ದಿನದ ಸುದ್ದಿ
ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ
ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.
ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243