ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

