ದಿನದ ಸುದ್ದಿ
ದಾವಣಗೆರೆ ವಿವಿ ರಂಗ ವಿಮರ್ಶಾ ಕಮ್ಮಟ |ಮಾನವ ಜೀವನದಲ್ಲಿ ವಿಮರ್ಶೆಗಳು ಖಾಯಂ ಪ್ರಕ್ರಿಯೆಗಳು : ನಿರ್ದೇಶಕ ಬಿ.ಸುರೇಶ
ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿ ಪ್ರೊ. ಎಸ್.ವಿ. ಹಲಸೆ
ಸುದ್ದಿದಿನ,ದಾವಣಗೆರೆ : ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಹೇಳಿದರು.
ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ ದಾವಣಗೆರೆ, ಜಿಲ್ಲಾ ವರದಿಗಾರರ ಕೂಟ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಬರಹಗಾರರಿಗಾಗಿ ಶನಿವಾರ ದಾವಣಗೆರೆ ವಿವಿ ಎಂಬಿಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಂಗ ವಿಮರ್ಶಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.
ಕಲಿಕೆಯು ದಿನನಿತ್ಯದ ಪಯಣ. ಎಲ್ಲರಲ್ಲೂ ಒಂದು ಸುಪ್ತವಾದ ವ್ಯಕ್ತಿತ್ವವಿದ್ದು ಅದನ್ನು ಹೊರತರಲು ಇಂತಹ ಕಮ್ಮಟಗಳು ಸಹಕಾರಿಯಾಗುತ್ತವೆ.ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಸತತ ಪ್ರಯತ್ನ ಬಹುಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳ ಕಾಯಕ ಅಧ್ಯಯನ ಮಾಡುವುದಾದರೆ, ಸಮರ್ಪಕವಾಗಿ ಪಾಠ ಪ್ರವಚನ ಮಾಡುವುದು ಶಿಕ್ಷಕರ ಕಾಯಕ ಮತ್ತು ಜವಾಬ್ಧಾರಿಯಾಗಿದೆ.
ಯಾವುದೇ ಶಿಕ್ಷಕನಿಗೆ ನಾನು ಉತ್ತಮ ವಿದ್ಯಾರ್ಥಿಗಳನ್ನು ಹೊರ ತರುತ್ತೇನೆ ಎಂಬ ಆತ್ಮವಿಶ್ವಾಸವಿರಬೇಕು ಆಗ ಮಾತ್ರ ನಮ್ಮ ದೇಶ ರಾಮರಾಜ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳ ಬುದ್ದಿಮಟ್ಟ ಒಂದೇ ಆಗಿರುತ್ತದೆ ಆದರೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಿಕೆಯ ಸಮಯ ಹೆಚ್ಚಾದಂತೆ ಅವರ ಜ್ಞಾನ ಹೆಚ್ಚಾಗುತ್ತಾ ಹೋಗುತ್ತದೆ. ಜೊತೆಗೆ ನಮ್ಮ ಮತ್ತು ವಿದ್ಯಾರ್ಥಿಗಳ ಸಂಬಂಧ ಉತ್ತಮವಾಗಿದ್ದಲ್ಲಿ ಮಾತ್ರ ಒಳ್ಳೆಯ ಶಿಕ್ಷಣ ನಿಡಲು ಸಾಧ್ಯವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳನ್ನು ಭಾಷೆಯನ್ನು ಪರಿಶುದ್ದವಾಗಿ ಕಲಿಯಬೇಕು ಎಂದರು.
ಉದ್ಘಾಟನೆಗೂ ಮುನ್ನ ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯ ಹಾದಿ ವಿಷಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ರಂಗ ತಜ್ಞ ಹಾಗೂ ಸಿನಿಮಾ ನಿರ್ದೇಶಕರಾದ ಬಿ. ಸುರೇಶ್, ಮಾನವ ಜೀವನದಲ್ಲಿ ವಿಮರ್ಶೆಗಳು ಒಂದು ರೀತಿಯ ಖಾಯಂ ಪ್ರಕ್ರಿಯೆಗಳಿದ್ದಂತೆ. ಮನುಷ್ಯ ದಿನೇ ದಿನೇ ಪ್ರಶ್ನೆಗೊಳಪಡುತ್ತಾನೆ. ಒಬ್ಬ ಮತ್ತೊಬ್ಬನನ್ನು ಪ್ರಶ್ನಿಸುವುದು, ಅನುಕರಿಸುವುದು, ತೆಗಳುವುದು ಒಂದು ರೀತಿಯ ವಿಮರ್ಶೆಯೇ ಆಗಿದೆ. ವಿಮರ್ಶೆ ನಿರಂತರ ಚಟುವಟಿಕೆ ಎಂಬ ವ್ಯಾಖ್ಯಾನವೂ ಇದೆ. ಒಂದು ರೀತಿ ಮನುಷ್ಯನ ಎಲ್ಲಾ ಅಂಗಗಳು ವಿಮರ್ಶೆಗೊಳಪಡುತ್ತವೆ. ಮತ್ತೊಬ್ಬರನ್ನು ಟೀಕಿಸುವುದು ವಿಮರ್ಶೆಯಾಗಿರುತ್ತದೆ. ಆದ್ದರಿಂದ ಯಾವುದೂ ಅಂತಿಮವಲ್ಲ ಎಂದರು.
ರಂಗ ವಿಮರ್ಶೆ ಮಾಡಬೇಕಾದರೆ ರಂಗಭೂಮಿ ಬಗ್ಗೆ ಸಂಪೂರ್ಣ ಅಧ್ಯಯನ ಅವಶ್ಯ. ಪರಿಪೂರ್ಣ ಜ್ಞಾನದಿಂದ ಒಂದು ರಂಗದ ವಿಮರ್ಶೆ ಸಾಧ್ಯ ಹೂ ಅರಳುವುದು, ಹೂವು ದುಂಬಿ ಆಕರ್ಷಿಸುವ ಅಂಶಗಳು ಒಂದು ರೀತಿಯ ವಿಮರ್ಶೆಯ ಅಂಶವೇ. ಈ ಎಲ್ಲಾ ಅಂಶಗಳನ್ನು ಪತ್ರಿಕೋದ್ಯಮ ಹಾಗೂ ಸಾಹಿತ್ಯದ ವಿದ್ಯಾರ್ಥಿಗಳು ನಿರಂತರ ಓದಿನಿಂದ ಜ್ಞಾನ ಪಡೆದುಕೊಂಡು ತಮ್ಮದೇ ಶೈಲಿಯಲ್ಲಿ ನೀರೂಪಿಸುವುದು ವಿಮರ್ಶೆ ಎನಿಸುತ್ತದೆ.
ಒಮ್ಮೊಮ್ಮೆ ಭಿನ್ನಾಭಿಪ್ರಾಯ ಸೂಚಿಸುವುದು ಕೂಡ ವಿಮರ್ಶೆಯಾಗುತ್ತದೆ. ಅನುಕರಣಾ ಮನೋಭಾವವನ್ನು ವಿಮರ್ಶಾ ಪ್ರವೃತಿಯಿಂದ ದೂರವಿಡ ಬೇಕು. ಆಗ ಯಾವುದೇ ಒಂದು ರಂಗದ ವಿಮರ್ಶೆ ಯಶಸ್ವಿಯಾಗಲು ಸಾಧ್ಯ. ಇಂದು ವಿಮರ್ಶಾ ರಂಗದಲ್ಲಿ ವಿಫುಲ ಉದ್ಯೋಗಾವಕಶಗಳಿದ್ದು ವಿದ್ಯಾರ್ಥಿಗಳು ಉತ್ತಮ ಓದು ತಿಳುವಳಿಕೆ ಜ್ಞಾನ ಹೆಚ್ಚಿಸಿಕೊಳ್ಳುವುದರಿಂದ ಒಳ್ಳೆಯ ಸ್ಥಾನಮಾನ ಕಲ್ಪಿಸಿಕೊಳ್ಳಬಹುದು ಹಾಗೂ ವಿಮರ್ಶೆ ಕ್ಷೇತ್ರದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಕೊಡಲಾಗುತ್ತಿದ್ದು, ತಾವುಗಳು ಕೂಡ ಈ ಪ್ರಶಸ್ತಿ ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು, ಪತ್ರಕರ್ತರಾದ ಬಿ.ಎನ್. ಮಲ್ಲೇಶ್ ಮಾತನಾಡಿ, ಪತ್ರಕರ್ತರಿಗೆ ಪ್ರತಿಯೊಂದು ವಿಷಯದ ಬಗ್ಗೆ ಜ್ಞಾನವಿರಬೇಕು. ಪತ್ರಕರ್ತ ಪ್ರತಿಯೊಂದು ವಿಷಯವನ್ನು ವಿಮರ್ಶಾ ದೃಷ್ಟಿಯಿಂದ ನೋಡಬೇಕು. ಇತ್ತೀಚಿನ ದಿನಗಳಲ್ಲಿ ವಿಮರ್ಶೆಯು ಟೀಕೆಯೆಂಬಂತೆ ಬಿಂಬಿತವಾಗುತ್ತಿದೆ.
ವಿಮರ್ಶೆ ಮಾಡಲು ವಿಷಯದ ಬಗ್ಗೆ ಸಾಮುಲಾಗ್ರವಾಗಿ ತಿಳಿದುಕೊಂಡಿರಬೇಕು. ವಾಸ್ತವವನ್ನು ತಿಳಿದುಕೊಂಡು ವಿಮರ್ಶೆ ಮಾಡಬೇಕು. ಇಲ್ಲವಾದಲ್ಲಿ ವಿಮರ್ಶೆ ಸೋಲುತ್ತದೆ. ವಿಮರ್ಶೆ ಮಾಡಲು ಭಾಷಾ ಪ್ರಬುದ್ದತೆ ಅಗತ್ಯವಾಗಿದ್ದು, ಭಾಷೆ ಮೇಲೆ ಹಿಡಿತವಿಲ್ಲದಿದ್ದರೆ ವಿಮರ್ಶಕರಾಗಲು ಸಾಧ್ಯವಿಲ್ಲ ಎಂದರು.
ವಿಜಯ ಕರ್ನಾಟಕ ಉಪ ಸಂಪಾದಕ ಯಳನಾಡು ಮಂಜುನಾಥ, ಯಳನಾಡು ಮಂಜುನಾಥ ಸಂಯುಕ್ತ ಕರ್ನಾಟಕ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಮಂಜುನಾಥ ಗೌರಕ್ಕಳವರ್, ವಾರ್ತಾಧಿಕಾರಿ ಅಶೋಕ್ಕುಮಾರ್.ಡಿ, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮಿ ಹಿರೇಮಠ, ನಾಟಕ ಅಕಾಡೆಮಿ ಸದಸ್ಯರಾದ ರವೀಂದ್ರ ಅರಳಗುಪ್ಪಿ, ಸಾಹಿತಿಗಳಾದ ಬಾ.ಮ.ಬಸವರಾಜಯ್ಯ, ಪತ್ರಿಕೋದ್ಯಮ, ಕನ್ನಡ ಸಾಹಿತ್ಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ16 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

