ದಿನದ ಸುದ್ದಿ
ದಾವಣಗೆರೆ | ಮೂವರು ಕೊರೋನಾ ಸೋಂಕಿತರ ಪ್ರಾಥಮಿಕ ವರದಿ ನೆಗೆಟಿವ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ ಅಗತ್ಯವಸ್ತುಗಳ ಲಭ್ಯತೆ ಸೇರಿದಂತೆ ಜನಜೀವನ ಸುಗಮವಾಗಿ ನಡೆಯಲು ಆರಂಭದಿಂದಲೂ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಬಾರದಿರಲಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಆಶಿಸಿದರು.
ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಕೋವಿಡ್ 19 ವೈರಾಣು ನಿಯಂತ್ರಣ ಕುರಿತು ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಹಿಂದೆ ಆರ್ಓ ಪ್ಲಾಂಟ್ ಬಂದಾಗಿನಿಂದ ವೈದ್ಯರಿಗೆ ಕೆಲಸ ಕಡಿಮೆಯಾಗಿತ್ತು. ಇದೇ ರೀತಿ ಕೋವಿಡ್ ನಿಯಂತ್ರಣ ಯಶಸ್ವಿಯಾದಲ್ಲಿ ಜಿಲ್ಲೆಯ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಿ, ಅವರ ಸೇವೆಯನ್ನು ಇತರೆ ಜಿಲ್ಲೆಗಳಲ್ಲಿ ಬಳಸಿಕೊಳ್ಳಬಹುದೆಂದರು.
ಪ್ರಸ್ತುತ ಜಿಲ್ಲೆಯಲ್ಲಿರುವ 3 ಪಾಸಿಟಿವ್ ಪ್ರಕರಣಗಳ ಸೋಂಕಿತರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚಿಕಿತ್ಸಾ ಅವಧಿಯಲ್ಲಿಯಲ್ಲಿನ ಪ್ರಾಥಮಿಕ ಹಂತದ ಗಂಟಲು ಮಾದರಿ ಪರೀಕ್ಷೆಯಲ್ಲಿ ಈ ಮೂವರು ಸೋಂಕಿತರ ಫಲಿತಾಂಶ ನೆಗೆಟಿವ್ ಎಂದು ಬಂದಿರುವುದು ಸಂತಸದ ವಿಷಯವಾಗಿದ್ದು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ವರದಿಯಾಗುವುದು ಬೇಡವೆಂದು ಹೇಳಿದರು.
ಜಿಲ್ಲೆಯಲ್ಲಿ ಎಪಿಸೆಂಟರ್, ಬಫರ್ ವಲಯಗಳಲ್ಲಿ ಡಿಎಸ್ಇನ್ಫೆಕ್ಷನ್ ಕಾರ್ಯ ಉತ್ತಮವಾಗಿ ಕೈಗೊಳ್ಳಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಬೇಕು. ಎಲ್ಲ ಅಗತ್ಯ ಸಾಮಗ್ರಿಗಳ ಜೊತೆಗೆ ಮಾನವ ಸಂಪನ್ಮೂಲವನ್ನು ಸಿದ್ದವಿರಿಸಿಕೊಳ್ಳಬೇಕು. ಹಾಗೂ ಕೋವಿಡ್ ಸ್ಕ್ರೀನಿಂಗ್ಗೆ ಆಯುಷ್ ವೈದ್ಯರಿಗೆ ತರಬೇತಿ ನೀಡಿ ಬಳಸಿಕೊಳ್ಳಬಹುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿದ್ದ 3 ಕೊರೊನಾ ಪಾಸಿಟಿವ್ ಪ್ರಕರಣಗಳ ಗಂಟಲು ದ್ರವ ಮಾದರಿಯನ್ನು ಪ್ರಾಥಮಿಕ ಹಂತದ ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಮೂರು ಸೋಂಕಿತರ ವರದಿ ನೆಗೆಟಿವ್ ಎಂದು ಬಂದಿದೆ. ಮತ್ತೊಮ್ಮೆ ಇವರ ಗಂಟಲು ದ್ರವ ಮಾದರಿಯನ್ನು ಎರಡನೇ ಹಂತದಲ್ಲಿ ಕಳುಹಿಸಲಾಗುವುದು. ಎಪಿಸೆಂಟರ್ ವಲಯದಲ್ಲಿರುವ ಮನೆಗಳಿಗೆ ತೆರಳಿ ಫ್ಲೂ ಟೆಸ್ಟ್ ಮಾಡಲಾಗಿದೆ. ಈ ವಲಯಗಳಲ್ಲಿ ಡಿಸ್ಇನ್ಫೆಕ್ಷನ್ ಸೇರಿದಂತೆ ಪ್ರೊಟೊಕಾಲ್ ಪ್ರಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಸಮಿತಿಗಳನ್ನು ರಚಿಸಿಕೊಂಡು ಕೆಲಸ ಮಾಡಲಾಗುತ್ತಿದ್ದು ಆರ್ಆರ್ಟಿ ತಂಡ ಪ್ರತಿದಿನ ಕೋವಿಡ್ ಸರ್ವೆ ಕಾರ್ಯದಲ್ಲಿ ತೊಡಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನಟರಾಜ್ ಮಾತನಾಡಿ ಚಿಗಟೇರಿ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದು ಪ್ರಸ್ತುತ 70 ಕೋವಿಡ್ ಸೋಂಕಿತರಿಗೆ ಚಿಕಿತ್ಸೆಗೊಳಿಪಡುವಷ್ಟು ಎಲ್ಲ ರೀತಿಯ ವೈದ್ಯಕೀಯ, ಸಾಮಗ್ರಿಗಳು, ಮಾನವ ಸಂಪನ್ಮೂಲವನ್ನು ಸಿದ್ದವಿಟ್ಟುಕೊಳ್ಳಲಾಗಿದೆ. 12 ಫಿವರ್ ಕ್ಲಿನಿಕ್ ಮಾಡಲಾಗುವುದು. ಪ್ರಸ್ತುತ 10 ನ್ನು ಗುರುತಿಸಲಾಗಿದೆ. ಬಾಪೂಜಿ, ಎಸ್.ಎಸ್. ಆಸ್ಪತ್ರೆ ಮತ್ತು 3 ಖಾಸಗಿ ಆಸ್ಪತ್ರೆ ಸೇರಿದಂತೆ 5 ಆಸ್ಪತ್ರೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಗುರಿತಿಸಲಾಗಿದೆ. 100 ಬೆಡ್ಗಳುಳ್ಳ ಐಸಿಯು ಗುರುತಿಸಲಾಗಿದೆ. ಹಾಗೂ ಪ್ರಾಥಮಿಕ ಕಾಂಟಾಕ್ಟ್ಗಳನ್ನು ಕ್ವಾರಂಟೈನ್ ಮಾಡಲು ನಗರದಲ್ಲಿ 6 ಲಾಡ್ಜ್ ಮತ್ತು ತಾಲ್ಲೂಕುಗಳಲ್ಲಿ ಒಂದೊಂದು ಲಾಡ್ಜ್ಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಉಸ್ತುವಾರಿ ಕಾರ್ಯದರ್ಶಿಗಳು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ಅಗತ್ಯವಾದ ಸಲಕರಣೆಗಳನ್ನು ತಮ್ಮ ಹಂತದಲ್ಲೇ ಖರೀದಿಸುವಂತೆ ಡಿಹೆಚ್ಓ ಗೆ ತಿಳಿಸಿದ ಅವರು ದೆಹಲಿಯ ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡ ಚನ್ನಗಿರಿಯ 11 ಜನರಿಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಅವರಿಂದ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ, ಇತರರಿಗೆ ಸೋಂಕು ಏನಾದರೂ ಹರಡಿರುವ ಬಗ್ಗೆ ವಿಚಾರಿಸಿದರು.
ಡಿಹೆಚ್ಓ ಡಾ.ರಾಘವೇಂದ್ರ ಸ್ವಾಮಿ ಪ್ರತಿಕ್ರಿಯಿಸಿ ಈ ಹನ್ನೊಂದು ಜನರು ಫೆ.28 ಕ್ಕೇ ಜಿಲ್ಲೆಗೆ ವಾಪಾಸ್ಸು ಬಂದಿರುವುದರಿಂದ ಇನ್ಕ್ಯುಬೇಷನ್ ಅವಧಿ ಮುಗಿದಿದ್ದು ಅವರನ್ನು ನಿಗಾವಣೆಯಲ್ಲಿ ಇರಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೊರೊನಾ ನಿಯಂತ್ರಣ ಹಿನ್ನೆಲೆ ಪ್ರತಿದಿನ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತಿದೆ. ಜಿಲ್ಲಾಡಳಿತ ಕಚೇರಿಯಲ್ಲಿ ವಾರ್ ರೂಂ ಸ್ಥಾಪಿಸಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ರೈಸ್ ಮಿಲ್, ದಾಲ್ ಮಿಲ್ ಮಾಲೀಕರೊಂದಿಗೆ ಸಭೆ ನಡೆಸಲಾಗಿದ್ದು, ಪ್ರಸ್ತುತ 62 ರೈಸ್ಮಿಲ್ಗಳು ಕಾರ್ಯ ನಿರ್ವಹಿಸುತ್ತಿವೆ. ಟ್ರಾಫಿಕ್ ಸೇರಿದಂತೆ ವೈದ್ಯಕೀಯ ಇತರೆ ವಸ್ತುಗಳ ವ್ಯವಸ್ಥೆ ಮಾಡಲು ಪ್ರಮೋದ್ ನಾಯಕ್ ನೋಡಲ್ ಅಧಿಕಾರಿಯನ್ನು ನೇಮಿಸಿ ಕ್ರಮ ಕೈಗೊಳ್ಳಲಾಗಿದೆ. ಅಲೆಮಾರಿ, ವಲಸೆ ಕಾರ್ಮಿಕರಿಗೆ ಊಟ ಮತ್ತು ಹಾಲು ವಿತರಿಸಲಾಗುತ್ತಿದೆ. 23235 ಕುಟುಂಬಗಳಿಗೆ ಆಹಾರ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದರು.
ಕಿರಾಣಿ ಅಂಗಡಿಗಳು, ದಿನಸಿ ಅಂಗಡಿಗಳು 24*7 ತೆರೆಯಲು ಕ್ರಮ ವಹಿಸಲಾಗಿದೆ. ಗ್ರಾಮೀಣ ಭಾಗದ ಕಿರಾಣಿ ಅಂಗಡಿಗಳಿಗೆ ಪಡಿತರ ಪೂರೈಕೆ ಮಾಡಲಾಗಿದೆ ಎಂದರು.
ಉಸ್ತುವಾರಿ ಕಾರ್ಯದರ್ಶಿಗಳು ಎಸಿ ಮತ್ತು ತಹಶೀಲ್ದಾರರ ಮೂಲಕ ಸ್ಟ್ಯಾಂಡರ್ಡೈಸ್ಡ್ ವ್ಯವಸ್ಥೆಯಾಗಬೇಕು. ಅಧಿಕ ಬೆಲೆಗೆ ಯಾರೂ ದನಸ-ಧಾನ್ಯ, ಹಣ್ಣು ತರಕಾರಿ ಮಾರಬಾರದಂತೆ ಕ್ರಮ ವಹಿಸಿ ಎಂದರು.
ಎಸ್ಪಿ ಹನುಮಂತರಾಯ ಮಾತನಾಡಿ ಅನಗತ್ಯವಾಗಿ ಓಡಾಡುತ್ತಿದ್ದವರ ವಿರುದ್ದ ಕ್ರಮ ಕೈಗೊಳ್ಳಲಾಗಿದ್ದು ಇದುವರೆಗೆ 300 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದರು.
ಔಷಧಗಳನ್ನು ಸಾಗಿಸುತ್ತಿದ್ದ ವಿಆರ್ಎಲ್ ಲಾಜಿಸ್ಟಿಕ್ ಬಂದ್ ಆಗಿರುವ ಕಾರಣ ತೊಂದರೆಯಾಗಿದೆ ಎಂದು ಡಿಸಿ ತಿಳಿಸಿದಾಗ, ಉಸ್ತುವಾರಿ ಕಾರ್ಯದರ್ಶಿಗಳು ಈ ಕುರಿತು ಸಾರಿಗೆ ಇಲಾಖೆಯೊಂದಿಗೆ ಮಾತನಾಡುತ್ತೇನೆ. ಆದಷ್ಟು ಹತ್ತಿರದ ಪ್ರದೇಶಗಳಿಂದ ಔಷದಿ ತರಿಸಿಕೊಳ್ಳಿರಿ ಎಂದರು.
ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಬೆಂಗಳೂರು ಮತ್ತು ಇತರೆ ಪ್ರದೇಶಗಳಿಗೆ ಗ್ರಾಮೀಣ ಭಾಗಕ್ಕೆ ಒಟ್ಟು 15600 ಜನರು ಬಂದಿದ್ದು ಕೊರೊನಾ ಹಿನ್ನೆಲೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿ ಕಿರಾಣಿ ಅಂಗಡಿಗಳಿಗೆ, ರೈತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕ್ರಮ ವಹಿಸಿದ್ದು, ತಳ್ಳು ಗಾಡಿಗಳ ಮೂಲಕ ತರಕಾರಿ ಖರೀದಿಗೆ ವ್ಯವಸ್ಥೆ ಮಾಡಲಾಗಿದೆ. 1520 ಶಾಲೆಗಳ 15235 ಮಕ್ಕಳ ಪೈಕಿ 11300 ಮಕ್ಕಳಿಗೆ 21 ದಿಗನಳ ಪಡಿತರ ಹಾಗೂ ಅಂಗನವಾಡಿ ಮಕ್ಕಳಿಗೆ ಪಡಿತರ ತಲುಪಿಸಲಾಗಿದೆ ಎಂದರು.
ಡಿಸಿ ಮಾತನಾಡಿ ಮಂಡಕ್ಕಿ ಭಟ್ಟಿ ಆರಂಭಿಸಲು ಆದೇಶಿಸಲಾಗಿದೆ. ಅವಲಕ್ಕಿ ಭಟ್ಟಿ ಆರಂಭವಾಗಿದ್ದು ಎಲ್ಲಾ ಆಹಾರ ತಯಾರಿಕಾ ಕೈಗಾರಿಕೆಗಳನ್ನು ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.
104 ಸಹಾಯವಾಣಿ ಮೂಲಕ 30 ದೂರುಗಳು ಬಂದಿದ್ದು, ಅವುಗಳನ್ನು ಎಫ್ಎಸ್ಟಿ ತಂಡ ನಿರ್ವಹಣೆ ಮಾಡಿದೆ. ವಾರ್ ರೂಂ ಗೆ ಸ್ಥಳೀಯವಾಗಿ 8 ದೂರುಗಳು ಬಂದಿದ್ದು, ಪ್ರಮುಖವಾಗಿ ಜನರು ರಸ್ತೆಯಲ್ಲಿ ಓಡಾಡುವ ಹಾಗೂ ಹೋಂ ಕ್ವಾರಂಟೈನ್ ಓಡಾಟದ ಬಗ್ಗೆ ಆಗಿದ್ದು ಇವುಗಳನ್ನು ಅಟೆಂಡ್ ಮಾಡಲಾಗಿದೆ ಎಂದರು.
ಒಟ್ಟು 377 ಹೊರ ರಾಜ್ಯದ ಕಾರ್ಮಿಕರು ಮುಖ್ಯವಾಗಿ ಬಿಹಾರ್, ಝಾರ್ಖಂಡ್, ಪಶ್ಚಿಮ ಬಂಗಾಳ, ತಮಿಳುನಾಡು, ಉತ್ತರಪ್ರದೇಶದವರಾಗಿದ್ದು ಇವರಿಗೆಲ್ಲ ಆಹಾರ ನೀಡಲಾಗುತ್ತಿದೆ ಎಂದು ಡಿಸಿ ತಿಳಿಸಿದರು.
ಉಸ್ತುವಾರಿ ಕಾರ್ಯದರ್ಶಿಗಳು ಹಕ್ಕಿಜ್ವರದ ಹಿನ್ನೆಲೆ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಕುರಿತು ಕೇಳಿದ ಪ್ರಶ್ನೆಗೆ ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ಭಾಸ್ಕರ್ ನಾಯಕ್ ಉತ್ತರಿಸಿ, 2685 ಕೋಳಿಗಳನ್ನು ಕಲ್ಲಿಂಗ್ ಮಾಡಲಾಗಿದೆ. ಬೇಡಿಕೆ ಕುಸಿದ ಕಾರಣ ಫಾರಂ ಮಾಲೀಕರು ಕೋಳಿಗಳನ್ನು ಸ್ವತಃ ಜೀವಂತ ಸಮಾದಿ ಮಾಡಿದರು. ಬನ್ನಿಕೋಡಿನ ಒಂದು ಕಿ.ಮೀ ಸೋಂಕಿತ ವಲಯವನ್ನು ಡಿಸ್ಇನ್ಫೆಕ್ಟ್ ಮಾಡಲಾಗಿದೆ. ಹಾಗೂ 01 ಕಿ.ಮೀ ವ್ಯಾಪ್ತಿಯ ಸೋಂಕಿತ ವಲಯದಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟವನ್ನು 90 ದಿನ ನಿರ್ಬಂಧಿಸಿದ್ದು ಉಳಿದಂತೆ ಜಿಲ್ಲೆಯ ಎಲ್ಲ ಕಡೆ ಮಾರಾಟ ಮಾಡಲಾಗುತ್ತಿದೆ ಎಂದರು.
ಇದಕ್ಕೆ ಉಸ್ತುವಾರಿ ಕಾರ್ಯದರ್ಶಿಗಳು ಪ್ರತಿಕ್ರಿಯಿಸಿ ಕೋಳಿ ಅತ್ಯುತ್ತಮ ಪ್ರೋಟಿನ್ ಆಹಾರ ಆಗಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಾರಣ ಕೊರೊನಾಗೆ ಇದು ಒಳ್ಳೆಯ ಆಹಾರ. ಹಾಗಾಗಿ ಸರ್ಕಾರವೇ ಕಡ್ಡಾಯವಾಗಿ ಎಲ್ಲೆಡೆ ಕೋಳಿ ಮತ್ತು ಮೊಟ್ಟೆ ಮಾರಾಟಕ್ಕೆ ಉತ್ತೇಜನ ನೀಡಿದೆ ಎಂದರು.
ಸಭೆಯಲ್ಲಿ ಎಡಿಸಿ ಪೂಜಾರ್ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಡಿಹೆಚ್ಓ ಡಾ.ರಾಘವೇಂದ್ರಸ್ವಾಮಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ

1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಂದ ಸ್ಥಳ ಪರಿಶೀಲನೆ
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಸುದ್ದಿದಿನ,ಬಳ್ಳಾರಿ:ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವಷÀð ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು.
2024-25 ನೇ ಸಾಲಿನಲ್ಲಿ 3,71,000 ಕೋಟಿ ರೂ. ಬಜೆಟ್ ಗಾತ್ರವಿತ್ತು. 2025-26 ನೇ ಸಾಲಿನಲ್ಲಿ ಬಜೆಟ್ ನ ಗಾತ್ರವನ್ನು 4,09,000 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಅಂದರೆ ಸುಮಾರು 38,000 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ನುಡಿದಂತೆ ನಡೆದ ಸರ್ಕಾರ ನಮ್ಮದು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಕೆಆರ್ಡಿಬಿ ಗೆ 5 ಸಾವಿರ ಕೋಟಿ ರೂ
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ. ಈ ಭಾಗದ 371 (ಜೆ) ವಿಶೇಷ ಸ್ಥಾನಮಾನವನ್ನು ನಮ್ಮ ಸರ್ಕಾರವೇ ಜಾರಿಗೊಳಿಸಿದ್ದು ಎಂದು ಮನನ ಮಾಡಿದ ಅವರು, ಕೇಂದ್ರ ಸರ್ಕಾರವು ತಿದ್ದುಪಡಿ ಬಳಿಕ ವಿಶೇಷ ಸ್ಥಾನಮಾನ ನೀಡಲು ಪ್ರತಿಬಿಂಬಿಸಿತ್ತು, ಆದರೆ ಈವರೆಗೆ ಒಂದು ರೂ. ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು.
1.03 ಲಕ್ಷ ಹಕ್ಕುಪತ್ರ ವಿತರಣೆ
ನಮ್ಮ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಇನ್ನುಮುಂದೆಯೂ ನಡೆಯುತ್ತೇವೆ ಎಂದು ಜನರಿಗೆ ತಿಳಿಯಪಡಿಸಲು ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಈ.ತುಕಾರಾಮ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಎಂ.ಪಿ.ಲತಾ, ಶ್ರೀನಿವಾಸ ನಾಯ್ಕ ಮತ್ತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮೊಹಮದ್ ನೊಂಗ್ಜಾಯ್ ಅಕ್ರಂ ಅಲಿ ಪಾಷಾ, ಎಸ್ಪಿಗಳಾದ ಡಾ.ಶೋಭರಾಣಿ.ವಿ.ಜೆ., ಶ್ರೀಹರಿಬಾಬು ಸೇರಿದಂತೆ ಅನೇಕರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ

- ಗಿರೀಶ್ ಕುಮಾರ್ ಗೌಡ
ಸುದ್ದಿದಿನ,ವಿಜಯನಗರ:ಚುನಾವಣೆ ಸಂದರ್ಭದಲ್ಲಿ ನೀಡಿದ ಪ್ರಣಾಳಿಕೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು ಕಳೆದೆರಡು ವರ್ಷಗಳಿಂದ 90 ಸಾವಿರ ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದೆ. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ದಿಯಲ್ಲಿ ಗಣನೀಯ ಸಾಧನೆ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ಅವರು ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ, ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮವನ್ನು ಮೇ.20 ರಂದು ಸರ್ಕಾರದಿಂದ ಏರ್ಪಡಿಸಲಾಗಿದ್ದು, ಇದರ ಪೂರ್ವಸಿದ್ದತೆ ಪರಿಶೀಲನೆಗೆ ಆಗಮಿಸಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, 2023 ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಪಕ್ಷ ಸರ್ಕಾರ ರಚನೆ ಮಾಡಿತು. ಮೊದಲ ಸಂಪುಟ ಸಭೆಯಲ್ಲಿಯೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತೀರ್ಮಾನಿಸಲಾಯಿತು. ಆದರೆ ವಿರೋಧ ಪಕ್ಷದವರು ಇದರಿಂದ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅನೇಕ ಟೀಕೆಯನ್ನು ಮಾಡಿದವು. ಅಂದು ಟೀಕೆ ಮಾಡಿದವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಇಂದು ನಕಲು ಮಾಡುವಂತಾಗಿದೆ. ಈಗ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದು, ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಇದಕ್ಕೆ ನಿದರ್ಶನ 2024-25 ರಲ್ಲಿ ಸರ್ಕಾರದ ಬಜೆಟ್ ಗಾತ್ರ ರೂ.3,71,000 ಕೋಟಿ, 2025-26 ರಲ್ಲಿ ಇದು ರೂ.4,09,000 ಕೋಟಿರೂಗಳಿಗೆ ಏರಿಕೆಯಾಗಿರುವುದು ಒಂದು ವರ್ಷದಲ್ಲಿ 38,000 ಸಾವಿರ ಕೋಟಿ ರೂಗಳು ಸರ್ಕಾರದ ಹೆಚ್ಚುವರಿ ಆದಾಯವಾಗಿದೆ. ಬಜೆಟ್ ಮಂಡನೆಯನ್ನು ಸಂಗ್ರಹವಾಗುವ ತೆರಿಗೆ ಮತ್ತು ಆದಾಯವನ್ನು ಆಧರಿಸಿ ಬಜೆಟ್ ಸಿದ್ದಪಡಿಸಲಾಗುತ್ತದೆ. ಆದಾಯ ಇಲ್ಲದೇ ಬಜೆಟ್ ಗಾತ್ರ ಹೆಚ್ಚುತ್ತಿರಲಿಲ್ಲ ಎಂದರು.
ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಅನುದಾನ ನೀಡಿದ್ದು ಅನೇಕ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇನ್ನೂರು, ಮುನ್ನೂರು ಮತ್ತು ಏಳುನೂರು ಕೋಟಿವರೆಗೆ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ ರೂ.90,000 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಲಾಗಿದೆ. ವಿರೋಧ ಪಕ್ಷದವರು ಅಭಿವೃದ್ದಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, 2024-25 ರಲ್ಲಿ ಆಸ್ತಿ ಸೃಜನೆಗಾಗಿ ರೂ.51,000 ಕೋಟಿ ವೆಚ್ಚ ಮಾಡಲಾಗಿದೆ. 2025-26 ರಲ್ಲಿ ಆಸ್ತಿ ಸೃಜನೆಗಾಗಿ ರೂ.83,000 ಕೋಟಿ ವರೆಗೆ ವೆಚ್ಚ ಮಾಡುತ್ತಿದ್ದು ಗ್ಯಾರಂಟಿಗೆ ರೂ.50,018 ಕೋಟಿ ಮೀಸಲಿರಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನವನ್ನೂ ಸಹ ಪೂರಕ ಬಜೆಟ್ಲ್ಲಿ ನೀಡಲಾಗುತ್ತದೆ. ಆದರೆ ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ ಎಂದರು.
ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಬದ್ದ
ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಕೆಕೆಆರ್ಡಿಬಿಗೆ ಕಳೆದ ಬಜೆಟ್ನಲ್ಲಿ ರೂ.5,000 ಕೋಟಿ ರೂಗಳು ನೀಡಿದ್ದು, ಈ ವರ್ಷವೂ ಅಷ್ಟೇ ಅನುದಾನ ನೀಡಲಾಗಿದೆ. ಆದರೆ ಹಿಂದಿನ ಸರ್ಕಾರ ಕೊನೆ ವರ್ಷ ರೂ.3,000 ಕೋಟಿ ರೂಗಳನ್ನು ಕೆಕೆಆರ್ಡಿಬಿಗೆ ನೀಡಿತ್ತು. 371ಜೆ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು ಇದರ ಅಭಿವೃದ್ದಿಗೆ ಕೇಂದ್ರ ಅನುದಾನ ನೀಡಬೇಕಿತ್ತು. ಆದರೆ ಒಂದು ಬಿಡಿಗಾಸು, ಒಂದೇ ಒಂದು ರೂಪಾಯಿಯನ್ನು ನೀಡಿಲ್ಲ ಎಂದರು. ಮೇ.20 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ 1,03,000 ಜನರಿಗೆ ಕಂದಾಯ ಇಲಾಖೆಯಿಂದ ಆಸ್ತಿಯ ಹಕ್ಕುಪತ್ರಗಳನ್ನು ನೀಡಲಾಗುತ್ತದೆ. ಕಳೆದೆರಡು ವರ್ಷಗಳಲ್ಲಿ ಸರ್ಕಾರ ಜನರಿಗಾಗಿ ಮಾಡಿದ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಬರಲಿದ್ದಾರೆ. ಅಂದಾಜು ಮೂರು ಲಕ್ಷಕ್ಕಿಂತ ಹೆಚ್ಚಿನ ಜನರು ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಭಾಗವಹಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು ವಿರೋಧ ಪಕ್ಷದ ನಾಯಕರನ್ನು ಸಹ ಅಹ್ವಾನಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಸಮನ್ವಯತೆಯಿಂದ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಕ್ಫ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್, ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಯೋಜನಾ ಸಚಿವರಾದ ಡಿ.ಸುಧಾಕರ್, ಸಂಸದ ಈ.ತುಕಾರಾಂ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಕಂಪ್ಲಿ ಶಾಸಕ ಗಣೇಶ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಮೊಣಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೋಂಗ್ಜಾಯ್ ಅಕ್ರಮ್ ಷಾ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರೀಹರಿಬಾಬು.ಬಿ.ಎಲ್, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಇತರರಿದ್ದರು.
www.suddidina.com | contact : watsapp 9980346243 |

ದಿನದ ಸುದ್ದಿ
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರಾಜ್ಯಾದ್ಯಂತ 161 ಉಗ್ರಾಣ ಕೇಂದ್ರಗಳ ಮೂಲಕ ರೈತರಿಗೆ, ರೈತ ಉತ್ಪಾದಕ ಸಂಸ್ಥೆ, ಸರ್ಕಾರಿ ಸಂಸ್ಥೆಗಳಿಗೆ ಹಾಗೂ ವ್ಯಾಪಾರಸ್ಥರಿಗೆ, ಇತರೆ ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳನ್ನು ಬಾಡಿಗೆಗೆ ನೀಡಲು ಇಚ್ಚಿಸಿದ್ದು, ಕೃಷಿ ಉತ್ಪನ್ನಗಳನ್ನು ವೈಜ್ಞಾನಿಕ ಸರಕು ಸಂಗ್ರಹಣಾ ಸೌಲಭ್ಯ ಒದಗಿಸುತ್ತಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅದರಂತೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಾಗರಪೇಟೆಯಲ್ಲಿ 3 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 7 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯ ಮತ್ತು ಹೊಸಹಳ್ಳಿಯಲ್ಲಿ 2 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 10108 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮುಗಳನ್ನು ನಿರ್ಮಿಸಲಾಗದೆ. ಆಸಕ್ತಿಯುಳ್ಳವರು ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಪ್ರಾದೇಶಿಕ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ 7760966953 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
www.suddidina.com | ಸುದ್ದಿದಿನ.ಕಾಂ|ವಾಟ್ಸಾಪ್|9980346243 |

-
ದಿನದ ಸುದ್ದಿ5 days ago
ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆ
-
ದಿನದ ಸುದ್ದಿ6 days ago
ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ನೂರು ಉಗ್ರಗಾಮಿಗಳು ಹತ : ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್
-
ದಿನದ ಸುದ್ದಿ5 days ago
ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ
-
ದಿನದ ಸುದ್ದಿ5 days ago
ದಾವಣಗೆರೆ | ಮುಂಗಾರು ವಿಪತ್ತು ನಿರ್ವಹಣೆಗೆ ಸಿದ್ದತೆ, ಸಿಡಿಲಬ್ಬರ ಮುನ್ನೆಚ್ಚರಿಕೆಗೆ ಆಪ್ ಅಳವಡಿಸಿಕೊಳ್ಳಲು ಸಲಹೆ
-
ದಿನದ ಸುದ್ದಿ5 days ago
ದಾವಣಗೆರೆ | ಡಿ.ಇ.ಎಲ್.ಇಡಿ. ದಾಖಲಾತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಇದೇ 15 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ4 days ago
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
-
ದಿನದ ಸುದ್ದಿ4 days ago
ದಾವಣಗೆರೆ | ವಾಹನ ತಪಾಸಣೆ ವೇಳೆ ಲಾರಿ ಹರಿದು ಪೋಲಿಸ್ ಸಾವು ; ಲಾರಿಯೊಂದಿಗೆ ಚಾಲಕ ಪರಾರಿ