ದಿನದ ಸುದ್ದಿ
ದಾವಣಗೆರೆ | ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆ

ಸುದ್ದಿದಿನ,ದಾವಣಗೆರೆ : 72 ನೇ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜ.19 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿಗಳು ಮಾತನಾಡಿ, ರಾಷ್ಟ್ರ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ, ತ್ಯಾಗ, ಬಲಿದಾನಗಳಿಗೆ ನಾವು ಗೌರವ ಸಮರ್ಪಿಸೋಣ ಎಂದರು.
ಜನವರಿ 26 ರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರೆವೇರಿಸಿ ಬೆಳಿಗ್ಗೆ 09 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಅಂದು ಯಾವುದೇ ಕಾರಣಕ್ಕೂ ಸರ್ಕಾರಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ರಜೆ ಎಂದು ಭಾವಿಸದೇ ತಪ್ಪದೇ ಹಾಜರಿರಬೇಕು.
ಕೋವಿಡ್ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣರಾಜೋತ್ಸವ ಆಯೋಜಿಸಲಾಗಿದ್ದು ಕೋವಿಡ್ ನಿಯಮಗಳನ್ನು ಪಾಲಿಸಬೇಕು, ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ, ಹಾಗೂ ಗಣರಾಜ್ಯೋತ್ಸವ ಆಚರಣೆ ಸಂಭಂಧ ಸರ್ಕಾರ ನೀಡುವ ಮಾರ್ಗಸೂಚಿಗಳಿಗನುಗುಣವಾಗಿ ಕಾರ್ಯಕ್ರಮ ಆಚರಿಸಲಾಗುವುದು ಎಂದರು
ಪ್ಲಾಸ್ಟಿಕ್ ಧ್ವಜ ಮತ್ತು ಪ್ಲಾಸ್ಟಿಕ್ ಹೂಗುಚ್ಚಗಳನ್ನು ಮತ್ತು ಪ್ಲಾಸ್ಟಿಕ್ ನೀರಿನ ಬಾಟಲ್ಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ. ಇಡೀ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ಅಪರ ಜಿಲ್ಲಾಧಿಕಾರಿ, ಉಪ ವಿಭಾಗಧಿಕಾರಿ, ತಹಶೀಲ್ದಾರರು, ಪೊಲೀಸ್ ಉಪ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು ಇವರುಗಳು ನೋಡಿಕೊಂಡು ಕಾರ್ಯಕ್ರಮ ಅರ್ಥಪೂರ್ಣಗೊಳಿಸಲು ಸಹಕರಿಸಬೇಕು.
ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಧ್ವಜ ಸಂಹಿತಿಯನ್ನು ಕಾಪಾಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯವರು ಎಲ್ಲಾ ಶಾಲೆಗಳಲ್ಲಿ 7.30 ಕ್ಕೆ ಧ್ವಜಾರೋಹಣ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನಗರದ ಪ್ರಮುಖ ವೃತ್ತಗಳಿಗೆ ಸಂಭಂಧಿಸಿದ ಇಲಾಖೆಗಳು ದೀಪಾಲಂಕಾರ ಮಾಡಿಸಬೇಕು, ಪಥ ಸಂಚಲನೆಯಲ್ಲಿ ಭಾಗವಹಿಸುವ ತಂಡಗಳಿಗೆ ಕೇಸರಿ, ಬಿಳಿ,ಹಸಿರು ಮಾಸ್ಕ್ಗಳನ್ನು ಖಾದಿ ಗ್ರಾಮೋದ್ಯೋಗ ಇಲಾಖೆಯವರು ವ್ಯವಸ್ಥೆ ಮಾಡಬೇಕೆಂದರು ಎಂದರು.
ಈ ಹಿಂದೆ ಮಳೆಗಾಲದ ಸಮಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನೀರು ನಿಂತು ಕಾರ್ಯಕ್ರಮಕ್ಕೆ ಅಡಚಣೆಯಾದ ಸಂಧರ್ಭಗಳಿದ್ದು ಕ್ರೀಡಾಂಗಣದಲ್ಲಿ ಜಲ್ಲಿ ಮತ್ತು ಮರಳನ್ನು ಹಾಕಿಸಿ ನೆಲವನ್ನು ಸಜ್ಜುಗೊಳಿಸಬೇಕು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗಾಮ ಪಂಚಾಯತಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಶಾಲೆಗಳಲ್ಲಿ ಧ್ವಜಾರೋಹಣದ ನಂತರ ಧ್ವಜವನ್ನು ಸಾಯಂಕಾಲದವರೆಗೆ ವ್ಯವಸ್ಥಿತವಾಗಿ ನೋಡಿಕೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯತಿಯ ಕಾರ್ಯದಶಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ನಿಗದಿಪಡಿಸಿದ ಇಲಾಖೆಯವರು ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಪ್ರಮುಖ ಖಾಸಗಿ ಕಚೇರಿಗಳ ಮೇಲೆ ಜ.25 ಮತ್ತು 26 ರಂದು ವಿದ್ಯುತ್ ದೀಪಾಲಂಕಾರ ಮಾಡಿಸಬೇಕು ಎಂದರು.
ಕಾರ್ಯಕ್ರಮಕ್ಕೆ ಪೂರಕವಾಗಿ ಮಹಾನಗರಪಾಲಿಕೆಯವರು ವೇದಿಕೆ ನಿರ್ಮಾಣ, ಕುರ್ಚಿ, ಶಾಮಿಯಾನ, ಧ್ವನಿ ವರ್ಧಕ, ಕಾರ್ಪೆಟ್, ಹೂವಿನ ಹಾರ ವ್ಯವಸ್ಥೆಯನ್ನು ಮಾಡಬೇಕು. ತೋಟಗಾರಿಕೆ ಇಲಾಖೆಯವರು ವೇದಿಕೆ ಮುಂಭಾಗ ಹೂ ಅಲಂಕಾರ ಮತ್ತು ಹೂವಿನ ಕುಂಡಗಳನ್ನು ಇರಿಸಬೇಕು.
ಉಪ ವಿಭಾಗಧಿಕಾರಿಗಳು ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಬೇಕು. ತಾ.ಪಂ ಕಾರ್ಯನಿರ್ವಾಹಣಾಧಿಕಾರಿಗಳು ಮುದ್ರಿಸಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆಯವರು ಭದ್ರತೆ ಮತ್ತು ಸುರಕ್ಷತೆಯನ್ನು ಒದಗಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಭೂ-ವಿಜ್ಞಾನ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರುಗಳು ಉಪಹಾರದ ವ್ಯವಸ್ಥೆ ಮಾಡಬೇಕು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿ/ನೌಕರರಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕೆಂದ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಗಣರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಡಿಡಿಪಿಐ ಪರಮೇಶ್ವರಪ್ಪ, ಆಹಾರ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೊರೋನ ಲಸಿಕೆ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್

ಸುದ್ದಿದಿನ,ದಾವಣಗೆರೆ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್-19 ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ನಗರದ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಅಭಿಯಾನದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ (69) ಹಾಗೂ ಅವರ ಪತ್ನಿ ಗಾಯತ್ರಮ್ಮ.ಜಿ.ಎಸ್ (66), ಹಿರಿಯ ನಾಗರೀಕರು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ಅನಾರೋಗ್ಯ ಪೀಡಿತರು ಸೇರಿದಂತೆ ಒಟ್ಟು 74 ಜನರು ಲಸಿಕೆ ಪಡೆದುಕೊಂಡರು.
ಈ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ತಮ್ಮ ಮಡದಿಯೊಂದಿಗೆ ಲಸಿಕೆ ಪಡೆದು ಮಾತನಾಡಿ, ಇಡೀ ಪ್ರಪಂಚವನ್ನೇ ತಲ್ಲಣಗೊಳಿಸಿದ ಕೊರೋನ ನಿಯಂತ್ರಣಕ್ಕೆ 10 ತಿಂಗಳೊಳಗಾಗಿ ಲಸಿಕೆ ಕಂಡುಹಿಡಿದಿರುವುದು ಅಭಿನಂದನಾರ್ಹ.
ಮೊದಲ ಹಂತದಲ್ಲಿ ಕೋವಿಡ್ ನಿಯಂತ್ರಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ನಂತರ ಕಂದಾಯ, ಪೌರಾಡಳಿತ, ಪಂಚಾಯತ್ ರಾಜ್ ಇಲಾಖೆ, ಪೊಲೀಸ್ ಇಲಾಖೆ ಫಲಾನುಭವಿಗಳಿಗೆ ನೀಡಲಾಗಿದೆ. ಈ ಲಸಿಕೆ ಸುರಕ್ಷಿತವಾಗಿದ್ದು, ಇದುವರೆಗೂ ಯಾರಿಗೂ ತೊಂದರೆಯಾಗಿಲ್ಲ ಎಂದು ತಿಳಿಸಿದರು.
ಮಾರ್ಚ್ 1 ರಂದು ಲಸಿಕೆ ಪಡೆಯಬೇಕಿತ್ತು. ಕಾರಣಾಂತರಗಳಿಂದ ಲಸಿಕೆ ಪಡೆಯಲು ಸಾಧ್ಯವಾಗಲಿಲ್ಲ. ಇಂದು ಸ್ವ-ಇಚ್ಚೆಯಿಂದ ನನ್ನ ಮಡದಿಯೊಂದಿಗೆ ಬಂದು ಲಸಿಕೆ ಪಡೆದಿದ್ದು, ಯಾವುದೇ ತೊಂದರೆಯಾಗಿಲ್ಲ. ಸುರಕ್ಷಿರಾಗಿದ್ದೇವೆ. ಲಸಿಕೆ ಪಡೆಯುವುದಕ್ಕು ಮುನ್ನ ಇಲ್ಲಿ ಲಸಿಕೆ ಪಡೆದ ಹಿರಿಯರನ್ನು ವಿಚಾರಿಸಿದ್ದು, ಯಾವುದೇ ರೀತಿಯ ಅಡ್ಡಪರಿಣಾಮ ಸಂಭವಿಸಿಲ್ಲ ಎಂದು ಭರವಸೆ ನೀಡಿದ್ದಾರೆ.
ಆದ್ದರಿಂದ ಲಸಿಕೆ ಪಡೆಯದ ಎಲ್ಲಾ ಹಿರಿಯ ನಾಗರೀಕರು ಹಾಗೂ 45 ವರ್ಷ ಮೇಲ್ಪಟ್ಟ ಎಲ್ಲಾ ಅನಾರೋಗ್ಯ ಪೀಡಿತರು ಯಾವುದೇ ಭಯವಿಲ್ಲದೇ, ಹಿಂಜರಿಯದೆ ಲಸಿಕೆ ಪಡೆದುಕೊಂಡು ದೇಶಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.
ಅಭಿಯಾನದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಎರಡನೇ ಹಂತದಲ್ಲಿ ಮುಂಚೂಣಿ ಕೊರೋನ ವಾರಿಯರ್ಸ್ಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಮಾರ್ಚ್ 1 ರಿಂದ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಅಂತಹವರು ತಮ್ಮ ಆಧಾರ ಕಾರ್ಡ್ನೊಂದಿಗೆ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಮೊದಲ ಹಂತದಲ್ಲಿ ಶೇಕಡ 80 ರಷ್ಟು ಜನರು ಲಸಿಕೆ ಪಡೆದುಕೊಂಡಿದ್ದು, ನಂತರ ಮುಂಚೂಣಿ ಕೊರೋನ ವಾರಿಯರ್ಸ್ಗಳಲ್ಲಿ ಶೇಕಡ 70 ರಷ್ಟು ಜನರು ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಇನ್ನೂ ಕಂದಾಯ ಇಲಾಖೆಯಲ್ಲಿ ಶೇಕಡ 55 ರಷ್ಟು ಹಾಗೂ ಇನ್ನಿತರರು ಸೇರಿ ಶೇಕಡ 60 ರಷ್ಟು ಜನರು ಲಸಿಕೆ ಪಡೆದುಕೊಂಡಿದ್ದು, ಲಸಿಕೆ ಪಡೆಯದವರಿಗೆ ಮಾ.6 ರವರೆಗೆ ಕಾಲವಕಾಶವಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು.
ಇದನ್ನೂ ಓದಿ | ಎ ಸಿ ಬಿ ಬಲೆಗೆ ಬಿದ್ದ ಕೊಪ್ಪಳದ ಬಿ ಇ ಓ ಮತ್ತು ಎಫ್ ಡಿ ಎ
ಮಾರ್ಚ್ 1 ರಿಂದ ಮೂರನೇ ಹಂತದ ಲಸಿಕೆ ಅಭಿಯಾನ ಪ್ರಾರಂಭವಾಗಿದ್ದು, ಮೊದಲ ದಿನ 11 ಜನ ಲಸಿಕೆ ಪಡೆದಿದ್ದರು. ಆದರೆ ಇಂದು ಸರ್ಕಾರಿ ಹಾಗೂ ಖಾಸಗಿ ಎರಡು ವಲಯಗಳು ಸೇರಿ 63 ಜನರು ಲಸಿಕೆ ಪಡೆದುಕೊಂಡಿದ್ದು, ಒಟ್ಟು 74 ಜನರು ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಮಂಗಳವಾರ ಸಂಸದರಾದ ಸಿದ್ದೇಶ್ವರ ಹಾಗೂ ಅವರ ಪತ್ನಿ ಲಸಿಕೆ ಹಾಕಿಸಿಕೊಂಡಿದ್ದು ಯಾವುದೇ ತೊಂದರೆಗಳು ಸಂಭವಿಸಿಲ್ಲ. ಆದ ಕಾರಣ ಯಾರು ಭಯ ಪಡದೇ, ಲಸಿಕೆ ಕುರಿತು ಪೂರ್ವಾಗ್ರಹ ಇಟ್ಟುಕೊಳ್ಳದೇ, ಧೈರ್ಯದಿಂದ ಮುಂದೆ ಬಂದು ಕೋವಿಶೀಲ್ಡ್ ವ್ಯಾಕ್ಸಿನ್ ತೆಗೆದುಕೊಳ್ಳಬೇಕು. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದರೊಂದಿಗೆ ತಮ್ಮ ಕುಟುಂಬದವರನ್ನು ರಕ್ಷಣೆ ಮಾಡಬೇಕು. ಕೊರೋನ ಮುಕ್ತ ದೇಶವನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.
ಅಭಿಯಾನದಲ್ಲಿ ಸಂಸದರ ಪತ್ನಿ ಗಾಯತ್ರಮ್ಮ ಜಿ.ಎಸ್, ಕಾರ್ಪೋರೇಟರ್ ಆರ್.ಎಲ್.ಶಿವಪ್ರಕಾಶ್, ಆರ್ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀಕ್ಷಕ ನೀಲಕಂಠ, ಯುವ ಮುಖಂಡರಾದ ಶಿವಕುಮಾರ್, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎ ಸಿ ಬಿ ಬಲೆಗೆ ಬಿದ್ದ ಕೊಪ್ಪಳದ ಬಿ ಇ ಓ ಮತ್ತು ಎಫ್ ಡಿ ಎ

ಸುದ್ದಿದಿನ,ಕೊಪ್ಪಳ : ಬಂದ್ ಆಗಿರುವ ಶಾಲೆಯ ಡಿಪಾಸಿಟ್ ಅನ್ನು ವಾಪಾಸ್ ಪಡೆಯಲು ಮೂರುವರೆ (3.500ರೂ) ಲಂಚ ಕೇಳಿದ್ದ ಬಿ ಇ ಓ ಮತ್ತು ಎಫ್ ಡಿ ಎ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಭಾಗ್ಯನಗರದ ಎಸ್ ಎಸ್ ಕರ ಶಾಲೆಯ ಬಾಲಚಂದ್ರ ಕಬಾಡೆ ಎಂಬುವವರ ದೂರಿನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ಮೂರೂವರೆ ಸಾವಿರ ಲಂಚ ಪಡೆಯುವಾಗವಾಗ ಬಿಇಓ ಉಮಾದೇವಿ ಸೊನ್ನದ, ಎಫ್ ಡಿ ಎ ಎ ಆರುಂಧತಿ ಬಲೆಗೆ ಬಿದ್ದಿದ್ದಾರೆ. ಶಾಲೆ 2002ರಲ್ಲಿ ಆರಂಭವಾಗಿದ್ದು ೨೦೦೯ 2009 ರಲ್ಲಿ ಬಂದಾಗಿತ್ತು.
ಇದನ್ನೂ ಓದಿ | ಅಶ್ಲೀಲ ಸಿಡಿ ವೈರಲ್ | ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ; ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡಿ
ಬಳ್ಳಾರಿ ಎಸ್ಪಿ ಗುರುನಾಥ ಮತ್ತೂರ ಮಾರ್ಗದರ್ಶನದಲ್ಲಿ ಡಿಎಸ್ಪಿ ಶಿವಕುಮಾರ್, ಎಸ್ ಐ ಎಸ್ ಎಸ್ ಬೀಳಗಿ, ಎಸೈ ಬಾಳನಗೌಡ ತಂಡವು ಈ ದಾಳಿ ನಡೆಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಶ್ಲೀಲ ಸಿಡಿ ವೈರಲ್ | ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ; ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡಿ

ಸುದ್ದಿದಿನ, ಬೆಂಗಳೂರು : ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ಆಗಬಾರದೆಂದು ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅವರಿಗೆ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ.
ಇದನ್ನೂ ಓದಿ | ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್; ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು, ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪ್ರಕರಣದಲ್ಲಿ ನಾನು ಆರೋಪ ಮುಕ್ತನಾದ ಬಳಿಕ ನನಗೆ ಸಚಿವ ಸ್ಥಾನ ನೀಡಿ ಎಂದು ಸಿಎಂಬಿ.ಎಸ್.ಯಡಿಯೂರಪ್ಪಗೆ ರವಾನಿಸಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ7 days ago
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್
-
ಬಹಿರಂಗ7 days ago
ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇ ಮೊದಲ ತಪ್ಪು..!
-
ಕ್ರೀಡೆ6 days ago
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್
-
ಲೈಫ್ ಸ್ಟೈಲ್6 days ago
ರೆಸಿಪಿ | ಖರ್ಜೂರದ ಹೋಳಿಗೆ ಮಾಡೋದು ಹೇಗೆ ಗೊತ್ತಾ..?
-
ಕ್ರೀಡೆ6 days ago
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ
-
ದಿನದ ಸುದ್ದಿ5 days ago
ಅಸ್ಸಾಂ | ಅಥ್ಲೀಟ್ ಹಿಮಾ ದಾಸ್ ಡಿಎಸ್ಪಿಯಾಗಿ ನೇಮಕ ; ನನ್ನ ಮತ್ತು ತಾಯಿಯ ಕನಸು ನನಸಾದ ದಿನವಿದು : ಹಿಮಾ ಭಾವುಕ ನುಡಿ
-
ದಿನದ ಸುದ್ದಿ7 days ago
ಹೆಚ್.ಎ.ಎಲ್ ನಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ 25 ರೂ ಹೆಚ್ಚಳ ; ಇತಿಹಾಸದಲ್ಲೇ ಮೊದಲ ಸಲ ಒಂದೇ ತಿಂಗಳಲ್ಲಿ ಮೂರನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆಯಾಗಿದ್ದು..!