ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ5 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ4 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ3 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ1 day agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ24 hours agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

