Connect with us

ದಿನದ ಸುದ್ದಿ

ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್

Published

on

ಸುದ್ದಿದಿನ,ದಾವಣಗೆರೆ : ಬರಪೀಡಿತ ತಾಲೂಕುಗಳೆಂದು ಗುರುತಿಸಿರುವ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರೆಯಲು ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಒಂದೊಂದು ಗೋಶಾಲೆ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಿಲಾಗಿದ್ದ ಬರ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗಳೂರು ತಾಲ್ಲೂಕಿನಲ್ಲಿ ಈಗಾಗಲೇ ಗೋಶಾಲೆ ತೆರೆಯಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದೆ, ಇತರೆ ತಾಲೂಕಗಳಲ್ಲಿ ಮೇವಿನ ಕೊರತೆಯಾಗಿರಬಹುದು. ಅಧಿಕಾರಿಗಳು ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮೇವಿನ ಕೊರೆತಯ ಬಗ್ಗೆ ಮಾಹಿತಿ ಪಡೆದು ಮೇವು ಒದಗಿಸುವ ಕಾರ್ಯ ಮಾಡಬೇಕು ಎಂದರು.

ಹೈಕೋರ್ಟ್ ಆದೇಶದಂತೆ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು, ಎರಡು ಲೋಡ್‍ಗಳಷ್ಟು ಮೇವು ಸ್ಟಾಕ್ ಮಾಡಬೇಕು. ಎರಡು ವಾರಗಳ ಕಾಲ ಕಾಯಿರಿ. ರೈತರು ಗೋಶಾಲೆಗೆ ಬಂದು ಮೇವು ತೆಗೆದುಕೊಂಡು ಹೋದರೆ ಸರಿ ಇಲ್ಲವಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ಗೋಶಾಲೆ ಅವಶ್ಯಕತೆ ಇಲ್ಲದಿದ್ದಲ್ಲಿ ಮುಚ್ಚುವ ಕೆಲಸ ಮಾಡಬೇಕು ಎಂದರು.

ಜಗಳೂರು ತಾಲೂಕಿನ ತಹಶೀಲ್ದಾರ್ ತಿಮ್ಮಣ್ಣ ಮಾತನಾಡಿ, ತಾಲೂಕಿನಲ್ಲಿ ಮೇವಿನ ಕೊರತೆ ಹೆಚ್ಚಿರುವ ಮೂರು ಪ್ರದೇಶಗಳಲ್ಲಿ ಗೋಶಾಲೆ ತೆರೆಯಲಾಗಿದೆ. ಇನ್ನುಳಿದ ಎರಡು ಕಡೆಗಳಲ್ಲಿ ಮೇವಿನಬ್ಯಾಂಕ್ ತೆರೆದು ಮೇವಿನ ಕೊರತೆಯನ್ನು ನೀಗಿಸಲಾಗುತ್ತಿದೆ. ಬಳ್ಳಾರಿ, ಕೊಪ್ಪಳ, ರಾಯದುರ್ಗ ಪ್ರದೇಶಗಳಿಂದ ಸಜ್ಜೆ, ಮೆಕ್ಕೆಜೋಳ ಸಪ್ಪೆಯ ಹಸಿ ಮೇವನ್ನು ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಮುಂದಿನ 08 ವಾರಗಳಿಗೆ ಆಗುವಷ್ಟು ಮೇವಿದ್ದು, ಮಳೆ ಬಂದು ಅಲ್ಲಲ್ಲಿ ಮೇವು ಚಿಗುರುತ್ತಿರುವ ಪರಿಣಾಮ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಆಗುವ ಸಂಭವವಿಲ್ಲ ಎಂದರು.

ಅಗತ್ಯವಿದ್ದರೆ ಜಗಳೂರು ತಾಲೂಕಿನಲ್ಲಿ ಇನ್ನೊಂದು ಮೇವಿನ ಬ್ಯಾಂಕ್ ತೆರೆದು ರೈತರಿಗೆ ಮೇವು ನೀಡಿ. ಅನುದಾನಕ್ಕಂತೂ ಕೊರತೆಯಿಲ್ಲ. ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರಯಲು ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಮುಂಜಾಗ್ರತ ಕ್ರಮವಾಗಿ ಒಂದು ಅಥವಾ ಎರಡು ಟನ್‍ಗಳಷ್ಟು ಮೇವು ಸಂಗ್ರಹಿಸಿ ಎರಡು ಸಿಬ್ಬಂದಿಗಳನ್ನು ನಿಯೋಜಿಸಿ ರೈತರು ಬಂದರೆ ಮೇವು ನೀಡಿ. ರೈತರು ಬಾರದಿದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದರು.
ಪ್ರತಿ ತಾಲೂಕಿನ ಇಓ ಮತ್ತು ತಹಶೀಲ್ದಾರ್‍ಗಳು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಮೇವಿನ ಕೊರೆತೆ-ಲಭ್ಯತೆ ಕುರಿತು ಪರಿಶೀಲಿಸಿ. ಮೇವು ಬೇಕು ಎನ್ನುವ ರೈತರ ಹೆಸರು ನೊಂದಾಯಿಸಿಕೊಂಡು ಮೊಬೈಲ್‍ಬ್ಯಾಂಕ್ ಮೂಲಕ ಮೇವು ಒದಗಿಸಿ. ಅಲ್ಲದೇ ಅಲ್ಲಿಯ ರೈತರೊಂದಿಗೆ ಮಿನಿಕಿಟ್‍ನ ಮಾಹಿತಿ ನೀಡಿ, ಮಿನಿಕಿಟ್‍ಗಳನ್ನು ವಿತರಿಸಿ. ಮುಂದಿನ ದಿನಗಳಲ್ಲಿ ಅಲ್ಲಿನ ರೈತರಿಂದಲೇ ಮೇವು ಖರೀದಿಸುವ ವ್ಯವಸ್ಥೆ ಮಾಡಿಕೊಳ್ಳಿ. ಇದರಿಂದ ಹಣವು ಉಳಿತಾಯವಾಗಲಿದೆ ಎಂದು ಉಮಾಶಂಕರ್ ಸಲಹೆ ನೀಡಿದರು.

ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ ಮುದುಗಲ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯ ಮಳೆಗಿಂತ ಶೇ.34 ರಷ್ಟು ಮಳೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ನೀರಾವರಿ ಪ್ರದೇಶದಲ್ಲಿ ಶೇ.5 ಹಾಗೂ ಬೆದ್ದಲು ಪ್ರದೇಶದಲ್ಲಿ ಶೇ.86 ರಷ್ಟು ಬಿತ್ತನೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯು ಮುಸುಕಿನ ಜೋಳ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ ನಂತರ ಭತ್ತ, ತೋಟಗಾರಿಕೆಯಲ್ಲಿ ತೆಂಗು ಮತ್ತು ಅಡಿಕೆ ಹೆಚ್ಚಿನ ಬಿತ್ತನೆಯಾಗಿದೆ. ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಬೆಳೆವಿಮೆ ಯೋಜನೆಯಡಿ ಈ ಬಾರಿ ಜಿಲ್ಲೆಯಲ್ಲಿ 28 ಸಾವಿರ ರೈತರು ನೊಂದಾಯಿಸಿದ್ದಾರೆ. ಹಿಂದಿನ ವರ್ಷಗಳ ಬೆಳೆವಿಮೆಯ ಮಾಹಿತಿ ಹಾಗೂ ಬಾಕಿ ಹಣದ ಮಾಹಿತಿ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಕುರಿತು ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ನಗರ ಪ್ರದೇಶಗಳ ಕುಡಿಯುವ ನೀರು ಸರಬರಾಜು ಕುರಿತು ಮಾಹಿತಿ ನೀಡಿದ ಡಿ.ಯು.ಡಿ.ಸಿಯ ಯೋಜನಾ ನಿರ್ದೇಶಕಿ ನಜ್ಮಾ, ನಗರ ಪ್ರದೇಶಗಳಲ್ಲಿ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಸದ್ಯಕ್ಕೆ ದಾವಣಗೆರೆ ನಗರದಲ್ಲಿ 41 ವಾರ್ಡ್‍ಗಳಿಗೆ ವಾರಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಪ್ರದೇಶಗಳಲ್ಲಿ 5 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನೀರಿನ ಹಾಹಾಕಾರವಂತೂ ಇಲ್ಲ ಎಂದರು.

ಜಗಳೂರು ತಾಲೂಕಿನಲ್ಲಿ ಇಂದಿಗೂ 77 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕವೇ ನೀರು ಸರಬರಾಜು ಮಾಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪ್ರದೇಶಗಳಲ್ಲಿ ಚಾನೆಲ್‍ಗಳಿಗೆ ಭದ್ರಾ ಜಲಾಶಯದ ನೀರು ಬಿಡದ ಪರಿಣಾಮ 27 ಪ್ರದೇಶಗಳಲ್ಲಿ (ಅಣಜಿ, ಆನಗೋಡು, ಮಾಯಕೊಂಡ ಇತರೆ ಪ್ರದೇಶಗಳಲ್ಲಿ) ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತಿತ್ತು. ಕೆಲವು ಪ್ರದೇಶಗಳಲ್ಲಿ ಬೋರ್‍ವೆಲ್ ಕೊರಸಲಾಗಿದ್ದು, ನೀರು ಸಿಕ್ಕಿದ ತಕ್ಷಣ ಪೈಪ್‍ಲೈನ್ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.

ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಬಿಲ್ ಪಾವತಿಯಾಗಿದೆ. ಕೆಲವು ಜಿ.ಪಿ.ಎಸ್ ಸರಿಯಾಗಿ ಇಲ್ಲದಿರುವ ಕಡೆ ಹಣ ಮಂಜೂರು ಮಾಡಿಲ್ಲ. ಈಗಾಗಲೇ ಜಿಲ್ಲಾಡಳಿತ ತಂಡದಿಂದ ಪರಿಶೀಲನೆ ನಡೆಸಿದ್ದು ಮತ್ತೋಮ್ಮೆ ಪುನಃ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಮ್ಮಣ್ಣ ತಿಳಿಸಿದರು.

ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ಕೇಳಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್ ನಡೆಸಿ ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ಸೌಲಭ್ಯವನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಜಗಳೂರು ತಾಲೂಕಿನಲ್ಲಿ ಗ್ರಾಮಭೇಟಿ ಕಾರ್ಯಕ್ರಮದ ಮೂಲಕ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಮೂಲಕ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅವಹಾಲು ಸ್ವೀಕರಿಸಿ ಅವುಗಳಿಗೆ ಪರಿಹಾರವನ್ನು ವಾರದಲ್ಲಿಯೇ ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಅಂದಿನ ದಿನಕ್ಕೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚಿನ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನುಳಿದ ತಾಲೂಕುಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಜಲಶಕ್ತಿ ಮತ್ತು ಜಲಾಮೃತ ಕಾರ್ಯಕ್ರಮಗಳಡಿಯಲ್ಲಿ ಶಾಲೆ, ಹಾಸ್ಟೆಲ್ ಹಾಗೂ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸಿ ಜಿಲ್ಲೆಯ ಹಸಿರೀಕರಣಕ್ಕೆ ಒತ್ತು ನೀಡಿ. ಜಲಾಮೃತ ಕಾರ್ಯಕ್ರಮದಡಿಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗೆ 5000 ಅನುದಾನ ನೀಡಲಿದ್ದು, ಈ ಅನುದಾನದಲ್ಲಿ ಕಿಚನ್‍ಗಾರ್ಡ್‍ನ್ನು ನಿರ್ಮಿಸಿ ಅಲ್ಲಿನ ಮಕ್ಕಳಿಗೆ ಅನುಕೂಲವಾಗುವಂತೆ ಪಪ್ಪಾಯ, ನುಗ್ಗೆಕಾಯಿ, ಸಫೋಟ, ಮಾವು, ಹುಣಸೆ, ನೇರಳೆ ಮರಗಳನ್ನು ಬೆಳೆಯಬೇಕು. ಈ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಡಿ.ಡಿ.ಪಿ.ಐ ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಹಿಂದಿನ ದಿನಗಳಲ್ಲಿ ಬರ ನಿರ್ವಹಣೆಯನ್ನು ನಿರ್ವಹಿಸಿದ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಇನ್ನು ಉತ್ತಮವಾಗಿ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಭೆಯಲಿದ್ದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ಷರೀಫ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಸಂಖ್ಯಾಧಿಕಾರಿ ರಾಜೇಶ್ವರಿ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರ್‍ಗಳು ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ17 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ19 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending