Connect with us

ದಿನದ ಸುದ್ದಿ

ದಾವಣಗೆರೆ ವಿವಿ ರಂಗ ವಿಮರ್ಶಾ ಕಮ್ಮಟ |ಮಾನವ ಜೀವನದಲ್ಲಿ ವಿಮರ್ಶೆಗಳು ಖಾಯಂ ಪ್ರಕ್ರಿಯೆಗಳು : ನಿರ್ದೇಶಕ ಬಿ.ಸುರೇಶ

Published

on

ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿ ಪ್ರೊ. ಎಸ್.ವಿ. ಹಲಸೆ

ಸುದ್ದಿದಿನ,ದಾವಣಗೆರೆ : ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಹೇಳಿದರು.

ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ ದಾವಣಗೆರೆ, ಜಿಲ್ಲಾ ವರದಿಗಾರರ ಕೂಟ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಹಯೋಗದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಬರಹಗಾರರಿಗಾಗಿ ಶನಿವಾರ ದಾವಣಗೆರೆ ವಿವಿ ಎಂಬಿಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಂಗ ವಿಮರ್ಶಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

ಕಲಿಕೆಯು ದಿನನಿತ್ಯದ ಪಯಣ. ಎಲ್ಲರಲ್ಲೂ ಒಂದು ಸುಪ್ತವಾದ ವ್ಯಕ್ತಿತ್ವವಿದ್ದು ಅದನ್ನು ಹೊರತರಲು ಇಂತಹ ಕಮ್ಮಟಗಳು ಸಹಕಾರಿಯಾಗುತ್ತವೆ.ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲು ಸತತ ಪ್ರಯತ್ನ ಬಹುಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳ ಕಾಯಕ ಅಧ್ಯಯನ ಮಾಡುವುದಾದರೆ, ಸಮರ್ಪಕವಾಗಿ ಪಾಠ ಪ್ರವಚನ ಮಾಡುವುದು ಶಿಕ್ಷಕರ ಕಾಯಕ ಮತ್ತು ಜವಾಬ್ಧಾರಿಯಾಗಿದೆ.

ಯಾವುದೇ ಶಿಕ್ಷಕನಿಗೆ ನಾನು ಉತ್ತಮ ವಿದ್ಯಾರ್ಥಿಗಳನ್ನು ಹೊರ ತರುತ್ತೇನೆ ಎಂಬ ಆತ್ಮವಿಶ್ವಾಸವಿರಬೇಕು ಆಗ ಮಾತ್ರ ನಮ್ಮ ದೇಶ ರಾಮರಾಜ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳ ಬುದ್ದಿಮಟ್ಟ ಒಂದೇ ಆಗಿರುತ್ತದೆ ಆದರೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಿಕೆಯ ಸಮಯ ಹೆಚ್ಚಾದಂತೆ ಅವರ ಜ್ಞಾನ ಹೆಚ್ಚಾಗುತ್ತಾ ಹೋಗುತ್ತದೆ. ಜೊತೆಗೆ ನಮ್ಮ ಮತ್ತು ವಿದ್ಯಾರ್ಥಿಗಳ ಸಂಬಂಧ ಉತ್ತಮವಾಗಿದ್ದಲ್ಲಿ ಮಾತ್ರ ಒಳ್ಳೆಯ ಶಿಕ್ಷಣ ನಿಡಲು ಸಾಧ್ಯವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳನ್ನು ಭಾಷೆಯನ್ನು ಪರಿಶುದ್ದವಾಗಿ ಕಲಿಯಬೇಕು ಎಂದರು.

ಉದ್ಘಾಟನೆಗೂ ಮುನ್ನ ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯ ಹಾದಿ ವಿಷಯ ಕುರಿತಾದ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ರಂಗ ತಜ್ಞ ಹಾಗೂ ಸಿನಿಮಾ ನಿರ್ದೇಶಕರಾದ ಬಿ. ಸುರೇಶ್, ಮಾನವ ಜೀವನದಲ್ಲಿ ವಿಮರ್ಶೆಗಳು ಒಂದು ರೀತಿಯ ಖಾಯಂ ಪ್ರಕ್ರಿಯೆಗಳಿದ್ದಂತೆ. ಮನುಷ್ಯ ದಿನೇ ದಿನೇ ಪ್ರಶ್ನೆಗೊಳಪಡುತ್ತಾನೆ. ಒಬ್ಬ ಮತ್ತೊಬ್ಬನನ್ನು ಪ್ರಶ್ನಿಸುವುದು, ಅನುಕರಿಸುವುದು, ತೆಗಳುವುದು ಒಂದು ರೀತಿಯ ವಿಮರ್ಶೆಯೇ ಆಗಿದೆ. ವಿಮರ್ಶೆ ನಿರಂತರ ಚಟುವಟಿಕೆ ಎಂಬ ವ್ಯಾಖ್ಯಾನವೂ ಇದೆ. ಒಂದು ರೀತಿ ಮನುಷ್ಯನ ಎಲ್ಲಾ ಅಂಗಗಳು ವಿಮರ್ಶೆಗೊಳಪಡುತ್ತವೆ. ಮತ್ತೊಬ್ಬರನ್ನು ಟೀಕಿಸುವುದು ವಿಮರ್ಶೆಯಾಗಿರುತ್ತದೆ. ಆದ್ದರಿಂದ ಯಾವುದೂ ಅಂತಿಮವಲ್ಲ ಎಂದರು.

ರಂಗ ವಿಮರ್ಶೆ ಮಾಡಬೇಕಾದರೆ ರಂಗಭೂಮಿ ಬಗ್ಗೆ ಸಂಪೂರ್ಣ ಅಧ್ಯಯನ ಅವಶ್ಯ. ಪರಿಪೂರ್ಣ ಜ್ಞಾನದಿಂದ ಒಂದು ರಂಗದ ವಿಮರ್ಶೆ ಸಾಧ್ಯ ಹೂ ಅರಳುವುದು, ಹೂವು ದುಂಬಿ ಆಕರ್ಷಿಸುವ ಅಂಶಗಳು ಒಂದು ರೀತಿಯ ವಿಮರ್ಶೆಯ ಅಂಶವೇ. ಈ ಎಲ್ಲಾ ಅಂಶಗಳನ್ನು ಪತ್ರಿಕೋದ್ಯಮ ಹಾಗೂ ಸಾಹಿತ್ಯದ ವಿದ್ಯಾರ್ಥಿಗಳು ನಿರಂತರ ಓದಿನಿಂದ ಜ್ಞಾನ ಪಡೆದುಕೊಂಡು ತಮ್ಮದೇ ಶೈಲಿಯಲ್ಲಿ ನೀರೂಪಿಸುವುದು ವಿಮರ್ಶೆ ಎನಿಸುತ್ತದೆ.

ಒಮ್ಮೊಮ್ಮೆ ಭಿನ್ನಾಭಿಪ್ರಾಯ ಸೂಚಿಸುವುದು ಕೂಡ ವಿಮರ್ಶೆಯಾಗುತ್ತದೆ. ಅನುಕರಣಾ ಮನೋಭಾವವನ್ನು ವಿಮರ್ಶಾ ಪ್ರವೃತಿಯಿಂದ ದೂರವಿಡ ಬೇಕು. ಆಗ ಯಾವುದೇ ಒಂದು ರಂಗದ ವಿಮರ್ಶೆ ಯಶಸ್ವಿಯಾಗಲು ಸಾಧ್ಯ. ಇಂದು ವಿಮರ್ಶಾ ರಂಗದಲ್ಲಿ ವಿಫುಲ ಉದ್ಯೋಗಾವಕಶಗಳಿದ್ದು ವಿದ್ಯಾರ್ಥಿಗಳು ಉತ್ತಮ ಓದು ತಿಳುವಳಿಕೆ ಜ್ಞಾನ ಹೆಚ್ಚಿಸಿಕೊಳ್ಳುವುದರಿಂದ ಒಳ್ಳೆಯ ಸ್ಥಾನಮಾನ ಕಲ್ಪಿಸಿಕೊಳ್ಳಬಹುದು ಹಾಗೂ ವಿಮರ್ಶೆ ಕ್ಷೇತ್ರದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಕೊಡಲಾಗುತ್ತಿದ್ದು, ತಾವುಗಳು ಕೂಡ ಈ ಪ್ರಶಸ್ತಿ ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು, ಪತ್ರಕರ್ತರಾದ ಬಿ.ಎನ್. ಮಲ್ಲೇಶ್ ಮಾತನಾಡಿ, ಪತ್ರಕರ್ತರಿಗೆ ಪ್ರತಿಯೊಂದು ವಿಷಯದ ಬಗ್ಗೆ ಜ್ಞಾನವಿರಬೇಕು. ಪತ್ರಕರ್ತ ಪ್ರತಿಯೊಂದು ವಿಷಯವನ್ನು ವಿಮರ್ಶಾ ದೃಷ್ಟಿಯಿಂದ ನೋಡಬೇಕು. ಇತ್ತೀಚಿನ ದಿನಗಳಲ್ಲಿ ವಿಮರ್ಶೆಯು ಟೀಕೆಯೆಂಬಂತೆ ಬಿಂಬಿತವಾಗುತ್ತಿದೆ.

ವಿಮರ್ಶೆ ಮಾಡಲು ವಿಷಯದ ಬಗ್ಗೆ ಸಾಮುಲಾಗ್ರವಾಗಿ ತಿಳಿದುಕೊಂಡಿರಬೇಕು. ವಾಸ್ತವವನ್ನು ತಿಳಿದುಕೊಂಡು ವಿಮರ್ಶೆ ಮಾಡಬೇಕು. ಇಲ್ಲವಾದಲ್ಲಿ ವಿಮರ್ಶೆ ಸೋಲುತ್ತದೆ. ವಿಮರ್ಶೆ ಮಾಡಲು ಭಾಷಾ ಪ್ರಬುದ್ದತೆ ಅಗತ್ಯವಾಗಿದ್ದು, ಭಾಷೆ ಮೇಲೆ ಹಿಡಿತವಿಲ್ಲದಿದ್ದರೆ ವಿಮರ್ಶಕರಾಗಲು ಸಾಧ್ಯವಿಲ್ಲ ಎಂದರು.

ವಿಜಯ ಕರ್ನಾಟಕ ಉಪ ಸಂಪಾದಕ ಯಳನಾಡು ಮಂಜುನಾಥ, ಯಳನಾಡು ಮಂಜುನಾಥ ಸಂಯುಕ್ತ ಕರ್ನಾಟಕ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಮಂಜುನಾಥ ಗೌರಕ್ಕಳವರ್, ವಾರ್ತಾಧಿಕಾರಿ ಅಶೋಕ್‍ಕುಮಾರ್.ಡಿ, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮಿ ಹಿರೇಮಠ, ನಾಟಕ ಅಕಾಡೆಮಿ ಸದಸ್ಯರಾದ ರವೀಂದ್ರ ಅರಳಗುಪ್ಪಿ, ಸಾಹಿತಿಗಳಾದ ಬಾ.ಮ.ಬಸವರಾಜಯ್ಯ, ಪತ್ರಿಕೋದ್ಯಮ, ಕನ್ನಡ ಸಾಹಿತ್ಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending