ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ
ಸುದ್ದಿದಿನ,ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತದಾರರ ಪಟ್ಟಿ ಪ್ರಕಟಿಸುವ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2026 ಜನವರಿ 1 ಕ್ಕೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು-ಆಕ್ಷೇಪಣೆಗಳಿದ್ದಲ್ಲಿ ಜನವರಿ 24 ರೊಳಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು 2026 ರ ಫೆಬ್ರವರಿ 14 ರಂದು ಪ್ರಕಟಿಸಲಾಗುವುದು ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4907 ಯುವ ಮತದಾರರು, 2542 ವಿಶೇಷಚೇತನ ಮತದಾರರು, 45 ಇತರೆ ಮತದಾರರು, 85 ವರ್ಷ ಮೇಲ್ಪಟ್ಟ ಮತದಾರರು 1838 , ವಿದೇಶಿ ಮತದಾರರ 1 ಮತದಾರರು ಇದ್ದು, ಈ ಪೈಕಿ 113555 ಪುರುಷ, 117558 ಮಹಿಳಾ ಮತದಾರರು ಸೇರಿದಂತೆ ಒಟ್ಟು 2,31,158 ಮತದಾರಿದ್ದು, ಒಟ್ಟು 284 ಮತಗಟ್ಟಿಗಳನ್ನೊಳಗೊಂಡಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನೆ
ರಾಷನಲೈಸೇಷನ್ ಪ್ರಕ್ರಿಯೆ
ಈ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ ಭೌತಿಕ ಪರಿಶೀಲನೆ ನಂತರ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು 300ಕ್ಕಿಂತ ಕಡಿಮೆ ಮತದಾರರಿರುವ ಮತ್ತು 1200 ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಯುಕ್ತೀಕರಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ 67 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಕಟ್ಟಡ ಬದಲಾವಣೆ ಕಾರಣದಿಂದ 24 ಮತಗಟ್ಟೆ ಸ್ಥಳಾಂತರ ಹಾಗೂ 2 ಮತಗಟ್ಟೆಗಳ ಹೆಸರು ಬದಲಾವಣೆ ಸೇರಿದಂತೆ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು ಒಟ್ಟು 284 ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.
ಕ್ಷೇತ್ರದ ಮತದಾರರು ತಮ್ಮ ಮತಪಟ್ಟಿ ವಿವರಗಳನ್ನು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ಪರಿಶೀಲಿಸಕೊಳ್ಳಬಹುದಾಗಿದೆ. ಮತದಾರರು ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಫೋಟೊ ಬದಲಾವಣೆ ಹಾಗೂ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ-8ರ ಅರ್ಜಿಯನ್ನು ವೋಟರ್ ಹೆಲ್ಪ್ ಲೈನ್ ಮುಖಾಂತರ ಸಲ್ಲಿಸಬಹುದು ಎಂದು ತಿಳಿಸಿದರು.
ಯುವ ಮತದಾರರು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ನಮೂನೆ-6ರ ಅರ್ಜಿಯನ್ನು ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ಆನ್ಲೈನ್ https://voters.eci.gov.in/ ಮುಖಾಂತರ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿಯನ್ನು ವಿವಿಧ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಸ್ತಾಂತರಿಸಲಾಯಿತು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


