ದಿನದ ಸುದ್ದಿ

ಬೆಳಗಿನ ಪ್ರಮುಖ ಸುದ್ದಿಗಳು | ಕೆಎಸ್ಒಯು ಅರ್ಜಿ ಆಹ್ವಾನ : ಚಂದ್ರಯಾನ ನೇರ ಪ್ರಸಾರ

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಕಾವೇರಿ ಹಾಗೂ ಮಹದಾಯಿ ಜಲವಿವಾದಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.
  2. ಚಂದ್ರಯಾನ 3 ನೌಕೆಯ ವಿಕ್ರಮ್ ಲ್ಯಾಂಡರ್ ನಿರೀಕ್ಷೆಯಂತೆ ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಇಳಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಸಿದ್ಧತೆ ಮಾಡಿಕೊಂಡಿದೆ. ಇಸ್ರೋದ ಜಾಲತಾಣ ಹಾಗೂ ಯೂಟ್ಯೂಬ್ ವಾಹಿನಿ, ಡಿಡಿ ನ್ಯಾಷನಲ್ ವಾಹಿನಿಗಳಲ್ಲಿ ಸಂಜೆ 5.27 ರಿಂದ ಚಂದ್ರಯಾನದ ನೇರಪ್ರಸಾರ ಮೂಡಿಬರಲಿದೆ.
  3. ಕನ್ನಡ ನಾಡು ಎಂದು ನಾಮಕರಣಗೊಂಡು 50 ವರ್ಷಗಳು ಸಂದ ಸಂದರ್ಭವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
  4. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸಾಲ ಒದಗಿಸಲಾಗುವುದು ಎಂದು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
  5. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳು ಸಾಲ ಪಡೆಯದೇ ಇರುವವರಿಗೆ ಪ್ರಧಾನಮಂತ್ರಿ ಪಿ.ಎಂ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  6. ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷೇತ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸೂಚಿಸಿದ್ದಾರೆ.
  7. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಇದೇ 31 ಕೊನೆ ದಿನ. ಹೆಚ್ಚಿನ ವಿವರಗಳು ಜಾಲತಾಣ www.ksoumysuru.ac.in ನಲ್ಲಿ ಲಭ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version