Connect with us

ದಿನದ ಸುದ್ದಿ

ದಾವಣಗೆರೆ | ಬೌದ್ದಿಕ ಅಂಗವೈಕಲ್ಯ ಮಕ್ಕಳಿಗೆ ಟಿಎಲ್‍ಎಂ ಕಿಟ್ ವಿತರಣೆ : ಎಲ್ಲ ಮಕ್ಕಳಲ್ಲೂ ವಿಶೇಷತೆ ಇರುತ್ತದೆ : ಜಿ.ಪಂ ಅಧ್ಯಕ್ಷೆ ದೀಪಾ ಜಗದೀಶ್

Published

on

ಸುದ್ದಿದಿನ,ದಾವಣಗೆರೆ :ಎಲ್ಲ ಮಕ್ಕಳಲ್ಲೂ ಒಂದೊಂದು ವಿಶೇಷತೆ ಇರುತ್ತದೆ. ಪೋಷಕರು ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಹಾಗೂ ವಿಶೇಷ ಮಕ್ಕಳಿಗೆಂದೇ ಸರ್ಕಾರ ಒದಗಿಸಿರುವ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಹೇಳಿದರು.

ನಗರದ ದೇವರಾಜ ಅರಸು ಬಡಾವಣೆಯಲ್ಲಿಯರುವ ಕಾಂಪೋಸಿಟ್ ರೀಜನಲ್ ಸೆಂಟರ್‍ನಲ್ಲಿ(ಸಿಆರ್‍ಸಿ) ಜು.17 ರಂದು ಶುಕ್ರವಾರ ಏರ್ಪಡಿಸಲಾಗಿದ್ದ ಅಡಿಪ್ಸ್ ಯೋಜನೆಯಡಿ ಬೌದ್ದಿಕ ಅಂಗವೈಕಲ್ಯತೆ ಹೊಂದಿರುವವರಿಗೆ ಟೀಚಿಂಗ್ ಲರ್ನಿಂಗ್ ಮಟೀರಿಯಲ್ಸ್ ಕಿಟ್ (ಟಿಎಲ್‍ಎಂ) ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅರ್ಹ ಮಕ್ಕಳಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದರು.

ಅನೇಕ ರೀತಿಯ ಬೌದ್ದಿಕ ಸಮಸ್ಯೆಗಳಿರುವ, ಅಂಗವೈಕಲ್ಯತೆ ಇರುವ ಮಕ್ಕಳಿಗೆ ತರಬೇತಿ, ಪುನರ್ವಸತಿ ಕಲ್ಪಿಸುತ್ತಿರುವ ಇಂತಹ ಒಂದು ಉತ್ತಮ ಕಾಂಪೋಸಿಟ್ ರೀಜನಲ್ ಸೆಂಟರ್(ಸಿಆರ್‍ಸಿ)ದಾವಣಗೆರೆಯಲ್ಲಿರುವುದು ಸಂತಸದ ವಿಚಾರವಾಗಿದ್ದು, ಇಂತಹ ಸಮಸ್ಯೆ ಇರುವ ಎಲ್ಲ ಮಕ್ಕಳಿಗೆ ಈ ಸೌಲಭ್ಯಗಳು ದೊರೆಯಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಹಾಕರ ಮತ್ತು ಸಹಯೋಗದಿಂದ ಕೆಲಸ ಮಾಡಿದಲ್ಲಿ ಎಲ್ಲ ಯೋಜನೆಗಳು ಪರಿಣಾಮಕಾರಿಯಾಗಿ ಅರ್ಹರಿಗೆ ತಲುಪಲಿವೆ ಎಂದರು.

ಸಿಆರ್‍ಸಿ ನಿರ್ದೇಶಕ ಡಾ.ಜ್ಞಾನವೇಲ್ ಮಾತನಾಡಿ, ಈ ಕೇಂದ್ರದಲ್ಲಿ ಬೌದ್ದಿಕ ಅಂಗವೈಕಲ್ಯ ಮತ್ತು ಇತರೆ ವಿಕಲಚೇತನ ಮಕ್ಕಳೊಂದಿಗೆ ಸಹನೆ, ಪ್ರೀತಿ ವಿಶ್ವಾಸದಿಂದ ಮನವೊಸಲಿಸಿ ತರಬೇತಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ. 1825 ಹೊಸಬರಿಗೆ ಮತ್ತು 112016 ಫಾಲೊ ಅಪ್ ಪ್ರಕರಣಗಳಲ್ಲಿ ಪುನರ್ವಸತಿ ಸೇವೆ ನೀಡಲಾಗಿದೆ.

ಅಡಿಪ್ ಯೋಜನೆಯಡಿ ಇದುವರೆಗೆ 492 ಟಿಎಲ್‍ಎಂ ಕಿಟ್ ವಿತರಣೆ ಮಾಡಲಾಗಿದೆ. 464 ಹಿಯರಿಂಗ್ ಏಡ್‍ಗಳನ್ನು ನೀಡಲಾಗಿದೆ. ಈ ಬಾರಿ ಒಟ್ಟು 87 ಬೌದ್ದಿಕ ಅಂಗವೈಕಲ್ಯತೆ ಹೊಂದಿರುವ ಮಕ್ಕಳಿಗೆ ಟೀಚಿಂಗ್ ಲರ್ನಿಂಗ್ ಮಟೀರಿಯಲ್‍ಗಳನ್ನು ನೀಡುವ ಗುರಿ ಹೊಂದಲಾಗಿದ್ದು ಕೋವಿಡ್ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಮೊದಲನೇ ಹಂತದಲ್ಲಿ 7 ಜನರಿಗೆ ಟಿಎಲ್‍ಎಂ ವಿತರಣೆ ಮಾಡುವರು. ಉಳಿದ 80 ಟಿಎಲ್‍ಎಂಗಳನ್ನು ನಂತರದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ದಿನಕ್ಕೆ 5 ರಿಂದ 10 ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಿಆರ್‍ಸಿ ರಿಹ್ಯಾಬಿಲಿಟೇಷನ್ ಅಧಿಕಾರಿ ಕನಗಸಭಾಪತಿ ನಿರೂಪಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಶಿಧರ್ ಜಿ.ಎಸ್, ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಹ ಪ್ರಾಧ್ಯಾಪಕ ಶೇಕ್ ಯಾಸಿನ್ ಶರೀಫ್, ರಾಜು ತಲಾಥೋಟಿ, ಆಡಳಿತಾಧಿಕಾರಿ ಪಂಕಜ್ ಸಿನ್ಹಾ, ಫಲಾನುಭವಿಗಳ ಪೋಷಕರು, ಇತರೆ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending