ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ
ಸುದ್ದಿದಿನ,ದಾವಣಗೆರೆ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,357ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದ ಹನ್ನೊಂದನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲಿದ್ದಾರೆ. 45ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದರೆ, 64 ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ. ಪದವಿಯನ್ನು ಪಡೆಯಲಿದ್ದಾರೆ.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅವರು ಮಾತನಾಡಿ, ಸ್ನಾತಕೋತ್ತರ ಪದವಿಯಲ್ಲಿ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ದೀಪ್ತಿ ಜೆ.ಗೌಡರ (5 ಚಿನ್ನದ ಪದಕ) ಮತ್ತು ಸ್ನಾತಕ ಪದವಿಯಲ್ಲಿ ಹೊನ್ನಾಳಿಯ ಎಸ್.ಎಂ.ಎಸ್. ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಎಸ್.ಸಿಂಧುಬಾಯಿ (3 ಚಿನ್ನದ ಪದಕ) ಅತ್ಯುತ್ತಮ ಸಾಧನೆ ಮಾಡಿ ಅತಿ ಹೆಚ್ಚು ಸ್ವರ್ಣ ಪದಕಗಳನ್ನು ಪಡೆದಿದ್ದಾರೆ.
ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು. ವಿಶ್ವವಿದ್ಯಾನಿಲಯದ ಗೌರವಾನ್ವಿತ ಸಮಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಉಪಸ್ಥಿತರಿರುವರು. ಇಸ್ರೊ ಮಾಜಿ ಅಧ್ಯಕ್ಷರಾದ ಎ.ಎಸ್.ಕಿರಣಕುಮಾರ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.
ಕಳೆದ ವರ್ಷ ಬಿಎ, ಬಿಕಾಂ, ಬಿಎಸ್ಸಿ, ಬಿಎಡ್, ಬಿಪಿಎಡ್, ಬಿವಿಎ ಸೇರಿದಂತೆ ಸ್ನಾತಕ ಪದವಿಯಲ್ಲಿ ಒಟ್ಟು 16,140ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 12,265 ವಿದ್ಯಾರ್ಥಿಗಳು (ಶೇ.75.99) ಉತ್ತೀರ್ಣರಾಗಿದ್ದಾರೆ. ಇವರಲ್ಲಿ 4977ಪುರುಷ ಮತ್ತು 7288 ಮಹಿಳಾ ವಿದ್ಯಾರ್ಥಿಗಳಿದ್ದಾರೆ.
ಒಟ್ಟು 9 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಪಡೆದಿದ್ದರೆ, 12ವಿದ್ಯಾರ್ಥಿಗಳು ಚಿನ್ನದ ಪಕದ ಗಳಿಸಿದ್ದಾರೆ. 20 ವಿದ್ಯಾರ್ಥಿಗಳು ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ ಎಂದು ವಿವರಿಸಿದರು.
ಸ್ನಾತಕೋತ್ತರ ಪದವಿ ಪರೀಕ್ಷೆಗೆ ಒಟ್ಟು 2177 ವಿದ್ಯಾರ್ಥಿಗಳು ಹಾಜರಾಗಿದ್ದು, 2092ವಿದ್ಯಾರ್ಥಿಗಳು (ಶೇ.96.09) ತೇರ್ಗಡೆಯಾಗಿದ್ದಾರೆ. ಇವರಲ್ಲಿ 778ವಿದ್ಯಾರ್ಥಿಗಳು ಮತ್ತು 1314 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಸ್ನಾತಕೋತ್ತರ ಪದವಿಗೆ ಭಾಜನರಾಗಿದ್ದಾರೆ.
ಒಟ್ಟು 30 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಗಳಿಸಿದರೆ, 33 ವಿದ್ಯಾರ್ಥಿಗಳು ಸ್ವರ್ಣ ಪದಕ ಪಡೆದಿದ್ದಾರೆ. 51ವಿದ್ಯಾರ್ಥಿಗಳು ಎರಡು ಮತ್ತು ಮೂರನೇ ರ್ಯಾಂಕ್ ಪಡೆಯಲಿದ್ದಾರೆ ಎಂದು ತಿಳಿಸಿದರು.
ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಸಂಶೋಧನೆಗೆ ಆದ್ಯತೆ ನೀಡಿದ್ದು, ಈ ಬಾರಿ ತಲಾ 32 ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸೇರಿದಂತೆ ದಾಖಲೆಯ 64 ವಿದ್ಯಾರ್ಥಿಗಳು ಪಿಎಚ್.ಡಿ. ಪದವಿ ಪಡೆಯಲಿದ್ದಾರೆ. ಆ ಮೂಲಕ ರಾಷ್ಟಿçÃಯ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತೊಂದು ಸಾಧನೆಯನ್ನು ಮೆರೆಯಲು ಸಾಧ್ಯವಾಗಿದೆ ಎಂದು ಪ್ರೊ.ಕುಂಬಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಪ್ರೊ.ವೆಂಕಟರಾವ್ ಎಂ.ಪಲಾಟೆ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಹಣಕಾಸು ಅಧಿಕಾರಿ ದ್ಯಾಮನಗೌಡ ತಮ್ಮನಗೌಡ್ರ, ವಿವಿಧ ನಿಕಾಯಗಳ ಡೀನರಾದ ಪ್ರೊ.ಯು.ಎಸ್.ಮಹಾಬಲೇಶ್ವರ, ಪ್ರೊ.ಆರ್.ಶಶಿಧರ, ಪ್ರೊ.ಕೆ.ವೆಂಕಟೇಶ, ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಉಪಸ್ಥಿತರಿದ್ದರು.
ಚಿನ್ನದ ಪದಕ ; ಮಹಿಳೆಯರೇ ಮೇಲುಗೈ
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಈ ಬಾರಿಯೂ ಮಹಿಳೆಯರೇ ಉತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಅತಿ ಹೆಚ್ಚು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (ಎಂ.ಕಾಂ) ವಿಭಾಗದ ವಿದ್ಯಾರ್ಥಿನಿ ದೀಪ್ತಿ ಜೆ.ಗೌಡರ್ 5 ಪದಕಗಳೊಂದಿಗೆ ಈ ವರ್ಷ ದಾವಣಗೆರೆ ವಿಶ್ವವಿದ್ಯಾನಿಲಯದ ಚಿನ್ನದ ರಾಣಿ ಗೌರವಕ್ಕೆ ಪಾತ್ರರಾಗಿದ್ದಾರೆ. ಸ್ನಾತಕ ಪದವಿಯಲ್ಲಿ ಹೊನ್ನಾಳಿಯ ಎಸ್.ಸಿಂಧುಬಾಯಿ ಮೂರು ಚಿನ್ನದ ಪದಕ ಗಳಿಸಿದ್ದಾರೆ.
ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಸೇರಿ ಒಟ್ಟು 79 ಚಿನ್ನದ ಪದಕಗಳನ್ನು 45 ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. ಇವರಲ್ಲಿ 39 ಮಹಿಳೆಯರಿದ್ದರೆ, ಕೇವಲ ೬ ಪುರುಷ ವಿದ್ಯಾರ್ಥಿಗಳಿದ್ದಾರೆ.
ಸ್ನಾತಕ ಪದವಿಯಲ್ಲಿ 10 ಮಹಿಳೆಯರು ಮತ್ತು 2 ಪುರುಷ ವಿದ್ಯಾರ್ಥಿಗಳು 20 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 29 ವಿದ್ಯಾರ್ಥಿನಿಯರು ಮತ್ತು 4 ಪುರುಷರು 59 ಸ್ವರ್ಣ ಪದಕಗಳನ್ನು ಗಳಿಸಿದ್ದಾರೆ.
ಚಿನ್ನದ ರಾಣಿ ದೀಪ್ತಿ ಜೆ.ಗೌಡರ್ ಅವರು ಶ್ರೀಮತಿ ವೀರಮ್ಮ ಶಾಂತವೀರಪ್ಪ ಅಥಣಿ, ಶ್ರೀಮತಿ ಲೇ. ಚನ್ನಬಸಮ್ಮ ಮುರಿಗೆಪ್ಪ ದೇವರಮನೆ, ಶ್ರೀ ಚಿಕ್ಕಣ್ಣ ಕಂಪಲಾಪುರ, ಕಣಿವೆ ಜೋಗಿಹಳ್ಳಿ ಶ್ರೀಮತಿ ರಾಮಕ್ಕ ಗೌಡರ ತಿಮ್ಮಪ್ಪ, ಲೇ.ಶ್ರೀಮತಿ ಶ್ರೀ ಜಿ.ಎಸ್.ಕಮಲಮ್ಮ ಬಿ.ನರಸಿಂಹಪ್ಪ ಸ್ಮಾರಕ ಚಿನ್ನದ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಸ್ನಾತಕ ಕಲಾ ಪದವಿಯಲ್ಲಿ ಹೊನ್ನಾಳಿಯ ಎಸ್.ಎಂ.ಎಸ್. ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಎಸ್.ಸಿಂಧುಬಾಯಿ ಮೂರು ಚಿನ್ನದ ಪದಕ ಪಡೆದಿದ್ದಾರೆ. ಇವರು ಶ್ರೀ ತರಳುಬಾಳು ಬೃಹನ್ಮಠ ಸಿರಿಗೆರೆಯ ಲಿಂಗೈಕ್ಯ ಹಿರಿಯ ಜಗದ್ಗುರು ಶ್ರೀ ಶಿವಕುಮಾರ ಶಿವಾಚಾಯ ಮಹಾಸ್ವಾಮಿಗಳು, ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್ ಹಾಗೂ ಶ್ರೀಮತಿ ಸುಧಾ ಮತ್ತು ಕಟೀಲ್ ಪದ್ಮನಾಭ ಭಟ್ ಸ್ಮಾರಕ ಸ್ವರ್ಣ ಪದಕಗಳನ್ನು ಪಡೆದರು.
ಇವರಲ್ಲದೆ ಸ್ನಾತಕೋತ್ತರ ಪದವಿಯ ಅರ್ಥಶಾಸ್ತ್ರ ವಿಭಾಗದ ಎಂ.ವೈ.ಚಂದನ, ಇಂಗ್ಲಿಷ್ ವಿಭಾಗದ ಜಿ.ಕೆ.ಮೋನಿಕಾ, ಬಿಎಡ್. ಪದವಿಯ ಟಿ.ಎನ್.ಕಾವ್ಯಾ, ಜೀವರಾಸಾಯನಶಾಸ್ತ್ರ ವಿಭಾಗದ ಎಂ.ರಂಗಸ್ವಾಮಿ, ಗಣಿತಶಾಸ್ತ್ರ ವಿಭಾಗದ ಸಾನಿಯಾ ಅಂಜು, ಜೀವಶಾಸ್ತ್ರ ವಿಭಾಗದ ಫರಾನಾ ಸುರನ್ ಅವರು ತಲಾ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಸ್ನಾತಕೋತ್ತರ ಕನ್ನಡ ವಿಭಾಗದ ಡಿ.ರೇವಣಸಿದ್ದಪ್ಪ, ಪತ್ರಿಕೋದ್ಯಮ ವಿಭಾಗದ ಬಿ.ಮೀನಾಕ್ಷಿ, ರಾಜ್ಯಶಾಸ್ತ್ರ ವಿಭಾಗದ ಆರ್.ಕೆ.ಪೂಜಾ, ಬಿವಿಎ ವಿಭಾಗದ ಜಯಲಕ್ಷ್ಮಿ ಅನಂತಾಚಾರ್ಯ ಉಪಾಧ್ಯೆ, ಎಂಬಿಎ ವಿಭಾಗ ವೈ.ಶಾಝಿಯಾ ಮತ್ತು ಟಿ.ಕೃತಿಕಾ, ಎಂ.ಪಿ.ಎಡ್ ವಿಭಾಗದ ಎನ್.ಕಿರಣಕುಮಾರ, ರಾಸಾಯನಶಾಸ್ತ್ರ ವಿಭಾಗ ಐ.ಕೆ.ಸಂಗೀತಾ, ಸಸ್ಯಶಾಸ್ತ್ರ ವಿಭಾಗದ ಎಸ್.ಜೆ.ಜಯಶ್ರೀ, ಕಂಪ್ಯೂಟರ್ ವಿಜ್ಞಾನ ವಿಭಾಗದ ಎಂ.ಅಂಬಿಕಾ, ಆಹಾರ ತಂತ್ರಜ್ಞಾನ ವಿಭಾಗದ ಎಚ್.ಎ.ದೀಪಿಕಾ, ಅಣುಜೀವಿಶಾಸ್ತ ವಿಭಾಗದ ಎಸ್.ದಿವ್ಯಶ್ರೀ, ಭೌತಶಾಸ್ತ್ರ ವಿಭಾಗದ ಕೆ.ಯಶೋದಾ ತಲಾ ಎರಡು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.
ಸ್ನಾತಕ ವಿಜ್ಞಾನ ವಿಭಾಗದಲ್ಲಿ ಚಿತ್ರದುರ್ಗ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಸಿ.ಎಸ್.ಪೂಜಾ ಮತ್ತು ಸ್ನಾತಕ ಕಂಪ್ಯೂಟರ್ ಅಪ್ಲಿಕೇಶನ್ ಪದವಿಯಲ್ಲಿ ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ಕಾಲೇಜಿನ ವಿದ್ಯಾರ್ಥಿನಿ ಜಿ.ಎಂ. ಸುಮತಿ ಅವರು ತಲಾ ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
64 ಜನರಿಗೆ ಪಿಎಚ್.ಡಿ. ಪದವಿ
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಈ ಬಾರಿ ಒಟ್ಟು 14 ಅಧ್ಯಯನ ವಿಭಾಗಗಳ 64ಸಂಶೋಧಕರು ಪಿಎಚ್.ಡಿ. ಪದವಿಯನ್ನು ಪಡೆಯಲಿದ್ದಾರೆ.
ಅರ್ಥಶಾಸ್ತ್ರ ಅಧ್ಯಯನ ವಿಭಾಗ ಮತ್ತು ವಾಣಿಜ್ಯ ಶಾಸ್ತ್ರ ಅಧ್ಯಯನ ವಿಭಾಗದಲ್ಲಿ ತಲಾ 13ಜನ ಪಿಎಚ್.ಡಿ. ಪದವಿ ಗಳಿಸಿದರೆ, ಗಣಿತಶಾಸ್ತ್ರ ಅಧ್ಯಯನ ವಿಭಾಗದಲ್ಲಿ 9 ಹಾಗೂ ಶಿಕ್ಷಣಶಾಸ್ತç ಅಧ್ಯಯನ ವಿಭಾಗದಲ್ಲಿ 6 ವಿದ್ಯಾರ್ಥಿಗಳು ಡಾಕ್ಟೊರೇಟ್ ಪದವಿ ಪಡೆದಿದ್ದಾರೆ.
ಆಡಳಿತ ನಿರ್ವಹಣೆ ವಿಭಾಗ, ಅಣುಜೀವಿ ವಿಜ್ಞಾನ, ಆಹಾರ ತಂತ್ರಜ್ಞಾನ, ಜೀವರಾಸಾಯನ ವಿಜ್ಞಾನದಲ್ಲಿ ತಲಾ ಮೂವರು ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸಮಾಜ ಸೇವೆ ಅಧ್ಯಯನ ವಿಭಾಗ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವತಂತ್ರಜ್ಞಾನ ವಿಭಾಗದಲ್ಲಿ ತಲಾ ಇಬ್ಬರು ಹಾಗೂ ಇಂಗ್ಲಿಷ್ ಅಧ್ಯಯನ ವಿಭಾಗದಿಂದ ಒಬ್ಬರು ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!
ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ನೀರಿನ ಹರಿವನ್ನು ನಿಯಂತ್ರಿಸುವ ವಿಶೇಷ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಸುಮಾರು 65 ಕಿ.ಮೀ. ಉದ್ದದ ನೀರಿನ ಮಾರ್ಗ ನಿರ್ಮಿಸುವ ಚಿಂತನೆ ನಡೆದಿದೆ.
ನಗರದಲ್ಲಿ ಮಳೆ ಸುರಿದಾಗ ರಸ್ತೆಗಳು ಜಲಾವೃತವಾಗುವುದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಹಾಗೂ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನೀರಿನ ಹರಿವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಪ್ರಮುಖ ಗುರಿಯಾಗಿದೆ.
http://Visit : www.suddidina.com
ಮೆಟ್ರೋ ಮಾರ್ಗದ ಸಮೀಪ ವಿಶೇಷ ವ್ಯವಸ್ಥೆ
ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ಮಧ್ಯದಲ್ಲಿರುವ ಓಲ್ಡ್ ಮದ್ರಾಸ್ ಗರ್ದನ್ಸೇತುವೆಯಲ್ಲಿ ಪ್ರಸಕ್ತ ನೀರು ಹರಿವಿಗೆ ಸಂಬಂಧಿಸಿದ ನಿಯಂತ್ರಣ ಕಾಮಗಾರಿ ನಡೆಯುತ್ತಿದೆ. ತಾಂತ್ರಿಕ ತಂಡದ ಪರಿಶೀಲನೆ ಬಳಿಕ ಗರ್ದನ್ಸೇತುವೆ ಸುರಕ್ಷತಾ ತಪಾಸಣೆ ನಡೆಸಲಾಗಿದ್ದು, ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಈ ಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸುವುದರಿಂದ ಜಲಾವೃತ ಸಮಸ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ನೀರು ನಿಂತು ಉಂಟಾಗುವ ಸಮಸ್ಯೆಗಳಿಗೆ ಇದು ಪ್ರಮುಖ ಪರಿಹಾರ ಕ್ರಮವಾಗಬಹುದು.
ರೈಲು ಸಂಚಾರಕ್ಕೂ ಸುರಕ್ಷತೆ
ರೈಲು ಸುರಕ್ಷತಾ ನಿಯಮಗಳ ಪ್ರಕಾರ ತಾಂತ್ರಿಕ ಮೇಲ್ವಿಚಾರಣೆ ನಡೆಸಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ನಿರಂತರ ಮಳೆ ಸುರಿದ ಸಂದರ್ಭದಲ್ಲೂ ರೈಲು ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಲಾಗಿದೆ.
ರೈಲು ಸಂಪರ್ಕ ಇರುವ ಪ್ರದೇಶಗಳಲ್ಲಿ ನೀರು ಸಂಗ್ರಹವಾಗುವುದರಿಂದ ಹಳಿಗಳ ಸುರಕ್ಷತೆ ಹಾಗೂ ರೈಲು ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ನೀರು ಹರಿವಿನ ವ್ಯವಸ್ಥೆಯನ್ನು ಸುಧಾರಿಸುವುದರ ಜೊತೆಗೆ ರೈಲು ಮೂಲಸೌಕರ್ಯದ ಸುರಕ್ಷತೆಯನ್ನೂ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಲಾಗುತ್ತಿದೆ.
ಮುಂದಿನ ಹಂತದಲ್ಲಿ ದೊಡ್ಡ ಯೋಜನೆ
ಈ ನೀರಿನ ನಿರ್ವಹಣಾ ಕಾಮಗಾರಿಯ ಆಚ್ಚೋಬಲದಂದೇ ವಾರದೊಳಗೆ ಪೂರ್ಣಗೊಳಿಸುವ ನಿರೀಕ್ಷೆ ಇದೆ. ಕಾಮಗಾರಿ ಮುಗಿದ ಬಳಿಕ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ. ಮುಂದಿನ ಹಂತದಲ್ಲಿ ಮಳೆ ನೀರು ಸಂಗ್ರಹಣೆ ಹಾಗೂ ನೀರಿನ ಹರಿವಿನ ನಿರ್ವಹಣೆಯನ್ನು ಇನ್ನಷ್ಟು ಬಲಪಡಿಸುವ ಯೋಜನೆಗಳೂ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.
ನಗರದ ವೇಗದ ಬೆಳವಣಿಗೆಗೆ ತಕ್ಕಂತೆ ಮೂಲಸೌಕರ್ಯ ವಿಸ್ತರಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಳೆ ನೀರು ನಿರ್ವಹಣೆ ಬೆಂಗಳೂರಿಗೆ ಅತ್ಯಂತ ಅಗತ್ಯವಾಗಿದೆ. 65 ಕಿ.ಮೀ. ನೀರು ಮಾರ್ಗದ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾದರೆ, ಮಳೆಗಾಲದ ಜಲಾವೃತ ಸಮಸ್ಯೆ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆಯಾಗಲಿದೆ.

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.
ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.
ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ
ಈ ಚುನಾವಣೆಯಲ್ಲಿ 21ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.
ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.
ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು
20ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.
ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ
ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.
ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.
ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ4 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ4 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ4 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ4 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ



