Connect with us

ದಿನದ ಸುದ್ದಿ

ದಾವಣಗೆರೆ | ಲಾಕ್‌ಡೌನ್ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ; 67 ಪ್ರಕರಣ ದಾಖಲು, 4.63 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ, ವಾಹನ ವಶ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಎರಡನೇ ಅಲೆಯ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿದ ಲಾಕ್‌ಡೌನ್ ಸಂದರ್ಭಲ್ಲಿ ಅನುಮತಿಸಿದ ಅವಧಿಯನ್ನು ಹೊರತುಪಡಿಸಿ, ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಯ ಒಟ್ಟು 67 ಪ್ರಕರಣಗಳನ್ನು ದಾಖಲಿಸಿ, 4.63 ಲಕ್ಷ ರೂ. ಮೌಲ್ಯದ ಮದ್ಯ, ಬಿಯರ್ ಹಾಗೂ ವಾಹನ ವಶಕ್ಕೆ ಪಡೆಯಲಾಗಿದೆ.

ರಾಜ್ಯ ಸರ್ಕಾರ ಹಾಗೂ ಅಬಕಾರಿ ಆಯುಕ್ತರ ನಿರ್ದೇಶನದ ಮೆರೆಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲಾದ್ಯಂತ ಜೂ. 07 ರವರೆಗೆ ಎಲ್ಲ ಬಗೆಯ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ನಡುವೆ ಇತ್ತೀಚೆಗೆ ಮೇ.31 ಹಾಗೂ ಜೂನ್ 3 ರಂದು ಬೆಳಿಗ್ಗೆ 06 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಅನುಮತಿಸಿದ ಅವಧಿ ಹೊರತುಪಡಿಸಿ, ಉಳಿದಂತ ಅವಧಿಯಲ್ಲಿ ಜಿಲ್ಲೆಯಲ್ಲಿ ಎಲ್ಲಾ ಬಗೆಯ ಮದ್ಯದ ಮಾರಾಟವನ್ನು ನಿಷೇಧಿಸಿ, ನಿಷೇಧಿತ ಅವಧಿಯಲ್ಲಿ ಎಲ್ಲಾ ವಿಧದ ಮದ್ಯದ ಸನ್ನದುಗಳನ್ನು ಇಲಾಖೆಯಿಂದ ಸೀಲ್ ಮಾಡಿ ಬಂದ್ ಮಾಡಲಾಗಿರುತ್ತದೆ.

ಮದ್ಯ ಮಾರಾಟದ ನಿಷೇಧಿತ ಅವಧಿಯ ಜೊತೆಗೆ ಲಾಕ್‌ಡೌನ್ ಅವಧಿ ಏ.23 ರಿಂದ ಮೇ 31 ರವರೆಗಿನ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಲು ಜಿಲ್ಲೆಯಲ್ಲಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಚುರುಕುಗೊಳಿಸಿ ದಾವಣಗೆರೆ ಜಿಲ್ಲೆಯಾದ್ಯಂತ ದಾಳಿ ನಡೆಸಲಾಗಿತ್ತು.

ಕಳೆದ ಏ.23 ರಿಂದ ಮೇ.31 ರವರೆಗೆ ಜಿಲ್ಲೆಯಲ್ಲಿ ಒಟ್ಟು 147 ದಾಳಿ ಸಂಘಟಿಸಿದ್ದ್ದು, 19 ಘೋರ ಹಾಗೂ 15(ಎ) ಅಡಿಯಲ್ಲಿ 48 ಸೇರಿದಂತೆ ಒಟ್ಟು 67 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಲ್ಲದೇ 385.930 ಲೀ ಮದ್ಯ, 113.930 ಲೀ ಬಿಯರ್, 4 ವಾಹನ ಸೇರಿದಂತೆ ಒಟ್ಟು 4,63,487 ರೂ. ಮೌಲ್ಯದ ಅಬಕಾರಿ ಪದಾರ್ಥ ಮತ್ತು ವಸ್ತುಗಳನ್ನು ಜಪ್ತು ಮಾಡಲಾಗಿದೆ.

ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಮದ್ಯದ ಅಲಭ್ಯತೆಯಿಂದಾಗಿ ಪಾನೀಕರು ತಮ್ಮ ವ್ಯಸನದ ಹಿನ್ನೆಲೆಯಲ್ಲಿ ಇತರೆ ಮಾದಕ ವಸ್ತುಗಳಾದ ನಕಲಿ ಮದ್ಯ, ಕಳ್ಳಭಟ್ಟಿ, ಸಾರಾಯಿ, ಸ್ಯಾನಿಟೈಸರ್, ವಾರ್ನಿಶ್, ಸರ್ಜಿಕಲ್ ಸ್ಪಿರಿಟ್ ಇತ್ಯಾದಿಗಳನ್ನು ಸೇವನೆ ಮಾಡಬಾರದು.

ಇದರ ಸೇವನೆಯಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರೊಂದಿಗೆ ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಾವು-ನೋವುಗಳನ್ನು ತಡೆಗಟ್ಟಲು ಸಹಕಾರ ನೀಡಬೇಕು.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ದಾವಣಗೆರೆ ವಲಯ ನಂ.1 ರ ಅಬಕಾರಿ ನಿರೀಕ್ಷಕರಾದ ವಿನೋದ್ ಕಳಸಪ್ಪ ಗೋಳ್ 7795323230, ದಾವಣಗೆರೆ ವಲಯ ನಂ 2 ರ ಅಬಕಾರಿ ನಿರೀಕ್ಷಕ ಶಂಕರಪ್ಪ 9448532551, ಹರಿಹರ ವಲಯದ ಅಬಕಾರಿ ನಿರೀಕ್ಷಕ ಶೀಲಾ.ಜೆ.ಕೆ 8861411339, ಹೊನ್ನಾಳಿ ವಲಯದ ಅಬಕಾರಿ ನಿರೀಕ್ಷಕ ಎಸ್.ಆರ್.ಮುರುಡೇಶ್ 9449686222.

ಚನ್ನಗಿರಿ ವಲಯದ ಅಬಕಾರಿ ನಿರೀಕ್ಷಕ ನೌಷದ್ ಅಹಮ್ಮದ್ ಖಾನ್ 9380891915, ಅಬಕಾರಿ ಉಪ ಆಯುಕ್ತರ ಕಚೇರಿ ಅಬಕಾರ ನಿರೀಕ್ಷಕಿ ರಶ್ಮೀ ಕೆ.ಆರ್ 8970560049, ದಾವಣಗೆರೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಕೆ.ಎ.ನಾಗರಾಜ್ 9449597064, ಹೊನ್ನಾಳಿ ಉಪವಿಭಾಗ ಅಬಕಾರಿ ಉಪ ನಿರೀಕ್ಷಕ ವೀರೇಶ್ ಬ. ಚಿಕ್ಕರೆಡ್ಡಿ 9449597066, ದಾವಣಗೆರೆ ಜಿಲ್ಲೆ ಅಬಕಾರಿ ಉಪ ಆಯುಕ್ತ ಶಿವಪ್ರಸಾದ್.ಬಿ 9449597061 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending