Connect with us

ದಿನದ ಸುದ್ದಿ

ದಾವಣಗೆರೆ | ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿಗಳ ಬಂಧನ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದ ಕರ್ನಾಟಕ ಗೃಹ ಮಂಡಳಿಯ ತುಂಗಭದ್ರಾ ಬಡಾವಣೆಯ ಕುಂದುವಾಡ-ದಾವಣಗೆರೆ ಅಂತ ಇರುವ ಮೊದಲನೇ ಕಮಾನ್ ಹತ್ತಿರ ಸರ್ವೀಸ್ ರಸ್ತೆಯಿಂದ ತುಂಗಭದ್ರಾ ಬಡಾವಣೆ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಸವರಾಜ್ ಬಿ.ಎಸ್, ಪೊಲೀಸ್ ಉಪಾಧೀಕ್ಷಕರು, ಡಿಸಿಆರ್‌ಬಿ ಘಟಕ, ದಾವಣಗೆರೆರವರ ಮಾರ್ಗದರ್ಶನದಲ್ಲಿ ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಗಿರೀಶ ಬಿ.ಎ ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡ ದಾಳಿ ಮಾಡಿ ಅರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿತರಾದ 1)ರವಿ ಶೆಟ್ಟಿ ತಂದೆ ಸಂಜೀವ ಶೆಟ್ಟಿ, 30 ವರ್ಷ, ಬಸ್ ಬುಕ್ಕಿಂಗ್ ಏಜೆಂಟ್ ಕೆಲಸ, ವಾಸ:5ನೇ ಕ್ರಾಸ್, ಜೈಲ್ ರಸ್ತೆ, ವೆಂಕಟೇಶ್ ನಗರ, ಶಿವಮೊಗ್ಗ, ಹಾಲಿ ವಾಸ:-ನ್ಯಾಷಿನಲ್ ಲಾಡ್, ಮೆಜೆಸ್ಟಿಕ್ ಬೆಂಗಳೂರು ನಗರ, 2)ಅಬ್ದುಲ್ ಹಾಫಿಕ್ ಎಸ್.ಎಂ ತಂದೆ ಮಹಮ್ಮದ್ ಬಿ.ಎಸ್, 30 ವರ್ಷ, ಬಸ್‌ ಬುಕ್ಕಿಂಗ್ ಕೆಲಸ, ವಾಸ:-# ಬಿ.ಎಸ್ ಮಂಜಿಲ್, ಪೈಚಾರ್‌ ಗ್ರಾಮ, ಸೋಣಂಗೇರಿ ಅಂಚೆ, ಸುಳ್ಯಾ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ, ಹಾಲಿ ವಾಸ:- ನ್ಯಾಷಿನಲ್ ಲಾಡ್ಜ್ ಮೆಜೆಸ್ಟಿಕ್ ಬೆಂಗಳೂರು ಇವರುಗಳನ್ನು ವಶಕ್ಕೆ ಪಡೆದು ಆರೋಪಿತರಿಂದ ಸುಮಾರು 2,84,500/- ಬೆಲೆಯ 11 ಕೆ.ಜಿ 162 ಗ್ರಾಂ ಹಾಗೂ 800/- ರೂ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಆರೋಪಿತ ವಿರುದ್ಧ ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ 37/2021 ರಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸದರಿ ದಾಳಿಯಲ್ಲಿ ಮೇಲ್ಕಂಡ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಯವರಾದ ನಾಗರಾಜ ಪಿ, ನಾಗರಾಜ ಬಿ, ದ್ಯಾಮೇಶ್ ಹೆಚ್.ಜೆ, ಲೋಹಿತ್ ಎಸ್, ಮಲ್ಲಿಕಾರ್ಜುನ ಹಾದಿಮನಿ, ಗೋವಿಂದರಾಜ ಎಸ್ ಕೊಟ್ರೇಶ್ ಎಸ್.ಎಸ್ ಹಾಗೂ ಲಿಂಗರಾಜ್ ಬಿ.ಕೆ ಇವರುಗಳು ದಾಳಿಯಲ್ಲಿ ಭಾಗವಹಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending