ದಿನದ ಸುದ್ದಿ
ದಾವಣಗೆರೆ | ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ ಸಮಸ್ಯೆಗೆ ಪರಿಹಾರ : ಎರಡು ಕಡೆ ಅಂಡರ್ ಬ್ರಿಡ್ಜ್ ನಿರ್ಮಿಸಿ ಕಾಮಗಾರಿ ಆರಂಭ : ರೈಲ್ವೇ ಸಚಿವ ಸುರೇಶ್ ಅಂಗಡಿ
ಸುದ್ದಿದಿನ,ದಾವಣಗೆರೆ : ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ಗೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೇ ಅಂಡರ್ ಬ್ರಿಡ್ಜ್ ಅಥವಾ ಓವರ್ಬ್ರಿಡ್ಜ್ ಸಮಸ್ಯೆಗೆ ಪರಿಹಾರ ದೊರೆತಿದ್ದು, ಶೀಘ್ರದಲ್ಲಿಯೇ ಈ ಸ್ಥಳದಲ್ಲಿ ಎರಡು ಕಡೆ ವೆಂಟ್ಗಳ(ಅಂಡರ್ಬ್ರಿಡ್ಜ್)ನಿರ್ಮಾಣಕ್ಕೆ ಯೋಜನೆ ಸಿದ್ದಪಡಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಕೇಂದ್ರದ ರಾಜ್ಯ ರೈಲ್ವೇ ಸಚಿವರಾದ ಸುರೇಶ್ ಸಿ.ಅಂಗಡಿ ಹೇಳಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ರೈಲ್ವೇ ಯೋಜನೆಗಳ ಕುರಿತು ಶುಕ್ರವಾರ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಶೋಕ ಟಾಕೀಸ್ ಬಳಿ ಇರುವ ರೇಲ್ವೇ ಗೇಟ್ ಬಳಿ ಸಾರ್ವಜನಿಕರು ಸೇರಿದಂತೆ ಓಡಾಟಕ್ಕೆ ಅನೇಕ ವರ್ಷಗಳಿಂದ ಸಮಸ್ಯೆ ಉಂಟಾಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಹಲವಾರು ಬಾರಿ ಪ್ರಯತ್ನಿಸಿದ್ದು, ಈ ಬಾರಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ.
ಪ್ರಸ್ತುತ ರೇಲ್ವೇ ಗೇಟ್ ಬಳಿ ಒಂದು ಮತ್ತು ಪುಷ್ಪಾಂಜಲಿ ಟಾಕೀಸ್ ಬಳಿ ಲಾರಿಗಳನ್ನು ನಿಲ್ಲಿಸುವ ಜಾಗದಲ್ಲಿ ಒಂದು ಒಟ್ಟು ಎರಡು ರೈಲ್ವೇ ಅಂಡರ್ ಬಿಡ್ಜ್ (ಆರ್ಯುಬಿ-ವೆಂಟ್)ಗಳನ್ನು ನಿರ್ಮಿಸಲಾಗುವುದು. ಈ ವೆಂಟ್ಗಳಿಂದ ದೊಡ್ಡ ದೊಡ್ಡ ವಾಹನಗಳೂ ಓಡಾಡುವ ರೀತಿಯಲ್ಲಿ ಯೋಜನೆ ಸಿದ್ದಪಡಿಸಿ ನಿರ್ಮಿಸುವ ಮೂಲಕ ಅನೇಕ ವರ್ಷಗಳ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದರು.
ಹಾಗೂ ಪಿ.ಬಿ.ರಸ್ತೆಯಲ್ಲಿರುವ ಎ.ಸಿ ರವರ ಕಚೇರಿಯನ್ನು ಬೇರೆಡೆ ಶಿಫ್ಟ್ ಮಾಡಿ, ಆ ಜಾಗದಲ್ಲಿ ಆರ್ಯುಬಿ ನಿರ್ಮಿಸಲಾಗುವುದು. ಜೊತೆಗೆ ಸಣ್ಣ ಪುಟ್ಟ ಮೋಟಾರ್ ಸೈಕಲ್ ಓಡಾಡಲು ಪಾಥ್ ನಿರ್ಮಿಸಲಾಗುವುದು ಎಂದರು.
ರೈಲ್ವೇ ಸಚಿವರ ಪ್ರಮುಖ ಹೇಳಿಕೆಗಳು
- 2022 ರ ವೇಳೆಗೆ ದೇಶಾದ್ಯಂತ ಎಲ್ಲ ರೈಲ್ವೆಗಳನ್ನು ವಿದ್ಯುದೀಕರಣ ಮಾಡಲಾಗುವುದು. ಹಾಗೂ 2022 ರ ಅಂತ್ಯಕ್ಕೆ ರಾಜ್ಯಾದ್ಯಂತ ರೈಲ್ವೇ ಡಬ್ಲಿಂಗ್ ಕಾಮಗಾರಿಗಳನ್ನು ಮುಗಿಸಲು ಸಂಪೂರ್ಣ ಪ್ರಯತ್ನ ಮಾಡಲಾಗುವುದು.
- ಮುಂಬೈ ಕೋಲ್ಕತ್ತಾ ವರೆಗೆ ರಫ್ತು ಮತ್ತು ಆಮದು ಮಾಡಲಿಕ್ಕೋಸ್ಕರ ಒಂದು ಡೆಡಿಕೇಟೆಡ್ ಟ್ರೈನ್ ಬಿಡಲಾಗಿದ್ದು ಇದೇ ರೀತಿಯ ರೈಲನ್ನು ರಾಜ್ಯದ ಅಂಕೋಲ-ಹುಬ್ಬಳಿಯಲ್ಲಿ ಬಿಡಲು ಪ್ರಸ್ತಾವನೆ ಆಗಿದೆ. ಆದರೆ ಈ ರೈಲಿನ ಕುರಿತಾಗಿ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ಕಾರಣ ಈಗ ಬಾಕಿ ಇದೆ. ಇದು ಇತ್ಯರ್ಥವಾದ ಬಳಿಕ ಆದಷ್ಟು ಶೀಘ್ರದಲ್ಲಿ ಕೆಲಸ ಆರಂಭಿಸಲಾಗುವುದು.
- ರಾಜ್ಯದ ಪ್ರಸ್ತಾಪಿತ ರೈಲ್ವೇ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿ ಗಳು ಮತ್ತು ಎಸ್ಎಲ್ಓ ಗಳು ಎಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆ ನಡಸಿ ಜಾಗ ನೀಡುತ್ತಾರೋ ಅಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲ್ವೆ ಲೈನ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ದಾವಣಗೆರೆ ತಾಲ್ಲೂಕಿನ 14 ಗ್ರಾಮಗಳು ಒಳಪಡಲಿದ್ದು ಒಟ್ಟು ವಿಸ್ತೀರ್ಣ 238 ಎಕರೆ ಭೂಸ್ವಾಧೀನ ಮಾಡಬೇಕಿದ್ದು, ಈ ಪೈಕಿ 209 ಎಕರೆ ಭೂಸ್ವಾಧೀನಕ್ಕೆ ಅಂತಿಮ ನೋಟಿಫಿಕೇಷನ್ ಆಗಿದೆ. ಇನ್ನೊಂದು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ವಿಶೇಷ ಭೂಸ್ವಧೀನಾಧಿಕಾರಿ ರೇಷ್ಮಾ ಹಾನಗಲ್ ಹೇಳಿದರು.
ಹುಬ್ಬಳ್ಳಿ-ಚಿಕ್ಕಜಾಜೂರು ರೈಲ್ವೇ ಟ್ರ್ಯಾಕ್ ಡಬ್ಲಿಂಗ್ ಲೈನ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ. ಆದರೆ ಒಂದು ಸ್ಟ್ರೆಚ್ಗೆ ಜನರಲ್ ಅವಾರ್ಡ್ ಮಾಡಬೇಕಿದ್ದು ರೂ. 5 ಕೋಟಿ ಠೇವಣಿ ಇರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕಾಗಿ ಎರಡು ಹಂತದಲ್ಲಿ ಒಟ್ಟು 1349.23 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಬೇಕಿದ್ದು ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಸರೋಜಾ ಹೇಳಿದಾಗ, ಸಚಿವರು ಇನ್ನು ನಾಲ್ಕು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದರು.
ಸಚಿವರು ಮಾತನಾಡಿ, ರೈಲ್ವೇ ಸೇವೆಗೆ ಸಂಬಂಧಿಸಿದಂತೆ ನಮ್ಮ ಆದ್ಯತೆ ಸುರಕ್ಷತೆ, ಸ್ವಚ್ಚತೆ ಮತ್ತು sಸಮಯಪ್ರಜ್ಞೆ ಆಗಿದೆ. ಸಮಯಕ್ಕೆ ಕೂಡ ಹೆಚ್ಚಿನ ಒತ್ತು ನೀಡಲಾಗುವುದು. ರೈಲ್ವೆ ಸಾರ್ವಜನಿಕರ ಆಸ್ತಿಯಾಗಿದ್ದು ಸಾರ್ವಜನಿಕರು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.
ಸಂಸದರಾದ ಜಿ.ಎಂ.ಸಿದ್ದೇಶ್ವರ್ ಮಾತನಾಡಿ, ದಾವಣಗೆರೆಯ ಹೊಸ ರೇಲ್ವೇ ಸ್ಟೇಷನ್ನ ಪ್ಲಾಟ್ಫಾರಂಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಹಾಗೂ ಸ್ಟೇಷನ್ನ ಪ್ರವೇಶ ಮತ್ತು ನಿರ್ಗಮನಗಳಲ್ಲಿ ಎರಡು ಕಡೆ ಎಸ್ಕಲೇಟರ್ಗಳನ್ನು ಈ ಸಾಲಿನ ಡಿಸೆಂಬರ್ ಅಂತ್ಯದೊಳಗೆ ನಿರ್ಮಿಸಬೇಕು ಎಂದರು.
ಹರಿಹರ ರೈಲ್ವೇ ನಿಲ್ದಾಣದ ಉನ್ನತೀಕರಣ, ಹರಪನಹಳ್ಳಿ ಸ್ಟೇಷನ್ನಲ್ಲಿ ರಾತ್ರಿ ಮತ್ತು ಬೆಳಗಿನ ಜಾವ ಸ್ಟ್ರೀಟ್ ಲೈಟ್ಗಳ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಆಗಬೇಕು. ಬಾತಿ-ಕರೂರ್ ರೈಲ್ವೇ ಕ್ರಾಸಿಂಗ್ ಬಳಿ ನೀರು ಸಂಗ್ರಹವಾಗುತ್ತಿದೆ. ಈ ಬಗ್ಗೆ ಇಂಜಿನಿಯರ್ಗಳು ಕ್ರಮ ಕೈಗೊಳ್ಳಬೇಕೆಂದರು
ಸಂಶೋಧನೆಗೆ ಸೂಚನೆ
ರೈಲ್ವೇ ಸಚಿವರು ಪ್ರತಿಕ್ರಿಯಿಸಿ, ರೈಲ್ವೇ ಅಂಡರ್ ಬ್ರಿಡ್ಜ್ಗಳಲ್ಲಿ ನೀರು ನಿಲ್ಲುವ ಸಮಸ್ಯೆ ಸಾಮಾನ್ಯವಾಗಿದ್ದು, ಈ ಸಮಸ್ಯೆ ಬಗೆಹರಿಸಲು ರೈಲ್ವೇ ಇಂಜಿನಿಯರ್ಗಳು ಸಂಶೋಧನೆ ನಡೆಸಬೇಕು. ಪಂಪ್ ಇಟ್ಟು ನೀರು ತೆಗೆಯುವುದು ಮುಖ್ಯವಲ್ಲ, ಬದಲಾಗಿ ಶಾಶ್ವತ ಪರಿಹಾರಕ್ಕಾಗಿ ಸಂಶೋಧನೆ ಕೈಗೊಳ್ಳುವಂತೆ ಅವರಿಗೆ ಸೂಚನೆ ನೀಡಿದರು.
ಸಂಸದರು, ವಾಸ್ಕೋ-ಯಶವಂತಪುರದ ಟ್ರೈನುಗಳು ಚಿಕ್ಕಜಾಜೂರಿನಲ್ಲಿ ನಿಲುಗಡೆ ಮಾಡಬೇಕು. ಎಲ್ಸಿ 174 ಆನಗೋಡು ಇಲ್ಲಿ ಫ್ಲೈಓವರ್ ಆಗಬೇಕು. ಮಂಡ್ಯ-ಹಡಗಲಿ ಹೈವೇ ಆಗಬೇಕು, ಜೊತೆಗೆ ಮಾಯಕೊಂಡದಲ್ಲಿ ಫ್ಲೈ ಓವರ್ ನಿರ್ಮಿಸಬೇಕು. ಭರಮಸಾಗರ-ಜಗಳೂರು ಏತ ನೀರಾವರಿ ಕಾಮಗಾರಿಗೆ ರೈಲ್ವೇಯವರು ಅನುಮತಿ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಎಸ್.ಎ ರವೀಂದ್ರನಾಥ್, ಪ್ರೊ. ಲಿಂಗಣ್ಣ, ಎಸ್.ವಿ ರಾಮಚಂದ್ರಪ್ಪ, ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ರೈಲ್ವೇ ಜಿಎಂ ಎ.ಕೆ ಸಿಂಗ್, ಮೈಸೂರ್ ರೈಲ್ವೇ ಡಿಆರ್ಎಂ ಅಪರ್ಣ ಗರಗ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಎಸಿ ಮಮತಾ ಹೊಸಗೌಡರ್, ದೂಡಾ ಆಯುಕ್ತ ಬಿ.ಟಿ ಕುಮಾರಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

