ದಿನದ ಸುದ್ದಿ
ದಾವಣಗೆರೆ| ಇಸ್ಪೀಟ್ ಆಡಿ ಸಿಕ್ಕಿಬಿದ್ದ ಶಿಕ್ಷಣ ಇಲಾಖೆಯ 7 ಸಿಬ್ಬಂದಿ ಅಮಾನತು
ಸುದ್ದಿದಿನ, ದಾವಣಗೆರೆ: ಕೊರೊನಾ ಕರ್ತವ್ಯಕ್ಕೆ ನಿಯೋಜಿಸಿದ್ದಾಗ ಇಸ್ಪೀಟ್ ಜೂಜಾಟ ಆಡಿ ಸಿಕ್ಕಿ ಬಿದ್ದಿದ್ದ ದಾವಣಗೆರೆ ಉತ್ತರವಲಯದ ಬಿಇಓ ಕಚೇರಿಯ ಏಳು ಜನ ಸಿಬ್ಬಂದಿಯನ್ನು ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ ಜಿ ಜಗದೀಶ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಉತ್ತರವಲಯದ ಆದೀಕ್ಷಕ ಹೆಚ್.ಎಸ್ ಬಸವರಾಜ, ಪ್ರಥಮ ದರ್ಜೆ ಸಹಾಯಕ ಎಂ ಸುಧಾಕರ್, ದ್ವಿತೀಯ ದರ್ಜೆ ಸಹಾಯಕ ಕೊಟ್ರೋಶ್ ಸೇರಿದಂತೆ ಏಳು ಜನರನ್ನು ಅಮಾನತು ಮಾಡಲಾಗಿದೆ. ಒಂದು ತಿಂಗಳ ಹಿಂದೆ ಲಾಕ್ ಡೌನ್ ಸಮಯದಲ್ಲಿ ಇಸ್ಪೀಟ್ ಆಡುವಾಗ ಸಿಕ್ಕಿ ಬಿದ್ದಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243