ದಿನದ ಸುದ್ದಿ
ಚನ್ನಗಿರಿ | ಮನೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಗುರುವಾರ ಭಾರಿ ಮಳೆ ಸುರಿದ ಪರಿಣಾಮ ಚನ್ನಗಿರಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಒಂದು ಮನೆ ಸಂಪೂರ್ಣ ಹಾನಿಯಾಗಿರುವುದು ಹಾಗೂ ಕೋಟೆಹಾಳ್ ಗ್ರಾಮದಲ್ಲಿನ ಮನೆಯೊಂದರಲ್ಲಿ ನೀರು ನುಗ್ಗಿರುವುದನ್ನು ಪರಿಶೀಲಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಚನ್ನಗಿರಿ ತಹಶೀಲ್ದಾರ್ ಪುಟ್ಟರಾಜು ಗೌಡ, ರೈತ ಮುಖಂಡ ತೇಜಸ್ವಿ ಪಟೇಲ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243