲ್ಲಾ ಸಿದ್ದತೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
-
ದಿನದ ಸುದ್ದಿ4 days ago
ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್ಲೈನ್ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಅಭಿವೃದ್ಧಿಯೇ ನನ್ನ ಗುರಿ, ಮಾದರಿ ಕ್ಷೇತ್ರವನ್ನಾಗಿ ಮಾಡುವೆ: ಶಾಸಕ ಬಸವರಾಜು ವಿ ಶಿವಗಂಗಾ
-
ದಿನದ ಸುದ್ದಿ4 days ago
ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ : ಎಸ್ಪಿ ಉಮಾ ಪ್ರಶಾಂತ್
-
ದಿನದ ಸುದ್ದಿ2 days ago
ಪರ್ಯಾಯ ಸಂವಿಧಾನ ರಚನೆ ವಿರೋಧಿಸಿ ಪ್ರತಿಭಟನೆ ; ಡಿಸಿಗೆ ಮನವಿ
-
ದಿನದ ಸುದ್ದಿ2 days ago
ಶಿವಣ್ಣ ಜಿ. ಬಿ ಅವರಿಗೆ ಪಿಎಚ್ ಡಿ ಪದವಿ