ದಿನದ ಸುದ್ದಿ
ದಾವಣಗೆರೆ ವಿವಿ ರಂಗ ವಿಮರ್ಶಾ ಕಮ್ಮಟ |ಮಾನವ ಜೀವನದಲ್ಲಿ ವಿಮರ್ಶೆಗಳು ಖಾಯಂ ಪ್ರಕ್ರಿಯೆಗಳು : ನಿರ್ದೇಶಕ ಬಿ.ಸುರೇಶ
ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿ ಪ್ರೊ. ಎಸ್.ವಿ. ಹಲಸೆ
ಸುದ್ದಿದಿನ,ದಾವಣಗೆರೆ : ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಹೇಳಿದರು.
ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ ದಾವಣಗೆರೆ, ಜಿಲ್ಲಾ ವರದಿಗಾರರ ಕೂಟ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಬರಹಗಾರರಿಗಾಗಿ ಶನಿವಾರ ದಾವಣಗೆರೆ ವಿವಿ ಎಂಬಿಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಂಗ ವಿಮರ್ಶಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.
ಕಲಿಕೆಯು ದಿನನಿತ್ಯದ ಪಯಣ. ಎಲ್ಲರಲ್ಲೂ ಒಂದು ಸುಪ್ತವಾದ ವ್ಯಕ್ತಿತ್ವವಿದ್ದು ಅದನ್ನು ಹೊರತರಲು ಇಂತಹ ಕಮ್ಮಟಗಳು ಸಹಕಾರಿಯಾಗುತ್ತವೆ.ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಸತತ ಪ್ರಯತ್ನ ಬಹುಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳ ಕಾಯಕ ಅಧ್ಯಯನ ಮಾಡುವುದಾದರೆ, ಸಮರ್ಪಕವಾಗಿ ಪಾಠ ಪ್ರವಚನ ಮಾಡುವುದು ಶಿಕ್ಷಕರ ಕಾಯಕ ಮತ್ತು ಜವಾಬ್ಧಾರಿಯಾಗಿದೆ.
ಯಾವುದೇ ಶಿಕ್ಷಕನಿಗೆ ನಾನು ಉತ್ತಮ ವಿದ್ಯಾರ್ಥಿಗಳನ್ನು ಹೊರ ತರುತ್ತೇನೆ ಎಂಬ ಆತ್ಮವಿಶ್ವಾಸವಿರಬೇಕು ಆಗ ಮಾತ್ರ ನಮ್ಮ ದೇಶ ರಾಮರಾಜ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳ ಬುದ್ದಿಮಟ್ಟ ಒಂದೇ ಆಗಿರುತ್ತದೆ ಆದರೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಿಕೆಯ ಸಮಯ ಹೆಚ್ಚಾದಂತೆ ಅವರ ಜ್ಞಾನ ಹೆಚ್ಚಾಗುತ್ತಾ ಹೋಗುತ್ತದೆ. ಜೊತೆಗೆ ನಮ್ಮ ಮತ್ತು ವಿದ್ಯಾರ್ಥಿಗಳ ಸಂಬಂಧ ಉತ್ತಮವಾಗಿದ್ದಲ್ಲಿ ಮಾತ್ರ ಒಳ್ಳೆಯ ಶಿಕ್ಷಣ ನಿಡಲು ಸಾಧ್ಯವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳನ್ನು ಭಾಷೆಯನ್ನು ಪರಿಶುದ್ದವಾಗಿ ಕಲಿಯಬೇಕು ಎಂದರು.
ಉದ್ಘಾಟನೆಗೂ ಮುನ್ನ ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯ ಹಾದಿ ವಿಷಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ರಂಗ ತಜ್ಞ ಹಾಗೂ ಸಿನಿಮಾ ನಿರ್ದೇಶಕರಾದ ಬಿ. ಸುರೇಶ್, ಮಾನವ ಜೀವನದಲ್ಲಿ ವಿಮರ್ಶೆಗಳು ಒಂದು ರೀತಿಯ ಖಾಯಂ ಪ್ರಕ್ರಿಯೆಗಳಿದ್ದಂತೆ. ಮನುಷ್ಯ ದಿನೇ ದಿನೇ ಪ್ರಶ್ನೆಗೊಳಪಡುತ್ತಾನೆ. ಒಬ್ಬ ಮತ್ತೊಬ್ಬನನ್ನು ಪ್ರಶ್ನಿಸುವುದು, ಅನುಕರಿಸುವುದು, ತೆಗಳುವುದು ಒಂದು ರೀತಿಯ ವಿಮರ್ಶೆಯೇ ಆಗಿದೆ. ವಿಮರ್ಶೆ ನಿರಂತರ ಚಟುವಟಿಕೆ ಎಂಬ ವ್ಯಾಖ್ಯಾನವೂ ಇದೆ. ಒಂದು ರೀತಿ ಮನುಷ್ಯನ ಎಲ್ಲಾ ಅಂಗಗಳು ವಿಮರ್ಶೆಗೊಳಪಡುತ್ತವೆ. ಮತ್ತೊಬ್ಬರನ್ನು ಟೀಕಿಸುವುದು ವಿಮರ್ಶೆಯಾಗಿರುತ್ತದೆ. ಆದ್ದರಿಂದ ಯಾವುದೂ ಅಂತಿಮವಲ್ಲ ಎಂದರು.
ರಂಗ ವಿಮರ್ಶೆ ಮಾಡಬೇಕಾದರೆ ರಂಗಭೂಮಿ ಬಗ್ಗೆ ಸಂಪೂರ್ಣ ಅಧ್ಯಯನ ಅವಶ್ಯ. ಪರಿಪೂರ್ಣ ಜ್ಞಾನದಿಂದ ಒಂದು ರಂಗದ ವಿಮರ್ಶೆ ಸಾಧ್ಯ ಹೂ ಅರಳುವುದು, ಹೂವು ದುಂಬಿ ಆಕರ್ಷಿಸುವ ಅಂಶಗಳು ಒಂದು ರೀತಿಯ ವಿಮರ್ಶೆಯ ಅಂಶವೇ. ಈ ಎಲ್ಲಾ ಅಂಶಗಳನ್ನು ಪತ್ರಿಕೋದ್ಯಮ ಹಾಗೂ ಸಾಹಿತ್ಯದ ವಿದ್ಯಾರ್ಥಿಗಳು ನಿರಂತರ ಓದಿನಿಂದ ಜ್ಞಾನ ಪಡೆದುಕೊಂಡು ತಮ್ಮದೇ ಶೈಲಿಯಲ್ಲಿ ನೀರೂಪಿಸುವುದು ವಿಮರ್ಶೆ ಎನಿಸುತ್ತದೆ.
ಒಮ್ಮೊಮ್ಮೆ ಭಿನ್ನಾಭಿಪ್ರಾಯ ಸೂಚಿಸುವುದು ಕೂಡ ವಿಮರ್ಶೆಯಾಗುತ್ತದೆ. ಅನುಕರಣಾ ಮನೋಭಾವವನ್ನು ವಿಮರ್ಶಾ ಪ್ರವೃತಿಯಿಂದ ದೂರವಿಡ ಬೇಕು. ಆಗ ಯಾವುದೇ ಒಂದು ರಂಗದ ವಿಮರ್ಶೆ ಯಶಸ್ವಿಯಾಗಲು ಸಾಧ್ಯ. ಇಂದು ವಿಮರ್ಶಾ ರಂಗದಲ್ಲಿ ವಿಫುಲ ಉದ್ಯೋಗಾವಕಶಗಳಿದ್ದು ವಿದ್ಯಾರ್ಥಿಗಳು ಉತ್ತಮ ಓದು ತಿಳುವಳಿಕೆ ಜ್ಞಾನ ಹೆಚ್ಚಿಸಿಕೊಳ್ಳುವುದರಿಂದ ಒಳ್ಳೆಯ ಸ್ಥಾನಮಾನ ಕಲ್ಪಿಸಿಕೊಳ್ಳಬಹುದು ಹಾಗೂ ವಿಮರ್ಶೆ ಕ್ಷೇತ್ರದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಕೊಡಲಾಗುತ್ತಿದ್ದು, ತಾವುಗಳು ಕೂಡ ಈ ಪ್ರಶಸ್ತಿ ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು, ಪತ್ರಕರ್ತರಾದ ಬಿ.ಎನ್. ಮಲ್ಲೇಶ್ ಮಾತನಾಡಿ, ಪತ್ರಕರ್ತರಿಗೆ ಪ್ರತಿಯೊಂದು ವಿಷಯದ ಬಗ್ಗೆ ಜ್ಞಾನವಿರಬೇಕು. ಪತ್ರಕರ್ತ ಪ್ರತಿಯೊಂದು ವಿಷಯವನ್ನು ವಿಮರ್ಶಾ ದೃಷ್ಟಿಯಿಂದ ನೋಡಬೇಕು. ಇತ್ತೀಚಿನ ದಿನಗಳಲ್ಲಿ ವಿಮರ್ಶೆಯು ಟೀಕೆಯೆಂಬಂತೆ ಬಿಂಬಿತವಾಗುತ್ತಿದೆ.
ವಿಮರ್ಶೆ ಮಾಡಲು ವಿಷಯದ ಬಗ್ಗೆ ಸಾಮುಲಾಗ್ರವಾಗಿ ತಿಳಿದುಕೊಂಡಿರಬೇಕು. ವಾಸ್ತವವನ್ನು ತಿಳಿದುಕೊಂಡು ವಿಮರ್ಶೆ ಮಾಡಬೇಕು. ಇಲ್ಲವಾದಲ್ಲಿ ವಿಮರ್ಶೆ ಸೋಲುತ್ತದೆ. ವಿಮರ್ಶೆ ಮಾಡಲು ಭಾಷಾ ಪ್ರಬುದ್ದತೆ ಅಗತ್ಯವಾಗಿದ್ದು, ಭಾಷೆ ಮೇಲೆ ಹಿಡಿತವಿಲ್ಲದಿದ್ದರೆ ವಿಮರ್ಶಕರಾಗಲು ಸಾಧ್ಯವಿಲ್ಲ ಎಂದರು.
ವಿಜಯ ಕರ್ನಾಟಕ ಉಪ ಸಂಪಾದಕ ಯಳನಾಡು ಮಂಜುನಾಥ, ಯಳನಾಡು ಮಂಜುನಾಥ ಸಂಯುಕ್ತ ಕರ್ನಾಟಕ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಮಂಜುನಾಥ ಗೌರಕ್ಕಳವರ್, ವಾರ್ತಾಧಿಕಾರಿ ಅಶೋಕ್ಕುಮಾರ್.ಡಿ, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮಿ ಹಿರೇಮಠ, ನಾಟಕ ಅಕಾಡೆಮಿ ಸದಸ್ಯರಾದ ರವೀಂದ್ರ ಅರಳಗುಪ್ಪಿ, ಸಾಹಿತಿಗಳಾದ ಬಾ.ಮ.ಬಸವರಾಜಯ್ಯ, ಪತ್ರಿಕೋದ್ಯಮ, ಕನ್ನಡ ಸಾಹಿತ್ಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.
ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.
“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.
“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.
ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.
ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.
ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.
ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.
ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
-
ದಿನದ ಸುದ್ದಿ3 days agoತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
-
ದಿನದ ಸುದ್ದಿ3 days agoಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
-
ದಿನದ ಸುದ್ದಿ2 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

