ದಿನದ ಸುದ್ದಿ
ದಾವಣಗೆರೆ ವಿವಿ ರಂಗ ವಿಮರ್ಶಾ ಕಮ್ಮಟ |ಮಾನವ ಜೀವನದಲ್ಲಿ ವಿಮರ್ಶೆಗಳು ಖಾಯಂ ಪ್ರಕ್ರಿಯೆಗಳು : ನಿರ್ದೇಶಕ ಬಿ.ಸುರೇಶ
ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿ ಪ್ರೊ. ಎಸ್.ವಿ. ಹಲಸೆ
ಸುದ್ದಿದಿನ,ದಾವಣಗೆರೆ : ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಹೇಳಿದರು.
ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ ದಾವಣಗೆರೆ, ಜಿಲ್ಲಾ ವರದಿಗಾರರ ಕೂಟ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಬರಹಗಾರರಿಗಾಗಿ ಶನಿವಾರ ದಾವಣಗೆರೆ ವಿವಿ ಎಂಬಿಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಂಗ ವಿಮರ್ಶಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.
ಕಲಿಕೆಯು ದಿನನಿತ್ಯದ ಪಯಣ. ಎಲ್ಲರಲ್ಲೂ ಒಂದು ಸುಪ್ತವಾದ ವ್ಯಕ್ತಿತ್ವವಿದ್ದು ಅದನ್ನು ಹೊರತರಲು ಇಂತಹ ಕಮ್ಮಟಗಳು ಸಹಕಾರಿಯಾಗುತ್ತವೆ.ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಸತತ ಪ್ರಯತ್ನ ಬಹುಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳ ಕಾಯಕ ಅಧ್ಯಯನ ಮಾಡುವುದಾದರೆ, ಸಮರ್ಪಕವಾಗಿ ಪಾಠ ಪ್ರವಚನ ಮಾಡುವುದು ಶಿಕ್ಷಕರ ಕಾಯಕ ಮತ್ತು ಜವಾಬ್ಧಾರಿಯಾಗಿದೆ.
ಯಾವುದೇ ಶಿಕ್ಷಕನಿಗೆ ನಾನು ಉತ್ತಮ ವಿದ್ಯಾರ್ಥಿಗಳನ್ನು ಹೊರ ತರುತ್ತೇನೆ ಎಂಬ ಆತ್ಮವಿಶ್ವಾಸವಿರಬೇಕು ಆಗ ಮಾತ್ರ ನಮ್ಮ ದೇಶ ರಾಮರಾಜ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳ ಬುದ್ದಿಮಟ್ಟ ಒಂದೇ ಆಗಿರುತ್ತದೆ ಆದರೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಿಕೆಯ ಸಮಯ ಹೆಚ್ಚಾದಂತೆ ಅವರ ಜ್ಞಾನ ಹೆಚ್ಚಾಗುತ್ತಾ ಹೋಗುತ್ತದೆ. ಜೊತೆಗೆ ನಮ್ಮ ಮತ್ತು ವಿದ್ಯಾರ್ಥಿಗಳ ಸಂಬಂಧ ಉತ್ತಮವಾಗಿದ್ದಲ್ಲಿ ಮಾತ್ರ ಒಳ್ಳೆಯ ಶಿಕ್ಷಣ ನಿಡಲು ಸಾಧ್ಯವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳನ್ನು ಭಾಷೆಯನ್ನು ಪರಿಶುದ್ದವಾಗಿ ಕಲಿಯಬೇಕು ಎಂದರು.
ಉದ್ಘಾಟನೆಗೂ ಮುನ್ನ ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯ ಹಾದಿ ವಿಷಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ರಂಗ ತಜ್ಞ ಹಾಗೂ ಸಿನಿಮಾ ನಿರ್ದೇಶಕರಾದ ಬಿ. ಸುರೇಶ್, ಮಾನವ ಜೀವನದಲ್ಲಿ ವಿಮರ್ಶೆಗಳು ಒಂದು ರೀತಿಯ ಖಾಯಂ ಪ್ರಕ್ರಿಯೆಗಳಿದ್ದಂತೆ. ಮನುಷ್ಯ ದಿನೇ ದಿನೇ ಪ್ರಶ್ನೆಗೊಳಪಡುತ್ತಾನೆ. ಒಬ್ಬ ಮತ್ತೊಬ್ಬನನ್ನು ಪ್ರಶ್ನಿಸುವುದು, ಅನುಕರಿಸುವುದು, ತೆಗಳುವುದು ಒಂದು ರೀತಿಯ ವಿಮರ್ಶೆಯೇ ಆಗಿದೆ. ವಿಮರ್ಶೆ ನಿರಂತರ ಚಟುವಟಿಕೆ ಎಂಬ ವ್ಯಾಖ್ಯಾನವೂ ಇದೆ. ಒಂದು ರೀತಿ ಮನುಷ್ಯನ ಎಲ್ಲಾ ಅಂಗಗಳು ವಿಮರ್ಶೆಗೊಳಪಡುತ್ತವೆ. ಮತ್ತೊಬ್ಬರನ್ನು ಟೀಕಿಸುವುದು ವಿಮರ್ಶೆಯಾಗಿರುತ್ತದೆ. ಆದ್ದರಿಂದ ಯಾವುದೂ ಅಂತಿಮವಲ್ಲ ಎಂದರು.
ರಂಗ ವಿಮರ್ಶೆ ಮಾಡಬೇಕಾದರೆ ರಂಗಭೂಮಿ ಬಗ್ಗೆ ಸಂಪೂರ್ಣ ಅಧ್ಯಯನ ಅವಶ್ಯ. ಪರಿಪೂರ್ಣ ಜ್ಞಾನದಿಂದ ಒಂದು ರಂಗದ ವಿಮರ್ಶೆ ಸಾಧ್ಯ ಹೂ ಅರಳುವುದು, ಹೂವು ದುಂಬಿ ಆಕರ್ಷಿಸುವ ಅಂಶಗಳು ಒಂದು ರೀತಿಯ ವಿಮರ್ಶೆಯ ಅಂಶವೇ. ಈ ಎಲ್ಲಾ ಅಂಶಗಳನ್ನು ಪತ್ರಿಕೋದ್ಯಮ ಹಾಗೂ ಸಾಹಿತ್ಯದ ವಿದ್ಯಾರ್ಥಿಗಳು ನಿರಂತರ ಓದಿನಿಂದ ಜ್ಞಾನ ಪಡೆದುಕೊಂಡು ತಮ್ಮದೇ ಶೈಲಿಯಲ್ಲಿ ನೀರೂಪಿಸುವುದು ವಿಮರ್ಶೆ ಎನಿಸುತ್ತದೆ.
ಒಮ್ಮೊಮ್ಮೆ ಭಿನ್ನಾಭಿಪ್ರಾಯ ಸೂಚಿಸುವುದು ಕೂಡ ವಿಮರ್ಶೆಯಾಗುತ್ತದೆ. ಅನುಕರಣಾ ಮನೋಭಾವವನ್ನು ವಿಮರ್ಶಾ ಪ್ರವೃತಿಯಿಂದ ದೂರವಿಡ ಬೇಕು. ಆಗ ಯಾವುದೇ ಒಂದು ರಂಗದ ವಿಮರ್ಶೆ ಯಶಸ್ವಿಯಾಗಲು ಸಾಧ್ಯ. ಇಂದು ವಿಮರ್ಶಾ ರಂಗದಲ್ಲಿ ವಿಫುಲ ಉದ್ಯೋಗಾವಕಶಗಳಿದ್ದು ವಿದ್ಯಾರ್ಥಿಗಳು ಉತ್ತಮ ಓದು ತಿಳುವಳಿಕೆ ಜ್ಞಾನ ಹೆಚ್ಚಿಸಿಕೊಳ್ಳುವುದರಿಂದ ಒಳ್ಳೆಯ ಸ್ಥಾನಮಾನ ಕಲ್ಪಿಸಿಕೊಳ್ಳಬಹುದು ಹಾಗೂ ವಿಮರ್ಶೆ ಕ್ಷೇತ್ರದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಕೊಡಲಾಗುತ್ತಿದ್ದು, ತಾವುಗಳು ಕೂಡ ಈ ಪ್ರಶಸ್ತಿ ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು, ಪತ್ರಕರ್ತರಾದ ಬಿ.ಎನ್. ಮಲ್ಲೇಶ್ ಮಾತನಾಡಿ, ಪತ್ರಕರ್ತರಿಗೆ ಪ್ರತಿಯೊಂದು ವಿಷಯದ ಬಗ್ಗೆ ಜ್ಞಾನವಿರಬೇಕು. ಪತ್ರಕರ್ತ ಪ್ರತಿಯೊಂದು ವಿಷಯವನ್ನು ವಿಮರ್ಶಾ ದೃಷ್ಟಿಯಿಂದ ನೋಡಬೇಕು. ಇತ್ತೀಚಿನ ದಿನಗಳಲ್ಲಿ ವಿಮರ್ಶೆಯು ಟೀಕೆಯೆಂಬಂತೆ ಬಿಂಬಿತವಾಗುತ್ತಿದೆ.
ವಿಮರ್ಶೆ ಮಾಡಲು ವಿಷಯದ ಬಗ್ಗೆ ಸಾಮುಲಾಗ್ರವಾಗಿ ತಿಳಿದುಕೊಂಡಿರಬೇಕು. ವಾಸ್ತವವನ್ನು ತಿಳಿದುಕೊಂಡು ವಿಮರ್ಶೆ ಮಾಡಬೇಕು. ಇಲ್ಲವಾದಲ್ಲಿ ವಿಮರ್ಶೆ ಸೋಲುತ್ತದೆ. ವಿಮರ್ಶೆ ಮಾಡಲು ಭಾಷಾ ಪ್ರಬುದ್ದತೆ ಅಗತ್ಯವಾಗಿದ್ದು, ಭಾಷೆ ಮೇಲೆ ಹಿಡಿತವಿಲ್ಲದಿದ್ದರೆ ವಿಮರ್ಶಕರಾಗಲು ಸಾಧ್ಯವಿಲ್ಲ ಎಂದರು.
ವಿಜಯ ಕರ್ನಾಟಕ ಉಪ ಸಂಪಾದಕ ಯಳನಾಡು ಮಂಜುನಾಥ, ಯಳನಾಡು ಮಂಜುನಾಥ ಸಂಯುಕ್ತ ಕರ್ನಾಟಕ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಮಂಜುನಾಥ ಗೌರಕ್ಕಳವರ್, ವಾರ್ತಾಧಿಕಾರಿ ಅಶೋಕ್ಕುಮಾರ್.ಡಿ, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮಿ ಹಿರೇಮಠ, ನಾಟಕ ಅಕಾಡೆಮಿ ಸದಸ್ಯರಾದ ರವೀಂದ್ರ ಅರಳಗುಪ್ಪಿ, ಸಾಹಿತಿಗಳಾದ ಬಾ.ಮ.ಬಸವರಾಜಯ್ಯ, ಪತ್ರಿಕೋದ್ಯಮ, ಕನ್ನಡ ಸಾಹಿತ್ಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ