Connect with us

ದಿನದ ಸುದ್ದಿ

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜಗಳೂರು ತಾಲ್ಲೂಕು ವ್ಯಾಪ್ತಿಯ ಸೊಕ್ಕೆ ಹೋಬಳಿ ಚಿಕ್ಕಮ್ಮನ ಹಟ್ಟಿ ಪ್ರದೇಶಕ್ಕೆ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ನಿಯಮಾನುಸಾರ ನಿಗಧಿತ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಚಿಕ್ಕಮ್ಮನ ಹಟ್ಟಿ ಪ್ರದೇಶದಲ್ಲಿ 79 ಅಂತ್ಯೋದಯ, 264 ಬಿಪಿಎಲ್ ಮತ್ತು 09 ಎಪಿಎಲ್ ಒಳಗೊಂಡಂತೆ ಒಟ್ಟು 352 ಪಡಿತರ ಚೀಟಿಗಳು ಇದ್ದು, ಒಂದು ತಿಂಗಳ ಪಡಿತರ ಎತ್ತುವಳಿಗೆ ಕನಿಷ್ಠ 50.000 ಮೊತ್ತದ ಅಗತ್ಯವಿರುತ್ತದೆ.

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ, ಸಂಸ್ಥೆ, ಗ್ರಾಮ ಪಂಚಾಯತಿ ಮತ್ತು ಸ್ಥಳೀಯ ಸಂಸ್ಥೆ, ಸಹಕಾರ ಸಂಘಗಳಾದ ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ(ನಿ), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೋಂದಾಯಿತ ಸಹಕಾರ ಸಂಘ, ನೋಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘ, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ನೇಕಾರರ ಸಹಕಾರ ಸಂಘ, ನೋಂದಾಯಿತ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ, ನೋಂದಾಯಿತ ವಿವಿಧೋದ್ದೇಶ ಸಹಕಾರ ಸಂಘ, ಅಂಗವಿಕಲರ ಕಲ್ಯಾಣ ಸಹಕಾರ ಸಂಘ ಹಾಗೂ ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘ ಅಥವಾ ಸಹಕಾರ ಬ್ಯಾಂಕ್; ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಕಟಣೆ ಹೋರಡಿಸಿದ 30 ದಿನಗಳೊಳಗಾಗಿ ಉಪನಿರ್ದೇಶಕರು, ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ (ಜಿಲ್ಲಾಡಳಿತ ಭವನದ ಕೊಠಡಿ ನಂ. 4) ಇವರಿಂದ ಅರ್ಜಿ ನಮೂನೆ ಪಡೆದು ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಜಗಳೂರು ತಾಲ್ಲೂಕು ಕಚೇರಿಯಲ್ಲಿ ಸಹ ಪಡೆದುಕೊಳ್ಳಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending